Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಯೋವೃದ್ಧೆ ರಕ್ಷಿಸಿ ಮಾನವೀಯತೆ ಮೆರೆದ ದಾವಣಗೆರೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರು
ತಾಜಾ ಸುದ್ದಿ

ವಯೋವೃದ್ಧೆ ರಕ್ಷಿಸಿ ಮಾನವೀಯತೆ ಮೆರೆದ ದಾವಣಗೆರೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರು

Dinamaana Kannada News
Last updated: April 6, 2024 11:52 am
Dinamaana Kannada News
Share
_judges
ಮಾನವೀಯತೆ ಮೆರೆದ ನ್ಯಾಯಾಧೀಶರು
SHARE

ದಾವಣಗೆರೆ :
ಬೆಣ್ಣೆ ನಗರಿ,ಶಿಕ್ಷಣ ನಗರಿ ಎಂದೆಲ್ಲ ಕರೆಯುವ ದಾವಣಗೆರೆ ನಗರದಲ್ಲಿ ಶ್ರೀಮಂತರು, ಮಧ್ಯಮವರ್ಗದವರು, ಬಡವರು ಮತ್ತು ಕಡುಬಡವರ ಲಕ್ಷಾಂತರ ಜನರು ವಾಸಮಾಡುತ್ತಿದ್ದಾರೆ. ದಿನನಿತ್ಯದ ಬದುಕಿನ ಜಂಜಾಟಗಳ ನಾಗಾಲೋಟದಲ್ಲಿ ಕೆಲವು ಸಣ್ಣ ಸಣ್ಣ ವಿಷಯಗಳು ನಾಗರಿಕ ಸಮಾಜದ ಕಣ್ಣಿಗೆ ಬಿದ್ದರೂ ಹೃದಯಕ್ಕೆ ತಟ್ಟುವುದಿಲ್ಲ.

ಆದರೆ,ದಾವಣಗೆರೆ ಶಾಮನೂರು ಕೆಳ ಸೇತುವೆಯನ್ನೆ ಸೂರು ಮಾಡಿಕೊಂಡು ಪುಟ್ಟ ನಾಯಿಮರಿ ಯೊಂದಿಗೆ ವಾಸವಿದ್ದ ವಯೋವೃದ್ಧೆಯನ್ನು ರಕ್ಷಿಸಿ ಸೂಕ್ತ ವೈದ್ಯಕೀಯ ಚಿಕಿತ್ಸೆಯೊಂದಿಗೆ ಮಹಿಳಾ ರಕ್ಷಣಾಲಯಕ್ಕೆ ಕಳುಹಿಸಿ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಮಾನವೀಯತೆಯನ್ನು ಮೆರೆದಿದ್ದಾರೆ.

ನ್ಯಾಯಾಧೀಶರು ಪ್ರತಿದಿನ ವಸತಿಗೆ ಹಿಂದಿಂದ ನ್ಯಾಯಾಲಯಕ್ಕೆ ಸಂಚರಿಸುವ ದಾರಿಯಲ್ಲಿ ಮಳೆ,ಗಾಳಿ ಮತ್ತು ಧೂಳಿನ ನಡುವೆ ವಾಸವಿದ್ದ ಈ ವಯೋವೃದ್ಧೆಯನ್ನು ಗಮನಿಸಿದ್ದಾರೆ. ತಮ್ಮ ಇಲಾಖೆಯ ಇನ್ನೋರ್ವ ನ್ಯಾಯಾಧೀಶರಾದ ಮಹಾವೀರ ಕರೆಣ್ಣನವರ ಇವರೊಂದಿಗೆ ಸೇರಿ ಮಹಿಳೆಯ ಘನತೆಯ ಬದುಕಿಗೆ ಆಸರೆಯಾಗಿದ್ದಾರೆ.

ಮೊದಮೊದಲು ತೀವ್ರ ಪ್ರತಿರೋಧ,ಆಕ್ರೋಶ,ಕೌಟುಂಬಿಕವಾಗಿ ತನ್ನ ಮೇಲಾದ ಆಕ್ರಮಣಗಳನ್ನು ಅಸ್ಪಷ್ಟವಾಗಿ ಹೇಳುತ್ತಿದ್ದ ಆ ವಯೋವೃದ್ಧೆ, ಉಂಡ ಸಂಕಟಗಳ ಕಾರಣಕ್ಕೋ ಏನೋ ತನ್ನೆದುರಿಗೆ ನಿಂತು ತನ್ನನ್ನು ವಿಚಾರಿಸುತ್ತಿದ್ದ ನ್ಯಾಯಾಧೀಶರ ಮೇಲೆಯೇ ಹರಿಹಾಯ್ದರೂ ಸಹ,ಸಹನೆ ಕಳೆದುಕೊಳ್ಳದೆ ಸಮಚಿತ್ತದಿಂದ ಅವಳ ಮಾನಸಿಕ ಸ್ಥಿತಿಗತಿ ಶೀಲತೆಯನ್ನು ಅರಿತು,ನ್ಯಾಯಾಧೀಶರಾದ ಮಹಾವೀರ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಹಕಾರದೊಂದಿಗೆ ಕೊನೆಗೂ ಅವಳ ಮನ ಒಪ್ಪಿಸಿ ಮಹಿಳಾ ರಕ್ಷಣಾಲಯಕ್ಕೆ ಕಳುಹಿಸುವಲ್ಲಿ ಯಶಸ್ವಿಯಾದರು.

ದೇಶದ ಯಾವ ಮನುಷ್ಯನೂ ಸಹ ಹಸಿವಿನಿಂದ ಸಾಯಬಾರದು.ಮನುಷ್ಯರಿಗೆ ನೋಡುವ ಕಣ್ಣಿದ್ದರಷ್ಟೆ ಸಾಲದು,ಅಂತರಂಗವೂ ಸಹ ಮಿಡಿಯುತಿರಬೇಕು ಎಂಬುದಕ್ಕೆ ನ್ಯಾಯಾಧೀಶರಾದ ರಾಜೇಶ್ವರಿ ಎನ್ ಹೆಗಡೆಯವರೆ ಸಾಕ್ಷಿ ಎಂದು ನಾಗರೀಕರ ಪ್ರಶಂಸೆಗೆ ಪಾತ್ರರಾದರು.

 

TAGGED:dinamaana.comHumane judges.Kannada Newsಕನ್ನಡ ಸುದ್ದಿದಿನಮಾನ.ಕಾಂಮಾನವೀಯತೆ ಮೆರೆದ ದಾವಣಗೆರೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರು.
Share This Article
Twitter Email Copy Link Print
Previous Article JMFC Court ಪೇಪರ್ ಬ್ಯಾಗ್‍ಗೆ ರೂ.10 ಪಡೆದುಕೊಂಡು ಶಾಪಿಂಗ್ ಮಾಲ್‍ಗೆ ರೂ.7ಸಾವಿರ ದಂಡ
Next Article channannvaru ಚನ್ನಣ್ಣನೆಂಬ ಮನೆಯಣ್ಣನ ನೆನೆದು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸರ್ಕಾರಗಳೇ ಸರ್ಕಾರಿ ಶಾಲೆಗಳ ಸಾಯಿಸುತ್ತಿರುವುದು ದೊಡ್ಡ ಕ್ರೈಂ : ಜಿ. ಬಿ. ವಿನಯ್ ಕುಮಾರ್

ದಾವಣಗೆರೆ (Davanagere): ಸರ್ಕಾರಗಳೇ ಸರ್ಕಾರಿ ಶಾಲೆಗಳನ್ನು ಸಾಯಿಸುತ್ತಿವೆ. ಕಣ್ಮುಂದೆ ನಡೆಯುತ್ತಿರುವ ಕ್ರೈಂ ಹಾಗೂ ದುರಂತ. ವಿದ್ಯಾವಂತರು ರಾಜಕಾರಣಕ್ಕೆ ಬರಬೇಕು. ವಿದ್ಯಾವಂತರು,…

By Dinamaana Kannada News

Davanagere | ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನ : ಪ್ರತಿಭಟನೆ

ದಾವಣಗೆರೆ  (Davanagere): ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅವಮಾನ ಮಾಡಿರುವ…

By Dinamaana Kannada News

Davanagere |10 ನೇ ತರಗತಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಅ.07 (Davanagere) ; ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ : ಬೈಕ್ ರ‍್ಯಾಲಿ

By Dinamaana Kannada News
Davanagere
ತಾಜಾ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ : ಕೆ.ವಿ.ಪ್ರಭಾಕರ್

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?