Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹೊರ ಗುತ್ತಿಗೆ ಪದ್ಧತಿ ರದ್ದುಗೊಳಿಸಲು ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ
ತಾಜಾ ಸುದ್ದಿ

ಹೊರ ಗುತ್ತಿಗೆ ಪದ್ಧತಿ ರದ್ದುಗೊಳಿಸಲು ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

Dinamaana Kannada News
Last updated: July 24, 2024 1:34 pm
Dinamaana Kannada News
Share
davanagere
ಮಾಯಕೊಂಡ ಶಾಸಕ ಕೆ.ಎಸ್‌.ಬಸವಂತಪ್ಪ
SHARE
ದಾವಣಗೆರೆ:   ದಾವಣಗೆರೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಡಿ ದರ್ಜೆ ನೌಕರರಿಗೆ ಗುತ್ತಿಗೆದಾರರು ಸರಿಯಾಗಿ ವೇತನ, ವಿವಿಧ ಸೌಲಭ್ಯ ನೀಡದೆ ಹಗಲು ದರೋಡೆ ಮಾಡುತ್ತಿದ್ದಾರೆ. ಈ ಹೊರ ಗುತ್ತಿಗೆ ರದ್ದು ಮಾಡಿ ಸರ್ಕಾರದಿಂದಲೇ ನೇರವಾಗಿ ಅವರ ಖಾತೆಗೆ ಪ್ರತಿ ತಿಂಗಳು ವೇತನ ಪಾವತಿ ಮಾಡಲು ಕ್ರಮ ತೆಗೆದುಕೊಳ್ಳಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್‌.ಬಸವಂತಪ್ಪ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಬುಧವಾರ ವಿಧಾನಸಭಾದಲ್ಲಿ ನಡೆದ ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ವಿಷಯ ಪ್ರಸ್ತಾಪ ಮಾಡಿದ ಶಾಸಕ ಕೆ.ಎಸ್.ಬಸವಂತಪ್ಪ, ಸರ್ಕಾರಿ ಆಸ್ಪತ್ರೆ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಎಪಿಎಂಸಿ ಹಾಗೂ ಆಸ್ಪತ್ರೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನೌಕರರಿಗೆ ಗುತ್ತಿಗೆದಾರರು ಪ್ರತಿ ತಿಂಗಳು ವೇತನ ಕೊಡುತ್ತಿಲ್ಲ. ಕಾರ್ಮಿಕ ಕಾಯ್ದೆ ಪ್ರಕಾರ ಪ್ರತಿ ನೌಕರನಿಗೆ 17500 ಸಾವಿರ ರೂ. ವೇತನ ಕೊಡಬೇಕು.
ಆದರೆ ಗುತ್ತಿಗೆ ಪಡೆದ ಗುತ್ತಿಗೆದಾರ ಮತ್ತು ಅಧಿಕಾರಿಗಳು ಶಾಮಿಲು ಆಗಿ  ಒಬ್ಬ ನೌಕರನಿಗೆ ತಿಂಗಳಿಗೆ 10 ಸಾವಿರ ಕೊಡುತ್ತಾರೆ. ಕೊಟ್ಟರೂ ಸಮಯಕ್ಕೆ ಸರಿಯಾಗಿ ಕೊಡುವುದಿಲ್ಲ. ಸರಿಯಾಗಿ ಇಎಸ್ ಐ, ಪಿಎಫ್ ಕಟ್ಟುತ್ತಿಲ್ಲ. ಇದರಿಂದ ನೌಕರರಿಗೆ ಅನಾರೋಗ್ಯದಿಂದ ಬಳಲಿ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಪರದಾಡುತ್ತಾರೆ. ಸಕಾಲಕ್ಕೆ ಚಿಕಿತ್ಸೆ ಸಿಗದೆ ಕೆಲವು ನೌಕರರು ಜೀವ ಕಳೆದುಕೊಂಡ ಉದಾಹರಣೆಗಳು ಇವೆ. ಇದು ದಾವಣಗೆರೆ ಜಿಲ್ಲೆಯದಷ್ಟೇ ಸಮಸ್ಯೆಯಲ್ಲ, ರಾಜ್ಯದ ವಿವಿಧ ಇಲಾಖೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪ್ರತಿಯೊಬ್ಬ ಡಿ ದರ್ಜೆ ನೌಕರರ ಸಮಸ್ಯೆಯಾಗಿದೆ. ಕೂಡಲೇ ಸರ್ಕಾರ, ಹಾರನಹಳ್ಳಿ ರಾಮಸ್ವಾಮಿ ಅವರ ವರದಿ ತಿರಸ್ಕರಿಸಿ,  ಹೊರ ಗುತ್ತಿಗೆ ರದ್ದು ಮಾಡಿ  ಕಾರ್ಮಿಕ ಕಾಯ್ದೆಯಂತೆ ವೇತನವನ್ನು  ನೇರವಾಗಿ ಅವರ ಖಾತೆಗೆ  ಪಾವತಿ ಮಾಡುವ ಕುರಿತು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಶಾಸಕ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿ ವಿಷಯಕ್ಕೆ ಶಾಸಕ ಮಹಾಂತೇಶ ಕೌಜಲಗಿ ಸೇರಿದಂತೆ ಬಹುತೇಕ ಶಾಸಕರು ಧ್ವನಿ ಗೂಡಿಸಿ, ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಗುತ್ತಿಗೆದಾರರು ಹೊರ ಗುತ್ತಿಗೆ ನೌಕರರಿಗೆ ವೇತನ, ಭವಿಷ್ಯ ನಿಧಿ, ಇಎಸ್ ಐ ಸೇರಿದಂತೆ ವಿವಿಧ ಸೌಲಭ್ಯ ಸರಿಯಾಗಿ ಕೊಡುತ್ತಿಲ್ಲ ಎಂಬ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸೂಕ್ತ ದಾಖಲೆ ಕೊಟ್ಟರೆ ಆ ಗುತ್ತಿಗೆದಾರನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಂದು ಸೊಸೈಟಿ ಸ್ಥಾಪಿಸಿ ಜಿಲ್ಲಾಧಿಕಾರಿಗಳ  ಮೂಲಕ ನೇರವಾಗಿ ಅವರ ಖಾತೆಗೆಗಳಿಗೆ ವೇತನ ಪಾವತಿ ಮಾಡುವ ವ್ಯವಸ್ಥೆ ಕಲ್ಪಿಸಲು ಚಿಂತನೆ ಮಾಡಲಾಗಿದೆ. ಈಗಾಗಲೇ ಬೀದರ್  ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ವಿಸ್ತರಿಸಿ ಪ್ರತಿ ತಿಂಗಳು ಅವರಿಗೆ ವೇತನ ಪಾವತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ರಾಜ್ಯದ ನಗರಸಭೆ, ಪುರಸಭೆ ಹಾಗೂ ಮಹಾನಗರಪಾಲಿಕೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರಕಾರ್ಮಿಕರನ್ನು ಖಾಯಂಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದ ಶಾಸಕ ಬಸವಂತಪ್ಪ, ಮಹಾನಗಪಾಲಿಕೆಯಲ್ಲಿ ಇನ್ನು ಕೆಲ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿದ್ದು, ಅವರನ್ನು ಕೂಡ ಖಾಯಂಗೊಳಿಸಬೇಕು. ಅದೇ ರೀತಿಯಲ್ಲಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಡಿ ದರ್ಜೆ ನೌಕರರನ್ನು ಖಾಯಂಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಅಥವಾ ನೇರವಾಗಿ ಅಚರ ಖಾತೆಗೆ ವೇತನ ಪಾವತಿಸುವ ವ್ಯವಸ್ಥೆ ಮಾಡಬೇಕೆಂದು  ಶಾಸಕ ಬಸವಂತಪ್ಪ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
–ಬಾಕ್ಸ್–
ಎಟಿಎಂ, ಪಾಸ್ ಬುಕ್ ಗುತ್ತಿಗೆದಾರರ ಬಳಿ…
ದಾವಣಗೆರೆ ಮಹಾನಗರಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರಕಾರ್ಮಿಕರಿಗೆ ಸರಿಯಾಗಿ ವೇತನ ಕೊಡುತ್ತಿಲ್ಲ. ಗುತ್ತಿಗೆದಾರರು, ನೌಕರರ ಎಟಿಎಂ ಕಾಡ್೯, ಬ್ಯಾಂಕ್ ಪಾಸ್ ಬುಕ್ ತಮ್ಮ ಬಳಿ ಇಟ್ಟುಕೊಂಡು ಅವರ ಖಾತೆಗಳಿಗೆ ವೇತನ ಹಾಕುತ್ತಿದ್ದಂತೆ ಅವರೇ ಬಿಡಿಸಿಕೊಂಡು ಅವರಿಗೆ ಕೈ ಚಿಪ್ಪು ಕೊಡುತ್ತಾರೆ. ಹೀಗಾಗಿ ಗುತ್ತಿಗೆದಾರರ ದಬ್ಬಾಳಿಕೆ ಕೊನೆಗಾಣಿಸಬೇಕಾದರೆ ಹೊರಗುತ್ತಿಗೆ ಪದ್ಧತಿ ರದ್ದುಗೊಳಿಸಿ ಸರ್ಕಾರವೇ ಅವರ ಖಾತೆಗಳಿಗೆ ನೇರವಾಗಿ ವೇತನ ಪಾವತಿ ಮಾಡಬೇಕೆಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಒಮ್ಮೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡಿ, ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere District ಸೇವೆಯಿಂದ ಜನಮಾನಸದಲ್ಲಿ ಉಳಿಯಲು ಸಾಧ್ಯ : ಡಿಸಿ
Next Article davanagere ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇವೆ : ನ್ಯಾ. ಮಹಾವೀರ ಮ. ಕರೆಣ್ಣವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಡೆಂಗಿ: ನಿರ್ಲಕ್ಷಿಸಿದರೆ ವೈದ್ಯರ ವಿರುದ್ಧ ಕ್ರಮ

ದಾವಣಗೆರೆ:  ರಾಜ್ಯದಲ್ಲಿ ಡೆಂಗಿ ಜ್ವರ ಮರಣ ಮೃದಂಗ ಬಾರಿಸುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ.…

By Dinamaana Kannada News

Harihara | ವಿಶ್ವಕರ್ಮ ಜಯತ್ಯೋತ್ಸವ  ಕಾರ್ಯಕ್ರಮ

ಹರಿಹರ (harihara) :  ವಿಶ್ವಕರ್ಮ ಜಯತ್ಯೋತ್ಸವ  ಕಾರ್ಯಕ್ರಮವನ್ನು ತಾಲೂಕು ಆಡಳಿತದ ವತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ  ಬಿ ಪಿ ಹರೀಶ್,…

By Dinamaana Kannada News

Davanagere | ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere)- ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?