Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್ಸಿ-ಎಸ್ಟಿ ಕುಂದುಕೊರತೆ ಸಭೆ : ದೂರು ಸ್ವೀಕರಿಸದಿದ್ದರೆ ಕ್ರಮ
ತಾಜಾ ಸುದ್ದಿ

ಎಸ್ಸಿ-ಎಸ್ಟಿ ಕುಂದುಕೊರತೆ ಸಭೆ : ದೂರು ಸ್ವೀಕರಿಸದಿದ್ದರೆ ಕ್ರಮ

Dinamaana Kannada News
Last updated: June 29, 2024 5:35 am
Dinamaana Kannada News
Share
davanagere police
ಜಿಲ್ಲಾ ಪೊಲೀಸ್‌ ಇಲಾಖೆ
SHARE

ದಾವಣಗೆರೆ :   ನೊಂದವರು ದೂರು ಕೊಡಲು ಹೋದಾಗ ಪೊಲೀಸರು ಎಫ್‌ಐಆರ್ ದಾಖಲಿಸದಿದ್ದರೆ, ಠಾಣೆಯಲ್ಲಿರುವ ಕ್ಯೂಆರ್ ಕೋಡ್ ಮೊಬೈಲ್‌ನಲ್ಲಿ ಸ್ಕಾನ್‌  ಮಾಡಿ ಮೇಸೆಜ್ ಹಾಕಿ ಇಲ್ಲವೇ ನಮಗೆ ಕರೆ ಮಾಡಿ ಮಾಹಿತಿ ನೀಡಿದರೆ ಪರಿಶೀಲಿಸಿ ಶಿಸ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಉಮಾ ಪ್ರಶಾಂತ್ ತಿಳಿಸಿದರು.

ಇಲ್ಲಿನ ಎಸ್ಪಿ ಕಚೇರಿಯಲ್ಲಿ ನಡೆದ ಎಸ್ಸಿ-ಎಸ್ಟಿ ಕುಂದುಕೊರತೆ ಸಭೆಯಲ್ಲಿ ದಲಿತರ ಅಹವಾಲು ಸ್ವೀಕರಿಸಿ ಮಾತನಾಡಿ, “ಪೊಲೀಸರು ನಿಮ್ಮ ದೂರು ಸ್ವೀಕರಿಸದಿರುವ ಬಗ್ಗೆ ತಿಳಿಸಿದರೆ, ಠಾಣೆಗಳಲ್ಲಿರುವ ಸಿಸಿ ಕ್ಯಾಮೇರಾ ಮೂಲಕ ಪರಿಶೀಲಿಸಿ, ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

“ಇಲಾಖೆಯಿಂದಲೂ ಪೊಲೀಸರನ್ನೇ ಮಾರುವೇಷದಲ್ಲಿ ಠಾಣೆಗಳಿಗೆ ಕಳುಹಿಸಿ ದೂರು ಕೊಡಿಸುವ ಮೂಲಕ ಸತ್ಯಾಸತ್ಯತೆ ಪರಿಶೀಲಿಸಲಾಗುತ್ತಿದೆ. ನಮ್ಮ ಇಲಾಖೆಯಿಂದಲೇ ಹೋದವರ ಬಳಿ ದೂರು ದಾಖಲಿಸಿಕೊಳ್ಳದ ಹಾಗೂ ಸರಿಯಾಗಿ ವರ್ತಿಸದ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ” ಎಂದರು.

ಜಗಳೂರು ತಾಲೂಕಿನ ಪಲ್ಲಾಗಟ್ಟೆ ಸುಧಾ ಮಾತನಾಡಿ, ನನ್ನ ಮಗಳಿಗೆಯಾದ ತೊಂದರೆ ಬಗ್ಗೆ ಬಿಳಚೋಡು ಠಾಣೆಯಲ್ಲಿ ದೂರು ಕೊಡಲು ಹೋದಾಗ ಬೆಳಗ್ಗೆಯಿಂದ ಸಂಜೆ ವರೆಗೂ ಕೂರಿಸಿ, ಕೇಸ್ ತೆಗೆದುಕೊಳ್ಳದೇ ವಾಪಸ್ ಕಳಿಸಿದ್ರು” ಎಂದಾಗ, ಎಸ್ಪಿ ಮೇಲಿನಂತೆ ಪ್ರತಿಕ್ರಿಯಿಸಿದರು.

ಮಹಾಂತೇಶ್ ಮಾತನಾಡಿ, “ಜಗಳೂರು ತಾಲೂಕಿನ ತೊಗರಸಿಹಳ್ಳಿಯಲ್ಲಿ ಕ್ಷೌರ ಮಾಡದ ಬಗ್ಗೆ ಅಕಾರಿಗಳ ಗಮನಕ್ಕೆ ತಂದ ಕಾರಣ ೩೦ ಮನೆಗಳ ಜನರನ್ನು ಅಸ್ಪಶೃರಂತೆ ನಡೆಸಿಕೊಳ್ಳುತ್ತಿದ್ದು, ನಾವು ಘನತೆಯಿಂದ ಬದುಕುವಂತಹ ವಾತಾವರಣ ಸೃಷ್ಟಿಸಬೇಕು” ಎಂದು ಮನವಿ ಮಾಡಿದರು.

ದಲಿತ ಮುಖಂಡ ಹೆಗ್ಗೆರೆ ರಂಗಪ್ಪ ಮಾತನಾಡಿ, ಸರಕಾರದ ನಿಯಮಗಳ ಪ್ರಕಾರ ದಾವಣಗೆರೆ ಜಿಲ್ಲೆಯಲ್ಲಿ ಬೇಡ ಜಂಗಮರಿಲ್ಲ. ಆದರೂ ವೀರಶೈವ ಜಂಗಮರು ತಮ್ಮ ಮಕ್ಕಳ ಜಾತಿ ಬೇಡ ಜಂಗಮ ಎಂದು ಶಾಲೆಗಳಲ್ಲಿ ಬರೆಸುತ್ತಿದ್ದಾರೆ. ಆದ್ದರಿಂದ ಶಾಲಾ ಮುಖ್ಯಸ್ಥರಿಗೆ ಇದಕ್ಕೆ ಆಸ್ಪದ ನೀಡದಂತೆ ಸೂಚನೆ ನೀಡಬೇಕು” ಎಂದು ಒತ್ತಾಯಿಸಿದರು.

ನಿಂಗಪ್ಪ ಬನ್ನಿಹಟ್ಟಿ ಮಾತನಾಡಿ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಅಂಬೇಡ್ಕರ್ ಅವರ ಹೆಸರಿಡಬೇಕು ಎಂದು ಕೋರಿದರು.

ಸೂರ್ಯ ಪ್ರಕಾಶ್ ಮಾತನಾಡಿ, ಎಸ್ಸಿ-ಎಸ್ಟಿ ಕಾಲೊನಿಗಳಲ್ಲಿ ದಾವಣಗೆರೆ ಒನ್ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿದರು.

ಆವರಗೆರೆ ವಾಸು ಮಾತನಾಡಿ, ಕಲ್ಲೇಶ್ವರ ಮಿಲ್ ಬಳಿಯ ಸ್ಲಂವೊಂದರಲ್ಲಿ ೨೩ ಕುಟುಂಬಗಳು ವಾಸಿಸುತ್ತಿದ್ದು, ಅವರಿಗೆ ಶೌಚಾಲಯವಿಲ್ಲ. ಆದ್ದರಿಂದ ಶೌಚಾಲಯ ನಿರ್ಮಾಣಕ್ಕೆ ಒತ್ತು ನೀಡಬೇಕುಎಂದು ಒತ್ತಾಯಿಸಿದರು.

ಸಭೆಯಲ್ಲಿ ಎಸಿ ದುರ್ಗಾಶ್ರೀ, ಎಎಸ್‌ಪಿಗಳಾದ ವಿಜಯಕುಮಾರ್ ಸಂತೋಷ್, ಜಿ.ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾಗರಾಜ್ ಉಪಸ್ಥಿತರಿದ್ದರು

 

 ಕೋಟ್…

ನಗರದಲ್ಲಿ ಉತ್ತಮ ಜಾಗವೊಂದನ್ನು ಗುರುತಿಸಿ ಅಂಬೇಡ್ಕರ್ ಭವನ ನಿರ್ಮಿಸುವ ಬಗ್ಗೆಯೂ ಜಿಲ್ಲಾಡಳಿತ ಪರಿಶೀಲಿಸುತ್ತಿದೆ. ಪಾಳು ಬಿದ್ದಿರುವ ಬಾಬು ಜಗಜೀವನರಾಂ ಭವನವನ್ನು ಪಾಲಿಕೆಯ ಎಸ್ಸಿ-ಎಸ್ಟಿ ನೌಕರರ ಕೌಶಲ್ಯಾಭಿವೃದ್ಧಿಗೆ ಬಳಸಿಕೊಳ್ಳಲು ಪರಿಶೀಲಿಸಲಾಗುತ್ತಿದೆ.

-ಉಮಾ ಪ್ರಶಾಂತ್, ಎಸ್ಪಿ

TAGGED:Davangere District.dinamaana.comDistrict Police DepartmentKannada Newsಕನ್ನಡ ಸುದ್ದಿಜಿಲ್ಲಾ ಪೊಲೀಸ್‌ ಇಲಾಖೆ ದಾವಣಗೆರೆ.ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere  ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ 
Next Article Davangere ನಿಸ್ವಾರ್ಥತೆಯಿಂದ ಕೆಲಸ ಮಾಡುವವರ ಸಂಖ್ಯೆ ಕಡಿಮೆ : ನ್ಯಾ.ರಾಜೇಶ್ವರಿ ಎನ್.ಹೆಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಲ್ಪಸಂಖ್ಯಾತರ ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ “ನುಡಿದಂತೆ ನಡೆದಿಲ್ಲ” : ಅಪ್ಸರ್ ಕೊಡ್ಲಿಪೇಟೆ  

ದಾವಣಗೆರೆ (Davanagere):  ಅಲ್ಪಸಂಖ್ಯಾತರ ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ "ನುಡಿದಂತೆ ನಡೆದಿಲ್ಲ"  ಎಂದು ಅಪ್ಸರ್ ಕೊಡ್ಲಿಪೇಟೆ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ…

By Dinamaana Kannada News

ಚೆಕ್ ಬೌನ್ಸ್ ಪ್ರಕರಣ: ಶಿಕ್ಷಕಿಗೆ ಕಾರಗೃಹ ಶಿಕ್ಷೆ

ಹರಿಹರ:  ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇಲ್ಲಿನ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವು ಆರೋಪಿತೆಗೆ ವಿಧಿಸಿದ್ದ 4 ತಿಂಗಳ…

By Dinamaana Kannada News

ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ನೀಡುವ ಆದೇಶ –ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ಅ.18: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?