ಜಗಳೂರು : ಗುರುಸಿದ್ದಾಪುರ ಯಾನೆ ಮಡ್ರಳ್ಳಿ ಚೌಡಮ್ಮ ದೇವಿಯ ಗಡ್ಡೆ ತೇರಿನ ರಥೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಜಾತ್ರೆಗೆ ಬರುವಂತ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ತಾಲೂಕು ಮಟ್ಟದ ಅಧಿಕಾರಿಗಳು ಶ್ರಮಿಸಲಿದ್ದಾರೆ ಜೊತೆಗೆ ಟ್ರಾಫಿಕ್ ಸಮಸ್ಯೆಯಾಗದಂತೆ ಪೋಲಿಸ್ ಇಲಾಖೆಯವರು ಹದ್ದಿನ ಕಣ್ಣಿಡಬೇಕು ಎಂದು ತಹಸಿಲ್ದಾರ್ ಸೈಯದ್ ಕಲೀಂ ಉಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿನ ರಂಗಯ್ಯನದುರ್ಗ ಅರಣ್ಯ ಪ್ರದೇಶದಲ್ಲಿರುವ ಮಡ್ರಳ್ಳಿ ಚೌಡಮ್ಮ ದೇವಾಲಯದ ಸಮುದಾಯ ಭವನದಲ್ಲಿ ಜಾತ್ರೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಪೂರ್ವ ಸಿದ್ಧತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಜಾತ್ರೆಗೆ ಬರುವಂತಹ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗುವುದು ಈ ನೀರು ಕುಡಿಯಲು ಯೋಗ್ಯವಾಗಿದೆ ಇಲ್ಲವೇ ಎಂಬುದು ತಾಲೂಕ ಆರೋಗ್ಯಾಧಿಕಾರಿಗಳು ದೃಢಪಡಿಸಲಿದ್ದಾರೆ ಅಲ್ಲದೇ ಜಾತ್ರೆಯಲ್ಲಿ ಆರೋಗ್ಯ ಇಲಾಖೆಯಿಂದ ಕ್ಯಾಂಪ್ ನ್ನು ಹಾಕಲಿದ್ದು ಬರುವ ಭಕ್ತಾದಿಗಳಿಗೆ ಏನಾದರೂ ಆರೋಗ್ಯ ಸಮಸ್ಯೆ ಆದರೆ ನ ವೈದ್ಯರು ಪರೀಕ್ಷೆ ನೀಡಲಿದ್ದಾರೆ.
ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಚತಾ ಕಾರ್ಯವನ್ನು ಮಾಡಿ ಬ್ಲೀಚಿಂಗ್ ಪೌಡರ್ ಹಾಕಬೇಕು, ಅಂಗಡಿ ಮುಂಗಟ್ಟುಗಳನ್ನು ರಸ್ತೆಗೆ ಅತ್ತಲಾಗದಂತೆ ಅಡ್ಡದಿದ್ದೆ ಹಾಕಬಾರದು ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಒಂದು ಕಡೆ ನಮಗೆಗಳನ್ನು ಹಾಕುವ ವ್ಯವಸ್ಥೆಯನ್ನು ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಇ ಓ ಕೆಂಚಪ್ಪ ಮಾತನಾಡಿ ಪಂಚಾಯತಿ ವತಿಯಿಂದ ಜಾತ್ರಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಈಗಾಗಲೇ ಸ್ವಚ್ಛತಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ ಒಟ್ಟಾರೆಯಾಗಿ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲೂಕು ಮಟ್ಟದ ಅಧಿಕಾರಿಗಳು ಶ್ರಮಿಸಬೇಕಾಗಿದೆ ಎಂದು ಹೇಳಿದರು.
ಕೆಪಿಸಿಸಿ ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿ ಕುಮಾರ್ ಮಾತನಾಡಿ ತಾಲೂಕಿನಲ್ಲಿಯೇ ಇತಿಹಾಸ ಪ್ರಸಿದ್ಧ ಹಾಗೂ ಅರಣ್ಯ ಪ್ರದೇಶದಲ್ಲಿರುವ ಚೌಡಮ್ಮ ದೇವಿಯು ತನ್ನದೇ ಆದ ಶಕ್ತಿಯನ್ನು ಹೊಂದಿದ್ದು ಪ್ರತಿ ವರ್ಷ ಲಕ್ಷಾಂತರ ಭಕ್ತಾದಿಗಳು ಜಾತ್ರೆಗೆ ಆಗಮಿಸುತ್ತಿದ್ದಾರೆ ತಾಲೂಕು ಮಟ್ಟದ ಅಧಿಕಾರಿಗಳ ವತಿಯಿಂದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿದೆ ಜಾತ್ರೆಗೆ ಬರುವಂತಹ ಭಕ್ತಾದಿಗಳು ಸಹ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಾದ ಜಿ.ಪಂ ಎ ಇ ಇ ಶಿವಮೂರ್ತಿ, ತಾಲೂಕು ಆರೋಗ್ಯ ಅಧಿಕಾರಿ ವಿಶ್ವನಾಥ್ , ಪಶು ಇಲಾಖೆಯ ಸಹಾಯಕ ನಿರ್ದೇಶಕರಾದ ಲಿಂಗರಾಜು ಬೆಸ್ಕಾಂ ಎಇಇ ಮಲ್ಲಿಕಾರ್ಜುನ್, ಮಡ್ರಳ್ಳಿ ಚೌಡಮ್ಮ ದೇವಸ್ಥಾನದ ಸಮಿತಿ ಅಧ್ಯಕ್ಷ ಗಿರೀಶ್, ರಾಜಶ್ವನಿರೀಕ್ಷಕ ಕೀರ್ತಿಂಜೆಯ ಜಯ ಸೇರಿದಂತೆ ಗ್ರಾಮಸ್ಥರು ತಾಲೂಕು ಮಟ್ಟದ ಕೆಲ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು
