Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಚಿವ ಎಸ್ಸೆಸ್ಸೆಂ ವಿರುದ್ಧ ಅಕ್ರಮ ಮರಳು ಗಣಿಗಾರಿಕೆ ಆರೋಪ ಮಾಡಿದ ಹರಿಹರ ಶಾಸಕ ಬಿ.ಪಿ.ಹರೀಶ್
ತಾಜಾ ಸುದ್ದಿ

ಸಚಿವ ಎಸ್ಸೆಸ್ಸೆಂ ವಿರುದ್ಧ ಅಕ್ರಮ ಮರಳು ಗಣಿಗಾರಿಕೆ ಆರೋಪ ಮಾಡಿದ ಹರಿಹರ ಶಾಸಕ ಬಿ.ಪಿ.ಹರೀಶ್

Dinamaana Kannada News
Last updated: April 20, 2024 4:37 am
Dinamaana Kannada News
Share
M L A BP HARISHA
ಅಕ್ರಮವಾಗಿ ಮರಳು ಸಂಗ್ರಹಿಸಿರುವ ಜಾಗವನ್ನು ಮಾಧ್ಯಮದವರಿಗೆ ತೋರಿಸಿದ ಹರಿಹರ ಶಾಸಕ ಬಿ.ಪಿ.ಹರೀಶ್
SHARE
ದಾವಣಗೆರೆ:  ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಎಸ್..ಎಸ್.ಮಲ್ಲಿಕಾರ್ಜುನ್ ಅಕ್ರಮ ಮರಳು ದಂಧೆ ನಡೆಸುತ್ತಾ ನದಿ ಪಾತ್ರದ ಮರಳನ್ನು ಎತ್ತಿ ನದಿಯ ಒಡಲನ್ನು ಬರಿದು ಮಾಡುವ ಮೂಲಕ ಮರಳು ದಂಧೆ ಮಾಡುತ್ತಿದ್ದಾರೆ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಗಂಭೀರ ಆರೋಪ ಮಾಡಿದ್ದಾರೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬಿದಕೆರೆ ಜಮೀನುವೊಂದರಲ್ಲಿ  ನೂರಾರು  ಲೋಡು ಮರಳು ಸಂಗ್ರಹಿಸಿರುವ ಸ್ಥಳಕ್ಕೆ ಮಾಧ್ಯಮವರನ್ನು ಕರೆದುಕೊಂಡು ಹೋಗಿ ತೋರಿಸಿದ ಬಳಿಕ ಮಾತನಾಡಿದ ಅವರು, ನದಿ ಪಾತ್ರದ  ಮರಳನ್ನು ಅಕ್ರಮವಾಗಿ ತೆಗೆದು ಇಲ್ಲಿ ಸಂಗ್ರಹಿಸಿ ಸಾವಿರಾರು ಲೋಡನ್ನು ಮರಳನ್ನು ಬೇರೆ ಕಡೆ ಸಾಗಿಸಿ ಮರಳು ದಂಧೆ ನಡೆಸುತ್ತಿದ್ದಾರೆ ಎಂದು  ಆರೋಪಿಸಿದರು.
ಸಚಿವರು  ಎ.ಬಿ.ವಿಜಯ್ ಕುಮಾರ್ ಎಂಬುವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡು ಅವರ ಮೂಲಕ ಮರಳು ದಂಧೆ ನಡೆಸುತ್ತಿದ್ದಾರೆ. ಅಲ್ಲದೆ ಇಲ್ಲಿರುವ ಗುಡ್ಡದಲ್ಲೂ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಇಲ್ಲಿರುವ ಸರ್ಕಾರಿ ಜಮೀನುಗಳನ್ನು ಕಬಳಿಸುತ್ತಿದ್ದಾರೆ. ಸಾವಿರಾರು ವರ್ಷಗಳಿಂದ ಇದ್ದ ಹಳ್ಳವನ್ನು ಮುಚ್ಚಿದ್ದಾರೆ. ಬೆಂಗಳೂರಿನಲ್ಲಿರುವ ರಾಜ ಕಾಲುವೆಗಳನ್ನು ಮುಚ್ಚಿ ಮಳೆ ಬಂದಾಗ ಹೇಗೆ ಅವಾಂತರ ಆಗುತ್ತಿದೆಯೋ ಅದೇ ರೀತಿ ಇಲ್ಲಿರುವ ಹಳ್ಳವನ್ನು ಮುಚ್ಚಿ ಮಳೆ ಬಂದಾಗ ರೈತರು ಬೆಳೆದ ಬೆಳೆಗಳು ಹಾಳುಗುವಂತಾಗಿ ರೈತರು ನಷ್ಟ ಹೊಂದುವಂತೆ ಮಾಡಿದ್ದಾರೆ ಎಂದು ದೂರಿದ್ದಾರೆ.
ಇಷ್ಟೆಲ್ಲ ಕಣ್ಣೆದುರಿಗೆ ನಡೆಯುತ್ತಿದ್ದರೂ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅಕ್ರಮ ಮರಳ ದಂಧೆ ತೆಡೆಯುವುದಾಗಲೀ, ಕಬಳಿಸುತ್ತಿರುವ  ಸರ್ಕಾರಿ ಜಮೀನು ಉಳಿಸುವುದಾಗಲೀ ಮಾಡುತ್ತಿಲ್ಲ. ಈ ಭಾಗದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರೇ  ಅಕ್ರಮ ಮರಳು ದಂಧೆ  ಮಾಡುತ್ತಿದ್ದಾರೆ ಮತ್ತು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಹಾಗೂ ಸರ್ಕಾರಿ ಜಮೀನು ಕಬಳಿಸುತ್ತಿದ್ದಾರೆ ಎಂದು ಕಳೆದ ಮೂರು ತಿಂಗಳಿನಿಂದ ರಾಜ್ಯದ ಸಂಬಂಧಪಟ್ಟ ಮೇಲಾಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳಿಗೆ ಹೇಳಿದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಒಬ್ಬ ಬಡವ ಮನೆ ಕಟ್ಟಿಕೊಳ್ಳಲು ಒಂದು ಟ್ರ್ಯಾಕ್ಟರ್ ಲೋಡು ಮರಳನ್ನು ಎತ್ತಿ ತೆಗೆದುಕೊಂಡು ಹೋದರೆ ಆತನ ವಿರುದ್ಧ ಎಫ್ ಐಆರ್ ದಾಖಲು ಮಾಡಿ, ಪೊಲೀಸ್ ಮತ್ತು ಕೋಟ್೯ಗೆ ಅಲೆದಾಡಿಸುತ್ತಾರೆ. ಅದೇ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರೇ ಅಕ್ರಮವಾಗಿ ಸಾವಿರಾರು ಲೋಡು ಮರಳು ಸಂಗ್ರಹಿಸಿ ಮಾರಾಟ ಮಾಡುತ್ರಿದ್ದರೆ, ಸಚಿವರ ವಿರುದ್ಧ ಯಾವ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ. ಒಂದು ಕಾಲದಲ್ಲಿ ಬಳ್ಳಾರಿ ಗಣಿಗಾರಿಕೆ ಸದ್ದು ಹೇಗೆ ಮೆರೆಯುತ್ತಿತ್ತೋ, ಅದೇ ರೀತಿ ಹರಪನಹಳ್ಳಿ ತಾಲೂಕಿನಲ್ಲಿ ಗಣಿಗಾರಿಕೆ ಸದ್ದು ಮೆರೆಯುತ್ತಿದ್ದೆ. ನಾವು ಇನ್ಮುಂದೆ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಸಚಿವರ ಒಡೆತನದ ಬೇರೆಯವರ ಹೆಸರಿನಲ್ಲಿರುವ ಜಮೀನಿನಲ್ಲಿ ಅಕ್ರಮ ಮರಳು ಸಂಗ್ರಹಿಸಿ ಮರಳು ದಂಧೆ ನಡೆಸುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಇಲ್ಲಿ ಸಂಗ್ರಹಿಸಿರುವ ಅಕ್ರಮ ಮರಳನ್ನು ವಶಪಡಿಸಿಕೊಂಡು ಅವರ ವಿರುದ್ದ ಎಫ್ ಐಆರ್ ದಾಖಲಿಸಿಕೊಂಡು ಐದು ಪಟ್ಟು ದಂಡ ವಸೂಲಿ ಮಾಡಬೇಕು. ಸಚಿವರೇ ಇನ್ಮುಂದೆ ನಿಮ್ಮ ಆಟ ನಡೆಯುವುದಿಲ್ಲ. ಕೂಡಲೇ ನೀವು ನೈತಿಕವಾಗಿ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಈ ಭಾಗದ ರೈತರೊಂದಿಗೆ ದೊಡ್ಡ ಮಟ್ಟದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
TAGGED:dinamaana.comKannada NewsMLA B.P. Harish showed the area where sand was illegally collected .ಅಕ್ರಮ ಮರಳು ಸಂಗ್ರಹಿಸಿರುವ ಜಾಗ ತೋರಿಸಿದ ಹರಿಹರ ಶಾಸಕ ಬಿ.ಪಿ.ಹರೀಶ್.ಕನ್ನಡ ಸುದ್ದಿಕಾಂದಿನಮಾನ
Share This Article
Twitter Email Copy Link Print
Previous Article vachanananda-swamiji-harihar ಪಂಚಮಸಾಲಿ ಸಮುದಾಯದ ಮುಖಂಡರಿಗೆ ಅನ್ಯಾಯ
Next Article BJP DVG ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE JOB NEWS : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.06 : ಹರಿಹರ (HARIHARA ) ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ…

By Dinamaana Kannada News

ಸೆನೆಟ್ ಚುನಾವಣೆಯಲ್ಲಿ ಜಯ : ಪ್ರೊ. ಡಾ.ಶ್ರೀನಿವಾಸ್ ಎಲ್.ಡಿ ಅವರಿಗೆ ಅಭಿನಂದಿಸಿದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ದಾವಣಗೆರೆ (DAVANAGERE) : ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆಯುವ ಮೂಲಕ ಜಯದಾಖಲಿಸಿದ ದಾವಣಗೆರೆ…

By Dinamaana Kannada News

ksrtc bus | ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ

ದಾವಣಗೆರೆ (Davanagere) :  ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಮೇ.20 ರಂದು  ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?