Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE : ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರದಿಂದ ಎಲ್ಲಾ ಪ್ರೋತ್ಸಾಹ, ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ 
ತಾಜಾ ಸುದ್ದಿ

DAVANAGERE : ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರದಿಂದ ಎಲ್ಲಾ ಪ್ರೋತ್ಸಾಹ, ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ 

Dinamaana Kannada News
Last updated: August 4, 2024 1:48 pm
Dinamaana Kannada News
Share
DAVANAGERE
ಮುಖ್ಯಮಂತ್ರಿ ಸಿದ್ದರಾಮಯ್ಯ
SHARE
ಬೆಂಗಳೂರು, ಆ.4 (DAVANAGERE) :  ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಭಾನುವಾರ ಕೃಷ್ಣಾದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ 12ಮಂದಿ  ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿ ಮಾತನಾಡಿದರು.
ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 2016-17ರ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಒಲಂಪಿಕ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ, ಒಲಂಪಿಕ್ಸ್‌, ಏಶ್ಯಾಡ್‌ ಮತ್ತು ಕಾಮನ್‌ವೆಲ್ತ್‌ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ. ಸರ್ಕಾರ ಬದಲಾದ ಬಳಿಕ ಇದು ನೆನೆಗುದಿಗೆ ಬಿದ್ದಿತ್ತು. ಇದೀಗ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

Read also : DAVANAGERE : ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸರಕಾರ ಮುಂದಾಗಲಿ :  ಕೆ.ರಾಘವೇಂದ್ರ ನಾಯರಿ

ಈ ಹಿಂದೆ ಪೊಲೀಸ್‌ ಇಲಾಖೆಯಲ್ಲಿ ಮಾತ್ರ ಕ್ರೀಡಾ ಸಾಧಕರಿಗೆ ಉದ್ಯೋಗದಲ್ಲಿ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿತ್ತು. ಇದೀಗ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಶೇ.3ರಷ್ಟು ಹುದ್ದೆಗಳನ್ನು ಹಾಗೂ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡುವ ಕುರಿತು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರವೇ ಈ ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು.
ಯುವ ಸಬಲೀಕರಣ ಇಲಾಖೆಯಲ್ಲಿ ಸಾಧಕ ಕ್ರೀಡಾಪಟುಗಳು ಹಾಗೂ ಅವರನ್ನು ರೂಪಿಸಿದ ತರಬೇತುದಾರರು ಮತ್ತು ದೈಹಿಕ ಶಿಕ್ಷಣ ಪರಿಣಿತರಿಗೂ ನೇಮಕಾತಿಗೆ ಅವಕಾಶ ಕಲ್ಪಿಸಿ ಭರ್ತಿ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಲಾಗಿದೆ ಎಂದರು.
ನೇಮಕಾತಿಗಾಗಿ ಕ್ರೀಡಾ ಸಾಧಕರಿಂದ ಆನ್‌ಲೈನ್‌ ಮೂಲಕ ಅರ್ಜಿ ಕರೆಯಲಾಗಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಸಮಿತಿಯು ಆಯ್ಕೆ  ಮಾಡಿದೆ. ಕ್ರೀಡೆಗಳಲ್ಲಿ ಸಾಧನೆ ಮಾಡುವ ಮೂಲಕ ನೀವೆಲ್ಲರೂ ದೇಶಕ್ಕೆ ಕೀರ್ತಿ ತಂದಿದ್ದೀರಿ. ನಿಮ್ಮ ಸಾಧನೆ ಗುರುತಿಸಿ, ಪ್ರೋತ್ಸಾಹ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ.
ವಿಶ್ವದಲ್ಲೇ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದು. ಒಲಂಪಿಕ್ಸ್‌ ನಂತಹ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ಪರ್ಧಿಸಬೇಕೆಂಬುವುದು ನಮ್ಮ ಉದ್ದೇಶ. ಇದಕ್ಕೆ ಪೂರಕವಾದ ವಾತಾವರಣವನ್ನು, ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಅವರು ಹೇಳಿದರು.
ಅವಕಾಶ ಪತ್ರ ಪಡೆದ ಕ್ರಿಡಾ ಸಾಧಕರ ವಿವರ : ಗಿರೀಶ್‌ ಎಚ್.ಎನ್‌ (ಪ್ಯಾರಾ ಅಥ್ಲೆಟಿಕ್ಸ್)‌, ದಿವ್ಯಾ ಟಿ.ಎಸ್.‌ (ಶೂಟಿಂಗ್)‌, ಉಷಾರಾಣಿ ಎನ್.‌ (ಕಬಡ್ಡಿ), ಸುಷ್ಮಿತಾ ಪವಾರ್‌ (ಕಬಡ್ಡಿ), ನಿಕ್ಕಿನ್‌ ತಿಮ್ಮಯ್ಯ (ಹಾಕಿ), ಎಸ್.ವಿ.ಸುನೀಲ್‌ (ಹಾಕಿ), ಕಿಶನ್‌ ಗಂಗೊಳ್ಳಿ (ಚೆಸ್)‌, ರಾಘವೇಂದ್ರ ರತ್ನಾಕರ ಅಣ್ವೇಕರ್‌ (ಈಜು), ರಾಧಾ ವಿ. (ಪ್ಯಾರಾ ಅಥ್ಲೆಟಿಕ್ಸ್)‌, ಶರತ್‌ ಎಂ.ಎಸ್‌ (ಪ್ಯಾರಾ ಅಥ್ಲೆಟಿಕ್ಸ್)‌, ಗುರುರಾಜ (ವೇಯ್ಟ್‌ ಲಿಫ್ಟಿಂಗ್)‌ ಮತ್ತು ಮಲಪ್ರಭಾ ಯಲ್ಲಪ್ಪ ಜಾಧವ (ಕುರಾಶ್)‌ ಇವರಿಗೆ ನೇಮಕಾತಿ ಆಫರ್‌ ಲೆಟರ್‌ ನೀಡಿದರು.
ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
TAGGED:Davanagere districtDinamana.comKannada Newsಕನ್ನಡ ನ್ಯೂಸ್‌ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE FILM KANNADA FILM NEWS : ಹ್ಯಾಪಿ ನ್ಯೂಸ್ ಫ್ರಮ್ (London Cafe! ) ಲಂಡನ್ ಕೆಫೆ !
Next Article DAVANAGERE DAVANGERE : ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ : ಕೆ.ಸಿ. ವೇಣುಗೋಪಾಲ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕಳುವಾಗಿದ್ದ 15 ಲಕ್ಷ ಮೌಲ್ಯದ ಕೃಷಿ ಉಪಕರಣ ವಶಕ್ಕೆ  

ದಾವಣಗೆರೆ: ಕಳ್ಳತನವಾಗಿದ್ದ 15 ಲಕ್ಷ ರೂ. ಮೌಲ್ಯದ ಕೃಷಿ ಯಂತ್ರೋಪಕರಣಗಳು ವಶಪಡಿಸಿಕೊಂಡಿರುವ  ಪೋಲೀಸರು, ಕೃತ್ಯ ಎಸಗಿದ್ದ 3 ಜನ ಕಾನೂನು…

By Dinamaana Kannada News

Davanagere news | ವಿಕಲಚೇತನರಿಂದ ವಿದ್ಯಾರ್ಥಿ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere) ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ವಿದ್ಯಾರ್ಥಿ ಶುಲ್ಕ ಮರುಪಾವತಿ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ…

By Dinamaana Kannada News

Davanagere | ಸರಕಾರಿ ಮಹಾವಿದ್ಯಾಲಯದ ಭೂಮಿ ಖಾಸಗಿಯವರಿಗೆ : ಎಐವೈಎಫ್ ಪ್ರತಿಭಟನೆ

ದಾವಣಗೆರೆ  (Davanagere) :  ಕಲಬುರಗಿಯ ಸರಕಾರಿ ಮಹಾವಿದ್ಯಾಲಯಕ್ಕೆ ಸೇರಿದ ಭೂಮಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ನೀಡಲು ತೀರ್ಮಾನಿಸಿರುವ ಸರಕಾರದ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?