Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜನರ ಹಸಿವಿನ ಕೂಗು ಪ್ರಧಾನಿ ಮೋದಿಗೆ ಕೇಳಿಸದೆ?  ಕೆ ಉಮಾ 
ತಾಜಾ ಸುದ್ದಿ

ಜನರ ಹಸಿವಿನ ಕೂಗು ಪ್ರಧಾನಿ ಮೋದಿಗೆ ಕೇಳಿಸದೆ?  ಕೆ ಉಮಾ 

Dinamaana Kannada News
Last updated: April 30, 2024 5:57 am
Dinamaana Kannada News
Share
SUCI davanagere
ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ಉಮಾ ಮಾತನಾಡಿದರು.
SHARE

ದಾವಣಗೆರೆ :  ಮೋದಿ ಸರ್ಕಾರದ ಬಂಡವಾಳ ಶಾಹಿ ಪರ ನೀತಿಗಳಿಂದಾಗಿ ಜನರ ಬದುಕು ಬೀದಿಗೆ ಬಂದಿದೆ. ದೇಶದಲ್ಲಿ ಅತಿ ದಿನ 7,000ಕ್ಕೂ ಹೆಚ್ಚು ಜನ ಸಾಯುತ್ತಿದ್ದಾರೆ ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ಉಮಾ  ಹೇಳಿದರು.

ನಗರದ ಎಸಿ ಕಚೇರಿ ಮುಂಭಾಗದಲ್ಲಿ ನಡೆದ ಪಕ್ಷದ ಅಭ್ಯರ್ಥಿ ಅಣಬೇರು ತಿಪ್ಪೇಸ್ವಾಮಿಯವರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಹಾವೇರಿಯ ಯುವಕನೊಬ್ಬ ತಾಯಿಯ ಹಸಿವು ನೀಗಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೆಹಲಿಯಲ್ಲಿ ಮಕ್ಕಳು ಹಸಿವೆಯಿಂದ ಸಾಯುತ್ತಿದ್ದರೂ, ಮತಿಭ್ರಮಣೆಗೊಂಡ ತಾಯಿಯೊಬ್ಬಳು ‘ನನಗೆ ಊಟ ಕೊಡಿ’ ಎಂದು ಅಂಗಲಾಚುತ್ತಿದ್ದಳು. ಜನರ ಈ ಹಸಿವಿನ ಕೂಗು ಪ್ರಧಾನಿ ಮೋದಿಯವರಿಗೆ ಕೇಳಿಸದೆ? ಎಂದು   ಪ್ರಶ್ನೆ ಮಾಡಿದರು.

18ನೇ ಲೋಕಸಭಾ ಚುನಾವಣೆಯು ಘೋಷಣೆಯಾಗಿರುವ ಇಂದಿನ ಸಂದರ್ಭದಲ್ಲಿ ದೇಶವು ಕಂಡು ಕೇಳರಿಯದ ಘೋರ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ಒಂದು ಕಡೆ, ಆಡಳಿತಾರೂಢ ಎನ್ ಡಿ ಎ, ಇನ್ನೊಂದೆಡೆ, ಇಂಡಿಯಾ ಮೈತ್ರಿಗಳು ಅಬ್ಬರದ ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಆದರೆ ಇವರು ಯಾರು ಕೂಡ ದೇಶದ ಜನರ ಬದುಕಿನ ಸಮಸ್ಯೆಗಳ ಕುರಿತು ಮಾತನಾಡುತ್ತಿಲ್ಲ. ಅವರು ಪದವಿಗಳಿಗಾಗಿ ಟಿಕೆಟ್ ಗಳಿಗಾಗಿ ಚುನಾವಣೆ ನಡೆಸುತ್ತಿದ್ದಾರೆ.

ಆಳ್ವಿಕ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ರಚನೆಯಾಗಿದೆ. ಎಡವಾದಿ ಪಕ್ಷಗಳಾದ ಸಿಪಿಐ ಸಿಪಿಐಎಂ ಕೂಡ ಪ್ಯಾಸಿವ್ಯಾದಿ ಬಿಜೆಪಿಯನ್ನು ಸೋಲಿಸಬೇಕು ಎಂಬ ಕಾರಣ ನೀಡಿ ಈ ಒಕ್ಕೂಟ ಸೇರಿದ್ದಾರೆ. ಆದರೆ, ಬಹುಕಾಲ ದೇಶವನ್ನಾಳಿದ ಕಾಂಗ್ರೆಸ್ ತುರ್ತು ಪರಿಸ್ಥಿತಿ ಯನ್ನು ಹೇರಿ ಜನರ ಪ್ರಜಾತಾಂತ್ರಿಕ ಹಕ್ಕುಗಳನ್ನು ಕಸಿದಿದೆ. ಅಂದಿನ ಕಾಂಗ್ರೆಸ್ಸಿನ ನೀತಿಗಳನ್ನೇ ಇಂದು ಬಿಜೆಪಿಯು ಮುಂದುವರೆಸಿದೆಯಷ್ಟೆ!. ಇವರೆಲ್ಲರೂ ಕೂಡ ಒಂದೇ. ಈಗ ಚುನಾವಣೆಗಳಲ್ಲಿ ಹಣ ಸುರಿದು ಇವರು ಮತಗಳನ್ನು ಖರೀದಿ ಮಾಡುತ್ತಾರೆ ಎಂದು ಹೇಳಿದರು.

ಮೋದಿಯವರು ಮಹಿಳೆಯ ಮಾನ ರಕ್ಷಣೆಯ ಕುರಿತು ಭೇಟಿ ಬಚಾವೋ ಎಂದು ಭಾಷಣ ಮಾಡುತ್ತಾರೆ. ಆದರೆ, ಬೆಳಗಾವಿಯಲ್ಲಿ ಹೆಣ್ಣು ಮಗಳನ್ನು ಬೆತ್ತಲೆ ಮಾಡಿದಾಗ, ಮಹಿಳಾ ಕುಸ್ತಿಪಟುಗಳ ಮೇಲೆ ತಮ್ಮ ಪಕ್ಷದ ಕುಸ್ತಿ ಫೆಡರೇಷನ್ ಅಧ್ಯಕ್ಷ ಲೈಂಗಿಕ ಕಿರುಕುಳ ನೀಡಿದ. ಪ್ರತಿಭಟನೆಗೂ ನ್ಯಾಯ ಸಿಗದೇ ಆ ಹೆಣ್ಣು ಮಕ್ಕಳು ಸ್ಪರ್ಧೆಯಿಂದ ಹಿಂದೆ ಸರಿದಾಗ, ಬಿಲ್ಕಿಸ್ ಬಾನು ಪ್ರಕರಣದ 11 ಜನ ಆರೋಪಿಗಳನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ಅವರ ಪಕ್ಷವು ಸಂಭ್ರಮಿಸಿದಾಗ, ಎಲ್ಲಿದೆ ಭೇಟಿ ಬಚಾವೋ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ರೈತರು , ಕಾರ್ಮಿಕರು, ಬಡವರ ಪರವಾಗಿ ಹೋರಾಟಗಳನ್ನು ಬೆಳೆಸುತ್ತಿದೆ. ಜನರು ನಮ್ಮ ಅಭ್ಯರ್ಥಿ ತಿಪ್ಪೇಸ್ವಾಮಿಯವರನ್ನು ಗೆಲ್ಲಿಸಿದರೆ ದಾವಣಗೆರೆಯ ರೈತ ಕಾರ್ಮಿಕರ ದುಡಿಯುವ ಜನರ ಹೋರಾಟಗಳನ್ನು ಅವರು ಲೋಕಸಭೆಯಲ್ಲಿ ಮೊಳಗಿಸುತ್ತಾರೆ. ಆದ್ದರಿಂದ ಜನರು ಹೆಚ್ಚಿನ ಪ್ರಮಾಣದಲ್ಲಿ ತಿಪ್ಪೇಸ್ವಾಮಿಯವರ ಪರವಾಗಿ ಪ್ರಚಾರ ಮಾಡಿ ಅವರನ್ನು ಗೆಲ್ಲಿಸಬೇಕೆಂದು ಅವರು ಮತಯಾಚಿಸಿದರು.

ಪಕ್ಷದ ಅಭ್ಯರ್ಥಿ ಅಣಬೇರು ತಿಪ್ಪೇಸ್ವಾಮಿಯ ಕೂಡ ಮಾತನಾಡಿ, ಜನರ ಬೆಂಬಲವನ್ನು ಯಾಚಿಸಿದರು.

ಸಭೆಯ ಅಧ್ಯಕ್ಷತೆ ಜಿಲ್ಲಾ ಕಾರ್ಯದರ್ಶಿ  ಮಂಜುನಾಥ್ ಕೈದಾಳೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯರಾದ ಅಪರ್ಣಾ ಬಿ ಆರ್, ಜಿಲ್ಲಾ ಸಮಿತಿ ಸದಸ್ಯರಾದ ಮದು ತೊಗಲೇರೆ, ಮಂಜುನಾಥ್ ಕುಕ್ವಾಡ, ಟಿವಿಎಸ್ ರಾಜು ಸೇರಿದಂತೆ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.

TAGGED:dinamaana.comKannada NewsSUCI.ಎಸ್‌ಯುಸಿಐಕನ್ನಡ ನ್ಯೂಸ್‌ದಿನಮಾನ.ಕಾಂ
Share This Article
Twitter Email Copy Link Print
Previous Article Sanduru stories 9 ಸೊಂಡೂರಿನ ಕಗ್ಗತ್ತಲೆಯ ಕಥನಗಳು -9 ನಿಜ…, ಮಕ್ಕಳ ಮುಂದೆ ಅಪ್ಪ ಅಳಬಾರದು
Next Article Labor Day ‘ ಮೇ ದಿನ ಇದು ‘ಹುತಾತ್ಮರ ಮಹಾನ್‌ಗಾಥೆ’

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಅಪಘಾತ : ಬೈಕ್ ಹಿಂಬದಿ ಸವಾರ ಮೃತ

ಹೊನ್ನಾಳಿ (Davanagere): ತಾಲೂಕಿನ ಕುಳಗಟ್ಟೆ ಕ್ರಾಸ್ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ಹಿಂಬದಿ ಸವಾರ…

By Dinamaana Kannada News

ದಿನಮಾನ ಹೆಮ್ಮೆ : ಬಳ್ಳಾರಿ ಜಾಲಿ ಹೂಗಳ ಕವಿ- ಪೀರ್ ಬಾಷಾ

Kannada News | Dinamaanada Hemme  | Dinamaana.com | 06-07-2024 ಆಕ್ಕಾ...ಸೀತಾ ನಿನ್ನಂತೆ ನಾನೂ ಶಂಕಿತ  (Peer Basha)…

By Dinamaana Kannada News

ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ; ಮಾ.18  : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ., ಬಿ.ಎಎಸ್ಸಿ,…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?