Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ:ಜ.2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಅಭಿಯಾನ|ನ್ಯಾ.ಮಹಾವೀರ.ಮ.ಕರೆಣ್ಣವರ
ತಾಜಾ ಸುದ್ದಿ

ದಾವಣಗೆರೆ:ಜ.2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಅಭಿಯಾನ|ನ್ಯಾ.ಮಹಾವೀರ.ಮ.ಕರೆಣ್ಣವರ

Dinamaana Kannada News
Last updated: December 25, 2025 3:33 am
Dinamaana Kannada News
Share
Davangere
SHARE

ದಾವಣಗೆರೆ: 2026 ರ ಜ.2 ರಿಂದ  90 ದಿನಗಳ ಕಾಲ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಧ್ಯಸ್ಥಗಾರಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.  ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಈ ಕೆಳಕಂಡ ಪ್ರಕರಣಗಳನ್ನು ಮಧ್ಯಸ್ಥಗಾರಿಕೆಗೆ ಕಳುಹಿಸಿಕೊಡಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿ.ಕಾ.ಸೇ.ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳ ಅಂದಾಜು ಅಂಕಿ ಅಂಶಗಳ ವಿವರ: ಡಿವಿ ಕಾಯ್ದೆ ಪ್ರಕರಣಗಳು ಮತ್ತು 498ಎ ಐಪಿಸಿ/85ಬಿಎನ್‍ಎಸ್-1007, ಚೆಕ್ ಅಮಾನ್ಯ ಪ್ರಕರಣಗಳು-444, ಮೋಟಾ ರು ವಾಹನ ಅಪಘಾತ ಪ್ರಕರಣಗಳು-4681, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು-619, ಭೂ ಸ್ವಾಧೀನ ಅಪರಾಧಿಕ ಪ್ರಕರಣಗಳು-384, ಪಾಲು ವಿಭಾಗ ಪ್ರಕರಣಗಳು-3342, ಮನೆ ಮಾಲಿಕ-ಬಾಡಿಗೆದಾರರ ಮಧ್ಯದ ಪ್ರಕರಣಗಳು-52, ವಾಣಿಜ್ಯ ವ್ಯವಹಾರಗಳ ವ್ಯಾಜ್ಯಗಳು-709, ಅರ್ಹ ಸಿವಿಲ್ ಸೇವಾ ಪ್ರಕರಣಗಳು-0, ಕಾರ್ಮಿಕ ವ್ಯಾಜ್ಯಗಳು-42, ಗ್ರಾಹಕ ಪರಿಹಾರ ವ್ಯಾಜ್ಯಗಳು-10, ಇತರೆ ಸಿವಿಲ್ ವ್ಯಾಜ್ಯಗಳು-5000(ಅಂದಾಜು) ಒಟ್ಟು-16290.

ಈ ಪ್ರಕ್ರಿಯೆಯಲ್ಲಿ ವ್ಯವಸ್ಥಿತವಾಗಿ ಸಂಧಾನಕಾರರಾಗಿ ಕಾರ್ಯನಿರ್ವಹಿಸಲು ಜಿಲ್ಲೆಯಾದ್ಯಂತ ಒಟ್ಟು 45 ಜನ ನುರಿತ ಮತ್ತು ಕನಿಷ್ಠ 20 ವರ್ಷಕ್ಕಿಂತ ಹೆಚ್ಚಿನ ವಕೀಲಿಕೆ ಅನುಭವವುಳ್ಳ ವಕೀಲರು ಮಧ್ಯಸ್ಥಿಕೆ ದಾರರು ಲಭ್ಯವಿದ್ದು ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಬಗ್ಗೆ ಅವರು ತಮ್ಮ ಸಮ್ಮತಿಯನ್ನು ವ್ಯಕ್ತಪಡಿಸಿರುತ್ತಾರೆ.

ಅಷ್ಟೇ ಅಲ್ಲದೆ ಜಿಲ್ಲೆಯಲ್ಲಿ ಕಳೆದ ತಿಂಗಳು ಇನ್ನೂ ಹೆಚ್ಚು ಸಂಖ್ಯೆಯ ಮಧ್ಯಸ್ಥಗಾರರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಆಯ್ಕೆಪಟ್ಟಿ ಅನುಮೋದನೆಯಾಗಿ ಬರುವುದು ಬಾಕಿ ಇದೆ. ಈ ಮಧ್ಯಸ್ಥ್ರಗಾರಿಕೆ ಅಭಿಯಾನದಲ್ಲಿ ಪಾಲ್ಗೊಳ್ಳುವ ಪಕ್ಷಕಾರರು ಸ್ವಂತ ಮನಸ್ಸಿನಿಂದ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಬಹುದು.

Read also : Crime News:ತಾಳೆ ಬೆಳೆಯೊಂದಿಗೆ ಸುಟ್ಟು ಕರಕಲಾದ ರೈತ

ಈ ಪ್ರಕ್ರಿಯೆಯಲ್ಲಿ ಪಕ್ಷಕಾರರನ್ನು ಮತ್ತು ಅವರ ಪರವಾಗಿ ವಕೀಲರನ್ನು ಮಧಸ್ಥಗಾರರ ಮೂಲಕ ರಾಜೀಸಂಧಾನಕ್ಕೆ ಕರೆತರಲಾಗುವುದು. ರಾಜೀ ಪ್ರಕ್ರಿಯೆಯು ಪಾರದರ್ಶಕ ಮತ್ತು ಶುಲ್ಕ ರಹಿತವಾಗಿ ಒಂದು ವೇಳೆ ಈಗಾಗಲೇ ನ್ಯಾಯಾಲಯದಲ್ಲಿ ಶುಲ್ಕವನ್ನು ಪಾವತಿ ಮಾಡಿ ಪ್ರಕರಣ ದಾಖಲಾಗಿದ್ದರೆ ಅಂತಹ ಪ್ರಕರಣಗಳಲ್ಲಿ ನ್ಯಾಯಾಲಯ ಶುಲ್ಕವನ್ನು ಮರಳಿ ನೀಡುವಂತೆ ನ್ಯಾಯಾಲಯಗಳಿಂದ ನಿರ್ದೇಶನಗಳನ್ನು ಕೂಡ ನೀಡಲಾಗುವುದು.

ಪ್ರಕ್ರಿಯೆಯಲ್ಲಿ ಎರಡು ಪಕ್ಷದವರನ್ನು ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ಕರೆದು, ಅವರಲ್ಲಿರುವ ವ್ಯಾಜ್ಯಕ್ಕೆ ನಿಜವಾದ ಕಾರಣಗಳನ್ನು ಮತ್ತು ಸಾಧ್ಯವಾಗಬಹುದಾದ ರಾಜೀ ಸಂಧಾನಗಳನ್ನು ಚರ್ಚೆಗೆ ಒಳ ಪಡಿಸಲಾಗುವುದು. ಪ್ರಕ್ರಿಯೆಯಲ್ಲಿ ವಕೀಲರು ಅಷ್ಟೇ ಅಲ್ಲದೆ ವಿವಿಧ ಇಲಾಖೆಯ ನುರಿತ ಅಧಿಕಾರಿಗಳು, ಹಿರಿಯ ನ್ಯಾಯವಾದಿಗಳು, ಅರೆಕಾಲಿಕ ಕಾನೂನು ಸ್ವಯಂಸೇವಕರು ಮತ್ತು ಪ್ಯಾನಲ್ ವಕೀಲರುಗಳ ಸಹಾಯ ಮತ್ತು ಸಹಕಾರ ಪಡೆದುಕೊಳ್ಳಲು ಅವಕಾಶವಿರುತ್ತದೆ ಎಂದು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere crime news Crime News:ತಾಳೆ ಬೆಳೆಯೊಂದಿಗೆ ಸುಟ್ಟು ಕರಕಲಾದ ರೈತ
Next Article accident news ಅಪಘಾತ:ಲಾರಿ ಡ್ರೈವರ್‌ ಸೇರಿದಂತೆ 5 ಮಂದಿ ಸಜೀವ ದಹನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ರಂಗ ಸಂಗೀತ ತರಬೇತಿ ಮತ್ತು ರಂಗಗೀತೆಗಳ ಕಲಿಕಾ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಅ.09 (Davanagere):  ಕನ್ನಡ ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ದಾವಣಗೆರೆಯಲ್ಲಿ ರಂಗ ಸಂಗೀತ ತರಬೇತಿ ಮತ್ತು ರಂಗ ಗೀತೆಗಳ…

By Dinamaana Kannada News

ಸಂಸ್ಕೃತಿ, ಸಾಂಸ್ಕೃತಿಕ ಜಿಲ್ಲೆ ದಾವಣಗೆರೆ : ಸಾಹಿತಿ ನಾಗಲೇಖ

ದಾವಣಗೆರೆ : ರಾಜ್ಯದ 31 ಜಿಲ್ಲೆಗಲ್ಲಿ 30 ಜಿಲ್ಲೆಗಳು ತಿರುಗಿ ನೋಡುವಂತಹ ಸಂಸ್ಕೃತಿ, ಸಾಂಸ್ಕೃತಿಕ ಲೋಕವನ್ನು ಹೊಂದಿರುವಂತಹ ಜಿಲ್ಲೆ ಅಂದರೆ…

By Dinamaana Kannada News

 “ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ ಪಕ್ಷ ಮಣಿಸಲು ಸಾಧ್ಯವಿಲ್ಲ

ಬೆಂಗಳೂರು :  ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಬಿಜೆಪಿ  ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿ.ಟಿ.ಯು.ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಗಣೇಶ್ ಡಿ.ಬಿ ಅವರಿಗೆ ಸನ್ಮಾನ

By Dinamaana Kannada News
Davanagere
ತಾಜಾ ಸುದ್ದಿ

ಮ್ಯಾನ್ಯುಯಲ್ ಸ್ಕಾವೇಂಜರ್ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ಮೀಸಲು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ದೌರ್ಜನ್ಯ ಸಂತ್ರಸ್ಥರಿಗೆ ರೂ.121.50 ಲಕ್ಷಗಳ ಪರಿಹಾರ ಧನ ಪಾವತಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
accident news
ತಾಜಾ ಸುದ್ದಿಅಪರಾಧ ಸುದ್ದಿ

ಅಪಘಾತ:ಲಾರಿ ಡ್ರೈವರ್‌ ಸೇರಿದಂತೆ 5 ಮಂದಿ ಸಜೀವ ದಹನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?