Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಗ್ಯಾರಂಟಿಗಳಿಗೆ “ದಲಿತ ” ಸಮುದಾಯದ ಅನುದಾನ : ಪಿ.ಜೆ.ಮಹಾಂತೇಶ್ ಖಂಡನೆ
Blog

ಗ್ಯಾರಂಟಿಗಳಿಗೆ “ದಲಿತ ” ಸಮುದಾಯದ ಅನುದಾನ : ಪಿ.ಜೆ.ಮಹಾಂತೇಶ್ ಖಂಡನೆ

Dinamaana Kannada News
Last updated: July 6, 2024 2:06 pm
Dinamaana Kannada News
Share
harihara dss
ಪಿ.ಜೆ.ಮಹಾಂತೇಶ್
SHARE

ಹರಿಹರ:  2024-25ನೇ ಆರ್ಥಿಕ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿಯಲ್ಲಿ (ಟಿಎಸ್‌ಪಿ) ಕ್ರಿಯಾಯೋಜನೆ ಅನುದಾನದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 14,282 ರೂ.ಗಳನ್ನು ವೆಚ್ಚ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆಗ್ರಹಿಸಿದ್ದಾರೆ.

ಕಳೆದ ಆರ್ಥಿಕ ವರ್ಷದಲ್ಲಿಯೂ ರಾಜ್ಯ ಸರ್ಕಾರ ನಗರದಲ್ಲಿ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನದಲ್ಲಿ 11 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿತ್ತು. ಈ ಬಾರಿಯ ಈ ಯೋಜನೆಯ 39,121 ಕೋಟಿ ರೂ. ಅನುದಾನದಲ್ಲಿ 14,282 ಕೋಟಿ ರೂ. ಬಳಕೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶುಕ್ರವಾರದಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಈ ನಿರ್ದಾರವನ್ನು ಮುಖ್ಯಮಂತ್ರಿ ಹಾಗೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್ ಸದಸ್ಯರು ಕೈಬಿಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಸಂವಿದಾನದ ಆಶಯದಂತೆ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾತಿ, ಜನಾಂಗದವರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಈ ಅನುದಾನ ಮೀಸಲಿಟ್ಟಿದೆಯೆ ಹೊರತು ಇದು ಯಾವುದೆ ಪಕ್ಷ, ಸರ್ಕಾರದ ಹೃದಯ ವೈಶಾಲ್ಯತೆ, ಕರುಣೆ, ಸಾಮಾಜಿಕ ಚಿಂತನೆಯ ಫಲವಲ್ಲ.
ಸಂವಿಧಾನದ ಆಶಯದಂತೆ ಶೋಷಿತರ ಅಭಿವೃದ್ಧಿಗಾಗಿ ಅನುದಾನ ತೆಗೆದಿರಿಸಿ ನಂತರ ಅದನ್ನು ಅನ್ಯ ಕಾರ್ಯ ಯೋಜನೆಗಳಿಗೆ ಬಳಸುವುದು ಸಂವಿಧಾನಕ್ಕೆ ಬಗೆಯುವ ದ್ರೋಹವಾಗಿದೆ. ಸಾಮಾಜಿಕ ನ್ಯಾಯ ಒದಗಿಸುವ ಘೋಷಣೆ ಮಾಡುವ ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುವುದು ಸರಿಯೆ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಅನುದಾನ ವರ್ಗಾಯಿಸುವ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಮುಖ್ಯಮಂತ್ರಿರವರೂ ಸೇರಿದಂತೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್ ಸದಸ್ಯರನ್ನು ಕಂಡಲ್ಲಿ ಘೇರಾವು ಹಾಕುವ ಆಂದೋಲನವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಗ್ಯಾರಂಟಿ ಇರಲಿ: ಪಂಚ ಗ್ಯಾರಂಟಿ ಯೋಜನೆಗಳು ಎಲ್ಲಾ ವರ್ಗದ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಮುಖ್ಯವಾಹಿನಿಗೆ ಸೇರಿಸಿಕೊಳ್ಳುವ ಉತ್ತಮ ಯೋಜನೆಯಾಗಿದ್ದು ಅದನ್ನು ಮುಂದುವರೆಸಬೇಕು, ಈ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಸಂಗ್ರಹಕ್ಕೆ ರಾಜ್ಯ ಸರ್ಕಾರ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕೆಂದು ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಸ್ವಾಗತ:  ಕಳೆದ ಆರ್ಥಿಕ ವರ್ಷಕ್ಕಿಂತ ಈ ಬಾರಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಗೆ 3,900 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿರುವುದು, ಯುಪಿಎಸ್‌ಪಿ ತರಬೇತಿ ಪಡೆಯುವ ಎಸ್‌ಸಿ, ಎಸ್ಟಿ ಅಭ್ಯರ್ಥಿಗಳಿಗೆ ಮಾಸಿಕ 10 ಸಾವಿರ ರೂ.ಗಳ ಪ್ರೋತ್ಸಾಹಧನವನ್ನು 15 ಸಾವಿರ ರೂ.ಗಳಿಗೆ ಏರಿಕೆ ಮಾಡಿರುವುದು, ಸ್ನಾತಕೋತ್ತರ ಶಿಕ್ಷಣದ ಎಸ್‌ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲು 91 ಕೋಟಿ ರೂ. ಅನುದಾನ ಒದಗಿಸಿರುವುದನ್ನು ಅವರು ಸ್ವಾಗತಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere dc ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ; ಗಂಗಾಧರಸ್ವಾಮಿ ಜಿ.ಎಂ ಅಧಿಕಾರ ಸ್ವೀಕಾರ
Next Article davanagere ಆಸ್ತಿ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihar | ಸಂವಿಧಾನಕ್ಕೆ ಅಗೌರವ ಸೂಚಿಸಿರುವ ಉಡುಪಿ ಪೇಜಾವರ ವಿರುದ್ದ ಕ್ರಮಕ್ಕೆ ಒತ್ತಾಯ

ಹರಿಹರ (Harihar) : ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ಎಂದು ಹೇಳಿಕೆ ನೀಡುವ ಮೂಲಕ ಈಗಿರುವ ಶ್ರೇಷ್ಠ ಸಂವಿಧಾನಕ್ಕೆ ಅಗೌರವ…

By Dinamaana Kannada News

ವಿಧಾನ ಪರಿಷತ್ ಚುನಾವಣೆ : ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 92.93 ರಷ್ಟು ಮತದಾನ

ದಾವಣಗೆರೆ,ಜೂನ್.03 :   ರಾಜ್ಯ ವಿಧಾನ ಪರಿಷತ್‍ನ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 54 : ಅವರು ಮತ್ತೆ ಬರಬಹುದು

Kannada News | Sanduru Stories | Dinamaana.com | 14-06-2024 ಗುಡಿಸಲು ಹಾಕ್ಕೊಂಡು ನೆಲೆ ಕಂಡುಕೊಂಡರು (Sanduru Stories)…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?