ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಏ.೧೮ರಂದು ತಮ್ಮ ನಾಮಪತ್ರ ಸಲ್ಲಿಸಲಿರುವ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಬೃಹತ್ ಮೆರವಣೆಗೆ ಏರ್ಪಡಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಜಿ.ಮಂಜಪ್ಪ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಬೆಳಿಗ್ಗೆ ೧೦ ಗಂಟೆಗೆ ದಾವಣಗೆರೆ ಉತ್ತರ ಮತ್ತು ದಕ್ಷಿಣ ಭಾಗಗಳಿಂದ ಆರಂಭವಾಗುವ ಮೆರವಣೆಗೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಕೆ.ಎಸ್.ಬಸವಂತಪ್ಪ, ಡಿ.ಜಿ.ಶಾಂತನಗೌಡ, ಶಿವಗಂಗಾ ಬಸವರಾಜ್, ಬಿ.ದೇವೆಂದ್ರಪ್ಪ, ಲತಾ ಮಲ್ಲಿಕಾರ್ಜುನ್, ಮಾಜಿ ಶಾಸಕರಾದ ವಡ್ನಾಳ್ ರಾಜಣ್ಣ, ಎಸ್.ರಾಮಪ್ಪ, ಟಿ.ಜಿ.ಗುರುಸಿದ್ದನಗೌಡ, ನಂದಿಗಾವಿ ಶ್ರೀನಿವಾಸ್, ಅರಸೀಕೆರೆ ಕೊಟ್ರೇಶ್, ವಾಗೀಶ್ ಸ್ವಾಮಿ, ಡಾ. ಟಿ.ಜಿ.ರವಿಕುಮಾರ್ ಇತರರು ಭಾಗವಹಿಸುವರು ಎಂದರು.
ದುರ್ಗಾಂಬಿಕಾ ದೇವಸ್ಥಾನದಿಂದ ಆರಂಭವಾಗುವ ಮೆರವಣೆಗೆಗೆರೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಚಾಲನೆ ನೀಡುವರು. ಹಗೆದಿಬ್ಬ ವೃತ್ತ, ಕಾಳಿಕಾದೇವಿ ರಸ್ತೆ, ಚೌಕಿಪೇಟೆ ರಸ್ತೆ, ಬಕ್ಕೇಶ್ವರ ದೇವಸ್ಥಾನ, ಹಾಸಬಾವಿ ವೃತ್ತ, ಮಾರ್ಕೇಟ್ ರಸ್ತೆ, ಮಂಡಿಪೇಟೆ, ಲಕ್ಷ್ಮೀ ವೃತ್ತ ಮೂಲಕ ಪಿ.ಬಿ. ರಸ್ತೆಗೆ ಆಗಮಿಸಲಿದೆ ಎಂದು ತಿಳಿಸಿದರು.
ನಿಟುವಳ್ಳಿ ದುರ್ಗಾಂಬಿಕಾ ದೇವಸ್ಥಾನದ ಬಳಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು. ಈ ಮೆರವಣೆಗೆ ಹೆಚ್.ಕೆ.ಆರ್. ಸರ್ಕಲ್, ಡಾಂಗೆಪಾರ್ಕ್, ಶಿವಪ್ಪಯ್ಯ ಸರ್ಕಲ್, ತ್ರಿಶೂಲ್ ಟಾಕೀಸ್ ಮೂಲಕ ಪಿ.ಬಿ. ರಸ್ತೆಗೆ ಆಗಮಿಸಲಿದೆ. ನಂತರ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಬೃಹತ್ ಮೆರವಣೆಗೆ ನಡೆಯಲಿದ್ದು, ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಲಕ್ಷ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ ಎಂದರು.
ದಿನೇಶ್ ಶೆಟ್ಟಿ, ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಎ.ನಾಗರಾಜ್, ಸುರೇಶ್ ಉತ್ತಂಗಿ, ಬಿ.ಸೋಮಶೇಖರ್, ಬಿ.ಮಲ್ಲಿಕಾರ್ಜುನ ಇತರರು ಸುದ್ದಿಗೋಷ್ಠಿಯಲ್ಲಿದ್ದರು.