Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಧ್ಯಸ್ಥಿಕೆದಾರರಿಂದ ವ್ಯಾಜ್ಯ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ನ್ಯಾ. ರಾಜೇಶ್ವರಿ ಎನ್ ಹೆಗ್ಡೆ
ತಾಜಾ ಸುದ್ದಿ

Davanagere | ಮಧ್ಯಸ್ಥಿಕೆದಾರರಿಂದ ವ್ಯಾಜ್ಯ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ನ್ಯಾ. ರಾಜೇಶ್ವರಿ ಎನ್ ಹೆಗ್ಡೆ

Dinamaana Kannada News
Last updated: August 19, 2024 12:43 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ, ಆ.19  (District Court Davanagere) : ಇಂದಿನ ದಿನಗಳಲ್ಲಿ ಮಧ್ಯಸ್ಥಿಕೆದಾರರ ಭಾಗವಹಿಸಿಕೆ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು ಪ್ರಧಾನ ಜಿಲ್ಲಾ, ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್ ಹೆಗ್ಡೆ ಹೇಳಿದರು.

ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಾವಣಗೆರೆ ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್(District Panchayat Davanagere) ಸಭಾಂಗಣದಲ್ಲಿ ದಾವಣಗೆರೆ, ಹಾವೇರಿ ಮತ್ತು ಚಿತ್ರದುರ್ಗದ ವಕೀಲ ಸಂಧಾನಕಾರರಿಗೆ ಏರ್ಪಡಿಸಿದ್ದ ಎರಡು ದಿನಗಳ ಪುನರ್-ಮನನ ಕಾರ್ಯಗಾರ  ಉದ್ಘಾಟಿಸಿ ಮಾತನಾಡಿದರು.

ಮಧ್ಯಸ್ಥಿಕದಾರರು ನ್ಯಾಯ ಕೋರಿ ಬಂದ ಪಕ್ಷಕಾರರಿಗೆ ಕಾನೂನು ಮಾಹಿತಿ ನೀಡುವುದುಷ್ಟೇ  ಅಲ್ಲದೆ ಸಾಮಾಜಿಕ ಮತ್ತು ನೈತಿಕ ಮೌಲ್ಯಗಳನ್ನು ತಿಳಿಸಿ ಕೊಡುವುದರಿಂದ ಪಕ್ಷಕಾರರಿಗೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ನಿರ್ವಹಿಸುವ ಕಾರ್ಯಗಳ ಮೂಲಕ ಅನುಕೂಲವಾಗುತ್ತದೆ. ಮಧ್ಯಸ್ಥಿಕೆದಾರರ ಈ ರೀತಿಯ ಕಾರ್ಯಗಳು ನಿಜವಾಗಲೂ ಶ್ಲಾಘನೀಯ. ಮಧ್ಯಸ್ಥಿಕೆದಾರರಿಂದ ವ್ಯಾಜ್ಯ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

Read also : Davanagere | ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರು ಮಾತನಾಡಿ,  ಇಂದಿನ ದಿನಗಳಲ್ಲಿ ಜನರಿಗೆ ಕಾನೂನು ಮಾಹಿತಿ ನೀಡುವುದು ಅತ್ಯವಶ್ಯಕವಾಗಿರುವುದರಿಂದ ವಕೀಲರು ಮತ್ತು ಸಂಧಾನಕಾರರ ಪಾತ್ರ ಬಹು ಮುಖ್ಯವಾಗಿದೆ. ಮಧ್ಯಸ್ಥಿಕೆಯು ಪ್ರಕರಣಗಳ ಶೀಘ್ರ ವಿಲೇವಾರಿಗೆ ಅನುಕೂಲಕರವಾಗಿದ್ದು ಕಡಿಮೆ ಖರ್ಚು ಮತ್ತು ಸಮಯ ಉಳಿತಾಯದ ಮಾರ್ಗವಾಗಿದೆ. ಅಲ್ಲದೆ ನ್ಯಾಯಾಲಯಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವಲ್ಲಿ ಇದು ಉತ್ತಮ ಸಾಧನವಾಗಿದೆ ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಎಲ್ ಎಚ್ ಮಾತನಾಡಿ, ಮಧ್ಯಸ್ಥಿಕೆಯ ಮೂಲಕ ವ್ಯಾಜ್ಯಗಳು ಬಗೆಹರಿದಲ್ಲಿ ರಾಜ್ಯದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸುತ್ತದೆ ಎಂದು ತಿಳಿಸಿದರು.

ತರಬೇತಿದಾರರಾದ ಶೋಭಾ ಪಾಟೀಲ್, ಲತಾ ಪ್ರಸಾದ್, ಟಿ.ಎಂ ಅನ್ನಪೂರ್ಣ ಉಪಸ್ಥಿತರಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
Next Article DAVANAGERE Davanagere news | ಪ್ರತಿಭೆ ಪರಿಶ್ರಮ ಪಡುವವರ ಸ್ವತ್ತು : ಉಪ ಪ್ರಾಚಾರ್ಯ ಸಿದ್ಧರಾಮೇಶ್ವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಲೋಕಾ ಬಲೆಗೆ ಮಹಾನಗರ ಪಾಲಿಕೆ ನೌಕರರು

ದಾವಣಗೆರೆ :  ಇ-ಸ್ವತ್ತು ಮಾಡಿಕೊಡಲು ಲಂಚ ಸ್ವೀಕಾರ ಮಾಡುತ್ತಿದ್ದ ಇಬ್ಬರು ಪಾಲಿಕೆ ನೌಕರರು  ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆಯ…

By Dinamaana Kannada News

“ಜಾತಿ ಗಣತಿ” ಬಂದಾಗ ಲಿಂಗಾಯತರು ಎಚ್ಚರಗೊಳ್ಳಬೇಕು : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ (Davanagere) : ಜಾತಿ ಗಣತಿ ಅಂತ ಬಂದಾಗ ವೀರಶೈವ ಲಿಂಗಾಯತರು ಇನ್ನಾದರೂ ಜಾಗೃತರಾಗಿ ಒಗ್ಗಟ್ಟಿನಿಂದ ನಡೆಯುವುದು ಅವಶ್ಯವಾಗಿದೆ ಎಂದು…

By Dinamaana Kannada News

Breaking News: ವಿದ್ಯುತ್ ಶಾಂಕ್’ನಿಂದ ಲೈನ್ ಮ್ಯಾನ್ ಮೃತ: ಟಿಸಿ ಮೇಲೆಯೇ ನೇತಾಡಿದ ದೇಹ

ದಾವಣಗೆರೆ: ( Lineman dead due to electric shock) ತಾಲ್ಲೂಕಿನ ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಕೆರೆ ಗ್ರಾಮದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್

By Dinamaana Kannada News
Davangere
ಅಪರಾಧ ಸುದ್ದಿತಾಜಾ ಸುದ್ದಿ

ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?