Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ
Blog

ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ

Dinamaana Kannada News
Last updated: February 3, 2026 1:57 pm
Dinamaana Kannada News
Share
Davanagere
SHARE
ದಾವಣಗೆರೆ : ಕನ್ನಡ ಕೇವಲ ಭಾಷೆಯಲ್ಲ, ಅದು ನಮ್ಮ ಬದುಕಿನ ಭಾಗ. ಆಡಳಿತದಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರುವ ಮೂಲಕ ದಾವಣಗೆರೆ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ  ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ನಂತರ  ಪತ್ರಿಕಾ ಗೋಷ್ಠಿಯಲ್ಲಿ  ಮಾತನಾಡಿದರು.
ಕನ್ನಡ ಅನುಷ್ಠಾನ ವಿಧೇಯಕ-2022 ರಡಿ ಕನ್ನಡ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನೇರ ಶಿಸ್ತು ಕ್ರಮ ಕೈಗೊಳ್ಳುವ ಶಕ್ತಿಯುತ ಅಧಿಕಾರವನ್ನು ಈ ಹೊಸ ಕಾನೂನುನಲ್ಲಿದೆ, ಈಗಾಗಲೇ ಕನ್ನಡ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿದ ಕೆಲವು ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗಿದೆ ಮತ್ತು ವರ್ಗಾವಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕನ್ನಡ ಕಾಯ್ದೆ ಇನ್ನಷ್ಟು ಬಲಿಷ್ಠಗೊಳ್ಳಲಿದ್ದು, ಆದೇಶ ಉಲ್ಲಂಘಿಸುವವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದರು.
ಜಾಗತೀಕರಣದ ನಂತರ ಇಂಗ್ಲಿಷ್ ಕೇವಲ ಜಾಹೀರಾತಿನ ಭಾಷೆಯಾಗಿ ಬೆಳೆದಿದೆ. ಆದರೆ ಕನ್ನಡವು ಕುವೆಂಪು, ಬಸವಣ್ಣ, ಪಂಪ, ಬೇಂದ್ರೆಯವರಂತಹ ಮಹಾನ್ ವ್ಯಕ್ತಿಗಳನ್ನು ನೀಡಿದ ಸೃಜನಶೀಲ ಭಾಷೆ. ಈ ಭವ್ಯ ಪರಂಪರೆಯನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ.  ಫ್ರೆಂಚ್, ಜರ್ಮನ್ ಅಥವಾ ಹಿಂದಿ ಸೇರಿದಂತೆ ಯಾವುದೇ ಭಾಷೆ ಕಲಿಯಲು ಅಭ್ಯಂತರವಿಲ್ಲ. ಆದರೆ ನಮ್ಮ ನೆಲದಲ್ಲಿ ಕನ್ನಡವೇ ಸಾರ್ವಭೌಮವಾಗಿರಬೇಕು. ನಾವು ಎಲ್ಲೇ ಹೋದರೂ ಕನ್ನಡವನ್ನು ಉಳಿಸಿಕೊಳ್ಳಬೇಕು ಎಂದರು.
ವಿದೇಶಿ ಹೂಡಿಕೆ ಅಥವಾ ಬೇರೆ ರಾಜ್ಯದವರೇ ಕೈಗಾರಿಕೆ ನಡೆಸುತ್ತಿದ್ದರೂ ಸಹ, ಅಲ್ಲಿ ಕನ್ನಡದ ವಾತಾವರಣ ಇರಬೇಕು. ರಸ್ತೆಗಳಿಗೆ ಮತ್ತು ಬಡಾವಣೆಗಳಿಗೆ ನಾಡಿನ ಸಾಹಿತಿಗಳ, ಗಣ್ಯರ ಹೆಸರಿಡುವ ಮೂಲಕ ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿಯಬೇಕು, ದಾವಣಗೆರೆ ಜಿಲ್ಲಾಧಿಕಾರಿಗಳ ಕನ್ನಡ ಪರ ಕಾಳಜಿಯನ್ನು ಶ್ಲಾಘಿಸಿದ ಅಧ್ಯಕ್ಷರು, ಜಿಲ್ಲೆಯಲ್ಲಿ ಆಗುತ್ತಿರುವ ಕನ್ನಡ ಪರ ಕೆಲಸಗಳನ್ನು ತಾವು ರಾಜ್ಯದ ಮುಖ್ಯ ಮಂತ್ರಿಗಳಿಗೆ ಮತ್ತು ಇತರ ಜಿಲ್ಲೆಗಳ ಸಭೆಗಳಲ್ಲಿ ಉದಾಹರಣೆಯಾಗಿ ನೀಡಲಿದ್ದೇವೆ ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಲ್ಲಿ ಕನ್ನಡ ಭಾಷಾ ಅನುಷ್ಠಾನದ ಕುರಿತು ಗಂಭೀರ ಚರ್ಚೆ ನಡೆಯಬೇಕು ಮತ್ತು ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಪ್ರತಿಯೊಂದು ವಾಣಿಜ್ಯ ಮಳಿಗೆ ಮತ್ತು ಕೈಗಾರಿಕೆಗಳ ನಾಮಫಲಕದಲ್ಲಿ ಶೇ. 60 ರಷ್ಟು ಭಾಗ ಕನ್ನಡ ಕಡ್ಡಾಯವಾಗಿರಬೇಕು. ನಾಮಫಲಕಗಳಲ್ಲಿ ಶೇ. 60:40  ರಷ್ಟು ಕನ್ನಡ ಇರಬೇಕು ಎಂಬ ನಿಯಮವನ್ನು ದಾವಣಗೆರೆಯಲ್ಲಿ ಅತ್ಯುತ್ತಮವಾಗಿ ಜಾರಿಗೆ ತರ ಲಾಗಿದೆ. ಕಳೆದ ಒಂದು ವರ್ಷದಲ್ಲಿ ಈ ನಿಯಮ ಉಲ್ಲಂಘಿಸಿದವರಿಂದ ಸುಮಾರು 80,000 ರೂ.ಗಳಷ್ಟು ದಂಡವನ್ನು ಮಹಾನಗರ ಪಾಲಿಕೆ ಸಂಗ್ರಹಿಸಿದೆ. ಇದು  ರಾಜ್ಯಕ್ಕೆ ಮಾದರಿಯಾದ ಕೆಲಸ ಎಂದು ಅಧ್ಯಕ್ಷರು ಶ್ಲಾಘಿಸಿದರು.
ವೈದ್ಯಕೀಯ ಚೀಟಿಯಲ್ಲಿ  ವೈದ್ಯರು ರೋಗಿಗಳ ಹೆಸರನ್ನು ಕಡ್ಡಾಯವಾಗಿ ಕನ್ನಡದಲ್ಲಿ ಬರೆಯಬೇಕು. ಖಾಸಗಿ ಆಸ್ಪತ್ರೆಗಳಲ್ಲೂ ಹಂತ ಹಂತವಾಗಿ ಕನ್ನಡ ಬಳಕೆಯನ್ನು ಜಾರಿಗೆ ತರಲು ಸೂಚಿಸಲಾಗಿದೆ. ಮರಣ ಪ್ರಮಾಣ ಪತ್ರ ಹಾಗೂ ಪೋಸ್ಟ್ಮಾರ್ಟಂ ವರದಿಯು ಸಹ  ಜನಸಾಮಾನ್ಯರಿಗೆ ಅರ್ಥವಾಗುವಂತೆ ಇವುಗಳು ಕನ್ನಡದಲ್ಲೇ ಇರಬೇಕು ಎಂಬ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳು ಒಪ್ಪಿಕೊಂಡಿದ್ದು ಇದನ್ನು ಜಾರಿಗೆ ತರುವಂತೆ ತಿಳಿಸಿದರು.
ಶಾಲೆಗಳಲ್ಲಿ ನಲಿ-ಕಲಿ ಕಲಿಕಾ ಪರಿಕಲ್ಪನೆ  ಯಶಸ್ವಿಗೊಳಿಸಲು ಪರಿಶೀಲನೆ ಮಾಡಲಾಗುವುದು, ಈ ಕುರಿತು ವರದಿಯನ್ನು ಮಾನ್ಯ ಮುಖ್ಯಮಂತ್ರಿಯವರಿಗೆ ಸಲ್ಲಿಸಲು ಕ್ರಮವಹಿಸಲಾಗಿದೆ,  ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ನಾಡಗೀತೆಯನ್ನು ಹಾಡುತ್ತಿಲ್ಲವೆಂಬ ದೂರುಗಳು ಬಂದಿದೆ. ಆದುದರಿಂದ ಖಾಸಗಿ ಶಾಲೆಗಳಲ್ಲಿ ನಾಡಗೀತೆಯನ್ನು ಕಡ್ಡಾಯಗೊಳಿಸಲು ಜಿಲ್ಲಾಡಳಿತ ಕ್ರಮವಹಿಸುವಂತೆ ತಿಳಿಸಿದರು, ಈಗಾಗಲೇ 180 ಮದರಸಾಗಳಲ್ಲಿ ಪ್ರಾಥಮಿಕ ಕನ್ನಡ ಕಲಿಕಾ ಕೇಂದ್ರಗಳನ್ನು ಆರಂಭಿಸಲಾಗಿದ್ದು, 2026 ರ ಮಾರ್ಚ್ ವೇಳೆಗೆ ಈ ಯೋಜನೆಯನ್ನು ಒಟ್ಟು 1,200 ಮದರಸಾಗಳಿಗೆ ವಿಸ್ತರಿಸುವ ಗುರಿ ಹೊಂದಲಾಗಿದೆ. ಇದು ಉರ್ದು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಸುಲಭವಾಗಲಿದೆ ಎಂದರು.

Read also : ಹಂಗಾಮಿ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ರಾಜ್ಯದಲ್ಲಿರುವ 3900 ಶಾಲೆಗಳು ಶತಮಾನ ಕಂಡ ಶಾಲೆಗಳಿವೆ, ಅಂತಹ ಅನೇಕ ಶಾಲೆಗಳು ಇಂದು ಮುಚ್ಚುವ ಸ್ಥಿತಿಯಲ್ಲಿವೆ. ಹರಪನಹಳ್ಳಿ ಶಾಲೆಗೆ ಮಹಾತ್ಮ ಗಾಂಧೀಜಿ ಭೇಟಿ ನೀಡಿದ್ದರು, ರಾಜ್ಯದಲ್ಲಿರುವ ಶಾಲೆಗಳ ಮೇಲೆ ಗಾಂಧಿ ಮತ್ತು ರವೀಂದ್ರನಾಥ್ ಠ್ಯಾಗೂರ್ ಅವರ ಪ್ರಭಾವ ಬೀರಿದೆ, ಇದು ಸಂತೋಷದ ವಿಷಯವಾಗಿದೆ.  ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯದ 19700 ಶಾಲೆಗಳಿಗೆ ಹಕ್ಕುಪತ್ರಗಳನ್ನು ನೀಡಲು ಸಹಕರಿಸಿದೆ. ಈಗ ಹೊಸದಾಗಿ ಕೆಪಿಎಸ್ ಶಾಲೆಗಳನ್ನು ತೆರೆಯಲಾಗಿದ್ದು ಪೋಷಕರು ಮಕ್ಕಳನ್ನು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿಸಲು ಇಚ್ಚೆ ಪಡುತ್ತಾರೆ ಎಂದರು.
ವಿಶ್ವ ಕನ್ನಡ ಸಮ್ಮೇಳನವನ್ನು  26-27 ರ ಸಾಲಿನಲ್ಲಿ ದಾವಣಗೆರೆಯಲ್ಲಿ ನಡೆಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು.  ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಿ ಸಲು ಜಾಗ ಗುರುತಿಸಲಾಗಿದ್ದು, ಮುಂದಿನ ಬಜೆಟ್ನಲ್ಲಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್,  ಸದಸ್ಯರಾದ ಡಾ:ಎ.ಬಿ. ರಾಮಚಂದ್ರಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಾಮದೇವಪ್ಪ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿಡಾ.ಪುರುಷೋತ್ತಮ ಬಿಳಿಮಲೆದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಹಂಗಾಮಿ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಮೃತ ವರ್ಷಿಣಿ ವಿದ್ಯಾಲಯ : ನಾಯಕರೊಳು ಅಸಾಮಾನ್ಯರೆನಿಸದ ಕೆಂಪೇಗೌಡರು

ಕುಮಾರಪಟ್ಟಣ : ಅಮೃತ ವರ್ಷಿಣಿ ವಿದ್ಯಾಲಯದಲ್ಲಿ ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ ಕರ್ನಾಟಕದ ನಾಡಪ್ರಭು ಎಂದೇ ಪ್ರಸಿದ್ಧಿ ಪಡೆದಂತಹ ಕೆಂಪೇಗೌಡರ…

By Dinamaana Kannada News

“ಮೊನಾಲಿಸ” ಚಿತ್ರಕ್ಕೆ ಇಪ್ಪತ್ತು ವರ್ಷಗಳ ಸಂಭ್ರಮ ..

ಬೆಂಗಳೂರು :  ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಧ್ಯಾನ್ ಹಾಗೂ ಸದಾ ನಾಯಕ, ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್  "ಮೊನಾಲಿಸ" ಚಿತ್ರ…

By Dinamaana Kannada News

ಕಠಿಣ ಪರಿಶ್ರಮದಿಂದ ಜೀವನದಲ್ಲಿ ಸಾಧನೆ ಸಾಧ್ಯ : ವಿನಯ್‍ಕುಮಾರ್

ಹರಿಹರ (Harihara): ಸ್ಥಿರ ಮತ್ತು ಕಠಿಣ ಪರಿಶ್ರಮದ ವ್ಯಕ್ತಿತ್ವ ರೂಢಿಸಿಕೊಳ್ಳುವ ವಿದ್ಯಾರ್ಥಿಗಳು ಬದುಕಿನಲ್ಲಿ ಉನ್ನತ ಸಾಧನೆ ಸಾಧಿಸಲು ಸಾಧ್ಯ ಎಂದು…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ಹಂಗಾಮಿ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
job news
ತಾಜಾ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್,ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
extended
ತಾಜಾ ಸುದ್ದಿ

SC-ST ಕ್ರೀಡಾಪಟುಗಳ ಪ್ರೋತ್ಸಾಹಧನ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಯಶಸ್ಸು ಗಳಿಸಿ : ನ್ಯಾ.ಮಹಾವೀರ.ಮ.ಕರೆಣ್ಣನವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?