Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE NEWS : “ಒಳಮೀಸಲಾತಿ” ಜಾರಿಗೆ ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯ
ತಾಜಾ ಸುದ್ದಿ

DAVANAGERE NEWS : “ಒಳಮೀಸಲಾತಿ” ಜಾರಿಗೆ ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯ

Dinamaana Kannada News
Last updated: August 13, 2024 4:46 pm
Dinamaana Kannada News
Share
DAVANAGERE
ಶ್ರೀ ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿ
SHARE

ದಾವಣಗೆರೆ  (DAVANAGERE) :  ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರಕಾರ ಕೂಡಲೇ ಒಳಮೀಸಲಾತಿ ಜಾರಿಗೆ ತರಬೇಕು ಎಂದು ಚಿತ್ರದುರ್ಗ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ (Madara Channaiah Swamiji) ಒತ್ತಾಯಿಸಿದರು.

ಚಿತ್ರದುರ್ಗ (Chitradurga)ದ ಗುರುಪೀಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲು ಕುರಿತು ದೇಶದ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಆದೇಶ ನೀಡಿದೆ. ಅದ್ದರಿಂದ ಸಮಿತಿಗಳ ಹೆಸರಲ್ಲಿ ಸರಕಾರ ಕಾಲಹರಣ ಮಾಡದೇ ಸೂಕ್ತ ತೀರ್ಮಾಣ ಮಾಡಬೇಕು. ಒಳ ಮೀಸಲು ಜಾರಿ ಬರೋವರೆಗೂ ಕೆಪಿಎಸ್‍ಸಿ ಸೇರಿದಂತೆ ಯಾವುದೇ ಸರಕಾರಿ ನೇಮಕಾತಿ ಮಾಡಬಾರದು ಎಂದು ಆಗ್ರಹಿಸಿದರು.

ಕೆಲವರು ಕೆನೆಪದರ ವಿಷಯ ಇಟ್ಟಕೊಂಡು ದಿಕ್ಕು ತಪ್ಪಿಸುತ್ತಿದ್ದಾರೆ. ಕೇಂದ್ರ ಸರಕಾರ ಕೆನೆಪದರದ ವಿಷಯ ಸುಪ್ರೀಂ ಕೋರ್ಟ್‍ನ ಅಬ್ಸರ್ವೇಶನ್ ಮಾತ್ರ. ಇದಕ್ಕೂ ಒಳ ಮೀಸಲಾತಿಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಅದರಿಂದ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದರು.

ಹಿರಿಯ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಅಪಸ್ವರ ಎತ್ತಿರುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಈವರೆಗೂ ಒಳ ಮೀಸಲಾತಿ ಕುರಿತಾದ ಸುಪ್ರೀಂ ಕೋರ್ಟ್ ತೀರ್ಪನ್ನು ಅವರು ಸ್ವಾಗತಿಸಿಲ್ಲ. ಹೀಗಿರುವಾಗ ಕೆನೆಪದರದ ಬಗ್ಗೆ ಅನಗತ್ಯ ಗೊಂದಲ ಮೂಡಿ ಸುತ್ತಿರುವುದು ಸರಿಯಲ್ಲ ಎಂದರು.

ಸುಪ್ರೀಂ ಕೋರ್ಟ್‍ನ ತೀರ್ಪು ಐತಿಹಾಸಿಕವಾದುದು. ಒಳ ಮೀಲಾತಿ ಹೋರಾಟ ಮಾದಿಗ ಸಮಾಜವೇ ಮುನ್ನಡೆಸಿದರೂ ಎಲ್ಲ 101 ಪರಿಶಿಷ್ಟ ಜಾತಿಗಳಿಗೂ ಜನಸಂಖ್ಯೆಯ ಅನುಸಾರ ಸಾಮಾಜಿಕ ನ್ಯಾಯ ಒದಗಿಸಲಿದೆ. ಕೇವಲ ಎಸ್‍ಸಿ ಮಾತ್ರವಲ್ಲ ಎಸ್‍ಟಿ ಸಮುದಾಯದವರಿಗೂ ಇದರ ಲಾಭ ಸಿಗಲಿದೆ ಎಂದು ತಿಳಿಸಿದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ವಿಷಯವನ್ನು ನಿರ್ವಹಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇದೆ ಎಂಬುದು ನಮ್ಮ ನಂಬಿಕೆ. ಮುಖ್ಯಮಂತ್ರಿಗಳು ತುರ್ತಾಗಿ ಗಮನಹರಿಸಿ, ಒಳ ಮೀಸಲು ಜಾರಿ ಮಾಡಬೇಕು’ ಎಂದು ಮನವಿ ಮಾಡಿದರು.

Read also : DAVANAGERE NEWS : ಹರ್ ಘರ್ ತಿರಂಗಾ ಕಾರ್ಯಕ್ರಮ

ಮಾದಿಗ ಮೀಸಲು ಹೋರಾಟಕ್ಕೆ ಮೂರು ಆಯಾಮಗಳಿವೆ. ಜನಾಂದೋಲನ, ಬೀದಿ ಹೋರಾಟ, ಕಾನೂನಾತ್ಮಕ ಸಂಘರ್ಷ, ಆಡಳಿತ ವ್ಯವಸ್ಥೆಯ ಮೇಲೆ ಒತ್ತಡ ಹೇರುವುದು ನಡೆದುಕೊಂಡು ಬಂದಿದೆ. ಮಾದಾರಚನ್ನಯ್ಯ ಗುರುಪೀಠ ಎಲ್ಲ ಸಂದರ್ಭಗಳಲ್ಲಿ ತನ್ನ ಇತಿಮಿತಿಯಲ್ಲಿ ಕೈ ಜೋಡಿಸಿ ಕೆಲಸ ಮಾಡಿದೆ. ಅದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಇರಲಿ, ಕೇಂದ್ರ, ರಾಜ್ಯ ಸರಕಾರಗಳಿರಲಿ ಶ್ರೀ ಮಠ ತನ್ನದೇ ಆದ ರೀತಿಯಲ್ಲಿ ಸಂಪರ್ಕವಿರಿಸಿ ಕೊಂಡು ಈ ಕಾರ್ಯ ಸಾಧನೆಯಲ್ಲಿ ತನ್ನ ಪಾತ್ರ ನಿರ್ವಹಿಸಿದೆ ಎಂದರು.

ಪಾವಗಡ ಶ್ರೀರಾಮ್‍ಮಾತನಾಡಿ, ಸುಪ್ರೀಂ ಕೋರ್ಟ್ ತೀರ್ಪು ಬಂದ ಕೂಡಲೇ ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ರೇವಂತ್‍ರೆಡ್ಡಿ ಒಳ ಮೀಸಲು ಜಾರಿ ಮಾಡುವ ತೀರ್ಮಾನ ಮಾಡುವ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಎಲ್ಲ ಆಯೋಗಗಳು, ಅಧ್ಯಯನ ಸಮಿತಿಗಳು ಮಾದಿಗ ಸಮುದಾಯದ ಹಿಂದುಳಿದಿರುವಿಕೆ ಕುರಿತು ಸ್ಪಷ್ಟವಾಗಿ ಹೇಳಿರುವುದರಿಂದ ಸಾಮಾಜಿಕ ನ್ಯಾಯದ ಪರ ಇರುವ ಸಿಎಂ ಸಿದ್ದರಾಮಯ್ಯ ಕೂಡಲೇ ಒಳ ಮೀಸಲು ಜಾರಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

TAGGED:Davangeredinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere DAVANAGERE NEWS : ಹರ್ ಘರ್ ತಿರಂಗಾ ಕಾರ್ಯಕ್ರಮ
Next Article Applications invited Davangere news : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಕೊಂಡಜ್ಜಿಯ ಪಬ್ಲಿಕ್ ಶಾಲೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏ.17 (Davanagere): ಕರ್ನಾಟಕ ರಾಜ್ಯ ಪೊಲೀಸ್ ವೆಲ್‍ಫೇರ್ ಅಂಡ್ ಎಜುಕೇಷನ್ ಟ್ರಸ್ಟ್ ದಾವಣಗೆರೆ ರೇಂಜ್ ಅಡಿಯಲ್ಲಿನ ಹರಿಹರ ತಾಲ್ಲೂಕು…

By Dinamaana Kannada News

Davanagere | ವೈದ್ಯೆ ಮೇಲಿನ ದೌರ್ಜನ್ಯ ಖಂಡಿಸಿ ಮೌನ ಪ್ರತಿಭಟನೆ

ಚನ್ನಗಿರಿ (Davanagere)  :  ಕಲ್ಕತ್ತಾದಲ್ಲಿ ಮಹಿಳೆ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ  ನಾಗರೀಕ ಅಧಿಕಾರ ಸಂರಕ್ಷಣಾ…

By Dinamaana Kannada News

ದಾವಣಗೆರೆ | ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌ ನೀಡಿದ ಸರ್ಕಾರ

ದಾವಣಗೆರೆ : ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್‌ ನೀಡಿದೆ. 2025-26 ನೇ ಸಾಲಿನ ಎರಡನೇ ತ್ರೈಮಾಸಿಕ…

By Dinamaana Kannada News

You Might Also Like

Davangere
ತಾಜಾ ಸುದ್ದಿ

ದಾವಣಗೆರೆ |ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿ, ರಾಗಿ ವಶ

By Dinamaana Kannada News
bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?