Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | 5 ಕೋಟಿ ರೂ.ವೆಚ್ಚದಲ್ಲಿ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ : ಪರಿಶೀಲನೆ ನಡೆಸಿದ ಶಾಸಕ ಬಸವಂತಪ್ಪ 
ತಾಜಾ ಸುದ್ದಿ

Davanagere | 5 ಕೋಟಿ ರೂ.ವೆಚ್ಚದಲ್ಲಿ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ : ಪರಿಶೀಲನೆ ನಡೆಸಿದ ಶಾಸಕ ಬಸವಂತಪ್ಪ 

Dinamaana Kannada News
Last updated: August 23, 2024 1:18 pm
Dinamaana Kannada News
Share
davanagere
ಬಸವಾಪಟ್ಟಣ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ ಹಿನ್ನೆಲೆಯಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
SHARE
ದಾವಣಗೆರೆ (Davanagere)  : ಬಸವಾಪಟ್ಟಣ ಶ್ರೀ ಹಾಲಸ್ವಾಮಿಗಳ ಮಠದ ಪಕ್ಕದಲ್ಲಿರುವ ಗುಡ್ಡದ ಬಳಿ ಹರಿಯುತ್ತಿರುವ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ ಮಾಡಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣಕ್ಕೆ ಈಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುಮಾರು ಎರಡೂವರೆ ಕಿ.ಮೀ.ದೂರ ಕಾಲ್ನಡಿಗೆಯಲ್ಲೇ ಸಾಗಿ ಹಾಲುವರ್ತಿ ಹಳ್ಳವನ್ನು ಪರಿಶೀಲನೆ ನಡೆಸಿದರು.
ಮಳೆ ಬಂದಾಗ ಇಲ್ಲಿ ಹರಿಯುವ ಹಳ್ಳ ದಾಗಿನಕಟ್ಟೆ ಕೆರೆ ಸೇರಿದಂತೆ ನಾಲ್ಕು ಹಳ್ಳಿಗಳ ಕೆರೆಗಳಿಗೆ ನೀರು ಸೇರುತ್ತದೆ. ಇದರಿಂದ ಈ ಭಾಗದ ಜಮೀನು, ಜನಜಾನುವಾರುಗಳ ಕುಡಿಯುವ ನೀರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಇಲ್ಲಿ ಮಿನಿ ಜಲಾಶಯ ನಿರ್ಮಾಣ ಮಾಡಿದರೆ ಸುಮಾರು 10 ರಿಂದ 15 ಕಿ.ಮೀ. ದೂರದಷ್ಟು ನೀರು ನಿಲುಗಡೆಯಾಗಿ ಅಂದಾಜು 45 ಅಡಿ ನೀರು ಸಂಗ್ರಹಿಸಬಹುದು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿ ಸಾವಿರಾರು ಎಕರೆಗೆ ನೀರು ಒದಗಿಸಬಹುದು ಅಲ್ಲದೇ, ಬಸವಾಪಟ್ಟಣ, ದಾಗಿನಕಟ್ಟೆ, ಸಾಗರಪೇಟೆ, ಹರಸಾಗರ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಕುಡಿಯುವ ನೀರಿನ ಬವಣೆ ನೀಗಿಸಬಹುದು ಎಂದು ಗ್ರಾಮಸ್ಥರು ಶಾಸಕರಿಗೆ ಮನವರಿಕೆ ಮಾಡಿದರು.
5 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲು ಕ್ರಮ: 
ಅಂದಾಜು 5 ಕೋಟಿ ರೂ‌ ವೆಚ್ಚದಲ್ಲಿ ಬಸವಾಪಟ್ಟಣದ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಿಸಿದರೆ ಬೇಸಿಗೆ ಕಾಲದ ಸಂದರ್ಭದಲ್ಲಿ ಅಂತರ್ಜಲ ಮಟ್ಟ ಕುಸಿಯದಂತೆ ಈ ಭಾಗದ ನೀರಾವರಿ ಪ್ರದೇಶ ಮತ್ತು ಜನಜಾನುವಾರುಗಳ ಕುಡಿಯುವ ನೀರಿನ ಬವಣೆ ನೀಗಿಸಬಹುದು. ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಿನಿ ಜಲಾಶಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಗ್ರಾಮಸ್ಥರಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭರವಸೆ ನೀಡಿದರು.

ಏತ ನೀರಾವರಿ ಯೋಜನೆಗಳಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುವುದಕ್ಕಿಂತ ಕೇವಲ ಐದಾರು ಕೋಟಿ ರೂ.ವೆಚ್ಚದಲ್ಲಿ ಮಳೆ ಬಂದಾಗ ವ್ಯರ್ಥವಾಗಿ ನೀರು ಹರಿದು ಹೋಗುವ ಹಳ್ಳಗಳಿಗೆ ಚೆಕ್ ಡ್ಯಾಂ ಅಥವಾ ಮಿನಿ ಜಲಾಶಯ ನಿರ್ಮಿಸಿ ನೀರು ಸಂಗ್ರಹಿಸಿದರೆ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ. ವಿಶೇಷವಾಗಿ ಇಂತಹ ಯೋಜನೆಗಳಿಗೆ ಆದ್ಯತೆ ಕೊಡಬೇಕೆಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಶಯವಾಗಿದೆ. ಈ ನಿಟ್ಟಿನಲ್ಲಿ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಿಸಿದರೆ ಈ ಭಾಗದ ಬಹುತೇಕ ಹಳ್ಳಿಗಳ ನೀರಿನ ಸಮಸ್ಯೆ ಬಗೆಹರಿಸಬಹುದಾಗಿದೆ ಎಂದರು.

Read also : Davanagere news | ನರೇಗಾ ಕಾಮಗಾರಿ ಅನುಷ್ಠಾನದಲ್ಲಿ ವ್ಯತ್ಯಾಸ : ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಒತ್ತಾಯ
ಈ ಸಂದರ್ಭದಲ್ಲಿ ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಅಲ್ಪಸಂಖ್ಯಾತರ ವಿಭಾಗದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಇದಾಯತ್ ವುಲ್ಲಾ,  ಗ್ರಾಪಂ ಮಾಜಿ ಅಧ್ಯಕ್ಷ ಡೊ.ಇಬ್ರಾಹಿಂ ಸಾಬ್, ಟಿ.ಅಯಾವುಲ್ಲಾ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ನರೇಗಾ ಕಾಮಗಾರಿ ಅನುಷ್ಠಾನದಲ್ಲಿ ವ್ಯತ್ಯಾಸ : ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಒತ್ತಾಯ
Next Article Applications invited Davangere news | ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಮೈಕ್ರೋ-ಫೈನಾನ್ಸ್ ಕಂಪನಿಗಳಿಗೆ ಸರ್ಕಾರ ಕಡಿವಾಣ ಹಾಕಲಿ ಅಕ್ರಮ ವಿರೋಧಿ ಮಹಿಳಾ ವೇದಿಕೆ ಒತ್ತಾಯ

ದಾವಣಗೆರೆ : ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ-ಫೈನಾನ್ಸ್ ಕಂಪನಿಗಳಿಗೆ ಸರಕಾರ ಕಡಿವಾಣ ಹಾಕುವವರೆಗೂ ಹೋರಾಟ ನಡೆಸುವುದಾಗಿ ಮೈಕ್ರೋ-ಫೈನಾನ್ಸ್‍ಅಕ್ರಮ ವಿರೋಧಿ ಮಹಿಳಾ ವೇದಿಕೆ…

By Dinamaana Kannada News

ಕಚೇರಿಯಲ್ಲಿ ಅಪ್ಪ

೧. ಅವರು ಭೂಮಿಯನ್ನಷ್ಟೆ ಕಿತ್ತುಕೊಂಡೆವು ಎಂದರು ಉಳಿದಿರುವುದಾದರೂ ಏನು? ಅವರ ಕಂಗಳಲ್ಲಿ ಅಪ್ಪನ ಪ್ರಶ್ನೆಗಳೂ ಇವೆ. ೨. ಎಕರೆಗಟ್ಟಲೆ ಭೂಮಿ…

By Dinamaana Kannada News

Davangere | ಚಂಚಲ ಮನಸ್ಸು ಹತೋಟಿಗೆ ತರಲು ಶಿವಯೋಗ ಸಹಕಾರಿ : ಬಸವಪ್ರಭು ಸ್ವಾಮೀಜಿ

ದಾವಣಗೆರೆ (Davangere): ಮಾನವನ ಮನಸ್ಸು ಚಂಚಲ. ಅದನ್ನು ಹತೋಟಿಗೆ ತರಲು  ಶಿವಯೋಗವನ್ನು ಮಾಡಬೇಕು. ಶಿವಯೋಗವು ನಮ್ಮ ಮನಸ್ಸಿನ ಚಂಚಲತೆಯನ್ನು ನಿವಾರಣೆ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?