ಹರಿಹರ:
ತಾಲ್ಲೂಕಿನ ರಾಜನಹಳ್ಳಿ ಗ್ರಾಮದ ನಿವಾಸಿ ನರರೋಗ ಶಸ್ತ್ರಚಿಕಿತ್ಸಾ ವೈದ್ಯರಾದ ಶ್ರೀ ಸತ್ಯಸಾಯಿ ನಾರಾಯಣ ಹಾಸ್ಪಿಟಲ್ ಮುಖ್ಯಸ್ಥ ಡಾ.ಬಿ.ಎಸ್.ಶೈಲೇಶ್ ಕುಮಾರ್ ಇವರಿಗೆ ಆಂಧ್ರಪ್ರದೇಶ ಮಂತ್ರಾಲಯದ ರಾಘವೇಂದ್ರಸ್ವಾಮಿಗಳ ಮಠದಿಂದ ಪ್ರತಿಷ್ಟಿತ ‘ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024’ ಪ್ರಧಾನ ಮಾಡಲಾಯಿತು.
ಮಾ.17ರಂದು ಮಂತ್ರಾಲಯದ ಮಠದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸುಬುಧೇಂದ್ರ ತೀರ್ಥ ಶ್ರೀಗಳು ಡಾ.ಶೈಲೇಶ್ ದಂಪತಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಸಭೆಯಲ್ಲಿ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ ಇದ್ದರು.