Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Crime news|ಮೂರು ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಅಪರಾಧ ಸುದ್ದಿ

Crime news|ಮೂರು ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Dinamaana Kannada News
Last updated: January 31, 2026 4:15 pm
Dinamaana Kannada News
Share
Davanagere
SHARE
ದಾವಣಗೆರೆ : ಮಾಟ-ಮಂತ್ರದ ಹೆಸರಿನಲ್ಲಿ ನಂಬಿಸಿ ಬಂಗಾರ ದೋಚಿ, ಬರೋಬ್ಬರಿ ಮೂರು ದಶಕಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಎಲ್‌ಪಿ ಆರ್  ಪ್ರಕರಣದ ಆರೋಪಿಯನ್ನು ಹರಿಹರ ಗ್ರಾಮಾಂತರ ಪೊಲೀಸರು ಅಂತಿಮವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ಹಿನ್ನೆಲೆ: 1993 ರ ಅಕ್ಟೋಬರ್ 1 ರಂದು ಹರಿಹರದ ಬಜಾರ್ ಮೊಹಲ್ಲಾದ ಅಬ್ದೂಲ್ ಜಬ್ಬಾರ್ ಎಂಬುವವರ ಮನೆಗೆ ಬಂದಿದ್ದ ಆರೋಪಿ ಅಕ್ಬರ್ ಬಿನ್ ಖಾಸಿಂ ಸಾಬ್, ತನಗೆ ದೈವದ ಶಕ್ತಿ ಇದೆ ಎಂದು ನಂಬಿಸಿದ್ದನು. “ನಿಮ್ಮ ಮನೆಯಲ್ಲಿ ಪೂಜೆ ಮಾಡಿದರೆ ಕಷ್ಟಗಳು ದೂರಾಗುತ್ತವೆ, ಒಡವೆಗಳನ್ನು ಪೆಟ್ಟಿಗೆಯಲ್ಲಿಟ್ಟು ಪೂಜಿಸಿದರೆ ಅವು ಡಬಲ್ ಆಗುತ್ತವೆ” ಎಂದು ನಂಬಿಸಿ, ದೂರುದಾರರ ಮತ್ತು ಅವರ ಪತ್ನಿಯ ಮೈಮೇಲಿದ್ದ ಸುಮಾರು 7 ಗ್ರಾಂ ಚಿನ್ನಾಭರಣಗಳನ್ನು ಪೆಟ್ಟಿಗೆಯಲ್ಲಿ ಹಾಕಿಸಿದ್ದನು. ಬಳಿಕ ಕುಡಿಯಲು ನೀರು ತರಲು ಕಳುಹಿಸಿ, ಪೆಟ್ಟಿಗೆಯೊಂದಿಗೆ ಪರಾರಿಯಾಗಿದ್ದನು.
ಈ ಬಗ್ಗೆ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ ಅಂದಿನ ಪೊಲೀಸರು ಈತನನ್ನು ದಸ್ತಗಿರಿ ಮಾಡಿ ಕೆಲವು ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪ ಣೆ ಪಟ್ಟಿ ಸಲ್ಲಿಸಿದ್ದರು. ಆದರೆ, 1995 ರಿಂದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ನಾಪತ್ತೆಯಾಗಿದ್ದನು. ಇದರಿಂದಾಗಿ 1997 ರಲ್ಲಿ ನ್ಯಾಯಾಲಯವು ಈತನನ್ನು ಎಲ್‌ಪಿಆರ್  ಆರೋಪಿ ಎಂದು ಘೋಷಿಸಿತ್ತು.
Read also : ವಿಜ್ಞಾನ -ಕಲಾ ವಸ್ತು ಪ್ರದರ್ಶನಗಳು ಮಕ್ಕಳ ಮುಂದಿನ ಶಿಕ್ಷಣಕ್ಕೆ ಸಹಕಾರಿ
ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಅಕ್ಬರ್ ಬೆಂಗಳೂರು, ಹೊನ್ನಾಳಿ, ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದನು. ಇತ್ತೀಚೆಗೆ ಹರಿಹರಕ್ಕೆ ವಾಪಸ್ ಬಂದಿದ್ದ ಖಚಿತ ಮಾಹಿತಿ ಮೇರೆಗೆ, ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಶ್ರೀಮತಿ ಉಮಾ ಪ್ರಶಾಂತ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಜನವರಿ 28, 2026 ರಂದು ಈತನನ್ನು ಬಂಧಿಸಿದೆ.
ಕಾರ್ಯಾಚರಣೆ ತಂಡ: ದಾವಣಗೆರೆ ಗ್ರಾಮಾಂತರ ಉಪವಿಭಾಗದ ಡಿವೈಎಸ್‌ಪಿ ಬಿ.ಎಸ್. ಬಸವರಾಜ ಮತ್ತು ಸಿಪಿಐ ಸುರೇಶ ಸಗರಿ ನೇತೃತ್ವದಲ್ಲಿ, ಪಿಎಸ್‌ಐಗಳಾದ ಯುವರಾಜ ಕಂಬಳಿ, ಮಂಜುಳಾ ಡಿ ಮತ್ತು ಸಿಬ್ಬಂದಿಗಳಾದ ರಾಜಶೇಖರಯ್ಯ, ಪ್ರಸನ್ನಕಾಂತ ಹಾಗೂ ಷಣ್ಮುಖಪ್ಪ ಅವರನ್ನೊಳಗೊಂಡ ತಂಡವು ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.
TAGGED:crime newsDavanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವಿಜ್ಞಾನ -ಕಲಾ ವಸ್ತು ಪ್ರದರ್ಶನಗಳು ಮಕ್ಕಳ ಮುಂದಿನ ಶಿಕ್ಷಣಕ್ಕೆ ಸಹಕಾರಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನೀಟ್‌ ಹಗರಣ ಖಂಡಿಸಿ ಎಐಡಿಎಸ್‍ಓ ಪ್ರತಿಭಟನೆ

ದಾವಣಗೆರೆ:  ನೀಟ್ 2024ರ ಹಗರಣವನ್ನು ಖಂಡಿಸಿ ಎಐಡಿಎಸ್‍ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಎಐಡಿಎಸ್‍ಓ ರಾಜ್ಯ…

By Dinamaana Kannada News

ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿದ ದಾವಣಗೆರೆ ಚಿಗಟೇರಿ ಆಸ್ಪತ್ರೆ: ಆರೈಕೆ ಒಡನಾಡಿ ಪ್ರಶಂಸನಾ ಪತ್ರಕ್ಕೆ ಭಾಜನ

ದಾವಣಗೆರೆ: ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆ (Davangere chigateri hospital) ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕೇರ್ ಕಂಪ್ಯಾನಿಯನ್ ಪ್ರೋಗ್ರಾಂ…

By Dinamaana Kannada News

ರಿಷಿ ಮೊದಲ ಚಿತ್ರ “ಆಪರೇಷನ್ ಅಲಮೇಲಮ್ಮ” ಬಿಡುಗಡೆಯಾಗಿ ಏಳು ವರ್ಷ ..

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ರಿಷಿ ಚಿತ್ರರಂಕ್ಕೆ ಪಾದಾರ್ಪಣೆ ಮಾಡಿ ಏಳು ವರ್ಷಗಳಾಗಿದೆ. ಸಿಂಪಲ್ ಸುನಿ ನಿರ್ದೇಶನದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿಜ್ಞಾನ -ಕಲಾ ವಸ್ತು ಪ್ರದರ್ಶನಗಳು ಮಕ್ಕಳ ಮುಂದಿನ ಶಿಕ್ಷಣಕ್ಕೆ ಸಹಕಾರಿ

By Dinamaana Kannada News
Davanagere
ತಾಜಾ ಸುದ್ದಿ

ಫೆ.8,9 ಮಹರ್ಷಿ ವಾಲ್ಮೀಕಿ ಜಾತ್ರೆ|ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸಿ:ಬಸವನಗೌಡ ದದ್ದಲ್

By Dinamaana Kannada News
ಬಿ.ಶ್ರೀನಿವಾಸ
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಮನುಷ್ಯನ ಮಹಾಯಾನ:ಬಿ.ಶ್ರೀನಿವಾಸ

By Dinamaana Kannada News ಬಿ.ಶ್ರೀನಿವಾಸ
POEM
ಅಭಿಪ್ರಾಯ

ಗಾಂಧಿ ಸ್ಮೃತಿ|ರಚನೆ:ಮಂಜುನಾಥ.ಜಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?