Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೌಢ್ಯ ನಿರ್ಮೂಲನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ಮೌಢ್ಯ ನಿರ್ಮೂಲನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: July 18, 2024 5:26 pm
Dinamaana Kannada News
Share
davanagere
ಶಾಸಕ ಕೆ.ಎಸ್.ಬಸವಂತಪ್ಪ
SHARE

ದಾವಣಗೆರೆ, ಜು.18:  ಚಿತ್ರದುರ್ಗ ನಗರದಲ್ಲಿ ಜು.20ರಂದು 1.30ಕ್ಕೆ ಎಚ್.ಆಂಜನೇಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟಿ ಹಾಗೂ ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವಂತಪ್ಪ ಅವರು, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾಗೂ ಟ್ರಸ್ಟ್ ಅನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು.

ಶೋಷಣೆ, ದೌರ್ಜನ್ಯ, ಮೌಢ್ಯ ನಿರ್ಮೂಲನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ ಎಂಬ ಈ ಮಾತನ್ನು ಅನೇಕ ಸಂತರು, ದಾರ್ಶನಿಕರು, ಚಿಂತಕರು ಸದಾ ಹೇಳಿಕೊಂಡು ಬಂದಿದ್ದಾರೆ. ಅದರಲ್ಲೂ ಸ್ವತಃ ನೋವುಂಡವರ ಅನುಭವದ ಮಾತು ಇದೇ ಆಗಿದೆ. ಆದ್ದರಿಂದ ನಾವೆಲ್ಲರೂ ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ನೀಡಬೇಕಾಗಿದೆ ಎಂದು ಹೇಳಿದರು.

 

ಸಮ ಸಮಾಜದ ಪರಿಕಲ್ಪನೆಯ ಹರಿಕಾರ ಬಸವಣ್ಣನ ನೇತೃತ್ವದ ವಚನ ಚಳವಳಿ ಹಾಗೂ ಜಗತ್ತಿನ ಮೇರು ವಿದ್ವಾಂಸ ಡಾ.ಬಿ.ಆರ್.ಅಂಬೇಡ್ಕರ್ ಸೇರಿ ನೂರಾರು ದಾರ್ಶನಿಕರ ಏಕೈಕ ಸಂದೇಶ ಶಿಕ್ಷಣ, ಜ್ಞಾನದಿಂದ ಮಾತ್ರ ಶೋಷಣೆ ಮುಕ್ತ ಸಮಾಜ, ಸಮಗ್ರ ಪ್ರಗತಿ ಸಾಧ್ಯ ಎಂಬುದಾಗಿದೆ. ಆದ್ದರಿಂದ ನಾವೆಲ್ಲರೂ ಈ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕಿದೆ ಎಂದು ತಿಳಿಸಿದರು.

 

ದಾರ್ಶನಿಕರ ಈ ಆಶಯವನ್ನು ಸಮರ್ಥವಾಗಿ ಅನುಷ್ಠಾನಕ್ಕೆ ತರಲು ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಅವರ 2013-18 ಅವಧಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗದ ಖಾತೆ ಸಚಿವರಾಗಿದ್ದ ಎಚ್.ಆಂಜನೇಯ ಶ್ರಮಿಸಿದ್ದು ಸದಾ ಸ್ಮರಣೀಯ ಎಂದರು.

 

ಅರ್ಜಿ ಸಲ್ಲಿಸಿದ ಎಲ್ಲರಿಗೂ ಗುಣಮಟ್ಟದ ಹಾಸ್ಟೆಲ್ ಸೌಲಭ್ಯ, ಹೋಬಳಿಗೊಂದು ವಸತಿ ಶಾಲೆ, ಇಂದಿರಾಗಾಂಧಿ, ಮೊರಾರ್ಜಿ ದೇಸಾಯಿ ನಿರ್ಮಾಣ….. ಹೀಗೆ ವಿವಿಧ ರೀತಿ ಕಾರ್ಯಕ್ರಮದ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಗೆ ಮುನ್ನುಡಿ ಬರೆದ ಎಚ್.ಆಂಜನೇಯ ಅವರ ಬದ್ಧತೆ, ಕಾಳಜಿ ಮಾದರಿ ಆಗಿದೆ ಎಂದು ತಿಳಿಸಿದರು.

 

ದೇಶದಲ್ಲಿಯೇ SCSP, TSP ಕಾಯ್ದೆ ಜಾರಿ ಮೂಲಕ ಗಮನ ಸೆಳೆದ ಎಚ್.ಆಂಜನೇಯ ಅವರ ಬದುಕೇ ಸದಾ ಸಂಘರ್ಷದ ಹಾದಿಯಲ್ಲಿ ಸಾಗಿ ಉನ್ನತ ಸ್ಥಾನಕ್ಕೇರಿರುವುದು ನೊಂದ ಜನರ ಪಾಲಿಗೆ ಉತ್ಸಹಕ ಚಿಲುಮೆ ಆಗಿದೆ ಎಂದರು.

 

ದಾವಣಗೆರೆ ಗಾಂಧಿ ನಗರದಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಪೌರ, ರೈತ, ಕಾರ್ಮಿಕ, ದೇವದಾಸಿ ಸೇರಿ ಅನೇಕ ಕ್ಷೇತ್ರದಲ್ಲಿನ ನೊಂದ ಜನರ ಧ್ವನಿಯಾಗಿ ಹೋರಾಟದ ಮೂಲಕ, ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತನಾಗಿ ಐದು ವರ್ಷಗಳ ಕಾಲ ಸಚಿವರಾಗಿ ಮಾಡಿದ ಕೆಲಸಗಳು ಅದ್ವಿತೀಯ ಆಗಿವೆ ಎಂದು ಹೇಳಿದರು.

 

ಐದು ದಶಕಗಳ ಕಾಲದ ಅವರ ಸಾಮಾಜಿಕ, ರಾಜಕೀಯ ಬದುಕಿ ಅನೇಕ ಸಂಕಷ್ಟಗಳನ್ನು ಕಂಡಿದ್ದರೂ ಅವರ ಸಮಾಜಮುಖಿ ಚಿಂತನೆ, ಕಾರ್ಯಗಳಿಗೆ ಸಣ್ಣ ಧಕ್ಕೆಯೂ ಎದುರಾಗಿಲ್ಲದಿರುವುದು ವಿಸ್ಮಯ ಮತ್ತು ಮಾದರಿ ಆಗಿದೆ ಎಂದು ತಿಳಿಸಿದರು.

 

ಸದಾ ಶಿಕ್ಷಣದ ಪ್ರಗತಿಗೆ ತುಡಿಯುವ ಎಚ್.ಆಂಜನೇಯ ಅವರ ಮನಸ್ಸು, ಬಸವ ತತ್ವವನ್ನು ಉಸಿರಾಗಿಸಿಕೊಂಡು, ಅಂಬೇಡ್ಕರ್ ಅವರ ಆಶಯಗಳನ್ನು ಅನುಷ್ಠಾನಕ್ಕೆ ತರಲು ಚಿಂತಿಸುವ, ಅದರಂತೆ ಕಾರ್ಯೊಪ್ರವೃತ್ತರಾಗುವ ರೀತಿ ಅಚ್ಚರಿ ಆಗಿದೆ ಎಂದರು.

 

ಆದ್ದರಿಂದ ಅವರ ಹೆಸರಿನಲ್ಲಿ ಎಚ್.ಆಂಜನೇಯ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆ ಮಾಡಿ, ಟ್ರಸ್ಟ್ ಮೂಲಕ ಅವರ ಆಶಯದಂತೆ ಶಿಕ್ಷಣ ಕ್ಷೇತ್ರಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

 

ಮೊದಲ ಹಂತದಲ್ಲಿ ಮಾದಿಗ ಸಮುದಾಯದ ಚಿತ್ರದುರ್ಗ-ದಾವಣಗೆರೆ ಜಿಲ್ಲೆಯ ಪ್ರತಿಭಾನ್ವಿತ ಶೇ. 85 ಕ್ಕಿಂತಲೂ ಹೆಚ್ಚು ಅಂಕ ಗಳಿಸಿದ ಎಸ್ಸೆಸ್ಸೆಲ್ಸಿ ಯಲ್ಲಿ 35, ಪಿಯುಸಿಯ 33 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ತೀರ್ಮಾನಿಸಲಾಗಿದೆ.  ಇದರಲ್ಲಿ ಅತ್ಯಂತ ಕಡುಬಡತನದ 6 ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಲ್ಯಾಪಟ್ಯಾಪ್ ನೀಡಲಾಗುತ್ತದೆ. ಉಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಬ್ಯಾಗ್, ನೋಟಬುಕ್, ಪ್ರಮುಖ ಕೃತಿಗಳು ಸೇರಿ ಕಲಿಕಾ ಸಾಮಗ್ರಿ ನೀಡಿ, ಪದಕ, ಮ್ಯೂಮೆಂಟ್, ಶಾಲು, ಹಾರದೊಂದಿಗೆ ಸನ್ಮಾನಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ರಾಜ್ಯಮಟ್ಟದಲ್ಲಿ ಪ್ರತಿಭಾ ಪುರಾಸ್ಕರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

 

ಕಾರ್ಯಕ್ರಮ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದ್ದು, ಮೊದಲಿಗೆ ವಿದ್ಯಾರ್ಥಿಗಳು, ಪೋಷಕರಿಗೆ ಸಿಹಿಯೂಟ, ಬಳಿಕ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ಭೂಮಿತಾಯಿ ಬಳಗದಿಂದ ವಾದ್ಯಗೋಷ್ಠಿ, ಮೈಸೂರು ನಗಾರಿ ಮಂಜು  ನೇತೃತ್ವ ತಂಡದಿಂದ ನಗಾರಿ ಕುಣಿತ ನಡೆಯಲಿದೆ ಎಂದರು.

 

ಚಿತ್ರದುರ್ಗ ಜಿಲ್ಲಾ ಉಸ್ತವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಎಂಎಲ್ಸಿ ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಲಿಡ್ಕರ್ ಅಧ್ಯಕ್ಷ ಮುಂಡುರಗಿ ನಾಗರಾಜ್ ಸೇರಿ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

 

ಈ ಕಾರ್ಯಕ್ರಮ ಹಾಗೂ ಟ್ರಸ್ಟ್ ಸ್ಥಾಪನೆ ಉದ್ದೇಶ ಶ್ರೀ ಎಚ್.ಆಂಜನೇಯ ಅವರ ಆಶಯಗಳನ್ನು ಅನುಷ್ಠಾನಕ್ಕೆ ತರುವಂತಹದ್ದಾಗಿದೆ. ಅದರಲ್ಲೂ ಶಿಕ್ಷಣ ಕ್ಷೇತ್ರದ ಮೂಲ‌ಕ ಎಲ್ಲ ವರ್ಗದ ವಿದ್ಯಾರ್ಥಿಗಳ ಬೆಳವಣಿಗೆಗೆ ಶ್ರಮಿಸಲಾಗುವುದು. ಈ ನಿಟ್ಟಿನಲ್ಲಿ ಇದು ಆರಂಭದ ಹೆಜ್ಜೆ ಆಗಿದೆ ಎಂದು ಹೇಳಿದರು.

 

ಸಮಾಜ ನಮಗೆ ಎಲ್ಲವನ್ನೂ ಕೊಟ್ಟಿದೆ, ಪ್ರತಿಯಾಗಿ ಸಮಾಜಕ್ಕೆ ನಾವು ಕೂಡ ಕೊಡುಗೆ ನೀಡುವ ಮೂಲಕ ಋಣ ತೀರಿಸಬೇಕೆಂಬುದು ಎಚ್.ಆಂಜನೇಯ ಅವರ ಆಶಯ. ಆದ್ದರಿಂದ ಅವರ ಹೆಸರಿನಲ್ಲಿ ಟ್ರಸ್ಟ್ ಅನ್ನು ಕುಟುಂಬದ ಸದಸ್ಯರೆಲ್ಲರೂ ಸೇರಿ ಸ್ಥಾಪಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಮಾಡಲಿದ್ದೇವೆ ಎಂದು ತಿಳಿಸಿದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಗ್ರಾಮೀಣ ಅಂಚೆ ಪಾಲಕ-ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
Next Article Davanagere District ತುಂಗಾ ಭದ್ರಾ ನದಿಯಲ್ಲಿ ಹೆಚ್ಚಿದ ನೀರಿನ ಹರಿವು : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪಾರ್ಶ್ವವಾಯು ತಡೆಗಟ್ಟಲು ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ :  ಡಾ. ವೀರಣ್ಣ ಗಡಾದ್

ದಾವಣಗೆರೆ.ಜುಲೈ. 22  :   ನರ ರೋಗಗಳಿಗೆ ಸಂಬಂಧಿಸಿದಂತೆ ಪಾರ್ಶ್ವವಾಯು ಕಾಯಿಲೆಯಿಂದ ಅನೇಕ ಜನರು ಸಾವನ್ನಪ್ಪಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ…

By Dinamaana Kannada News

JOB NEWS | ಜ. 24 ರಂದು ಉದ್ಯೋಗಮೇಳ

ದಾವಣಗೆರೆ ಜ.21 (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಇವರ ವತಿಯಿಂದ ಜ. 24 ರಂದು…

By Dinamaana Kannada News

ಮೇ 17 ರಂದು ದಾವಣಗೆರೆ “ಕ್ರಾಂತಿಕಾರಿ” ರಥಯಾತ್ರೆ

ದಾವಣಗೆರೆ (Davanagere) : ರಾಜಾದ್ಯಂತ ಕ್ರಾಂತಿಕಾರಿ ರಥಯಾತ್ರೆ ಮೂಲಕ ಜನರಲ್ಲಿ ಒಳಮೀಸಲಾತಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಕ್ರಾಂತಿಕಾರಿ ರಥಯಾತ್ರೆ ಮೇ…

By Dinamaana Kannada News

You Might Also Like

Davanagere
ಅಭಿಪ್ರಾಯ

ಬಡ ಸಾಹಿತಿಗಳ ಬದುಕು ಬವಣೆ:ಅಕ್ಷರ ಲೋಕದ ಆರ್ತನಾದ|ಲೇಖನ : ವಸುಪ್ರಿಯ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ:ಹೊಯ್ಸಳ ಮತ್ತು ಕಿತ್ತೂರು ರಾಣಿಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮದ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಪಾಲಿಕೆ ಆಯುಕ್ತರಿಂದ ಪೌರಕಾರ್ಮಿಕರಿಗೆ ಕಿರುಕುಳ: ವರ್ಗಾವಣೆಗೆ ಒತ್ತಾಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?