Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ
ತಾಜಾ ಸುದ್ದಿ

ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ

Dinamaana Kannada News
Last updated: June 28, 2024 5:07 pm
Dinamaana Kannada News
Share
Davangere
ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿಯಿಂದ ಪ್ರತಿಭಟನೆ
SHARE

ದಾವಣಗೆರೆ:  ಕಟ್ಟಡ ಕಾರ್ಮಿಕರ ಹಕ್ಕೋತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಯದೇವ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಎಸಿ ಮೂಲಕ ಮುಖ್ಯಮಂತ್ರಿ, ಕಾರ್ಮಿಕ ಮಂತ್ರಿ ಹಾಗೂ ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕಾರ್ಮಿಕ ಮುಖಂಡ ಆವರಗೆರೆ ಹೆಚ್.ಜಿ.ಉಮೇಶ್, ಕಾರ್ಮಿಕರಿಗೆ ಅವಶ್ಯಕತೆಯಿಲ್ಲದ ಕಿಟ್ ನೀಡುವುದನ್ನು ತಕ್ಷಣದಲ್ಲೇ ನಿಲ್ಲಿಸಬೇಕು, ಕರ್ನಾಟಕ ಹೈಕೋರ್ಟ ನೀಡಿರುವ ಕಿಟ್ಗಳ ವಿತರಣೆಯ ತಡೆಯಾಜ್ಞೆಯನ್ನು ಸರ್ಕಾರ ಚಾಚುತಪ್ಪದೇ ಪಾಲಿಸಬೇಕು. ಕಾರ್ಮಿಕರ ಆರೋಗ್ಯ ತಪಾಸಣೆಯ ಹೆಸರಲ್ಲಿ ಖಾಸಗೀ ಆಸ್ಪತ್ರೆಗಳಿಗೆ ಕೊಟ್ಟಿರುವ ಗುತ್ತಿಗೆಯನ್ನು ರದ್ದುಮಾಡಿ, ಕಟ್ಟಡ ಕಾರ್ಮಿಕರಿಗೆ ಬಿಬಿಎಂಪಿ ಮಾದರಿಯಲ್ಲಿ ಇಎಸ್.ಐ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಈ ಮೊದಲು ಇದ್ದ ಶೈಕ್ಷಣಿಕ ಧನಸಹಾಯವನ್ನು ಮುಂದುವರೆಸಬೇಕು ಹಾಗೂ ಹೈ ಕೋರ್ಟ ಆದೇಶದಂತೆ ಬಾಕಿ ಇರುವ ಎಲ್ಲಾ ವಿದ್ಯಾರ್ಥಿಗಳಿಗೆ ಧನಸಹಾಯವನ್ನು ಬಿಡುಗಡೆ ಮಾಡಬೇಕು. ಶೈಕ್ಷಣಿಕ ಧನಸಹಾಯ ಅರ್ಜಿಯನ್ನು ಕಲ್ಯಾಣ ಮಂಡಳಿಯ ವೆಬ್ ಸೈಟ್ ನಲ್ಲಿಯೇ ಅರ್ಜಿಹಾಕಲು ಕ್ರಮಕೈಗೊಳ್ಳಬೇಕು. ನಕಲಿ ಕಾರ್ಮಿಕರ ಹೆಸರಿನಲ್ಲಿ ನೈಜ ಕಾರ್ಮಿಕರ ಕಾರ್ಡಗಳನ್ನು ತಿರಸ್ಕರಿಸುವುದನ್ನು ನಿಲ್ಲಿಸಬೇಕು ಮತ್ತು ಬಾಕಿ ಇರುವ ಧನಸಹಾಯ ಅರ್ಜಿಗಳನ್ನು ಬೇಗನೇ ವಿಲೇವಾರಿ ಮಾಡಬೇಕೆಂದು ಮನವಿ ಮಾಡಿದರು.

ಸಿಐಟಿಯು ಮುಖಂಡ ಕೆ.ಹೆಚ್.ಅನಂದರಾಜ್ ಮಾತನಾಡಿ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಏಕಪಕ್ಷೀಯ ತೀರ್ಮಾನ ಕೈಬಿಡಬೇಕು. ಕಾರ್ಮಿಕ ಸಂಘಟನೆಗಳ ಜೊತೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆಸಿ ತ್ರಿಪಕ್ಷೀಯ ತೀರ್ಮಾನಕ್ಕೆ ಬರಬೇಕು. ಕಾರ್ಮಿಕರಿಗೆ ಹೊರೆಯಾಗಿರುವ ದಿನನಿತ್ಯದ ಬಳಕೆಯ ವಸ್ತುಗಳಾದ ಪೆಟ್ರೋಲ್, ಡಿಸೇಲ್, ಹಾಲಿನದರ, ತರಕಾರಿಗಳ ಬೆಲೆ ಸೇರಿದಂತೆ ದಿನ ನಿತ್ಯ ಬಳಕೆಯ ವಸ್ತುಗಳ ದರ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿ.ಲಕ್ಷ್ಮಣ, ಶಿವಕುಮಾರ್.ಡಿ.ಶೆಟ್ಟರ್, ಹೆಚ್‍ಕೆಆರ್ ಸುರೇಶ್, ಎಸ್.ಕೆ.ಆದಿಲ್ ಖಾನ್, ಮಹಮ್ಮದ್ ರಫೀಕ್, ನಾಗಮ್ಮ, ಸತೀಶ್ ಅರವಿಂದ್, ಲಕ್ಷ್ಮಣ್, ಭರಮಪ್ಪ, ಹನುಮಂತಪ್ಪ, ತಿಪ್ಪೇಶ್ ಇತರರು ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
Next Article Davanagere  ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಿಶ್ವ ಅಸ್ತಮಾ ದಿನಾಚರಣೆ : ಸತತ ಚಿಕಿತ್ಸೆಯಿಂದ ಅಸ್ತಮಾ ಕಾಯಿಲೆ ಹತೋಟಿಗೆ

ತೀವ್ರ ಅಸ್ತಮಾ ಎಂದರೇನು? ಅಸ್ತಮಾ ಕಾಯಿಲೆಯು ಸಾಕಷ್ಟು ಜನರನ್ನು ಭಾದಿಸಿದರೂ ಸರಿಯಾದ ಹಾಗೂ ಸತತವಾದ ಚಿಕಿತ್ಸೆಯಿಂದ ಹತೋಟಿಗೆ ಬರುತ್ತದೆ. ಆದರೆ,…

By Dinamaana Kannada News

ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಎಂದಿಗೂ ಶಕ್ತಿ ಬರುವುದಿಲ್ಲ : ಸಿಎಂ ಸಿದ್ದರಾಮಯ್ಯ

ದಾವಣಗೆರೆ (Davanagere):  ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಎಂದಿಗೂ ಶಕ್ತಿ ಬರುವುದಿಲ್ಲ. ಆದ್ದರಿಂದ ಒಗ್ಗಟ್ಟು, ಸಂಘಟನೆಯೊಂದೇ ಪರಿಹಾರ ಎಂದು ಸಿಎಂ…

By Dinamaana Kannada News

Davanagere | ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ : ಶಾಸಕ ಬಿ.ಪಿ.ಹರೀಶ್

ಹರಿಹರ (Davanagere):  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವಗಳ ಮೂಲಕ ಶಿಕ್ಷಕರು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಬೆಳಕಿಗೆ ತರುವ ಕಾರ್ಯ ಮಾಡಬೇಕು…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ:ಹೊಯ್ಸಳ ಮತ್ತು ಕಿತ್ತೂರು ರಾಣಿಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮದ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಪಾಲಿಕೆ ಆಯುಕ್ತರಿಂದ ಪೌರಕಾರ್ಮಿಕರಿಗೆ ಕಿರುಕುಳ: ವರ್ಗಾವಣೆಗೆ ಒತ್ತಾಯ

By Dinamaana Kannada News
CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?