Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಲ, ವಾಯು ಮತ್ತು ಅರಣ್ಯ ಸಂರಕ್ಷಣೆಗೆ ಕಟಿಬದ್ಧರಾಗಬೇಕು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ತಾಜಾ ಸುದ್ದಿ

ಜಲ, ವಾಯು ಮತ್ತು ಅರಣ್ಯ ಸಂರಕ್ಷಣೆಗೆ ಕಟಿಬದ್ಧರಾಗಬೇಕು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Dinamaana Kannada News
Last updated: June 25, 2024 4:52 pm
Dinamaana Kannada News
Share
Harihara
ಹರಿಹರ ಸೇಂಟ್ ಅಲೋಶಿಯಸ್ ಶಾಲೆ ಉದ್ಘಾಟನೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
SHARE

ಹರಿಹರ:  ಜಲ, ವಾಯು, ಅರಣ್ಯ ಸಂರಕ್ಷಣೆಗೆ ಕಟಿಬದ್ಧರಾಗಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

ಹರಿಹರ ಸಮೀಪದ ಅಮರಾವತಿಯ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಮಂಗಳವಾರ ನೂತನವಾಗಿ ಆರಂಭಿಸಿರುವ ಸೇಂಟ್ ಅಲೋಶಿಯಸ್ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಸಂತ ಅಲೋಶಿಯಸ್ ಗೊಂಜಾಗರವರ 457ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷು ಹಾಗೂ ಜೀವರಾಶಿಯ ಉಳಿವಿನ ರಹಸ್ಯ ಅಡಗಿರುವುದು ಜಲ, ವಾಯು, ಅರಣ್ಯದಲ್ಲಿ, ಈ ಅಂಶಗಳ ಉಳಿವಿಗೆ ನಾವು ಶಕ್ತಿ ಮೀರಿ ಪ್ರಯತ್ನಿಸಬೇಕಿದೆ ಎಂದ ಅವರು, ಪ್ರಾಣಿ, ಪಕ್ಷಿಗಳು ಸಹಜವಾಗಿ ಬದುಕುವ, ಅರಳುವ ವಾತಾವರಣ ನಿರ್ಮಿಸಬೇಕಿದೆ ಎಂದರು.

ಬಹು ಹಿಂದೆಯೆ ಭಾರತ ಶಿಕ್ಷಣ, ಜ್ಞಾನದ ವಿಷಯದಲ್ಲಿ ಜಗತ್ತಿನ ಗುರುವಾಗಿತ್ತು, ನಳಂದ, ತಕ್ಷಶಿಲಾ, ವಿಶ್ವಶಿಲಾ ವಿಶ್ವವಿದ್ಯಾಲಯಗಳಲ್ಲಿ ಅಭ್ಯಾಸ ಮಾಡಲು ವಿದ್ಯಾರ್ಥಿಗಳು ವಿಶ್ವದೆಲ್ಲೆಡೆಯಿಂದ ಆಗಮಿಸುತ್ತಿದ್ದರು. ಗತ ಕಾಲದ ವೈಭವ ಮರಳಿಸಲು ಪ್ರಧಾನಿ ಮೋದಿಯವರ ಮುಖಂಡತ್ವದಲ್ಲಿ ಭಾರತ ಸರ್ಕಾರವು ಈಗ ನಳಂದ ವಿಶ್ವವಿದ್ಯಾನಿಲಯದ ಪರಿಸರದಲ್ಲಿಯೆ ನಳಂದ ವಿಶ್ವವಿದ್ಯಾಲಯವನ್ನು ಆರಂಭಿಸುವ ಕಾರ್ಯಕ್ಕೆ ಮುನ್ನುಡಿ ಇಟ್ಟಿದೆ ಎಂದರು.

ಸಂತ ಅಲೋಶಿಯಸ್ ಗೊಂಜಾಗ ಬಲಹೀನರ ಸೇವೆಗೆ ಜೀವನ ಮುಡುಪಾಗಿಟ್ಟಿದ್ದರು, ಅವರ ಹೆಸರಲ್ಲಿ ಆರಂಭಿಸಿರುವ ಈ ಶಿಕ್ಷಣ ಸಂಸ್ಥೆಯು ಕಳೆದ 500 ವರ್ಷಗಳಿಂದ ಜಗತ್ತಿನ 105 ದೇಶಗಳಲ್ಲಿ ಶಿಕ್ಷಣ ಪ್ರಸಾರದ ಕಾರ್ಯ ಮಾಡುತ್ತಿರುವುದು ಅಭಿನಂದನೀಯ ಕಾರ್ಯ, ಈ ಸಂಸ್ಥೆಯು ಬಡವರ್ಗದವರಿಗೆ ಶಿಕ್ಷಣ ಸೌಲಭ್ಯವನ್ನು ನೀಡುತ್ತಿದೆ ಎಂದರು.
ರಾಜ್ಯಪಾಲರು ಸಂತ ಅಲೋಶಿಯಸ್ ಗೊಂಜಾಗ ಇವರ ಮೂರ್ತಿ ಹಾಗೂ ಶಾಲೆಯ ನಾಮಫಲಕ ಅನಾವರಣ ಮಾಡಿದರು.

ಶಿವಮೊಗ್ಗ ಧರ್ಮಕ್ಷೇತ್ರದ ಬಿಷಪ್ ರೆವೆರೆಂಡ್ ಡಾ.ಫ್ರಾನ್ಸಿಸ್ ಸೆರಾವೊ ಎಸ್.ಜೆ. ಇವರು ಮಾತನಾಡಿ, ಗುಣಮಟ್ಟದ ಹಾಗೂ ಸಮಾಜಮುಖಿ ಶಿಕ್ಷಣ ನೀಡಲು ಖ್ಯಾತವಾಗಿರುವ ಈ ಸಂಸ್ಥೆ ಅಂತರಾಷ್ಟ್ರೀಯ ಗುಣಮಟ್ಟದೊಂದಿಗೆ ಆರಂಭಿಸುವ ಶಾಲೆಯಿಂದಾಗಿ ಈ ಭಾಗದ ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಿದೆ ಎಂದರು.

ಶಾಸಕ ಬಿ.ಪಿ.ಹರೀಶ್ ಮಾತನಾಡಿ, ರಾಜ್ಯಪಾಲರು ಬಹು ಹಿಂದೆ ಹರಿಹರ ಸಮೀಪದ ಬಿರ್ಲಾ ಕಂಪನಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡಿದವರು, ಆ ಹಳೆಯ ನೆನಪುಗಳ ಜೊತೆಗೆ ಅವರು ಹರಿಹರಕ್ಕೆ ಬಂದಿದ್ದಾರೆ, ಆ ಕಾರ್ಖಾನೆಯ ಅಧಿಕಾರಿಗಳನ್ನು ಭೇಟಿ ಮಡುವ ಹಂಬಲ ವ್ಯಕ್ತಪಡಿಸಿದ್ದಾರೆ ಎಂದರು.

ಈಗ ಶಿಕ್ಷಣವೆಂಬುದು ವ್ಯಾಪಾರೀಕರಣವಾಗಿದೆ. ಸ್ರೀಮತರಿಗಷ್ಟೆ ಶಿಕ್ಷಣ ಪಡೆಯಲು ಸಾಧ್ವಯ ಎಂಬ ವಾತಾವರಣ ಸೃಷ್ಟಿಯಾಗಿದೆ. ಬಡವರ ಶಿಕ್ಷಣಕ್ಕೆ ಮಹತ್ವ ನೀಡುವ ಈ ವಿದ್ಯಾಸಂಸ್ಥೆಯು ಈ ಭಾಗದಲ್ಲಿ ಶಾಲೆ ಆರಂಭಿಸಿರುವುದು ಸೂಕ್ತವಾಗಿದೆ, ತಾಂತ್ರಿಕ ಶಿಕ್ಷಣದ ಕೋರ್ಸ್‍ಗಳನ್ನು ಆರಂಭಿಸುವತ್ತ ಈ ಸಂಸ್ಥೆಯ ಮುಖ್ಯಸ್ಥರು ಆಧ್ಯತೆ ನೀಡಬೇಕೆಂದು ಸಲಹೆ ನೀಡಿದರು.

ರೆವೆರೆಂಡ್ ಫಾ.ಡಯಾನೀಶಿಯಸ್ ವಜ್ ಎಸ್.ಜೆ. ರವರು ಮಾತನಾಡಿ, ನಮ್ಮದು ಮೂಲವಾಗಿ ಧಾರ್ಮಿಕ ಸಂಸ್ಥೆಯಾದರೂ ಶಿಕ್ಷಣ ಪ್ರಸಾರ ಕಾರ್ಯದಲ್ಲಿ ಸಾಕಷ್ಟು ಸಾಧನೆಯನ್ನು ಮಾಡಿದ್ದೇವೆ, ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನೀಡುವ ಹಂಬಲದೊಂದಿಗೆ ಈ ಶಾಲೆಯನ್ನು ಆರಂಭಿಸಿದ್ದೇವೆ ಎಂದರು.

ರಾಯಚೂರು- ಮಾನ್ವಿ ಭಾಗದಲ್ಲಿ ದಲಿತರು, ದೇವದಾಸಿಯರು, ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸೇವೆಗೈದ ಹಿರಿಯರಾದ ಫಾ.ಮ್ಯಾಕ್ಸಿಮ್ ರಸ್ಕೀನ ಎಸ್.ಜೆ. ಹಾಗೂ 12 ಜನ ವಿದ್ಯಾಭಿಮಾನಿಗಳು, ಪೋಷಕರನ್ನೂ ಗೌರವಿಸಲಾಯಿತು.

ಸಂತ ಅಲೋಶಿಯಸ್ ಮಾತೃ ಸಂಸ್ಥೆ ಮಂಗಳೂರು ಇದರ ರೆಕ್ಟರ್ ಆಗಿರುವ ವಂದನೀಯ ಫಾದರ್ ಮೆಲ್ವಿನ್ ಪಿಂಟೋ ಎಸ್.ಜೆ., ಕಾಲೇಜು ವಿಭಾಗದ ನಿರ್ದೇಶಕ ಫಾ.ಎರಿಕ್ ಮಥಾಯಸ್, ಫಾ.ಮೆಲ್ವಿನ್ ಪಿಂಟೊ, ಬೆಂಗಳೂರಿನ ಸಂತ ಜೋಸೆಫ್ ವಿಶ್ವವಿದ್ಯಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ಚಂದ್ರಕಾಂತ್, ಶಾಲೆಯ ಪ್ರಾಂಶುಪಾಲೆ ರೀನಾ ಪಿಂಟೋ, ಬ್ಯಾಪ್ಟಿಸ್ಟ್ ಸನ್ನಿ ಗುಡಿನೋ, ಉಪನ್ಯಾಸಕರಾದ ಅಬ್ದುಲ್ ರಹಮಾನ್ ಶಮೀಮ್ ಬಾನು, ಹಣಕಾಸು ಅಧಿಕಾರಿ ಫಾ.ವಿನೋದ್ ಎ.ಜೆ., ವಸತಿ ನಿಲಯದ ನಿರ್ದೇಶಕ ಫಾ.ಜೋನ್ ಬ್ಯಾಪ್ಟಿಸ್ಟ್, ಕಾಲೇಜು ಪ್ರಾಂಶುಪಾಲೆ ಪುಷ್ಪಲತಾ ಅರಸ್, ಉಪ ಪ್ರಾಂಶುಪಾಲೆ ಮೌಸಿನ್ ಉಲ್ಲಾ, ಪಾಸ್ಕಲ್ ಫೆನಾರ್ಂಡಿಸ್, ಮಂಜುನಾಥ್ ಟಿ.ಎಸ್ ಇತರರು ಇದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಾಮಗಾರಿ ಪೂರ್ಣಗೊಳಿಸಲು ಶಾಸಕ ಬಸವಂತಪ್ಪ ತಾಕೀತು
Next Article Dalit Student Council Harihar ಶಿಕ್ಷಣ ಕ್ಷೇತ್ರದಲ್ಲೂ ಭ್ರಷ್ಟಾಚಾರ- ಕೇಂದ್ರ ಸಚಿವರ ವಜಾಕ್ಕೆ ಡಿವಿಪಿ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಳೆಯ  ಅಬ್ಬರ : ಭದ್ರಾ ಡ್ಯಾಂಗೆ 24 ಗಂಟೆಯಲ್ಲಿ 4 ಅಡಿ ನೀರು 

ಶಿವಮೊಗ್ಗ, ಜು. 19:   ಭದ್ರಾ ಡ್ಯಾಂ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇದರಿಂದ ಡ್ಯಾಂ ಒಳಹರಿವಿನಲ್ಲಿ ದಿನದಿಂದ…

By Dinamaana Kannada News

Harihara | ಅಕ್ರಮ ಮಣ್ಣುಗಣಿಗಾರಿಕೆಗೆ ಪರಿಶಿಷ್ಟರ ರುದ್ರಭೂಮಿ ಬಲಿ : ಡಿಎಸ್‌ಎಸ್‌ ಆಕ್ರೋಶ

ಹರಿಹರ (Harihara) : ಅಕ್ರಮ ಮಣ್ಣುಗಣಿಗಾರಿಕೆ ದಂಧೆಕೋರರ ಅಟ್ಟಹಾಸಕ್ಕೆ ತಾಲ್ಲೂಕಿನ ರಾಜನಹಳ್ಳಿ ಗ್ರಾಮದ ಪರಿಶಿಷ್ಟರ ರುದ್ರಭೂಮಿ ಬಲಿಯಾಗಿದೆ ಎಂದು ಕರ್ನಾಟಕದಲಿತ…

By Dinamaana Kannada News

ಆರುಂಡಿ ಗ್ರಾಮಕ್ಕೆ ಅಧಿಕಾರಿಗಳ ಭೇಟಿ: ಅಕ್ರಮ ಗಣಿಗಾರಿಕೆ, ಕ್ರಷರ್ ಸ್ಥಗಿತಕ್ಕೆ ಜಿ. ಬಿ. ವಿನಯ್ ಕುಮಾರ್ ಆಗ್ರಹ

ದಾವಣಗೆರೆ (Davanagere): ಹೊನ್ನಾಳಿ - ನ್ಯಾಮತಿ ಅವಳಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಕಲ್ಲು ಕ್ವಾರೆಗಳಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹೋರಾಟ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?