Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಶ್ರಮ ಸಂಸ್ಕೃತಿಯೇ ಶರಣರ ಆದರ್ಶ: ಬಸವಪ್ರಭು ಸ್ವಾಮೀಜಿ
Blog

ಶ್ರಮ ಸಂಸ್ಕೃತಿಯೇ ಶರಣರ ಆದರ್ಶ: ಬಸವಪ್ರಭು ಸ್ವಾಮೀಜಿ

Dinamaana Kannada News
Last updated: May 23, 2024 4:03 am
Dinamaana Kannada News
Share
Davangere District
ಬಸವ ಜಯಂತಿ ಸಮಾರಂಭ ದಾವಣಗೆರೆ
SHARE

ದಾವಣಗೆರೆ : ಶರಣರ ದೃಷ್ಟಿಯಲ್ಲಿ ಭಕ್ತಿ ಜ್ಞಾನ ವೈರಾಗ್ಯಗಳು ಎಷ್ಟು ಮುಖ್ಯವೋ ಅಷ್ಟೇ ದಿನನಿತ್ಯದ ನಿರ್ವಹಣೆಗಾಗಿ ಕಾಯಕವು ಅಷ್ಟೇ ಮುಖ್ಯ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿಯವರು ಹೇಳಿದರು

ನಗರದ ಸಿದ್ದವೀರಪ್ಪ ಬಡಾವಣೆ ಸ್ವಾಮಿ ವಿವೇಕಾನಂದ ಬಡಾವಣೆ ಆಂಜನೇಯ ಬಡಾವಣೆ ಎಂ.ಸಿ.ಸಿ ಬಿ ಬ್ಲಾಕ್ ನಾಗರಿಕರು ಹಮ್ಮಿಕೊಂಡ ಬಸವ ಜಯಂತಿ ಹಾಗೂ ಸಿದ್ದಗಂಗಾ ಸ್ವಾಮಿಗಳ , ಸಿದ್ದೇಶ್ವರ ಸ್ವಾಮಿಗಳ ಸ್ಮರಣೋತ್ಸವ ಸಮಾರಂಭದ  ನೇತೃತ್ವವನ್ನು ವಹಿಸಿಕೊಂಡು ಆಶೀರ್ವಚನ ನೀಡಿದರು.

ಬಸವಣ್ಣನವರು ಜಗತ್ತಿಗೆ ಆದರ್ಶವಾದ ಕಾಯಕತತ್ವವನ್ನು ನೀಡಿದ್ದಾರೆ ಪ್ರತಿಯೊಬ್ಬ ವ್ಯಕ್ತಿಯೂ ಕಾಯಕವನ್ನು ಮಾಡಬೇಕು ಶರಣರ ಸಮಾಜದಲ್ಲಿ ಸೋಮಾರಿಗಳಿಗೆ ಸ್ಥಾನವೇ ಇರಲಿಲ್ಲ ಸತ್ಯಶುದ್ದವಾದ ದುಡಿಮೆಯ ಶ್ರಮ ಸಂಸ್ಕೃತಿಯೇ ಶರಣರ ಆದರ್ಶವಾಗಿತ್ತು . ದುಡಿಯುವವರೇ ಬೇರೆ , ಅವರ ದುಡಿತದ ಫಲವನ್ನು ಅನುಭಿಸಯವವರೇ ಬೇರೆಯಾಗಿದ್ದ ಕಾಲದಲ್ಲಿ ತನು ಮನ ಬಳಲಿಸಿ ಬೆವರು ಸುರಿಸಿ ದುಡಿಯುವವರೇ ನಿಜವಾದ ಶರಣರು ವ್ಯಾಖ್ಯಾನಿಸಿ ದುಡಿದು ಉಣ್ಣುವುದನ್ನು ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಕಾಯಕ ಕಡ್ಡಾಯ ಮಾಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ಪ್ರತಿಯೊಬ್ಬರು ದುಡಿಯಲೇಬೇಕೆಂಬುದು ಶರಣರ ನೇಮ ವ್ರತ . ಕಾಯಕಗಳಲ್ಲಿ ಮೇಲು ಕೀಳು ಎಂಬ ಭೇಧಬಾವವಿಲ್ಲ ಎಂದರು.

ಕಾಯಕದಿಂದ ಬಂದ ಪ್ರತಿಫಲವನ್ನು ದಾಸೋಹ ಮಾಡಬೇಕು. ದಾಸೋಹ ನಡೆಯುವ ಸಮಯದಲ್ಲಿ ಎಲ್ಲರೂ ಸಮಾನವಾಗಿ ಕುಳಿತು ಸಹಭೋಜನ ಮಾಡಿದ್ದರಿಂದ ಸಮಾನತೆಯನ್ನು ಸಾಧಿಸಲು ಸಾಧ್ಯವಾಯಿತು ಬಸವಣ್ಣ ಈ ಆಧುನಿಕ ಯುಗಕ್ಕೆ ಬೇಕಾದ ಶಸ್ತ್ರಚಿಕಿತ್ಸಕ ವೈದ್ಯ. ಇಂದಿನ ಸಮಾಜದಲ್ಲಿರುವ ಭಯೋತ್ಪಾದನೆ , ಜಾತೀಯತೆ ,ಅಸ್ಪೃಶ್ಯತೆ , ಭ್ರಷ್ಟಾಚಾರ , ಹಿಂಸಾಚಾರ , ದಬ್ಬಾಳಿಕೆ ಎಂಬ ಸಮಾಜದ ರೋಗವನ್ನು ಹೊಡೆದೊಡಿಸಲು ಬಸವತತ್ವ ಎಂಬ ಔಷಧಿಯನ್ನು ನೀಡಬೇಕು  ಎಂದು ಹೇಳಿದರು.

ವಿಶ್ರಾಂತ ಜಂಟಿ ನಿರ್ದೇಶಕ ಲಿಂಗರಾಜ್ ಎಚ್.ಕೆ  ಮಾತನಾಡಿ, ಸಮ ಸಮಾಜವನ್ನು ಬಸವಣ್ಣನವರು ೧೨ ನೇ ಶತಮಾನದಲ್ಲಿ ಕಟ್ಟಿದರು ವ್ಯಕ್ತಿ ಮತ್ತು ಸಮಾಜದ ಉದ್ಧಾರಕ್ಕಾಗಿ ಕಾಯಕ ಮತ್ತು ದಾಸೋಹ ತತ್ವಗಳನ್ನು ನೀಡಿದರು ಎಂದರು .

ಯುಪಿಎಸ್ ಸಿ ಪರೀಕ್ಷೆಯಲ್ಲಿ ಪ್ರಥಮ ರಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಪರವಾಗಿ ಅವರ ತಾಯಿ ಶರಣಮ್ಮನವರಿಗೆ ಸನ್ಮಾನಿಸಲಾಯಿತು. ಯೋಗಗರು ಜ್ಞಾನಚಂದ್ರರವರಿಗೆ ಸನ್ಮಾನಿಸಲಾಯಿತು.

ಶರಣ ಸಾಹಿತ್ಯ ಪರಿಷತ್ತಿನ ಕೆ.ಬಿ ಪರಮೇಶ್ವರಪ್ಪ ,ಭಕ್ತಮಂಡಳಿಯವರಾದ ವಿಶ್ವನಾಥ , ಕಾರ್ಯದರ್ಶಿ ರವಿಶಂಕರ್ , ಕರಿಬಸಪ್ಪ , ಡಾ. ಲಿಂಗರಾಜ್ , ಕೆ. ಶಶಿಧರ್ , ಶಶಿಧರ್ ಬಸಾಪುರ ,  ಬಸವ ಕಲಾ ಲೋಕದ ಕಲಾವಿದರು ವಚನ ಸಂಗೀತ ಕಾರ್ಯಕ್ರಮನ್ನು ನೀಡಿದರು.

TAGGED:basava Jayanti Davangere District.dinamaana.comLatest Kannada Newsಕನ್ನಡ ಸುದ್ದಿದಿನಮಾನ.ಕಾಂಬಸವ ಜಯಂತಿ ದಾವಣಗೆರೆ.
Share This Article
Twitter Email Copy Link Print
Previous Article davanagere ಸೊಂಡೂರಿನ ಕಗ್ಗತ್ತಲೆಯ ಕಥನಗಳು-32 ವಾಯುಪುತ್ರನ ಊರಿನಲ್ಲಿ ವಾಯುಮಾಲಿನ್ಯ
Next Article Harihara ಪ್ರಸ್ತುತ ದಿನಗಳಲ್ಲಿ ಸಾಂಸ್ಖೃತಿಕ ಉತ್ಸವಗಳ ಅಗತ್ಯವಿದೆ ; ಡಾ.ಕರಿಶೆಟ್ಟಿ ರುದ್ರಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Crime news | ಆಟೋದಲ್ಲಿ ಲ್ಯಾಪ್‍ಟ್ಯಾಪ್ ಬಿಟ್ಟು ಹೋದ ಮಹಿಳೆ : 24 ಗಂಟೆಯಲ್ಲಿ ಪತ್ತೆ ಹಚ್ಚಿದ ಪೊಲೀಸ್

ದಾವಣಗೆರೆ (Davanagere): ಆಟೋದಲ್ಲಿ ಬಿಟ್ಟು ಹೋಗಿದ್ದ 70 ಸಾವಿರ ಮೌಲ್ಯದ ಲ್ಯಾಪ್‍ಟಾಪ್ ಅನ್ನು ವಾರಸ್ಸುದಾರರಿಗೆ ಅಜಾದನಗರ ಪೊಲೀಸರು ಹಸ್ತಾಂತರ ಮಾಡಿದ್ದಾರೆ.…

By Dinamaana Kannada News

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟ್‍ಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ   : ದಾವಣಗೆರೆ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟರುಗಳಾಗಿ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 49 :  ಅದಿರು ಅಗೆದವರ ಬೆವರು

Kannada News | Sanduru Stories | Dinamaana.com | 09-06-2024 ಹಸಿವು ಮನುಷ್ಯನನ್ನಷ್ಟೇ ಕೊಲ್ಲುವಂತಿದ್ದರೆ (Sanduru Stories) ಹಸಿವು…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?