ಚಿತ್ರದುರ್ಗ: ಅತಿಯಾದರೆ ಅಮೃತ ವಿಷ ಆದರೆ ಜ್ಞಾನಮೃತ ಎಷ್ಟೇ ಅತಿಯಾದರೂ ವಿಷವಾಗುವುದಿಲ್ಲ. ಜ್ಞಾನಮೃತ ಸ್ವೀಕರಿಸಿದವರು ಯಾವುದಾದರೂ ಕ್ಷೇತ್ರದಲ್ಲಿ ಶಾಶ್ವತ ಕಾರ್ಯನಿರ್ವಹಿಸಿ ಅಮರರಾಗುತ್ತಾರೆ. ಇದಕ್ಕೆ ಡಾ.ಅಂಬೇಡ್ಕರ್ ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು.
ನಗರದ ಹೊರ ವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ನಡೆದ ಜ್ಞಾನ ಸಂಭ್ರಮ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.
ಜಗತ್ತಿನ ಸಾಧಕರ ಪಟ್ಟಿಯಲ್ಲಿ ಹೆಸರುಗಳಿಸಬೇಕಾದರೆ ನಾವು ಜ್ಞಾನಾಮೃತವನ್ನು ಸರಿಯಾಗಿ ಅರ್ಥೈಸಿಕೊಂಡು ಅಳವಡಿಸಿಕೊಳ್ಳಬೇಕು ಶಿಕ್ಷಣವೆಂದರೆ ಕೇವಲ ಉದ್ಯೋಗ ಪಡೆಯುವ ಸಾಧನವಲ್ಲ, ಅದು ಮನುಷ್ಯನಲ್ಲಿ ವಿವೇಕ ಮತ್ತು ಪ್ರಜ್ಞಾವಂತಿಕೆಯನ್ನು ಬೆಳೆಸುವ ಶಕ್ತಿಯಾಗಿದೆ, ಜ್ಞಾನದ ಮೂಲಕ ಮನುಷ್ಯ ತನ್ನನ್ನು ತಾನು ವಿಮರ್ಷಿಸಿಕೊಳ್ಳಲು ಮತ್ತು ಆತ್ಮ ನಿರೀಕ್ಷಣೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಯಾರು ಜ್ಞಾನವನ್ನು ಸ್ವೀಕರಿಸಿ ತಮ್ಮ ಜೀವನವನ್ನು ವಿಮರ್ಶಾತ್ಮಕವಾಗಿ ನೋಡುತ್ತಾರೊ ಅವರು ತಮ್ಮ ಭವಿಷ್ಯವನ್ನು ಅತ್ಯಂತ ಭವ್ಯವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ ಮಾತನಾಡಿ, ಜ್ಞಾನ ಸಂಭ್ರಮ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದು ತಿಳಿಸಿ ಪ್ರತಿಯೊಬ್ಬ ವಿದ್ಯಾರ್ಥಿಯು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಲಿ, ಉತ್ತಮ ಸಂಸ್ಕಾರ ಮತ್ತು ಆದರ್ಶ ಗುಣಗಳನ್ನು ಬೆಳೆಸಿಕೊಂಡು ಸಮಾಜದ ಆಸ್ತಿಯಾಗಲಿ ಎಂದು ಹಾರೈಸಿದರು.
Read also :ದಿನಮಾನ-ಪುಸ್ತಕ ವಿಮರ್ಶೆ|ಗೌರವಾನ್ವಿತ ಮೂರ್ಖರು: ನರವಿಕಲ್ಪಕ್ಕೆ ತುತ್ತಾದ ದೇಶವೊಂದರ ವಕ್ರ ರೇಖೆಗಳ ಅನಾವರಣ
ಎಸ್.ಜೆ.ಎಸ್ ಸಂಸ್ಥೆಯ ಕಾರ್ಯದರ್ಶಿ ಡಿ.ಸಿ.ಮೋಹನ್, ಗೌನಹಳ್ಳಿ ಗೋವಿಂದಪ್ಪ ಮಾತನಾಡಿದರು.
ವೇದಿಕೆಯಲ್ಲಿ ಎಸ್.ಜೆ.ಎಸ್ ಸಂಸ್ಥೆಯ ನಿರ್ದೇಶಕರಾದ ಇ.ಮಂಜುನಾಥ್, ಕಾಳಘಟ್ಟ ಹನುಮಂತಪ್ಪ, ಹೆಚ್.ಆಂಜನೇಯ, ವೈ.ಪ್ರಕಾಶ್ ದಾವಣಗೆರೆಯ ರಾಜು ಉಪಸ್ಥಿತರಿದ್ದರು.
