Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere Viraktamatha | ಜಯದೇವ ಜಗದ್ಗುರುಗಳ ರಾಜದಾನಿ ದಾವಣಗೆರೆ : ಬಸವಪ್ರಭು ಶ್ರೀ
ತಾಜಾ ಸುದ್ದಿ

Davanagere Viraktamatha | ಜಯದೇವ ಜಗದ್ಗುರುಗಳ ರಾಜದಾನಿ ದಾವಣಗೆರೆ : ಬಸವಪ್ರಭು ಶ್ರೀ

Dinamaana Kannada News
Last updated: August 27, 2024 5:12 pm
Dinamaana Kannada News
Share
davanagere
virkatha matta davanagere
SHARE

ದಾವಣಗೆರೆ, ಆ. 27 (Davangere District) :  ದೇಶದಾದ್ಯಂತ ಇರುವ ಜಯದೇವ ಪ್ರಸಾದ ನಿಲಯಗಳಲ್ಲಿ ಓದಿದಂತಹವರು ಇಂದು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ವಿರಕ್ತಮಠದ ಡಾ. ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ನಗರದ ಶಿವಯೋಗಾಶ್ರಮದ ಆವರಣದಲ್ಲಿ ಮಂಗಳವಾರ ಶಿವಯೋಗಾಶ್ರಮ (Shivayoga Ashram)ಟ್ರಸ್ಟ್, ಬಸವ ಕೇಂದ್ರ ವಿರಕ್ತಮಠದ ಸಹಯೋಗದಲ್ಲಿ ನಡೆದ ಶ್ರೀ ಜಯದೇವ ಜಗದ್ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳ 150ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಜಯದೇವ ಜಗದ್ಗುರುಗಳ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು ಜಯದೇವ ಜಗದ್ಗುರುಗಳ ಜಯಂತ್ಯೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ವರ್ಷಪೂರ್ತಿ ಹಮ್ಮಿಕೊಳ್ಳಲಾಗುವುದು ಎಂದರು.

ಜಯದೇವ ಜಗದ್ಗುರುಗಳು 1906 ರಲ್ಲಿ ಜಯದೇವ ಉಚಿತ ಪ್ರಸಾದ ನಿಲಯವನ್ನು ಪ್ರಥಮ ಬಾರಿಗೆ ದಾವಣಗೆರೆಯಲ್ಲಿ ಆರಂಭಿಸಿದರು. ನಂತರದಲ್ಲಿ ಬೆಂಗಳೂರು, ತುಮಕೂರು, ತಿಪಟೂರು, ಅರಸಿಕೆರೆ, ಕೊಲ್ಲಾಪುರ, ದಾರವಾಡ, ನಿಪ್ಪಾಣಿ ಸೇರಿದಂತೆ ವಿವಿಧೆಡೆ ಪ್ರಸಾದ ನಿಲಯಗಳನ್ನು ಆರಂಭಿಸಿದರು. ಅಂದಿನಿಂದ ಇಂದಿಗೂ ಅವು ನಡೆದುಕೊಂಡು ಬರುತ್ತಿದೆ. ಅಂತಹ ಪರಮಪೂಜ್ಯರು ಶಿಕ್ಷಣ ಕ್ರಾಂತಿಯನ್ನು ಮಾಡದೇ ಇದ್ದಿದ್ದರೆ ಇವತ್ತು ದೇಶ, ರಾಜ್ಯ ಉದ್ಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ, ರಾಷ್ಟçಪತಿ ಬಿ.ಡಿ.ಜತ್ತಿ ಸೇರಿದಂತೆ ಅನೇಕ ಸಾಹಿತಿಗಳು ಶ್ರೀಗಳು ಸ್ಥಾಪಿಸಿದ ಪ್ರಸಾದ ನಿಲಯಗಳಲ್ಲಿ ಓದಿದ್ದಾರೆ. 1940 ರಲ್ಲಿನ 45 ಲಕ್ಷ ರು.ಗಳ ಬಜೆಟ್‌ನಲ್ಲಿ ಜಯದೇವ ಜಗದ್ಗುರುಗಳು 18 ಲಕ್ಷ ರು.ಗಳನ್ನು ಶಿಕ್ಷಣ ಸಂಸ್ಥೆಗಳಿಗೆ ವಿನಿಯೋಗ ಮಾಡಿದ್ದಾರೆ ಎಂದರು.

Read also : Davanagere | ಆ.30 ರಿಂದ ಆರೋಗ್ಯ ಮಾತೆಯ ಬಸಲಿಕ ವಾರ್ಷಿಕ ಮಹೋತ್ಸವ

ಜಯದೇವ ಜಗದ್ಗುರುಗಳು ಎಲ್ಲೆಲ್ಲಿ ಜಯದೇವ ಪ್ರಸಾದ ನಿಲಯ ಆರಂಭಿಸಿದ್ದಾರೆಯೋ ಅಲ್ಲಿ, ಮತ್ತು ಮುರುಘಾ ಮಠದ ಶಾಲಾ ಕಾಲೇಜುಗಳಲ್ಲಿ ಇಂದು ಶ್ರೀಗಳ ಭಕ್ತರು ಅರ್ಥಪೂರ್ಣವಾಗಿ ಈ ಜಯಂತಿ ಕಾರ್ಯಕ್ರಮವನ್ನು ಆಚರಿಸುತ್ತಿದ್ದಾರೆ. ಜಯದೇವ ಜಗದ್ಗುರುಗಳ ರಾಜದಾನಿ ಎಂದರೆ ಅದು ದಾವಣಗೆರೆಯಾಗಿದೆ. ಎಲ್ಲರಿಗೂ ಶಿಕ್ಷಣ ದೊರಕುವಂತಾಗಲಿ, ಮಕ್ಕಳಿಗೆ ತೊಂದರೆಯಾಗುವುದು ಬೇಡ ಎಂದುನಾಡಿನಾದ್ಯಂತ ಜಯದೇವ ಶ್ರೀಗಳು ಉಚಿತ ಪ್ರಸಾದ ನಿಲಯಗಳನ್ನು ಅಂದೇ ಸ್ಥಾಪಿಸಿದರು.

ಹೈಮಾಸ್ಕ್ ಲೈಟಿನಂತೆ ಜಯದೇವ ಜಗದ್ಗುರುಗಳು ಇಡೀ ಮಾನವ ಕುಲಕ್ಕೇ ಬೆಳಕಾಗಿದ್ದು ಎಲ್ಲರ ಬದುಕನ್ನು ಬೆಳಗಿಸುತ್ತಿದ್ದಾರೆ. ಜಯದೇವ ಜಗದ್ಗುರುಗಳ ಸಮಾಜಮುಖಿ ಕಾರ್ಯಗಳಿಂದ ಬರೀ ದೇಶ ಅಲ್ಲ ರಾಜ್ಯ ಉದ್ದಾರವಾಗಿದೆ. ಎಲ್ಲರಿಗೂ ಶಿಕ್ಷಣ ಅನ್ನುವುದು ಸಿಕ್ಕಿದೆ. ಎಲ್ಲರೂ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಯನ್ನು ಎಲ್ಲರೂ ಸ್ಮರಣೆ ಮಾಡೋಣ, ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ನೀವುಗಳು ಸಾಗೋಣ ಎಂದರು.

ಮಹಾತ್ಮಾ ಗಾಂಧೀಜಿ ಒಮ್ಮೆ ಜಯದೇವ ಜಗದ್ಗುರುಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅಸ್ಪೃಷ್ಯತೆ ನಿವಾರಣೆ ಬಗ್ಗೆ 12ನೇ ಶತಮಾನದಲ್ಲಿ ಬಸವಣ್ಣನವರು ಹೋರಾಟ ಮಾಡಿದ್ದರು. ಅಂತಹ ಕೆಲಸವನ್ನು ನೀವು ಮಾಡುತ್ತಿದ್ದೀರಿ ಎಂದು ಜಯದೇವ ಜಗದ್ಗುರುಗಳು ಗಾಂಧೀಜಿಯವರಿಗೆ ತಿಳಿಸಿದ್ದರಂತೆ. ನಂತರದಲ್ಲಿ ಅಸಹಕಾರ ಚಳುವಳಿ ಮುಖಾಂತರ ಗಾಂಧೀಜಿ ಕರೆ ನೀಡಿದಂತೆ ಅಂದಿನಿದಲೇ ಜಯದೇವ ಜಗದ್ಗುರುಗಳು ಕೂಡಾ ತಾವು ರೇಷ್ಮೆ ಬಟ್ಟೆ ತೊಡುವುದು ಬಿಟ್ಟು ಖಾದಿ ಬಟ್ಟೆಗೆ ಕಾವಿ ಬಣ್ಣ ಹಾಕಿಕೊಂಡು ತೊಡಲು ಆರಂಭಿಸಿದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಬೃಹನ್ಮಠದ ಉತ್ತರಾಧಿಕಾರಿ ಬಸವಾಧಿತ್ಯ ದೇವರು, ಹಾಸಬಾವಿ ಕರಿಬಸಪ್ಪ, ಎಂ.ಜಯಕುಮಾರ, ಅಂದನೂರು ಮುಪ್ಪಣ್ಣ, ಎಸ್.ಓಂಕಾರಪ್ಪ, ಕಣಕುಪ್ಪಿ ಮುರುಗೇಶಪ್ಪ, ಎಂ.ಕೆ.ಬಕ್ಕಪ್ಪ, ಮುರುಘರಾಜೇಂದ್ರ ಚಿಗಟೇರಿ, ಲಂಬಿ ಮುರುಗೇಶ, ಟಿ.ಎಂ.ವೀರೇAದ್ರ, ಬೆಳ್ಳೂಡಿ ಮಂಜುನಾಥ, ಸಂಗಣ್ಣ, ಚಿಗಟೇರಿ ಜಯದೇವ, ಕೀರ್ತಿ, ಶರಣಪ್ಪ, ಚನ್ನಬಸವ ಶೀಲವಂತ್, ರೋಷನ್, ಶಿವಬಸಮ್ಮ, ಲತಾ, ಮುರುಘರಾಜೇಂದ್ರ ವಿದ್ಯಾವರ್ಧಕ ಫಂಡ್ ಸಂಘ, ಶಿವಯೋಗಾಶ್ರಮ ಟ್ರಸ್ಟ್, ವಿರಕ್ತಮಠ ಧರ್ಮದರ್ಶಿಗಳ ಸಮಿತಿ ಸದಸ್ಯರು, ಶ್ರೀಮಠದ ಭಕ್ತರು ಭಾಗವಹಿಸಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಆ.30 ರಿಂದ ಆರೋಗ್ಯ ಮಾತೆಯ ಬಸಲಿಕ ವಾರ್ಷಿಕ ಮಹೋತ್ಸವ
Next Article DAVANAGERE Davanagere news | ಹರಿಹರ ನಗರಸಭೆಗೆ ಪ್ರಶಸ್ತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಧಿಕಾರಕ್ಕೆ ಪಲಾಯನ ಮಾಡುವ ನಿತೀಶ್ ಕುಮಾರ್ ಗೆ ತಕ್ಕ ಪಾಠ ಕಲಿಸಿ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ (Davanagere): ಬಿಹಾರ ಸಿಎಂ ನಿತೀಶ್ ಕುಮಾರ್ ಯಾವಾಗಲೂ ಅಧಿಕಾರಕ್ಕಾಗಿ ಪಕ್ಷಾಂತರ ಮಾಡುತ್ತಾರೆ. ಹಾಗಾಗಿ, ಬಿಹಾರ ಕಾಂಗ್ರೆಸ್ ಆಯೋಜಿಸಿರುವ ಪಲಾಯನ್…

By Dinamaana Kannada News

Davanagere | ಭವಿಷ್ಯ ಹಾಳು ಮಾಡಿಕೊಳ್ಳಬೇಡಿ : ನ್ಯಾ.ಮಹಾವೀರ್ ಮಾ.ಕರೆಣ್ಣವರ್

ದಾವಣಗೆರೆ ಸೆ.25  (Davanagere)  : ವಿದ್ಯಾರ್ಥಿ ಜೀವನದಲ್ಲಿ ರ್ಯಾಗಿಂಗ್ ಎಂಬುವುದು ಪೆಡಂಭೂತ, ಇದು ಸಮಾಜಘಾತುಕ, ಸಾಮಾಜಿಕ, ಬೌದ್ಧಿಕ ಮತ್ತು ಧಾರ್ಮಿಕ…

By Dinamaana Kannada News

Davanagere | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ

ದಾವಣಗೆರೆ  (Davanagere) :  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5…

By Dinamaana Kannada News

You Might Also Like

Dvg vv
ತಾಜಾ ಸುದ್ದಿ

ದಾವಣಗೆರೆ|ಪ್ರಾಮಾಣಿಕ ಸೇವೆಯಿಂದ ಯಶಸ್ಸು: ಪ್ರೊ.ಸುಚಿತ್ರಾ

By Dinamaana Kannada News
bhadra-dam
ತಾಜಾ ಸುದ್ದಿ

ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ

By Dinamaana Kannada News
Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?