Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭಾರತ ಜನಗಣತಿ-2027 ಸಮೀಕ್ಷೆಗೆ ಸಕಲ ಸಿದ್ಧತೆಗೆ ಕ್ರಮವಹಿಸಿ:ಗಂಗಾಧರ ಸ್ವಾಮಿ
ತಾಜಾ ಸುದ್ದಿ

ಭಾರತ ಜನಗಣತಿ-2027 ಸಮೀಕ್ಷೆಗೆ ಸಕಲ ಸಿದ್ಧತೆಗೆ ಕ್ರಮವಹಿಸಿ:ಗಂಗಾಧರ ಸ್ವಾಮಿ

Dinamaana Kannada News
Last updated: February 25, 2026 11:13 am
Dinamaana Kannada News
Share
District Collector G.M. Gangadharaswamy
SHARE
ದಾವಣಗೆರೆ,ಫೆ.25 : ಜಿಲ್ಲೆಯಲ್ಲಿ ಏಪ್ರಿಲ್ 16 ರಿಂದ ಮೇ 15 ರವರೆಗೆ 30 ದಿನಗಳ ಕಾಲ ಭಾರತದ ಜನಗಣತಿ 2027 ರ ಸಮೀಕ್ಷೆ ನಡೆಯಲಿದ್ದು  ಸಮೀಕ್ಷೆಗೆ ಎಲ್ಲಾ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರ ಸ್ವಾಮಿ ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಭಾರತದ ಜನಗಣತಿ 2027 ರ ಮೊದಲ ಹಂತದ ಕ್ಷೇತ್ರ ಕಾರ್ಯಚರಣೆ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಾರತದ ಜನಗಣತಿ 2027 ಸಮೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚನೆ ನೀಡಿದರು.
ಸಮೀಕ್ಷೆಯು ಸಂಪೂರ್ಣ ಡಿಜಿಟಲ್ ರೂಪದಲ್ಲಿ ನಡೆಯಲಿದ್ದು, ಈ ಪ್ರಕ್ರಿಯೆಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.
ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಗಣತಿದಾರರು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳು ಗಣತೀದಾರರಿಗೆ ತರಬೇತಿ ನೀಡಬೇಕು, ಸಮೀಕ್ಷೆಯ ಗುಣ ಮಟ್ಟ ಕಾಪಾಡಿಕೊಳ್ಳಲು ಉತ್ತಮ ಸಾಮರ್ಥ್ಯವುಳ್ಳವರನ್ನು ಮಾತ್ರ ಗಣತಿದಾರರನ್ನಾಗಿ ನೇಮಕ ಮಾಡಿಕೊಳ್ಳಬೇಕು. ಈ ಹಿಂದೆ ಸಮೀಕ್ಷೆಯ ಸಂದರ್ಭದಲ್ಲಿ ಕಂಡುಬಂದ ತಾಂತ್ರಿಕ ತೊಂದರೆ ಗಳು ಮತ್ತು ಗೊಂದಲಗಳನ್ನು ಪರಿಹರಿಸಲಾಗಿದೆ. ಈ ಬಾರಿ ಸಮೀಕ್ಷೆಯನ್ನು ಯಾವುದೇ ದೋಷವಿಲ್ಲದೆ ನಡೆಸಲು ಆದ್ಯತೆ ನೀಡಲಾಗಿದೆ ಎಂದರು.
ಯಾವುದೇ ಕಾರಣಕ್ಕೂ ಸಮೀಕ್ಷೆಯ ಸಂದರ್ಭದಲ್ಲಿ ಅನಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳದಂತೆ ಸೂಚಿಸಲಾಗಿದ್ದು, ಒಂದು ವೇಳೆ ಬದಲಾವಣೆ ಮಾಡಬೇಕಾದ ಅನಿವಾರ್ಯತೆ ಬಂದರೆ, ನೇರವಾಗಿ ಬಿಇಓ ಗಳು (BEO) ಮತ್ತು ತಾಲೂಕು ಮಟ್ಟದ ಅಧಿಕಾರಿಗಳೇ ಜವಾಬ್ದಾರರಾಗುತ್ತಾರೆ. ಈ ಸಮೀಕ್ಷೆಯು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ದಿಕ್ಸೂಚಿಯಾಗಲಿದ್ದು, ಸಿಬ್ಬಂದಿಗಳು ಯಾವುದೇ ಲೋಪದೋಷಗಳಿಲ್ಲದೆ ಸಮೀಕ್ಷೆ ನಡೆಸಬೇಕೆಂದು ತಿಳಿಸಿದರು.
Read also : ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಆಗ್ರಹ

ತಹಶೀಲ್ದಾರ್, ತಾಲೂಕು ಮಟ್ಟದ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಬಿ.ಸಿ.ಎಂ ಅಧಿಕಾರಿಗಳನ್ನು ಒಳಗೊಂಡ ವಾಟ್ಸ್ ಆ್ಯಪ್ ಗ್ರೂಪ್ ರಚಿಸುವಂತೆ ಸೂಚಿಸಿ ದರು.
ವರ್ಗಾವಣೆಯಾಗಿರುವವರು ಅಥವಾ ನಿವೃತ್ತರಾಗಿರುವವರ ಜಾಗಕ್ಕೆ ಬೇರೆ ಸಿಬ್ಬಂದಿಗಳನ್ನು ನೇಮಕ ಮಾಡಿ, ಅನಾರೋಗ್ಯಪೀಡಿತರು  ಅಥವಾ ಗರ್ಭಿಣಿಯರು,  ಹಾಲುಣಿಸುವ ತಾಯಂದಿರನ್ನು ಕೆಲಸಕ್ಕೆ ನಿಯೋಜಿಸಬಾರದು. ಡ್ರಾಪ್ ಲೆವೆಲ್  1% ಕ್ಕಿಂತ ಕಡಿಮೆ ಇರಬೇಕು, ಈ ನಿಟ್ಟಿನಲ್ಲಿ ಗುಣಮಟ್ಟದ ಕೆಲಸ ಮಾಡಬೇಕು ಎಂದರು.
ತರಬೇತಿಯು ಮಾರ್ಚ್ 11 ರವರೆಗೂ ನಡೆಯಲಿದೆ. ಕ್ಷೇತ್ರ ಅಧಿಕಾರಿಗಳಿಗೆ ಫೆಬ್ರವರಿ ಅಂತ್ಯ ಅಥವಾ ಮಾರ್ಚ್‌ನ ಮೊದಲ ವಾರದೊಳಗೆ ತರಬೇತಿ ನೀಡಬೇಕು, ಮತ್ತು ಮಾರ್ಚ್ 4ರೊಳಗೆ ಎಲ್ಲಾ ಕೆಲಸಗಳು ಪೂರ್ಣಗೊಳ್ಳಬೇಕು. ಮಾನವ ಸಂಪನ್ಮೂಲದ ಗುಣಮಟ್ಟ ಬಹಳ ಮುಖ್ಯ. ಯಾರು ಆರ್ಥಿಕ ಸರ್ವೆ ಮಾಡಿದರೋ ಅವರನ್ನೇ ನೇಮಿಸಿಕೊಳ್ಳುವುದು ಅನುಕೂಲಕರ. ಪ್ರತಿ ಬ್ಲಾಕ್‌ನಲ್ಲಿ ಕನಿಷ್ಠ ಇಬ್ಬರು ಎಣಿಕೆದಾರರನ್ನು ನೇಮಿಸಬೇಕು. ಮನೆಪಟ್ಟಿ ಮಾಡುವಾಗ ಸರಿಯಾಗಿ ಮ್ಯಾಪಿಂಗ್ ಮಾಡಬೇಕು. ಈ ಮಾಹಿತಿಯನ್ನು ಎಕ್ಸೆಲ್ ಶೀಟ್‌ನಲ್ಲಿ ಸಿದ್ಧವಿಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಮಹಾನಗರ ಪಾಲಿಕೆ ಆಯುಕ್ತ ಮಹಾಂತೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  ಜಿಲ್ಲಾ ಅಧಿಕಾರಿ ರೇಣುಕಾ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ನೀಲಾ, ಡಿಡಿಪಿಐ ಕೊಟ್ರೇಶ್, ಜನಗಣತಿ ನೋಡಲ್ ಅಧಿಕಾರಿ ವಿವೇಕ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಆನ್ಲೈನ್ ಮೂಲಕ  ಉಪಸ್ಥಿತರಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಭಾರತ ಜನಗಣತಿ-2027
Share This Article
Twitter Email Copy Link Print
Previous Article Davanagere ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಆಗ್ರಹ
Next Article jagalore ಜಗಳೂರು|ಬೀದಿ ನಾಯಿಗಳಿಗೆ ಆಶ್ರಯ ತಾಣದ ಕಾಮಗಾರಿ ಪರಿಶೀಲನೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರೈಲಿನಲ್ಲಿ ಕಳವು ಪ್ರಕರಣ:3.43 ಲಕ್ಷ ಮೌಲ್ಯದ ಚಿನ್ನಾಭರಣ,ಲ್ಯಾಪ್‌ಟಾಪ್ ವಶ

ದಾವಣಗೆರೆ: ಚಲಿಸುವ ರೈಲಿನಲ್ಲಿ ಪ್ರಯಾಣಿಕರೊಬ್ಬರ ಚಿನ್ನಾಭರಣ, ಲ್ಯಾಪ್‌ಟಾಪ್ ಕಳವು ಮಾಡಿದ್ದ ಆರೋಪಿಯನ್ನು ಆರ್ ಪಿಎಒಫ್ ಮತ್ತು ಜಿಆರ್ ಪಿ ಪೊಲೀಸರು…

By Dinamaana Kannada News

ದಾವಣಗೆರೆ | ನಗರದ ಪ್ರಮುಖ ವೃತ್ತಕ್ಕೆ ಶ್ರೀ ಮಡಿವಾಳ ಮಾಚಿದೇವ ಹೆಸರಿಡುವಂತೆ ಆಗ್ರಹಿಸಿ ಮನವಿ

ದಾವಣಗೆರೆ : ನಗರದ ಯಾವುದಾದರೂ ಪ್ರಮುಖ ವೃತ್ತಕ್ಕೆ ಶ್ರೀ ಮಡಿವಾಳ ಮಾಚಿದೇವ ಹೆಸರಿಡುವಂತೆ ಆಗ್ರಹಿಸಿ ಶ್ರೀ ಮಡಿವಾಳ ಮಾಚಿದೇವ ಅಭಿವೃದ್ಧಿ…

By Dinamaana Kannada News

Davanagere | ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ  

ದಾವಣಗೆರೆ (Davanagere) : ಕರ್ನಾಟಕ ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಸದಸ್ಯ ಎಂ.ಕೆ.ಲಿಯಾಖತ್ ಆಲಿ ಅವರ ಜನುಮದಿನ ಹಿನ್ನಲೆಯಲ್ಲಿ…

By Dinamaana Kannada News

You Might Also Like

ಸಚಿನ್ ಒಕ್ಕಲಿಗ
ಅಭಿಪ್ರಾಯ

ಇಂಡಿಯಾ ಒಕ್ಕೂಟದಲ್ಲಿ ರಾಜ್ಯಗಳ ಹೆಸರು ಬದಲಾವಣೆ ಸಾಧ್ಯವೇ?

By Dinamaana Kannada News
Davanagere
ತಾಜಾ ಸುದ್ದಿ

ಫಲಪುಷ್ಪ ಪ್ರದರ್ಶನ -2026:ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ

By Dinamaana Kannada News
jagalore
ತಾಜಾ ಸುದ್ದಿ

ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಆಗ್ರಹಿಸಿ ರೈತರಿಂದ ಬೆಸ್ಕಾಂಗೆ ಮುತ್ತಿಗೆ

By Dinamaana Kannada News
jagalore
ತಾಜಾ ಸುದ್ದಿ

ಸುಖ,ನೆಮ್ಮದಿ,ಶಾಂತಿ,ಆರೋಗ್ಯಗಳು ಕ್ಷೀಣ : ಕಣ್ವಕುಪ್ಪೆ ಶ್ರೀ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?