Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > ಹಾರಾರ್ ಜಾನರ್ ನ “ಹಗ್ಗ” ಚಿತ್ರದ ಟೀಸರ್  ಅನಾವರಣ
ಸಿನಿಮಾ

ಹಾರಾರ್ ಜಾನರ್ ನ “ಹಗ್ಗ” ಚಿತ್ರದ ಟೀಸರ್  ಅನಾವರಣ

Dinamaana Kannada News
Last updated: July 19, 2024 9:20 am
Dinamaana Kannada News
Share
cinema
ಹಗ್ಗ" ಚಿತ್ರದ ಟೀಸರ್ ಅನಾವರಣ ಕಾರ್ಯಕ್ರಮ
SHARE

ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ಹಾಗೂ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಛ, ವೇಣು ಪ್ರಮುಖಪಾತ್ರದಲ್ಲಿ ನಟಿಸಿರುವ “ಹಗ್ಗ” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರವೇರಿತು.

ಖ್ಯಾತ ನಿರ್ದೇಶಕ ಆರ್ ಚಂದ್ರು ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ಮಾಪಕರಾದ ಕೆ.ಮಂಜು,‌ ದಯಾಳ್ ಅವರು ಸೇರಿದಂತೆ ಅನೇಕ ಗಣ್ಯರು “ಹಗ್ಗ” ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಟೀಸರ್ ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ಅವಿನಾಶ್, ನಾನು ಮೂಲತಃ ಮ್ಯಕಾನಿಕಲ್ ಎಂಜಿನಿಯರ್. ಸಿನಿಮಾ ನಿರ್ದೇಶನ ನನ್ನ ಕನಸು. ಆ ಕನಸು “ಹಗ್ಗ” ಚಿತ್ರದ ಮೂಲಕ ಈಡೇರಿದೆ.

ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆದರೆ “ಹಗ್ಗ” ನೇ ನಮ್ಮ ಚಿತ್ರದ ನಾಯಕ. ಹಾರಾರ್ ಜಾನರ್ ನ ಚಿತ್ರವಾದರೂ, ಚಿತ್ರದಲ್ಲಿ ಒಂದು ಪ್ರಮುಖ ಸಂದೇಶ ಸಹ ಇದೆ ಎಂದರು.

ಚಿತ್ರಕ್ಕೆ ನಾನೇ ಕಥೆ‌ ಬರೆದು ನಿರ್ಮಾಣ ಮಾಡಿದ್ದೇನೆ.‌ ಅವಿನಾಶ್ ನಿರ್ದೇಶನ ಮಾಡಿದ್ದಾರೆ. ಟೀಸರ್ ಬಿಡುಗಡೆ ಬಂದಿರುವ ಎಲ್ಲಾ ಗಣ್ಯರಿಗು ಧನ್ಯವಾದ. ಈಗಾಗಲೇ ಮೋಷನ್ ಪೋಸ್ಟರ್ ಮೂಲಕ “ಹಗ್ಗ” ಜನರ ಮನಸ್ಸಿಗೆ ಹತ್ತಿರವಾಗಿದೆ. ಈಗ ಟೀಸರ್ ಬಿಡುಗಡೆಯಾಗಿದೆ.

ಆಗಸ್ಟ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ಮಾಪಕ ರಾಜ್ ಭಾರದ್ವಾಜ್ ತಿಳಿಸಿದರು.

ಅವಿನಾಶ್ ಅವರು ಚಿತ್ರದ ಕುರಿತು ಹೇಳಿದಾಗ ನನ್ನ ಪಾತ್ರ ಬಹಳ ಇಷ್ಟವಾಯಿತು. ನನ್ನನ್ನು “ಸೂಪರ್ ಹೀರೋ” ಎಂದು ತೋರಿಸಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ‌‌. ಆದರೆ ಒಳ್ಳೆಯ ಪಾತ್ರಕೊಟ್ಟ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಧನ್ಯವಾದ ಎಂದರು ನಟಿ ಅನು ಪ್ರಭಾಕರ್.

ನನ್ನದು ಈ ಚಿತ್ರದಲ್ಲಿ ಪತ್ರಕರ್ತೆಯ ಪಾತ್ರ. ಯಾವುದೋ ಒಂದು ವಿಷಯದ ಅನ್ವೇಷಣೆಗಾಗಿ ಹಳ್ಳಿಗೆ ಹೋಗುತ್ತೇನೆ. ಈ ಚಿತ್ರದಲ್ಲಿ ಜೀಪ್ ಕೂಡ ಡ್ರೈವ್ ಮಾಡಿದ್ದೇನೆ ಎಂದು ಹರ್ಷಿಕಾ ಪೂಣಚ್ಛ ತಿಳಿಸಿದರು.

ಇದು ನನ್ನ ಮೊದಲ ಚಿತ್ರ. ನಟನೆಗೆ ತಬಲನಾಣಿ ಅವರು ಬಹಳ ಸಹಾಯ ಮಾಡಿದರು. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ವೇಣು. ನಟ ತಬಲ ನಾಣಿ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ನಿರ್ಮಾಪಕ ರಾಜ್ ಭಾರದ್ವಾಜ್ ಅವರೆ “ಹಗ್ಗ” ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಅವರದು. ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ ಹಾಗೂ ಎನ್ ಎಂ ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಮನೋಹರ್ ಎಸ್ ಪಿ ಸಂಭಾಷಣೆ ಬರೆದಿದ್ದಾರೆ.

ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

TAGGED:Dinamana.comKannada NewsMovie newsಕನ್ನಡ ಸುದ್ದಿದಿನಮಾನ.ಕಾಂಸಿನಿಮಾ ಸುದ್ದಿ
Share This Article
Twitter Email Copy Link Print
Previous Article Haveri ಹಾವೇರಿ : ಮನೆ ಬಿದ್ದು ಮೂವರ ಸಾವು
Next Article Badhra dam Shivamogga ಮಳೆಯ  ಅಬ್ಬರ : ಭದ್ರಾ ಡ್ಯಾಂಗೆ 24 ಗಂಟೆಯಲ್ಲಿ 4 ಅಡಿ ನೀರು 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಲಾರಿ ಕಳ್ಳತನ : ಆರೋಪಿ ಸೆರೆ

ದಾವಣಗೆರೆ :  ಹರಿಹರದ ಕಡರನಾಯಕನ ಗ್ರಾಮದ ಇಟ್ಟಿಗೆ ಬಟ್ಟಿಯಲ್ಲಿ ನಿಲ್ಲಿಸಿದ್ದ ಲಾರಿ ಕಳ್ಳತನ ಮಾಡಿದ್ದ ಆರೋಪಿಯನ್ನು ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ.…

By Dinamaana Kannada News

ಪ್ಲಾಸ್ಟಿಕ್ ಕಪ್, ಮೇಣಲೇಪಿತ ಪೇಪರ್ ಲೋಟ, ಕ್ಯಾರಿ ಬ್ಯಾಗ್ ನಿಷೇಧ

ದಾವಣಗೆರೆ ಡಿ.26 (DAVANAGERE)- ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರಸ್ಥರು, ತಿಂಡಿ-ತಿನಿಸು ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ಕಾಫಿ, ಚಹಾ,…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ : ಒಂದೇ ಸಮುದಾಯಕ್ಕೆ ಆದ್ಯತೆ , ಡಿಎಸ್‌ಎಸ್‌ ಆಕ್ರೋಶ

ಹರಿಹರ (Harihara): ಛಲವಾದಿ ಜಾತಿಗೆ ಸೇರಿದವರನ್ನು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಆಯ್ಕೆಯಾಗುವಂತೆ ನೋಡಿಕೊಂಡಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪನವರು ತಕ್ಷಣ ರಾಜೀನಾಮೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್

By Dinamaana Kannada News
Davangere
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?