Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಳಪೆ ಗುಣಮಟ್ಟದ ಆಹಾರ ಪದಾರ್ಥ ಕಂಡು ಶಾಸಕ ಕೆ.ಎಸ್.ಬಸವಂತಪ್ಪ ಕೆಂಡಾಮಂಡಲ
ತಾಜಾ ಸುದ್ದಿ

ಕಳಪೆ ಗುಣಮಟ್ಟದ ಆಹಾರ ಪದಾರ್ಥ ಕಂಡು ಶಾಸಕ ಕೆ.ಎಸ್.ಬಸವಂತಪ್ಪ ಕೆಂಡಾಮಂಡಲ

Dinamaana Kannada News
Last updated: June 6, 2024 4:43 pm
Dinamaana Kannada News
Share
davanagere
ದಾವಣಗೆರೆ ತಾಲೂಕಿನ ಕೊಗ್ಗನೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
SHARE

ದಾವಣಗೆರೆ:  ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳಿಂದ ಅಡುಗೆ ಮಾಡಿ ಮಕ್ಕಳಿಗೆ ಬಡಿಸಿದರೆ ಮಕ್ಕಳ ಆರೋಗ್ಯದ ಸ್ಥಿತಿ ಹದಗೆಡುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಅಂಗನವಾಡಿ ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡರು.

ತಾಲೂಕಿನ ಕೊಗ್ಗನೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಬೂಸ್ಟ್ ಹಿಡಿದ ಬೆಲ್ಲ, ಕಳಪೆ ಸಾಂಬಾರದ ಪುಡಿ, ರವೆ ಸೇರಿದಂತೆ ವಿತರಣೆಯಾದ ಎಲ್ಲಾ ರೀತಿಯ ಆಹಾರ ಪದಾರ್ಥಗಳು ಕಳಪೆಯಾಗಿರುವುದನ್ನು ಕಂಡು ಕೆಂಡಾಮಂಡಲರಾದರು.

ಅಂಗನವಾಡಿ ಕೇಂದ್ರದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಗುಣಮಟ್ಟದ ಪೌಷ್ಟಿಕ ಆಹಾರ ಪೂರೈಸಲು ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ ಇಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಿ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಆಹಾರ ತಯಾರಿಸಲಾಗುತ್ತಿದೆ. ಏನಾದರೂ ಸಂಭವಿಸಿದರೆ ಯಾರು ಹೊಣೆ ಎಂದು ಅಂಗನವಾಡಿ ಕೇಂದ್ರದ ಸಿಬ್ಬಂದಿ, ಕಾರ್ಯಕರ್ತೆಯನ್ನು ಪ್ರಶ್ನಿಸಿದರು.

ಮಧ್ಯಾಹ್ನವಾದರೂ ಮಕ್ಕಳ ಹಾಜರಿ ಪುಸ್ತಕದಲ್ಲಿ ಮಕ್ಕಳ ಹಾಜರಿ ಹಾಕಿಲ್ಲ. ಕೇವಲ ಇಬ್ಬರು ಮಕ್ಕಳು ಇದ್ದಾರೆ. ಸಂಜೆ ವೇಳೆಗೆ ಅವರಿಗೆ ಇಷ್ಟ ಬಂದಷ್ಟು ಮಕ್ಕಳ ಹಾಜರಿ ಹಾಕಲಾಗುತ್ತಿದೆ. ಸ್ಟಾಕ್ ಪುಸ್ತಕ ಅಂಗನವಾಡಿ ಕೇಂದ್ರದಲ್ಲಿ ಇಟ್ಟಿಲ್ಲ, ಮನೆಯಲ್ಲಿ ಇಟ್ಟಿರುವುದಾಗಿ ಹೇಳುತ್ತಾರೆ. ರಿಮಾಕ್೯ ಪುಸ್ತಕದಲ್ಲಿ ಇಲ್ಲಿನ ಸಮಸ್ಯೆಗಳ ದಾಖಲು ಮಾಡಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಕ್ರಮ ತೆಗೆದುಕೊಳ್ಳಬೇಕೆಂದರು.

ಮಾಯಕೊಂಡ ಕ್ಷೇತ್ರದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಇದೇ ರೀತಿಯ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಲಾಗುತ್ತಿದೆ ಎಂದು ಪೋಷಕರಿಂದ ದೂರುಗಳು ಬರುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಕಳಪೆ ಗುಣಮಟ್ಟದ ಆಹಾರ ಪೂರೈಸುವ ಏಜೆನ್ಸಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಕಳಪೆ ಗುಣಮಟ್ಟದ ಆಹಾರ ಸೇವಿಸಿ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದರೆ ಅಧಿಕಾರಿಗಳನ್ನು ಹೊಣೆಯನ್ನಾಗಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗಯವುದು ಎಂದು ಎಚ್ಚರಿಕೆ ನೀಡಿದರು.

ಅಲ್ಲದೇ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶದಿಂದ ಕೂಡಿದ ಆಹಾರ ಸಮರ್ಪಕವಾಗಿ ನೀಡುತ್ತಿಲ್ಲ. ಇದೇ ರೀತಿ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಸಲಾಗುತ್ತಿದೆ. ಅದಲ್ಲದೇ ಅಶುಚಿತ್ವ ಮತ್ತು ಮೂಲಸೌಕರ್ಯದ ಕೊರತೆ ಎದ್ದು ಕಾಣುತ್ತಿವೆ. ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳು ಇಂತಹ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟ ಪರೀಕ್ಷೆ ಮಾಡುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ವಾರದಲ್ಲಿ ಒಂದು ಬಾರಿ ಅಂಗನವಾಡಿ ಕೇಂದ್ರಗಳಿಗೆ ನೀಡಿ ಆಹಾರದ ಗುಣಮಟ್ಟ ಪರೀಕ್ಷೆ ಮಾಡಬೇಕೆಂದು ತಾಕೀತು ಮಾಡಿದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಸಂವಿಧಾನದಿಂದ ದೇಶದ ಎಲ್ಲ ಸಮಸ್ಯೆಗಳಿಗೆ ಪರಿಹಾರ
Next Article haihara ಗಿಡ ನೆಡೋಣ ಬನ್ನಿ ಕಾರ್ಯಕ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Silent dolls… | ಮೌನವಾದ ಗೊಂಬೆಗಳು …

Kannada News | Dinamaana.com | 11-10-2024 ದೊಡ್ಡವರೆಲ್ಲ ನೆನಪಿಸಿಕೊಳ್ಳಿ , ನಾವು ಚಿಕ್ಕವರಿದ್ದಾಗ ಎಲ್ಲರ ಬಳಿ ಆಟ ಆಡಲು…

By Dinamaana Kannada News

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ : ಸಂಭ್ರಮಾಚರಣೆ

ದಾವಣಗೆರೆ, ಏ.8 (Davanagere) : ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ನಗರದ ಸಕ್ರ್ಯೂಟ್ ಹೌಸ್ ಪಕ್ಕದಲ್ಲಿ ಭವನ ನಿರ್ಮಾಣಕ್ಕಾಗಿ ನಿವೇಶನ ನೀಡಿದ…

By Dinamaana Kannada News

ಮ್ಯಾಂಗೋ ಹೋಟೇಲ್‌ ನಲ್ಲಿ ಜೂಜಾಟ : ಸಿಇಎನ್‌ ಪೊಲೀಸ್ ರ ದಾಳಿ, ರೂ 24 ಲಕ್ಷ ವಶಕ್ಕೆ

ದಾವಣಗೆರೆ (Davanagere): ನಗರದ ಡೆಂಟಲ್ ಕಾಲೇಜ್ ರಸ್ತೆಯಲ್ಲಿರುವ  ಮ್ಯಾಂಗೋ ಹೋಟೇಲ್‌ ನಲ್ಲಿ ಅಂದರ್ ಬಾಹರ್  ಇಸ್ಫೀಟ್  ಜೂಜಾಟದ ಮೇಲೆ ಸಿಇಎನ್ ಪೊಲೀಸ್ ದಾಳಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?