Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಸೈಬರ್ ಅಪರಾಧ:ಸಿಐಡಿಗೆ ಹಸ್ತಾಂತರಿಸಿದ ದಾವಣಗೆರೆ ಎಸ್ಪಿ
ಅಪರಾಧ ಸುದ್ದಿ

ಸೈಬರ್ ಅಪರಾಧ:ಸಿಐಡಿಗೆ ಹಸ್ತಾಂತರಿಸಿದ ದಾವಣಗೆರೆ ಎಸ್ಪಿ

Dinamaana Kannada News
Last updated: December 20, 2025 4:03 pm
Dinamaana Kannada News
Share
Davanagere crime news
SHARE
ದಾವಣಗೆರೆ.ಡಿ.20: ಕಳೆದ ಎರಡು ತಿಂಗಳ ಹಿಂದೆ ನಗರದ ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿದ್ದ 150 ಕೋಟಿ ರೂ ಮೌಲ್ಯದ ಭಾರೀ ಸೈಬರ್ ವಂಚನೆ ಪ್ರಕರಣ ಗಂಭೀರತೆಯನ್ನು ಗಮನಿಸಿ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಒಂದೇ ತಿಂಗಳಲ್ಲಿ ಆರೋಪಿಯ ಖಾತೆಗೆ 150 ಕೋಟಿ ರೂ ವರ್ಗಾವಣೆ ಆಗಿದ್ದ ಪ್ರಕರಣದ ಜಾಡು ಹಿಡಿದು ಹೊರಟಿದ್ದ ದಾವಣಗೆರೆ ಸೈಬರ್ ಅಪರಾಧ ತಡೆ ಪೊಲೀಸರಿಗೆ ಇದೀಗ ಈ ಪ್ರಕರಣ ದೇಶವ್ಯಾಪಿ ಹಬ್ಬಿರುವ ಮಹತ್ವದ ಸುಳಿವು ದೊರೆತಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ಎಸ್ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆರಂಭದಲ್ಲಿ ಕೇವಲ 150 ಕೋಟಿ ರೂಪಾಯಿ ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದ್ದ ಈ ಪ್ರಕರಣದಲ್ಲಿ ಇದೀಗ 1,000 ಕೋಟಿ ರೂಪಾಯಿಗೂ ಅಧಿಕ ಹಣ ವಹಿವಾಟು ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಪ್ರಕರಣ ರಾಜ್ಯದ ದೊಡ್ಡ ಸೈಬರ್ ಅಪರಾಧಗಳ ಪೈಕಿ ಒಂದಾಗಿ ಗುರುತಿಸಲಾಗಿದೆ.
ಆಗಸ್ಟ್ 29ರಂದು ದಾವಣಗೆರೆಯ ಪ್ರಮೋದ್ ಎಂಬಾತ 52 ಲಕ್ಷ ರೂ. ಸೈಬರ್ ವಂಚನೆಗೆ ಒಳಗಾಗಿದ್ದಾಗಿ ದೂರು ನೀಡಿದ ಬಳಿಕ ತನಿಖೆ ಆರಂಭಗೊಂಡಿತ್ತು. ಈ ಸಂಬಂಧ ಬೇಲೂರು ಮೂಲದ ಸೈಯದ್ ಅರ್ಫಾತ್ ಹಾಗೂ ಗುಜರಾತ್‌ನ ಅಹಮದಾಬಾದ್ ಮೂಲದ ಸಂಜಯ್ ಕುಂಟ್ ಅವರನ್ನು ಪೊಲೀಸರು ಬಂಧಿಸಿದ್ದರು. ತನಿಖೆಯ ವೇಳೆ ಉದ್ಯಮವೇ ಇಲ್ಲದೇ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಕರೆಂಟ್ ಅಕೌಂಟ್ ತೆರೆಯಿಸಿ ಅಕೌಂಟ್‌ಗಳನ್ನೆ ಮಾರಾಟ ಮಾಡುತ್ತಿದ್ದ ಜಾಲ ಬಯಲಾಗಿತ್ತು.
ಆರೋಪಿಗಳ ಖಾತೆಗಳಿಗೆ ದೇಶದ ವಿವಿಧ ಭಾಗಗಳಿಂದ ಹಾಗೂ ದುಬೈನಿಂದಲೂ ಅಪಾರ ಪ್ರಮಾಣದ ಹಣ ಜಮೆಯಾಗಿದ್ದು, ಈ ಹಣ ಆನ್‌ಲೈನ್ ಗೇಮಿಂಗ್, ಗ್ಯಾಂಬ್ಲಿAಗ್ ಮತ್ತು ನಕಲಿ ಟ್ರೇಡಿಂಗ್ ಮೂಲಕ ಸಂಗ್ರಹವಾಗಿರುವ ಶಂಕೆ ವ್ಯಕ್ತವಾಗಿದೆ.
Read also : ಜೈನ್ ವಿದ್ಯಾಲಯ|ಮಕ್ಕಳು ಪ್ರತಿಭೆ ಪ್ರದರ್ಶಿಸಲು ವಸ್ತು ಪ್ರದರ್ಶನ ಉತ್ತಮ ವೇದಿಕೆ : ಗೀತಾ
ತನಿಖೆಯಲ್ಲಿ ದೂರುದಾರ ಪ್ರಮೋದ್ ಕೂಡ ಈ ವಂಚನೆ ಜಾಲದ ಭಾಗವಾಗಿದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಸಾವಿರಾರು ಕೋಟಿ ರೂಪಾಯಿ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಜೈನ್ ವಿದ್ಯಾಲಯ|ಮಕ್ಕಳು ಪ್ರತಿಭೆ ಪ್ರದರ್ಶಿಸಲು ವಸ್ತು ಪ್ರದರ್ಶನ ಉತ್ತಮ ವೇದಿಕೆ : ಗೀತಾ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಹಾರಾರ್ ಜಾನರ್ ನ “ಹಗ್ಗ” ಚಿತ್ರದ ಟೀಸರ್  ಅನಾವರಣ

ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ,…

By Dinamaana Kannada News

Political analysis | ಡಿಕೆಶಿ ಅಂದ್ರೆ ಅಮಿತ್ ಶಾ ಅವರಿಗಿಷ್ಟ

ಕಳೆದ ವಾರ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು.…

By Dinamaana Kannada News

ಬಿಸಿಎಂ ಹಾಸ್ಟೆಲ್‌ಗೆ ಪ್ರವೇಶಕ್ಕೆ ಅರ್ಜಿ : ಅವಧಿ ವಿಸ್ತರಣೆ

ದಾವಣಗೆರೆ   :  ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಜೈನ್ ವಿದ್ಯಾಲಯ|ಮಕ್ಕಳು ಪ್ರತಿಭೆ ಪ್ರದರ್ಶಿಸಲು ವಸ್ತು ಪ್ರದರ್ಶನ ಉತ್ತಮ ವೇದಿಕೆ : ಗೀತಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಸ್ವತ್ತು ಕಳವು ಪ್ರಕರಣ: 20.38 ಕೋಟಿ ರೂ ಮೌಲ್ಯದ ಸ್ವತ್ತು ಮಾಲೀಕರಿಗೆ ವಿತರಣೆ

By Dinamaana Kannada News
Davanagere
ಆರೋಗ್ಯ

ಮೈಕೊರೆಯುವ ಚಳಿ|ಆರೋಗ್ಯದ ಸಮಸ್ಯೆಗೆ ಒಳಗಾಗದೇ ಇರಲು ಮುಂಜಾಗ್ರತೆ ವಹಿಸಿ :ಡಾ.ಜಿ.ಡಿ.ರಾಘವನ್

By Dinamaana Kannada News
Davanagere
ತಾಜಾ ಸುದ್ದಿ

ಡಿಸೆಂಬರ್ 31 ರಂದು ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?