Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಎಸ್.ಸಿ.ಪಿ, ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆ : ಶೇ 100 ರಷ್ಟು ಸಾಧನೆಗೆ ಡಿಸಿ ಸೂಚನೆ
ತಾಜಾ ಸುದ್ದಿ

Davanagere news | ಎಸ್.ಸಿ.ಪಿ, ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆ : ಶೇ 100 ರಷ್ಟು ಸಾಧನೆಗೆ ಡಿಸಿ ಸೂಚನೆ

Dinamaana Kannada News
Last updated: August 22, 2024 1:36 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ (Davanagere) : ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ ವಿನಿಯೋಗವಾಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಸಿ.ಪಿ, ಟಿ.ಎಸ್.ಪಿ. (SCP, TSP) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೀಸಲಿರಿಸಿದ ಅನುದಾನವನ್ನು ಆಸ್ತಿಗಳ ಸೃಜನೆ ಮತ್ತು ಮೂಲಭೂತ ಸೌಕರ್ಯಗಳನ್ನು ಸೃಜನೆ ಮಾಡುವಾಗ ಈ ವರ್ಗದ ಜನರು ಹೆಚ್ಚು ಇರುವ ಕಡೆ ಮತ್ತು ಅನುಕೂಲವಾಗುವ ನಿಟ್ಟಿನಲ್ಲಿ ಆಸ್ತಿಗಳ ಸೃಜನೆಯಾಗಬೇಕು. ಜನಸಂಖ್ಯೆಯೇ ಇಲ್ಲದ ಕಡೆ ಈ ಅನುದಾನ ಬಳಕೆ ಮಾಡಬಾರದೆಂದು ಸೂಚನೆ ನೀಡಿದರು.

ಎಸ್‍ಸಿಪಿ, ಟಿಎಸ್‍ಪಿ ಯೋಜನೆಯಡಿ ಈಗಾಗಲೇ ಇಲಾಖಾವಾರು ಕ್ರಿಯಾ ಯೋಜನೆಗಳು ಅನುಮೋದನೆಯಾಗಿ ಅನುದಾನವು ಬಿಡುಗಡೆಯಾಗಿದೆ. ಈ ಇಲಾಖೆಯವರು ಫಲಾನುಭವಿಗಳ ಯೋಜನೆಗಳಾಗಿದ್ದಲ್ಲಿ ಮುಂಚಿತವಾಗಿ ಅರ್ಜಿಯನ್ನು ಆಹ್ವಾನಿಸಿ ಫಲಾನುಭವಿಗಳ ಆಯ್ಕೆಯನ್ನು ಅಂತಿಮಗೊಳಿಸಿಟ್ಟುಕೊಳ್ಳಬೇಕು. ಹರಿಹರದ ಬೆಸ್ಕಾಂ ವಿಭಾಗಕ್ಕೆ ವಿದ್ಯುತ್ ಮೂಲಭೂತ ಸೌಕರ್ಯ ಸೃಜನೆಯಡಿ ಪ.ಜಾತಿಗೆ ರೂ.70 ಲಕ್ಷ ಮತ್ತು ಪ.ಪಂಗಡದವರಿಗೆ ರೂ.35 ಲಕ್ಷ ಬಿಡುಗಡೆಯಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.

ಇದಕ್ಕೆ ಜಿಲ್ಲಾಧಿಕಾರಿಯವರು ಕಾಲಮಿತಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಕ್ರಮ ವಹಿಸಬೇಕೆಂದು ತಿಳಿಸಿ ಅಧಿಕ ಮಳೆಯಿಂದ ಹೊನ್ನಾಳಿ ಆಸ್ಪತ್ರೆ ಒಳಗೆ ನೀರು ನುಗ್ಗಿದ್ದು ವಿದ್ಯುತ್ ಸಂಪರ್ಕದ ವೈರ್‍ಗಳ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದರು.

ಎಸ್.ಸಿ.ಪಿ, ಟಿ.ಎಸ್.ಪಿ. ಕ್ರಿಯಾ ಯೋಜನೆಯನ್ವಯ ಜಿಲ್ಲೆಗೆ ಕೇಂದ್ರ, ರಾಜ್ಯ, ಜಿಲ್ಲೆ ಸೇರಿ ರೂ.345.5 ಕೋಟಿಗಳಷ್ಟು ಅನುದಾನ ನಿಗದಿ ಮಾಡಿದ್ದು ಇದರಲ್ಲಿ 125.31 ಕೋಟಿ ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ ಅನುದಾನದಲ್ಲಿ 98.82 ಕೋಟಿ ಖರ್ಚು ಮಾಡಲಾಗಿದೆ. ನಿಗಧಿತ ಗುರಿಗೆ ಶೇ 28.60 ರಷ್ಟು ಸಾಧನೆ ಮಾಡಿದ್ದು ಬಿಡುಗಡೆಯಾದ ಅನುದಾನವನ್ನು ಶೇ 78.86 ರಷ್ಟು ವೆಚ್ಚ ಮಾಡಲಾಗಿದೆ. ಮುಂದಿನ ಸಭೆ ವೇಳೆಗೆ ಬಿಡುಗಡೆಯಾದ ಅನುದಾನಕ್ಕೆ ಶೇ 100 ರಷ್ಟು ಸಾಧನೆ ಮಾಡಿರಬೇಕೆಂದು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read also : Davanagere | ವೈದ್ಯೆ ಮೇಲಿನ ದೌರ್ಜನ್ಯ ಖಂಡಿಸಿ ಮೌನ ಪ್ರತಿಭಟನೆ

ಸಭೆಯಲ್ಲಿ ನಗರಾಭಿವೃದ್ದಿ ಕೋಶ ಯೋಜನಾ ನಿರ್ದೇಶಕರಾದ ಡಾ; ಮಹಂತೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ವೈದ್ಯೆ ಮೇಲಿನ ದೌರ್ಜನ್ಯ ಖಂಡಿಸಿ ಮೌನ ಪ್ರತಿಭಟನೆ
Next Article Applications invited davanagere | ಏಕಲವ್ಯ ಪ್ರಶಸ್ತಿಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಅಪ್ರಾಪ್ತ ಬಾಲಕಿ ಬಲವಂತವಾಗಿ ವಿವಾಹ, ಅತ್ಯಾಚಾರ : ಆರೋಪಿಗೆ 20 ವರ್ಷ ಸಜೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ವಿವಾಹವಾಗಿ, ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ…

By Dinamaana Kannada News

ಪರಿಸರ ಸ್ವಚ್ಛ ಇದ್ದರೆ ಮಾತ್ರ ರೋಗಗಳು ದೂರ- ಮುಖ್ಯಾಧಿಕಾರಿ ಭಜಕ್ಕನವರ್

ಮಲೇಬೆನ್ನೂರು : ಮಲೇಬೆನ್ನೂರು  ಪುರಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ    ಡಯೇರಿಯಾ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಖಾಯಿಲೆಗಳ…

By Dinamaana Kannada News

ಜವಾಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ

ದಾವಣಗೆರೆ.ಫೆ.19 (Davanagere); ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?