Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಜನರ ನಂಬಿಕೆ ಹುಸಿಯಾಗದಂತೆ ಸೇವೆ ನಿರಂತರವಾಗಿರಲಿ
Blog

ಜನರ ನಂಬಿಕೆ ಹುಸಿಯಾಗದಂತೆ ಸೇವೆ ನಿರಂತರವಾಗಿರಲಿ

Dinamaana Kannada News
Last updated: April 2, 2024 12:06 pm
Dinamaana Kannada News
Share
dvg police
ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ
SHARE

ದಾವಣಗೆರೆ ಏ.2 : ಸರ್ಕಾರದ ವಿವಿಧ ಇಲಾಖೆಗಳ ಸೇವೆಗಿಂತಲೂ ಪೊಲೀಸ್ ಇಲಾಖೆ ಸೇವೆ ಭಿನ್ನವಾಗಿರುತ್ತದೆ. ಕಾನೂನು ಸುವ್ಯವಸ್ಥೆಯಲ್ಲಿ ಜನಸಾಮಾನ್ಯರಿಗೆ ನೆರವಾಗುವ ಮೂಲಕ ಅವರ ಕಷ್ಟಗಳಲ್ಲಿ ಭಾಗಿಯಾಗಲಿದೆ. ಸಂಕಷ್ಟದಲ್ಲಿದ್ದಾಗ ಪೊಲೀಸ್ ಇಲಾಖೆ ತಕ್ಷಣ ಸ್ಪಂದಿಸಲಿದೆ ಎಂಬ ನಂಬಿಕೆ ಎಂದೂ ಉಸಿಯಾಗದಂತೆ ನಮ್ಮ ಸೇವೆ ನಿರಂತರವಾಗಿರಬೇಕೆಂದು ನಿವೃತ್ತ ಪೊಲೀಸ್ ಉಪನಿರೀಕ್ಷಕ ಸಿ.ಎನ್.ಬಸವರಾಜ್ ತಿಳಿಸಿದರು.

ಅವರು ಮಂಗಳವಾರ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಬೇರೆ ಇಲಾಖೆಗಿಂತ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವುದು ಅತಿ ಮುಖ್ಯವಾಗಿರುತ್ತದೆ.  ಪೊಲೀಸ್ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾನೂನು ಪಾಲನೆ, ಅನುಷ್ಠಾನದಲ್ಲಿ ನೇರವಾಗಿ ಭಾಗಿಯಾಗುವರು. ಸಾರ್ವಜನಿಕರೊಂದಿಗೆ ಹತ್ತಿರದ ಸಂಬಂಧವಿರುತ್ತದೆ. ಕಾನೂನು ಉಲ್ಲಂಘನೆಯಾದಾಗ ಜನಸಾಮಾನ್ಯರಿಗೆ ನೆರವಾಗುವ ಮೂಲಕ ರಕ್ಷಣೆಯನ್ನು ಒದಗಿಸುತ್ತಾರೆ ಎಂಬ ಅಪಾರವಾದ ನಂಬಿಕೆಯನ್ನು ಜನರು ಇಟ್ಟುಕೊಂಡಿರುತ್ತಾರೆ, ಪ್ರಾಮಾಣಿಕ ಸೇವೆ ಮಾಡುವ ಮೂಲಕ ಇಲಾಖೆ ಘನತೆ, ಗೌರವ ಹೆಚ್ಚು ಮಾಡೋಣ ಎಂದರು.

ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಡಾ; ಕೆ.ತ್ಯಾಗರಾಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪೊಲೀಸ್ ಧ್ವಜಗಳ ವಿತರಣೆ ಮಾಡಿದರು.

ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಏಪ್ರಿಲ್ 2 ರಾಜ್ಯದಲ್ಲಿ ಪೊಲೀಸ್ ಕಾಯ್ದೆ ತಂದಂತಹ ದಿನ, 1965 ರಿಂದ ಇಲ್ಲಿಯವರೆಗೂ ಕರ್ನಾಟಕರಾಜ್ಯ ಪೊಲೀಸ್ ಧ್ವಜ ದಿನಾಚರಣೆಯಾಗಿ ಆಚರಿಸುತ್ತಾ ಬರಲಾಗಿದೆ. ಪೊಲೀಸ್ ಇಲಾಖೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದಂತಹ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸೇವೆಯನ್ನ ಸ್ಮರಿಸುವಂತಹ ಈ ದಿನ, ಅವರ ಕಲ್ಯಾಣವೇ ನಮ್ಮ ಗುರಿಯಾಗಿದ್ದು ನಿವೃತ್ತ ಅಧಿಕರಿಗಳು ಸಲ್ಲಿಸಿದ ಸೇವೆ ಸೇವೆಯಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸ್ಪೂರ್ತಿ ಹಾಗೂ ಮಾದರಿಯಾಗಿರಬೇಕು ಎಂದು ತಮ್ಮ ಆಶಯ ವ್ಯಕ್ತಪಡಿಸಿದರು.

ಅಬಕಾರಿ ಇಲಾಖೆ ಉಪ ಆಯುಕ್ತರಾದ ಶೈಲಜಾ, ನಿವೃತ್ತ ಅಧಿಕಾರಿಗಳಾದ ಶಿವಾಚಾರ್ಯ, ಸಕ್ರಿ ಬಸವರಾಜಪ್ಪ , ರವಿನಾರಾಯಣ, ಲಿಂಗಾರೆಡ್ಡಿ ಮತ್ತು ಪೊಲೀಸ್ ಇಲಾಖೆಯಲ್ಲಿನ ನಿವೃತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ  ವಿಜಯಕುಮಾರ್, ಎಂ.ಸಂತೋಷ ವಂದಿಸಿದರು.

TAGGED:davanagere latest newsdinamaana.comLet the service be continuous.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಸೇವೆ ನಿರಂತರವಾಗಿರಲಿ.
Share This Article
Twitter Email Copy Link Print
Previous Article father and son ಅಪ್ಪನ ಕನಸು ನನ್ನ ಕನಸೂ …ಎರಡೂ ನನಸಾಗಲಿಲ್ಲ
Next Article make sure to vote dvg ದೇಶ ಬದಲಾಯಿಸುವ ಶಕ್ತಿ ಮತದಾರರಲ್ಲಿದೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ: ದೇವಸ್ಥಾನ ಕಟ್ಟಲು ತೋರುವ ಒಗ್ಗಟ್ಟು ಸುಸಜ್ಜಿತ ಶಾಲೆ ನಿರ್ಮಾಣ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡಿದರೆ ರಾಜ್ಯದಲ್ಲಿ ಮಾದರಿ ಶಾಲೆಯನ್ನಾಗಿಸಲು…

By Dinamaana Kannada News

Davanagere news | ಆ.27 ರಂದು ಗೆಜೆಟೆಡ್ ಪ್ರೊಬೇಷರ್ಸ್ ಪೂರ್ವಭಾವಿ ಪರೀಕ್ಷೆ : 14 ಕೇಂದ್ರಗಳಲ್ಲಿ ಸಿದ್ದತೆ

ದಾವಣಗೆರೆ (Davanagere) :   ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ `ಎ` ಮತ್ತು `ಬಿ` ವೃಂದದ 384 ಹುದ್ದೆಗಳಿಗೆ ಆಗಸ್ಟ್ 27…

By Dinamaana Kannada News

ದಾವಣಗೆರೆ : ನಾಗಪುರ ದೀಕ್ಷಾ ಭೂಮಿಗೆ ತೆರಳುವ ಯಾತ್ರಾರ್ಥಿಗಳಿಗೆ ಸಾರಿಗೆ ಸೌಲಭ್ಯ

ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?