Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಾಷ್ಟ್ರೀಯ ಲೋಕ ಅದಾಲತ್ : ರಾಜಿ, ಸಂಧಾನದಲ್ಲಿ ಒಂದಾದ 15 ಕ್ಕೂ ಹೆಚ್ಚಿನ ಜೋಡಿಗಳು
ತಾಜಾ ಸುದ್ದಿ

ರಾಷ್ಟ್ರೀಯ ಲೋಕ ಅದಾಲತ್ : ರಾಜಿ, ಸಂಧಾನದಲ್ಲಿ ಒಂದಾದ 15 ಕ್ಕೂ ಹೆಚ್ಚಿನ ಜೋಡಿಗಳು

Dinamaana Kannada News
Last updated: July 13, 2024 5:10 pm
Dinamaana Kannada News
Share
Davanagere
ರಾಷ್ಟ್ರೀಯ ಲೋಕ ಅದಾಲತ್
SHARE

ದಾವಣಗೆರೆ ಜು.13 :   ಲೋಕ ಅದಾಲತ್‌ ಪ್ರಕ್ರಿಯೆ ಅತಿ ಸರಳ, ಇಲ್ಲಿ ಏನೆ ವ್ಯಾಜ್ಯ ಇದ್ದರೂ ರಾಜಿಗೆ ಮೊದಲ ಆದ್ಯತೆ. ನ್ಯಾಯಾಧೀಶರು ಮತ್ತು ನುರಿತ ವಕೀಲರು ಲೋಕ ಅದಾಲತ್ ಪೀಠದಲ್ಲಿ ಕುಳಿತು ವಾದಿ-ಪ್ರತಿವಾದಿಗಳನ್ನು ಕೂರಿಸಿಕೊಂಡು ಅವರ ಮನವೊಲಿಸಿ ವ್ಯಾಜ್ಯಕ್ಕೆ ಅವರ ಸಮಕ್ಷಮದಲ್ಲೇ ಪರಿಹಾರ ಕಂಡುಕೊಳ್ಳುತ್ತಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ.ಎನ್ ಹೆಗಡೆ ತಿಳಿಸಿದರು.

ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಮಾಹಿತಿ ನೀಡಿದರು.

ಕೌಟುಂಬಿಕ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯಾರ್ಥದಿಂದ ಸಮಯ ಉಳಿತಾಯವಾಗಿ ಶೀಘ್ರ ನ್ಯಾಯದಾನ ಸಿಗಲಿದೆ. ಕೌಟುಂಬಿಕ ನ್ಯಾಯಾಲಯದಲ್ಲಿ  ಕಕ್ಷಿದಾರರ ಪರವಾಗಿ ಪ್ರತಿನಿಧಿಸುವ ವಕೀಲರು ಮತ್ತು ಸಂಧಾನಗಾರರು  ಹಾಗೂ ಎಲ್ಲರ ಶ್ರಮದಿಂದ ಇಲ್ಲಿಯವರೆಗೆ ಸುಮಾರು 15 ಜೋಡಿ ಗಂಡ, ಹೆಂಡತಿಯರು ಮರು ಹೊಂದಾಣಿಕೆ ಮಾಡಿಕೊಂಡು ಸಹಜೀವನ ನಡೆಸಲು ಸಿದ್ದರಾಗಿದ್ದಾರೆ, ಈ ಸಂಖ್ಯೆ ಇನ್ನೂ ಕೂಡ ಹೆಚ್ಚುವ ಸಂಭವ ಇದೆ. ಇದರಿಂದ ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ನೀಡಬಹುದಾಗಿದೆ ಎಂದರು.

ಕೆಲವು ಪಕ್ಷಗಾರರಿಗೆ ನಾವು ಏಕೆ ಪ್ರಕರಣ ಬಗೆಹರಿಸಬೇಕು ಎಂಬ ಜಿದ್ದಿರುತ್ತದೆ. ಆ ಜಿದ್ದಾಜಿದ್ದಿಯನ್ನು ಮರೆತು ಇಲ್ಲಿಗೆ ಬಂದು ತಮ್ಮ ಪ್ರಕರಣಗಳನ್ನು ಬಗೆಹರಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಮನುಷ್ಯನ ಬದುಕಿನಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿಂದ ವ್ಯಾಜ್ಯಗಳು ಸಂಭವಿಸುವುದು ಸಹಜ. ಸಣ್ಣ ಅವಘಡಗಳನ್ನು ದೊಡ್ಡದು ಮಾಡದೆ,  ಸುಖ ಜೀವನ ನಡೆಸುವುದೇ ಜೀವನ ಎಂದು ತಿಳಿಸಿದರು.

5 ರಿಂದ 6 ಸಾವಿರದಷ್ಟು  ಪ್ರಕರಣಗಳನ್ನು ಇತ್ಯರ್ಥ ಮಾಡುವ ಗುರಿ ಹೊಂದಿದ್ದು ಈಗಾಗಲೇ 4800 ಪ್ರಕರಣಗಳನ್ನು ಇಲ್ಲಿಯವರೆಗೆ ಬಗೆಹರಿಸಲಾಗಿದೆ  ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ್ ಮಾತನಾಡಿ, ವಿವಾಹ ಅಂದರೆ ನಮ್ಮ ಸಂಬಂಧಿಕರು, ಗೆಳೆಯರು ,ಆತ್ಮೀಯರು ಹಾಗೂ ನೂರಾರು ಜನರು ಬಂದು ಗಂಡ ಹೆಂಡತಿ ಚೆನ್ನಾಗಿರಿ, ನಿಮ್ಮ ಬಾಳು ಸಂತೋಷದಿಂದಿರಲಿ, ನಾಳೆ ನಿಮ್ಮ ಮಧ್ಯೆ ಏನಾದರೂ ಸಮಸ್ಯೆ ಬಂದಲ್ಲಿ ನಮ್ಮನ್ನು ಭೇಟಿಯಾಗಿ ನಮ್ಮ ಅನುಭವಗಳನ್ನು ಕೇಳಿ ತಿಳಿದುಕೊಳ್ಳಿ ಎಂದು ಅರಸಿ, ಹಾರೈಸಿ ಅವರನ್ನು ಕಳಿಸುವುದೇ ವಿವಾಹ ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ್.ಎಲ್.ಹೆಚ್ ಮಾತನಾಡಿ, ನಮ್ಮಲ್ಲಿ ಬರುವಂತಹ ಪ್ರಕರಣಗಳ ಪಕ್ಷಗಾರರ ಮನವೊಲಿಸಿ ಸಂಧಾನಕ್ಕೆ ವಕೀಲರೆ  ಸಜ್ಜುಗೊಳಿಸುವರು. ಈ ಲೋಕ ಆದಾಲತ್ ನಲ್ಲಿ  ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳಲ್ಲಿ ಅವರ ಪಾತ್ರವೂ ಮುಖ್ಯವಾಗಿದೆ ಎಂದರು.

ಪ್ರಕರಣಗಳು ಮುಗಿದರೂ ಸಾಮಾಜಿಕ ಜವಾಬ್ದಾರಿಯಿಂದ ಮತ್ತು ಸಮಾಜದಲ್ಲಿ ಶಾಂತಿ, ಸೌಹಾರ್ಧತೆ ಕಾಪಾಡುವ ನಿಟ್ಟಿನಲ್ಲಿ ವಕೀಲರು ತಮ್ಮ ಪ್ರಕರಣಗಳನ್ನು ತ್ಯಾಗ ಮಾಡಿ ಜೋಡಿಗಳನ್ನು ಒಂದು ಮಾಡಿಸುವಂತಹ ಗುರುತರ ಜವಾಬ್ದಾರಿ ವಕೀಲರ ಮೇಲಿರುತ್ತದೆ ಎಂದು ತಿಳಿಸಿದರು.

ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಣ್ಣಯ್ಯನವರ್ ಎಂ.ಹೆಚ್, ಕೌಟುಂಬಿಕ ನ್ಯಾಯಾಧೀಶರಾದ ಶಿವಪ್ಪ ಗಂಗಪ್ಪ ಸಲಗೇರಿ, ಎರಡನೇ ಸತ್ರ ಜಿಲ್ಲಾ  ನ್ಯಾಯಾಧೀಶರಾದ ಪ್ರವೀಣ್ ಕುಮಾರ್ ಎನ್, ಮಕ್ಕಳ ಶಾಲೆಯ ನ್ಯಾಯಾಧೀಶರಾದ ಶ್ರೀರಾಮ್ ಹೆಗಡೆ, ವಕೀಲ ಸಂಧಾನಕಾರರಾದ ಭಾಗ್ಯಲಕ್ಷ್ಮಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

TAGGED:Davangere Newsdinamaana.comKannada NewsRashtriya Lok Adalatಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂರಾಷ್ಟ್ರೀಯ ಲೋಕ ಆದಾಲತ್‌
Share This Article
Twitter Email Copy Link Print
Previous Article davanagere ಹರಿಹರ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
Next Article Davangere District ಬ್ಯಾಂಕುಗಳು ಖಾಸಗೀಕರಣವಾದರೆ ದೇಶಾಭಿವೃದ್ಧಿ : ಡಾ.ಜೆ.ಆರ್.ಷಣ್ಮುಖಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಸವಳಂಗ ಹೊಸಕೆರೆಯಲ್ಲಿ ಪತ್ತೆಯಾದ ಪುರಾತನ ಶಿಲ್ಪ

ಹೊನ್ನಾಳ್ಳಿ :  ಸವಳಂಗ(ನ್ಯಾಮತಿ) ಗ್ರಾಮದ ಹೊಸಕೆರೆಯಲ್ಲಿ ಪುರಾತನ ಶಿಲಾ ಶಿಲ್ಪ ಪತ್ತೆಯಾಗಿದೆ ಎಂದು ಇತಿಹಾಸ ತಜ್ಞ ಬಾಲಕೃಷ್ಣ ಹೆಗಡೆ ತಿಳಿಸಿದ್ದಾರೆ.…

By Dinamaana Kannada News

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

ದಾವಣಗೆರೆ (Davanagere) :  ಜಿಲ್ಲೆಯ ವಿವಿದೆಡೆ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಹಲವೆಡೆ ಕಿರಿದಾದ ರಸ್ತೆ ಹಾಗೂ ಅಂಡರ್…

By Dinamaana Kannada News

Davanagere news | ಆಟೋದಲ್ಲಿ ಮರೆತು ಹೋಗಿದ್ದ ಅಭರಣ ಹಿಂದಿರುಗಿಸಿದ ಪೊಲೀಸರು

ದಾವಣಗೆರೆ  (Davanagere) : ಆಟೋದಲ್ಲಿ  ಕಳೆದುಕೊಂಡಿದ್ದ ಬಂಗಾರ & ಬೆಳ್ಳಿಯ ಆಭರಣಗಳನ್ನು ಪತ್ತೆ ಮಾಡುವಲ್ಲಿ ಬಸವನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಹರಿಹರದ ನವೀನತಾಜ್…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?