Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಕಾಯಿಲೆ ಮುಕ್ತ ಬದುಕಿಗೆ ನಿರಂತರ ವ್ಯಾಯಾಮ ಅವಶ್ಯ : ಡಾ.ಬಿ.ಎಸ್.ಶೈಲೇಶ್ ಕುಮಾರ್
Blog

ಕಾಯಿಲೆ ಮುಕ್ತ ಬದುಕಿಗೆ ನಿರಂತರ ವ್ಯಾಯಾಮ ಅವಶ್ಯ : ಡಾ.ಬಿ.ಎಸ್.ಶೈಲೇಶ್ ಕುಮಾರ್

Dinamaana Kannada News
Last updated: June 3, 2024 12:24 pm
Dinamaana Kannada News
Share
harihara
ಹರಿಹರದ ಡಾ.ಶೈಲೇಶ್ ಕುಮಾರ್ ಕುಮಾರ್ ಫೌಂಡೇಶನ್ ಕಚೇರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಸಲಹಾ ಶಿಬಿರ ನಡೆಸಲಾಯಿತು.
SHARE

ಹರಿಹರ: ಅಗತ್ಯ ದೈಹಿಕ ಚಟುವಟಿಕೆಗಳನ್ನು ನಡೆಸುತ್ತಾ, ಆಹಾರ, ವಿಹಾರದ ಮೇಲೆ ನಿಯಂತ್ರಣ ಇಟ್ಟುಕೊಳ್ಳುವ ವ್ಯಕ್ತಿ ಕಾಯಿಲೆ ಮುಕ್ತ ಬದುಕು ನಡೆಸಲು ಸಾಧ್ಯ ಎಂದು ಬೆಂಗಳೂರಿನ ನರರೋಗ ಶಸ್ತ್ರ ಚಿಕಿತ್ಸಕ ಡಾ.ಬಿ.ಎಸ್.ಶೈಲೇಶ್ ಕುಮಾರ್ ಹೇಳಿದರು.

ನಗರದ ತಾಲ್ಲೂಕು ಕಚೇರಿ ಪಕ್ಕದ ಡಾ.ಶೈಲೇಶ್ ಕುಮಾರ್ ಕುಮಾರ್ ಫೌಂಡೇಶನ್ ಕಚೇರಿಯಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಹಾಗೂ ಸಲಹಾ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಧುನಿಕ ವಾತಾವರಣದಲ್ಲಿ ಒಂದೆ ಜಾಗದಲ್ಲಿ ಕುಳಿತು ಕೆಲಸ ಮಾಡುವುದು ಅನಿವಾರ್ಯವಾಗಿದೆ. ಅದರಲ್ಲೂ ಸಾಫ್ಟ್‍ವೇರ್ ಕ್ಷೇತ್ರ, ಕಂಪ್ಯೂಟರ್ ಆಪರೇಟರ್, ಗುಮಾಸ್ತರು ದಿನಕ್ಕೆ ಹಲವು ಗಂಟೆ ಒಂದೆಡೆ ಕುಳಿತು ವೃತ್ತ ನಿರ್ವಹಣೆ ಮಾಡಬೇಕಿದೆ.

ದೈಹಿಕ ಚಟುವಟಿಕೆಗಳಿಲ್ಲದೆ ಹಲವರಿಗೆ ಬೆವರೆ ಬರುವುದಿಲ್ಲ. ದೇಹದ ಹಲವು ಅಂಗಾಂಗಗಳ ಚಲನೆಯೆ ಆಗುವುದಿಲ್ಲ. ಹೀಗೆ ಒಂದೆಡೆ ಕುಳಿತು ಅಥವಾ ನಿಂತು ಕೆಲಸ ಮಾಡುವವರು ನಿತ್ಯ ನಿಯಮಿತವಾಗಿ ಬಿರುಸಿನ ನಡಿಗೆ, ವ್ಯಾಯಾಮ, ಯೋಗದಂತಹ ದೈಹಿಕ ಚಟುವಟಿಕೆಗಳನ್ನು ರೂಢಿ ಮಾಡಿಕೊಳ್ಳಬೇಕು ಎಂದರು.
ಸಹವಾಸ ದೋಷ ಅಥವಾ ಒತ್ತಡಗಳ ನಿವಾರಣೆಗಾಗಿ ತಂಬಾಕು, ಸಿಗರೇಟು, ಗಾಂಜಾ ಸೇವನೆ, ಮದ್ಯಪಾನದಂತಹ ದುಶ್ಚಟಗಳಿಗೆ ದಾಸರಾಗುತ್ತಾರೆ. ಬಿಡುವಿನ ವೇಳೆಯಲ್ಲಿ ಸಂಗೀತ, ನೃತ್ಯ, ವ್ಯಾಯಾಮ, ಕುಟುಂಬದ ಸದಸ್ಯರೊಂದಿಗೆ ಆಟೋಟದಲ್ಲಿ ವ್ಯಸ್ತರಾಗುವ ಮೂಲಕ ಇಂತಹ ದುಶ್ಚಟಗಳಿಂದ ದೂರವಾಗಬಹುದಾಗಿದೆ ಎಂದರು.

ಹಸಿರು ತರಕಾರಿ, ಸೊಪ್ಪು, ಕಾಳುಕಡಿ, ಆಯಾ ಸೀಸನ್‍ನಲ್ಲಿ ಸಿಗುವ ಹಣ್ಣು, ಹಂಪಲುಗಳು ನಮ್ಮ ಆಹಾರದ ಮೆನುನಲ್ಲಿ ಇರುವಂತೆ ನೋಡಿಕೊಳ್ಳಬೇಕು. ನಮ್ಮ ಹಿರಿಯರು ಸೇವನೆ ಮಾಡುತ್ತಿದ್ದ ಆಹಾರ, ವಿಹಾರ ಶೈಲಿಯನ್ನು ಅನುಸರಿಸುವುದು ಉತ್ತಮ ಎಂದರು.

ಶಿಬಿರದಲ್ಲಿ ದಾವಣಗೆರೆ, ಹಾವೇರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಯ ವಿವಿಧ ಸ್ಥಳಗಳಿಂದ 200ಕ್ಕೂ ಹೆಚ್ಚು ರೋಗಿಗಳ ಆರೋಗ್ಯ ತಪಾಸಣೆ ಮಾಡಿ, ಸಲಹೆಗಳನ್ನು ನೀಡಲಾಯಿತು, ನರರೋಗ, ಪಾಶ್ರ್ವವಾಯು, ಸಕ್ಕರೆ, ಹೃದಯ, ಬೆನ್ನು, ಕುತ್ತಿಗೆ ನೋವು, ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆ ಪೀಡಿತರು ಆಗಮಿಸಿದ್ದರು.

ಡಾ.ಶೈಲೇಶ್ ಕುಮಾರ್ ಕುಮಾರ್ ಫೌಂಡೇಶನ್‍ನ ಗೋಪಿ, ಹನಗವಾಡಿ ಮಂಜು, ತೌಸಿಫ್, ಜಿಗಳಿ ಪರಮೇಶ್ವರ್, ಜಿಗಳಿ ಬಿದರಿ, ವೀರೇಶ್, ಸುನೀಲ್ ಕುಮಾರ್ ಇದ್ದರು.

TAGGED:Davangere District.Dinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ತನ್ಮಯ್. ಕೆ. ಕಾಶಿಗೆ “ಹ್ಯಾಂಡ್ಸಮ್ ಹಂಕ್”  ಪ್ರಶಸ್ತಿ
Next Article davangere ಮಳೆಗೆ ಸೇತುವೆಗಳು ಕೊಚ್ಚಿ ಹೋದರೂ ಭೇಟಿ ನೀಡದ ಅಧಿಕಾರಿಗಳು: ಶಾಸಕ ಕೆ.ಎಸ್.ಬಸವಂತಪ್ಪ ಅಸಮಾಧಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

*2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ*: *ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್, ಮಾರ್ಚ್ 07 : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ…

By Dinamaana Kannada News

ದಾವಣಗೆರೆ | ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಾಲಿಕೆ ನೌಕರರಿಂದ ಪ್ರತಿಭಟನೆ

ದಾವಣಗೆರೆ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘದ  ನೇತೃತ್ವದಲ್ಲಿ ಪಾಲಿಕೆ ಅವರಣದಲ್ಲಿ  ನೌಕರರು…

By Dinamaana Kannada News

ದಾವಣಗೆರೆ | ವೃದ್ದನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ನ್ಯಾ. ಡಿ.ಕೆ.ವೇಲಾ

ದಾವಣಗೆರೆ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಶನಿವಾರ ಮಧ್ಯಾಹ್ನ ಹರಿಹರ ನ್ಯಾಯಾಲಯಕ್ಕೆ ಆಗಮಿಸಿದ ಸಮಯದಲ್ಲಿ ದೊಡ್ಡಬತಿ ಸಮೀಪದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?