Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜನಸಂಖ್ಯಾ ಹೆಚ್ಚಳ ಅಭಿವೃದ್ದಿಗೆ ಮಾರಕ : ಶಾಸಕ ಬಿ.ಪಿ.ಹರೀಶ್‌
ತಾಜಾ ಸುದ್ದಿ

ಜನಸಂಖ್ಯಾ ಹೆಚ್ಚಳ ಅಭಿವೃದ್ದಿಗೆ ಮಾರಕ : ಶಾಸಕ ಬಿ.ಪಿ.ಹರೀಶ್‌

Dinamaana Kannada News
Last updated: July 12, 2024 4:46 pm
Dinamaana Kannada News
Share
Health Department-Davanagere
ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ
SHARE

ಹರಿಹರ:  ಜನಸಂಖ್ಯಾ ಹೆಚ್ಚಳ ಅಭಿವೃದ್ದಿಗೆ ಮಾರಕವಾಗಲಿದೆ, ನಿಯಂತ್ರಣ ಮಾಡದಿದ್ದರೆ ಭವಿಷ್ಯದಲ್ಲಿ ಹಲವಾರು ಸಮಸ್ಯೆಗಳಿಗೆ ತುತ್ತಾಗಬೇಕಾಗುತ್ತದೆ ಎಂದು ಶಾಸಕ ಬಿ.ಪಿ.ಹರೀಶ್ ಕಳವಳ ವ್ಯಕ್ತ ಪಡಿಸಿದರು.

ಆರೋಗ್ಯ ಇಲಾಖೆಯಿಂದ ನಗರದ ಹರ್ಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನಸಂಖ್ಯಾ ಹೆಚ್ಚಳದ ಪರಿಣಾಮ ದೇಶದಲ್ಲಿ ವಸತಿ,  ಶಿಕ್ಷಣ ಮತ್ತು ಇತರೆ ಸಂಪನ್ಮೂಲಗಳ ಕೊರತೆ. ವಾಯು. ಜಲ ಮತ್ತು ಶಬ್ದ ಮಾಲಿನ್ಯ. ನಗರಗಳಲ್ಲಿ ಕೊಳಚೆ ಪ್ರದೇಶಗಳ ಉಲ್ಬಣ,   ಸಾರಿಗೆ ವ್ಯವಸ್ಥೆಯಲ್ಲಿ ಒತ್ತಡ ಹೆಚ್ಚಾಗುತ್ತದೆ, ಇವುಗಳಿಂದ ಮುಕ್ತಿ ಹೊಂದಲು ಜನಸಂಖ್ಯಾ ನಿಯಂತ್ರಣ ಪರಿಹಾರ ಎಂದರು.

ಆರೋಗ್ಯ ಇಲಾಖೆಯೊಂದಿಗೆ ಇತರೆ ಇಲಾಖೆಯ  ಸಹಯೋಗದೊಂದಿಗೆ ಕುಟುಂಬ ಕಲ್ಯಾಣ ಪದ್ಧತಿಗಳ ಬಗ್ಗೆ ಅರಿವು ಮೂಡಿಸುವುದರ ಮೂಲಕ ಜನಸಂಖ್ಯೆಯಲ್ಲಿ ಮಾಡಿ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಒಂದು ಬಂಡಿಯ ಎರಡು ಗಾಲಿಗಳಿದ್ದಂತೆ. ಒಂದು ಗಾಲಿ ಕುಂಠಿತಗೊಂಡರೆ, ಇನ್ನೊಂದು ಗಾಲಿಯಿಂದ ಬಂಡಿಯು ಸಾಗುವುದು ಆಸಾಧ್ಯ, ಆದ್ದರಿಂದ ಪ್ರತಿಯೊಂದು ಮಗುವಿಗೆ ಶಿಕ್ಷಣದ ಅವಶ್ಯಕತೆ ಇದೆ. ಶಿಕ್ಷಣ ಪಡೆದರೆ ತನ್ನಷ್ಟಕ್ಕೆ ತಾನೇ ಜನಸಂಖ್ಯೆ ನಿಯಂತ್ರಣವಾಗುತ್ತದೆ ಎಂದು ಹೇಳಿದರು.

ತಾಲೂಕು ಆರೋಗ್ಯ ಅಧಿಕಾರಿ  ಡಾ. ಅಬ್ದುಲ್ ಖಾದರ್,  ಮಾತನಾಡಿ ಜನಸಂಖ್ಯೆ ನಿಯಂತ್ರಿಸಲು ಮಹಿಳೆಯರಿಗೆ ನುಂಗುವ ಮಾತ್ರೆಗಳು. ವಂಕಿ ಅಳವಡಿಕೆ. ಅಂತರ ಚುಚ್ಚುಮದ್ದು. ಸಂತಾನ ನಿರೋಧ ಶಸ್ತ್ರ ಚಿಕಿತ್ಸೆ. ಪುರುಷರಿಗಾಗಿ ಸಂತಾನ ಹರಣ ಶಸ್ತ್ರಚಿಕಿತ್ಸೆ  ತಾತ್ಕಾಲಿಕ ಹಾಗೂ ಶಾಶ್ವತ ವಿಧಾನದ ಬಗ್ಗೆ ಮಾಹಿತಿ ನೀಡಿದರು.

ಉಪನ್ಯಾನಕ ಡಾ.ತಿಪ್ಪೇಸ್ವಾಮಿ ಮಾತನಾಡಿ, ಭಾರತದ ಜನಸಂಖ್ಯೆ ಹೆಚ್ಚಳಕ್ಕೆ ಆಚಾರ ಸಾಂಪ್ರದಾಯಗಳು  ಕಾರಣವಾಗಿದೆ. ಶಿಕ್ಷಣ ಆಚಾರ ಸಾಂಪ್ರದಾಯಗಳು  ಒಟ್ಟೊಟ್ಟಿಗೆ ಸಾಗಿದರೆ ಜನಸಂಖ್ಯೆ ನಿಯಂತ್ರಣವಾಗುತ್ತದೆ. ಆದರೆ ಶಿಕ್ಷಣ. ಆಚಾರ ಸಾಂಪ್ರದಾಯಗಳು ವಿರುದ್ಧ ದಿಕ್ಕಿನಲ್ಲಿ ನಡೆದರೆ ತನ್ನಷ್ಟಕ್ಕೆ ತಾನೆ ಜನಸಂಖ್ಯೆ ಹೆಚ್ಚಳಕ್ಕೆ ಕಾರಣೀಭೂತವಾಗುತ್ತದೆ.

ಭಾರತದ ಜನಸಂಖ್ಯೆಯು ಚೀನಾ ದೇಶದ ಜನಸಂಖ್ಯೆಗಿಂತ 16.852.250 ಹೆಚ್ಚಳವಾಗಿದೆ. ಚೀನಾ ದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಕಡಿವಾಣ ನೀಡಿ ಜನಸಂಖ್ಯಾ ನಿಯಂತ್ರಣವನ್ನು ಮಾಡಿದೆ. ಅವರ ಮಾದರಿಯಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಸರ್ಕಾರಗಳು ನಿಯಮವಳಿಯನ್ನು ಮಾಡಿದರೆ ಜನಸಂಖ್ಯೆಯ ನಿಯಂತ್ರಣ ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಆರಂಭದಲ್ಲಿ ನಗರಸಭಾ ಆವರಣ ದಿಂದ ಜನಸಂಖ್ಯಾ ಸ್ಪೋಟ ಜಾಗೃತಿ ಜಾಥಾಕ್ಕೆ ಶಾಸಕರು ಚಾಲನೆ ನೀಡಿದರು. ಜಾಥಾವು ಹಳೇ ಪಿ.ಬಿ. ರಸ್ತೆ, ಗಾಂಧಿ ವೃತ್ತ, ಹರಪನಹಳ್ಳಿ ರಸ್ತೆ ಮೂಲಕ ಸಾಗಿ ಹರ್ಲಾಪುರದ ಪ್ರಾಥಮಿಕ ಆರೋಗ್ಯಕ್ಕೆ ಬಂದು ತಲುಪಿತು.

ಕಾರ್ಯಕ್ರಮದಲ್ಲಿ   ತಾಪಂ ಇಒ ರಾಮಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಶೀದಾ ಬಾನು,  ಎಸೈ ವಿಜಯ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ಉಮ್ಮಣ್ಣ, ಕ್ಷೇತ್ರ ಆರೋಗ್ಯಶಿಕ್ಷಣಾಧಿಕಾರಿ ನಾಗರಾಜ್, ಡಾ.ಕಲ್ಲೇಶ್, ಶಶಿಕಾಂತ್ ಹಾಗೂ ಇತರರಿದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article State Government Employees Association Davanagere 7 ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಮನವಿ
Next Article CRIME NEWS DAVANAGERE ಮನೆಗಳ್ಳತನ : ಅರೋಪಿತರ ಬಂಧನ, 32.85 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಎಸ್ ಎಸ್ ಹಿರೇಮಠ ಎಂಬ ಕ್ರಾಂತಿಕಾರಿ ಮೇಷ್ಟ್ರು ನೆನೆಯುತ್ತಾ……

ಬಳ್ಳಾರಿ ಜಿಲ್ಲೆಯಲ್ಲಿ ಬಂಡಾಯದ ಧ್ವನಿ ಹುಟ್ಟು  ಹಾಕಿ ,ನಾಡಿನಾದ್ಯಂತ ಕ್ರಾಂತಿ ಪಸರಿಸಿದ ಎಸ್ ಎಸ್ ಹಿರೇಮಠ ಎಂಬ ಕ್ರಾಂತಿಕಾರಿ ಮೇಷ್ಟ್ರು…

By Dinamaana Kannada News

DAVANAGERE NEWS | ವರದಕ್ಷಿಣೆ ಸಾವು ಪ್ರಕರಣ: ಆರೋಪಿಗೆ 07 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere ): ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಪತ್ನಿ ಸಾವಿಗೆ ಕಾರಣರಾದ ಪತಿ ಮಂಜುನಾಥಗೆ  7 ವರ್ಷ ಕಠಿಣ…

By Dinamaana Kannada News

ವರ್ಲ್ಡ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ ಗೆ ಭೂಲಕ್ಷ್ಮಿ ಆಯ್ಕೆ

ದಾವಣಗೆರೆ . ನೇಪಾಳದ ರಂಗಸಾಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ  ಎಸ್.ಬಿ.ಕೆ.ಎಫ್. 9ನೇ ಅಂತರಾಷ್ಟ್ರೀಯ ಕ್ರೀಡಾಕೂಟ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ  ದಾವಣಗೆರೆಯ ಜಿಲ್ಲಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?