Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ : ಸಿಇಒ ಗಿತ್ತೆ ಮಾಧವ ವಿಠಲರಾವ್
ತಾಜಾ ಸುದ್ದಿ

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ : ಸಿಇಒ ಗಿತ್ತೆ ಮಾಧವ ವಿಠಲರಾವ್

Dinamaana Kannada News
Last updated: January 28, 2026 4:58 pm
Dinamaana Kannada News
Share
Davanagere
SHARE
ದಾವಣಗೆರೆ  : ಜಿಲ್ಲೆಯಲ್ಲಿ 38 ಕುಷ್ಠರೋಗ ಪ್ರಕರಣಗಳಿದ್ದು, ಕುಷ್ಠರೋಗ ನಿರ್ಮೂಲನೆಗೆ ಹಾಗೂ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಆರೋಗ್ಯ ಇಲಾಖೆಯ ಎಲ್ಲಾ ವೈದ್ಯಾಧಿಕಾರಿಗಳು ಕ್ರಮ ವಹಿಸು ವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿತ್ತೆ ಮಾಧವ ವಿಠಲರಾವ್  ತಿಳಿಸಿದರು.
ಬುಧವಾರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಏರ್ಪಡಿಸಿದ್ದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ -2026 ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಪರ್ಶ್ ಕುಷ್ಠರೋಗ ಜಾಗೃತಿ  ಅಭಿಯಾನವನ್ನು ಜನವರಿ 30 ರಿಂದ ಫೆಬ್ರವರಿ 13 ರವರೆಗೆ 13 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸಂಪರ್ಕ ಸಭೆ ಗಳಲ್ಲಿ,  ಇಲಾಖೆಯ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಲ್ಲಿ, ತಾಲ್ಲೂಕು ಆಸ್ಪತ್ರೆಗಳಲ್ಲಿ ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತಹ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಮತ್ತು  ಪೋಸ್ಟರ್ ಗಳ ಮೂಲಕ ಪ್ರಚಾರ ಮಾಡಲು ಕ್ರಮವಹಿಸಬೇಕು.  2016-17 ನೇ ಸಾಲಿನಿಂದ ಪ್ರಸಕ್ತ ಸಾಲಿನವರಿಗೆ ಗಮನಿಸಿದಲ್ಲಿ ಈ ಬಾರಿ ಶೇ. 21 ರಷ್ಟು  ಕಡಿಮೆ ಪ್ರಮಾಣ ದಾಖಲಾಗಿದ್ದು, ಶೇಕಡವಾರು  ಇನ್ನು ಕಡಿಮೆ ಮಾಡಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು.
Read also : SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಮುರಳೀಧರ್ ಅವರು ಮಾತನಾಡಿ, ಕುಷ್ಠರೋಗವು ಬ್ಯಾಕ್ಟಿರೀಯಾದಿಂದ ಬರುವಂತಹ ಖಾಯಿಲೆ, ಇದು ಒಬ್ಬರಿಂದ ಒಬ್ಬರಿಗೆ ಹರಡುವುದಿಲ್ಲ, ನಮ್ಮ ಸುತ್ತ ಮುತ್ತಲ ಪರಿಸರವನ್ನು ಸ್ವಚ್ಚತೆ ಇರುವಂತೆ ನೋಡಿಕೊಳ್ಳಬೇಕು. ಈ ಖಾಯಿಲೆಯು ಚರ್ಮ ಮತ್ತು ನರ ಮಧ್ಯೆ ಇರುತ್ತದೆ, ಚರ್ಮದ  ಭಾಗದಲ್ಲಿ  ಸ್ಪರ್ಶ ಜ್ಞಾನ ಇರುವುದಿಲ್ಲ , ಸುಮಾರು 400 ರಿಂದ 500 ವರ್ಷ ಗಳ ಇತಿಹಾಸವಿರುವ ಹಿಂದಿನ ಖಾಯಿಲೆಯಾಗಿದ್ದು ಪ್ರಾಥಮಿಕ ಹಂತದಲ್ಲಿಯೇ ಸರಿಯಾದ ಚಿಕಿತ್ಸೆಯನ್ನು ಪಡೆದಲ್ಲಿ ಗುಣಮುಖರಾಗಬಹುದು. ಸಾಮಾನ್ಯವಾಗಿ 5 ರಿಂದ 10 ವರ್ಷಗಳ ಚಿಕಿತ್ಸೆಯ ಅಗತ್ಯತೆ ಇರುತ್ತದೆ , ಪ್ರತಿ ರೋಗಿಗೆ ಪ್ರತಿ ಮಾಹೆ ರೂ. 12000/- ಗಳನ್ನು ನೀಡಲಾಗುತ್ತದೆ. ರೋಗಿಗಳಿಗೆ  ಉಚಿತ ಔಷಧಿಗಳು ಮತ್ತು  ಕಿಟ್ ನೀಡಲಾಗುವುದು. ಈ ಹಿಂದೆ ಸರ್ಕಾರಿ ಕೆಲಸವನ್ನು ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು.
ಕುಷ್ಠರೋಗದ ಬಗ್ಗೆ ಗ್ರಾಮಗಳಲ್ಲಿ ಅರಿವು ಮೂಡಿಸಲು ಆಶಾ ಕಾರ್ಯಕರ್ತೆಯರಿಗೆ ತರಬೇತಿಯನ್ನು ನೀಡಲಾಗಿದೆ. ಒಬ್ಬ ಕುಷ್ಟರೋಗಿಯನ್ನು ಪತ್ತೆ ಹಚ್ಚಿದಲ್ಲಿ ಆಶಾ ಕಾರ್ಯಕರ್ತಕೆ ರೂ. 600/- ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸ್ಪರ್ಶ ಕುಷ್ಠರೋಗ ನಿರ್ಮೂಲನೆ ಕುರಿತು ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ್, ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿಗಿತ್ತೆ ಮಾಧವ ವಿಠಲರಾವ್ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article gym fitness SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.01 (Davanagere) ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ…

By Dinamaana Kannada News

Davanagere | ಮನೆ,ಪರಿಸರದ ಶುಚಿತ್ವ ಅಗತ್ಯ : ಸುರೇಶ್ ಬಿ.ಇಟ್ನಾಳ್

ದಾವಣಗೆರೆ ಸೆ.17  (Davanagere): ನಮ್ಮ ದೇಹವನ್ನು ಹೇಗೆ ಶುದ್ಧೀಕರಣ ಮಾಡಿಕೊಳ್ಳುತ್ತೀವೋ ಹಾಗೆ ನಮ್ಮ ಸುತ್ತಮುತ್ತಲಿನ ಪರಿಸರ,ಮನೆ ಹಾಗೂ ನಮ್ಮೂರ ಸ್ವಚ್ಛತೆ…

By Dinamaana Kannada News

ಲಲಿತಕಲಾ ಅಕಾಡೆಮಿ ಲಿಪಿಗಾರಿಕೆ ಪ್ರೋತ್ಸಾಹಿಸಲಿದೆ : ಪ.ಸ.ಕುಮಾರ

ದಾವಣಗೆರೆ- ಕಲಾ ವಿದ್ಯಾರ್ಥಿಗಳು ಎಲ್ಲಾ ಪ್ರಕಾರದ ಕಲೆಗಳಿಗೂ ಮುಕ್ತವಾಗಿ ತೆರೆದುಕೊಂಡು, ಆಸಕ್ತಿ ವಹಿಸಿ ಅಭ್ಯಸಿಸಬೇಕು, ಅವಲೋಕಿಸಬೇಕು ಎಂದು ಕರ್ನಾಟಕ ಲಲಿತಕಲಾ…

By Dinamaana Kannada News

You Might Also Like

gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
B.Srineevas davanagere
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಚಾರಿತ್ರಿಕ ಹೋರಾಟದ ಬೆಂಕಿಯ ಮಳೆ : ಬಿ.ಶ್ರೀನಿವಾಸ 

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?