Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವೈದ್ಯ ಸಮೂಹಕ್ಕೆ ನಾಗರಿಕ ಸಮಾಜ ಋಣಿಯಾಗಿದೆ : ನ್ಯಾ.ರಾಜೇಶ್ವರಿ ಎನ್ ಹೆಗಡೆ
ತಾಜಾ ಸುದ್ದಿ

ವೈದ್ಯ ಸಮೂಹಕ್ಕೆ ನಾಗರಿಕ ಸಮಾಜ ಋಣಿಯಾಗಿದೆ : ನ್ಯಾ.ರಾಜೇಶ್ವರಿ ಎನ್ ಹೆಗಡೆ

Dinamaana Kannada News
Last updated: July 2, 2024 4:59 pm
Dinamaana Kannada News
Share
Davanagere
ವೈದ್ಯರ ದಿನಾಚರಣೆ ಕಾರ್ಯಕ್ರಮ
SHARE

ದಾವಣಗೆರೆ : ಗುಣಪಡಿಸುವ ಕೈಗಳ, ಕಾಳಜಿಯುಳ್ಳ ಹೃದಯಗಳ ಅವಿಶ್ರಾಂತವಾಗಿ ಕಾರ್ಯನಿರ್ವಹಿಸುವ ವೈದ್ಯ ಸಮೂಹಕ್ಕೆ ಸಮಾಜ ಎಂದೆಂದಿಗೂ ಋಣಿಯಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್ ಹೆಗಡೆ ಹೇಳಿದರು.

ದಾವಣಗೆರೆ ಜಿಲ್ಲಾ ನ್ಯಾಯಾಂಗದಿಂದ ಮಂಗಳವಾರ ಆಯೋಜಿಸಲಾಗಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಒತ್ತಡಮಯ ಜೀವನ ಶೈಲಿಗೆ ಮನುಷ್ಯ ಹಲವಾರು ರೋಗ ರುಜಿನಗಳಿಗೆ ತುತ್ತಾಗುತ್ತಿದ್ದಾರೆ.ವೈದ್ಯ ಸಮೂಹದ ಮುಂದೆಯೂ ಸವಾಲುಗಳಿವೆ. ಕಾಲಕಾಲಕ್ಕೆ ವೈದ್ಯಕೀಯ ಲೋಕ ಸಂಬಂಧಿತ ವಿಷಯಗಳಿಗೆ ಸಂಬಂಧಪಟ್ಟಂತೆ ಚರ್ಚೆ, ಉಪನ್ಯಾಸಗಳ ಮೂಲಕ  ಜನರನ್ನು ತಲುಪಬೇಕಿದೆ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ಮಾತನಾಡಿ, ನ್ಯಾಯಾಂಗದಿಂದ ವೈದ್ಯರನ್ನು ಕರೆಸಿ ಸನ್ಮಾನಿಸಿರುವುದು ನಮ್ಮಲ್ಲಿ ಮತ್ತಷ್ಟು ಜವಾಬ್ದಾರಿ ಹಾಗೂ ನೈತಿಕ ಪ್ರಜ್ಞೆ ಮೂಡಲು ಕಾರಣವಾಗಿದೆ ಎಂದರು.

ಇಂದಿನ ನಾಗರಿಕ ಸಮಾಜ ನಾಗಾಲೋಟದಿಂದ ಓಡುತ್ತಿದೆ.ಇಂತಹ ಸಂದರ್ಭದಲ್ಲಿ ಆಧುನಿಕ ಸಂಪರ್ಕ ಸಾಧನಗಳು ಜನರಲ್ಲಿ ವೈದ್ಯ ವಿಜ್ಞಾನಕ್ಕೆ ಸಂಬಂಧಿಸಿದಂತೆ ತಪ್ಪು ಸಂದೇಶವನ್ನು ರವಾನಿಸುತ್ತಿರವುದು ದುರದೃಷ್ಟಕರ ಎಂದು ಸಮಾಜಮುಖಿ ಕಾರ್ಯಗಳಿಗೆ ಹೆಸರಾದ ಮತ್ತೋರ್ವ ವೈದ್ಯೆ ಡಾ.ಶಾಂತಾಭಟ್ ವಿಷಾದ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳಿಂದ ಪ್ರಶಂಸೆಗೆ ಪಾತ್ರರಾಗಿ ಅನುಪಮ ಸೇವೆಗಾಗಿ ಪ್ರಶಸ್ತಿ ಪುರಸ್ಕೃತ ಡಾ.ರಾಘವನ್ ಮತ್ತು ಡಾ.ನಾಗೇಂದ್ರಪ್ಪರವರನ್ನು ಹೃತ್ಪೂರ್ವಕವಾಗಿ ಅಭಿನಂದಿಸಲಾಯಿತು.

ಡಾ.ರಾಘವನ್  ಮಾತನಾಡಿ, ಸಮಾಜದಲ್ಲಿ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳಿಗಿಂತಲೂ ಹೆಚ್ಚಾಗಿ ಇಂದಿನ ಬದಲಾದ ಜೀವನ ಶೈಲಿ,ಮಾನಸಿಕ ಒತ್ತಡಗಳಿಂದಾಗಿ ಮರಣಹೊಂದುವವರ ಸಂಖ್ಯೆ ಗಣನೀಯವಾಗಿದೆ.ಇದು ಪ್ರಸ್ತುತ ಶೇ.ಅರವತ್ತೇಳರ ಪ್ರಮಾಣದಲ್ಲಿದೆ ಈ ಕುರಿತಂತೆ ಯುವಜನತೆಯಲ್ಲಿ ಅರಿವನ್ನು ಮೂಡಿಸುವ ಕಾರ್ಯವಾಗಬೇಕಿದೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಮಂಜಪ್ಪ ಅಣ್ಣಯ್ಯನವರ್  ಮಾತನಾಡಿ, ವೈದ್ಯರ ಮಾನವೀಯ ದೃಷ್ಟಿಯಿಂದಾಗಿಯೇ ಅರ್ಧದಷ್ಟು ಬಡವರ ಕಾಯಿಲೆಗಳು ವಾಸಿಯಾಗಬಲ್ಲವು.ಶ್ರೀಮಂತ ರೋಗಿಗೆ ಡಾಕ್ಟರ್ ಆಗಿ ಕಂಡ ಅದೇ ವೈದ್ಯ,ಬಡವನಿಗೆ ದೇವರಾಗಿ ಕಾಣಿಸುತ್ತಾನೆ ಇಂತಹ ಸ್ತುತ್ಯ ಕಾರ್ಯಕ್ಕೆ ವೈದ್ಯರನ್ನು ಅಭಿನಂದಿಸುತ್ತೇನೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣನವರ ಸ್ವಾಗತಿಸಿದರು.

ವೈದ್ಯರಾದ ರೇಣುಕಾರಾಧ್ಯ, ಸುಭಾಶ್ಚಂದ್ರ ಹಾಗೂ ನ್ಯಾಯಾಧೀಶರಾದ ಪ್ರವೀಣಕುಮಾರ್, ಶ್ರೀರಾಮ ಹೆಗಡೆ, ಶಿವಪ್ಪ ಸಲಗರೆ,ನಿವೇದಿತಾ ಹಾಗೂ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಬಿ.ಶ್ರೀನಿವಾಸ , ಕೋರ್ಟ್ ಮ್ಯಾನೇಜರ್ ಅಶ್ವಿನಿ ಕುಮಾರ್ ಹಾಗೂ ನ್ಯಾಯಾಂಗ ಸಿಬ್ಬಂದಿಗಳು ಹಾಜರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಪುಸ್ತಕ ಬಹುಮಾನಕ್ಕಾಗಿ ಲೇಖಕರಿಂದ, ಪ್ರಕಾಶರಿಂದ ಅರ್ಜಿ ಆಹ್ವಾನ
Next Article Davanagere ಸ್ಮಾರಕಗಳು ಒಂದು ನಾಡಿನ ಐತಿಹಾಸಿಕ ಕನ್ನಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಶಾಲೆಗಳ ಜೀರ್ಣೋದ್ಧಾರಕ್ಕೆ ದಾನಿಗಳು ಮುಂದೆ ಬನ್ನಿ : ಶಾಸಕ ಕೆ.ಎಸ್.ಬಸವಂತಪ್ಪ ಮನವಿ

ದಾವಣಗೆರೆ (Davanagere): ಶಿಕ್ಷಣ ಪ್ರೇಮಿಗಳು ಕೊಡುಗೆ ನೀಡುವುದರಿಂದ ಶೈಕ್ಷಣಿಕವಾಗಿ ಗ್ರಾಮೀಣ ಪ್ರದೇಶದ ಮಕ್ಕಳು ಪ್ರಗತಿ ಸಾಧಿಸಲು ಸಹಾಯಕವಾಗುತ್ತದೆ ಎಂದು ಶಾಸಕ…

By Dinamaana Kannada News

Bhadra dam : ಭದ್ರಾ ಡ್ಯಾಂನಿಂದ 56,032 ಕ್ಯೂಸೆಕ್ ನೀರು ನದಿಗೆ    

ದಾವಣಗೆರೆ  ಆ. 3 (Davangere district )  :   ಭದ್ರಾ ಜಲಾಶಯ   ದಲ್ಲಿ  ಒಳಹರಿವಿನಲ್ಲಿ  ಪ್ರಮಾಣ ಇಳಿಕೆಯಾಗಿದೆ. ಆದರೆ ಒಳಹರಿವಿಗಿಂತ…

By Dinamaana Kannada News

Harihara | ರಾಷ್ಟ್ರೀಯ ಲೋಕ ಆದಾಲತ್ : ಒಟ್ಟು 9.98 ಕೋ.ರೂ. ಮೊತ್ತದ, 37,709 ಪ್ರಕರಣ ಇತ್ಯರ್ಥ

ಹರಿಹರ (Harihara) :  ನಗರದ ನ್ಯಾಯಾಲಯಗಳ ಸಂಕೀರ್ಣದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ವಿಚಾರಣೆಗೆ ಬಾಕಿ ಇದ್ದ 134 ಮತ್ತು…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?