Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮ : ಜನರಿಂದ ಉತ್ತಮ ಸ್ಪಂದನೆ
ತಾಜಾ ಸುದ್ದಿ

ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮ : ಜನರಿಂದ ಉತ್ತಮ ಸ್ಪಂದನೆ

Dinamaana Kannada News
Last updated: July 26, 2024 5:14 pm
Dinamaana Kannada News
Share
Harihar
ಹರಿಹರ: ಜಮಾತೆ ಇಸ್ಲಾಂ ಹಿಂದ್ ಹರಿಹರ ಘಟಕದಿಂದ ಶುಕ್ರವಾರ ನಗರದ ಪ್ರಶಾಂತನಗರದ ಮಸ್ಜಿದ್-ಎ-ಅಲಿ ಮಸೀದಿಯಲ್ಲಿ ಆಯೋಜಿಸಿದ್ದ ‘ನಮ್ಮೂರ ಮಸೀದಿ ನೋಡಬನ್ನಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿಂದೂ ಸಮುದಾಯದ ಮಹಿಳೆಯರು ಮಸೀದಿಯನ್ನು ವೀಕ್ಷಿಸಿದರು.
SHARE

ಹರಿಹರ:  ಜಮಾತೆ ಇಸ್ಲಾಂ ಹಿಂದ್ ಹರಿಹರ ಘಟಕದಿಂದ ಶುಕ್ರವಾರ ನಗರದ ಪ್ರಶಾಂತನಗರದ ಮಸ್ಜಿದ್-ಎ-ಅಲಿ ಮಸೀದಿಯಲ್ಲಿ ಆಯೋಜಿಸಿದ್ದ ‘ನಮ್ಮೂರ ಮಸೀದಿ ನೋಡಬನ್ನಿ’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ದೊರೆಯಿತು.

ಮಧ್ಯಾಹ್ನ ೧೨.೩೦ಕ್ಕೆ ಶುಕ್ರವಾರದ ವಿಶೇಷ ಪ್ರವಚನ ಹಾಗೂ ನಮಾಜ್‌ಗೆಂದು ಅಜಾನ್ ಕೂಗಿದ ನಂತರ ಎಂದಿನAತೆ ಮುಸ್ಲಿಂ ಸಮುದಾಯದವರು ಮಸೀದಿಗೆ ಬಂದರು, ಜೊತೆಗೆ ಹಿಂದೂ ಬಾಂಧವರೂ ಕೂಡ ಮಸೀದಿಯನ್ನು ಪ್ರವೇಶಿಸಿ ಕನ್ನಡ ಭಾಷೆಯಲ್ಲಿ ನಡೆದ ವಿಶೇಷ ಪ್ರವಚನವನ್ನು ಆಲಿಸಿದರು.

ಜಗತ್ತಿನಲ್ಲಿರುವ ಎಲ್ಲಾ ವ್ಯಕ್ತಿಗಳು ಪರಸ್ಪರ ಸಹೋದರತ್ವದಿಂದ ಬದುಕಬೇಕು, ದೇವರನ್ನು ನಾವು ಅಲ್ಲಾಹ ಎಂದು ಕರೆದರೆ ಇನ್ನೊಂದು ಧರ್ಮೀಯರು ಇನ್ನೊಂದು ಹೆಸರಲ್ಲಿ ಗುರುತಿಸುತ್ತಾರೆ, ಪರಸ್ಪರರ ಧಾರ್ಮಿಕ ಕೇಂದ್ರಗಳಿಗೆ, ನಿಯಮಿತವಾಗಿ ಭೇಟಿ ನೀಡಿದರೆ ಸಾಮರಸ್ಯ, ಸ್ನೇಹ, ವಿಶ್ವಾಸ ಬೆಳೆಯುತ್ತದೆ ಎಂದು ಪ್ರವಚನ ನೀಡಿದ ಜಮಾತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ಹೇಳಿದರು.

ನಮ್ಮೂರ ಮಸೀದಿ ನೋಡಬನ್ನಿ ಕಾರ್ಯಕ್ರಮ ಈಗಿನ ವಾತಾವರಣಕ್ಕೆ ಅಗತ್ಯವಿತ್ತು. ಮಸೀದಿಯೊಳಗೆ ನಡೆಯುವ ಪ್ರವಚನ, ನಮಾಜು ಮಾಡುವ ರೀತಿ, ನೀತಿಗಳನ್ನು ನೋಡಲು ಅವಕಾಶ ಸಿಕ್ಕಿತು ಎಂದು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಟಿ.ಜೆ.ಮುರುಗೇಶಪ್ಪ ಸಂತಸ ವ್ಯಕ್ತಪಡಿಸಿದರು.

ವಿವಿಧತೆಯಲ್ಲಿ ಏಕತೆಯ ಸಂಕೇತ ಭಾರತ, ಇಲ್ಲಿರುವ ವಿವಿಧ ಧರ್ಮ, ಜಾತಿ, ಜನಾಂಗದವರು ಸಾಮರಸ್ಯದಿಂದ ಬದುಕಿದರೆ ಅದೇ ದೇಶದ ಶಕ್ತಿ, ಆಗ ಭಾರತ ಜಾಗತಿಕ ಶಕ್ತಿಯಾಗಿ ಬೆಳೆಯಲು ಸಾಧ್ಯ, ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕೆಂದು ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಹೊರ ಭಾಗದಿಂದ ಮಾತ್ರ ನೋಡುತ್ತಿದ್ದ ಮಸೀದಿಯನ್ನು ಇಂದು ಒಳಗೆ ಬಂದು ನೋಡುವ ಅವಕಾಶ ಸಿಕ್ಕಿತು, ಜೊತೆಗೆ ಮೌಲಾನಾರವರು ಮಾಡುವ ಪ್ರವಚನವನ್ನು ಕನ್ನಡ ಭಾಷೆಯಲ್ಲಿಯೆ ಕೇಳಿದೆವು, ಎಲ್ಲಾ ಧರ್ಮೀಯರು ಅಣ್ಣ, ತಮ್ಮಂದಿರAತೆ ಬದುಕಿದರೆ ಮಾತ್ರ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದು ಗೃಹಣಿ ಮಂಜುಳ ಹೇಳಿದರು.

ಮಸೀದಿಯಲ್ಲಿ ಶುಕ್ರವಾರದಂದು ನಡೆಯುವ ಪ್ರವಚನ, ನಮಾಜು ಹಾಗೂ ಇತರೆ ಪ್ರಕ್ರಿಯೆಯಗಳನ್ನು ನಡೆಸುವ ವಿಧಾನ, ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು, ಕೊನೆಯಲ್ಲಿ ಎಲ್ಲರೂ ಲಘು ಉಪಾಹಾರ ಸೇವಿಸಿ ತೆರಳಿದರು.

ಬಿಜೆಪಿ ಮುಖಂಡ ಪರಶುರಾಮ ಕಾಟ್ವೆ, ಹರಿಹರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎ.ಕೆ.ಭೂಮೇಶ್, ಸುರೇಶ್, ಮಂಜುನಾಥ್ ಎಸ್., ಗಿರೀಶ್, ಕಾವ್ಯ, ಸುಮಂಗಲ, ಬಸವಲಿಂಗಮ್ಮ, ಜಮಾತೆ ಇಸ್ಲಾಂಇ ಹಿಂದ್ ಹರಿಹರ ಘಟಕ ಅಧ್ಯಕ್ಷ ಅಬ್ದುಲ್ ಖಯೂಂ ಎಕ್ಕೆಗೊಂದಿ, ಮಸೀದಿಯ ಅಧ್ಯಕ್ಷ ಡಾ.ಗುಲಾಂ ನಬಿ, ಆರ್.ಸಿ.ಉಬೇದ್ ಉಲ್ಲಾ, ಸೈಯದ್ ರಿಯಾಜ್ ಅಹ್ಮದ್, ಅಬ್ದುಸಲಾಂ, ಇಖ್ರಾ ಅಕಾಡಮಿ ಶಾಲೆ ಮುಖ್ಯಸ್ಥ ಅಬ್ದುಲ್ ರಹಮಾನ್, ಫಾರೂಖ್ ಖಾನ್, ಡಾ.ನಜೀಬ್ ಉಲ್ಲಾ ಖಾನ್, ಉಸ್ಮಾನ್ ಖಾನ್, ಅದ್ನಾನ್ ಸಾಖಿಬ್ ಎಕ್ಕೆಗೊಂದಿ, ಮುಸೇಬ್ ಅನಸ್ ಅಫ್ಜಲ್ ಹುಸೇನ್, ಅಬ್ದುಲ್ ರಹೀಂ ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಸಿಎಂ ಸಿದ್ದರಾಮಯ್ಯಗೆ ಆಂಜನೇಯ, ಬಸವಂತಪ್ಪ ಅಭಿನಂದನೆ
Next Article davanagere karuna jeva kalanay trust ಕನ್ನಡ ಭಾಷೆಗೆ ಉಜ್ವಲ ಭವಿಷ್ಯವಿದೆ : ಪ್ರೋ.ಎಸ್.ಜಿ.ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತುಂತುರು ನೀರಾವರಿ ಪರಿಕರಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಫೆ.1 (Davanagere):- ಕೃಷಿ ಇಲಾಖೆ ಮೂಲಕ ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲೇರ್ ಪಂಪ್‍ಸೆಟ್ ಸರ್ಕಾರದ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-25 ಅವರು ಮೌನವಾಗಿ ಬಿಡುತ್ತಾರೆ!

ಕ್ಷಯರೋಗ! …..   ಹೀಗೆ ಕೇಳಿದರೆ ಜನರಿಗೆ ಬೇಗ ಅರ್ಥವಾಗುವುದಿಲ್ಲ. ಟೀಬಿ ರೋಗ ಎನ್ನಿ , ಬಾಯ್ತುಂಬಾ ನಕ್ಕು ಪ್ರತಿಕ್ರಿಯಿಸುತ್ತಾರೆ!  ಈ…

By Dinamaana Kannada News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ

ದಾವಣಗೆರೆ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಕಾರ್ಮಿಕರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Davanagere
Blog

Davanagere | ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ  

By Dinamaana Kannada News
Davanagere
ತಾಜಾ ಸುದ್ದಿ

Davanagere | ಮನಸ್ಸಿನ ವ್ಯಾಯಾಮಕ್ಕೆ ಧ್ಯಾನ ಅತ್ಯಗತ್ಯ : ಬ್ರಹ್ಮಕುಮಾರಿ ಲೀಲಾಜಿ

By Dinamaana Kannada News
Davanagere
ರಾಜಕೀಯ

Political analysis | ಅಮಿತ್ ಶಾ ಆತುರಕ್ಕೆ ಏನು ಕಾರಣ?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?