Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere news | ಒಳಮೀಸಲು ಜಾರಿಗೊಳಿಸಲು ಮಾದಿಗ ಸಮುದಾಯದ ಮುಖಂಡರಿಂದ ಮನವಿ
ತಾಜಾ ಸುದ್ದಿ

Davanagere news | ಒಳಮೀಸಲು ಜಾರಿಗೊಳಿಸಲು ಮಾದಿಗ ಸಮುದಾಯದ ಮುಖಂಡರಿಂದ ಮನವಿ

Dinamaana Kannada News
Last updated: August 28, 2024 1:04 pm
Dinamaana Kannada News
Share
davangere
ಒಳಮೀಸಲು ಜಾರಿಗೊಳಿಸಲು ಒತ್ತಾಯಿಸಿ ಸಿದ್ದರಾಮಯ್ಯ ಬಳಿಗೆ ಮಾದಿಗ ಮುಖಂಡರ ನಿಯೋಗ
SHARE

ದಾವಣಗೆರೆ (Davanagere ):  ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಒಳಮೀಸಲಾತಿ ಜಾರಿಗೆ ತುರ್ತು ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಪಕ್ಷದ ಮಾದಿಗ ಸಮುದಾಯದ ಮುಖಂಡರು ಮತ್ತು ಸಚಿವರಾದ ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪೂರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬೆಂಗಳೂರಿನ ಸಿಎಂ ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ನಿಯೋಗದಲ್ಲಿನ ಮುಖಂಡರು ಮತ್ತು ಸಚಿವರಾದ ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪೂರ್, ಮಾಜಿ ಸಚಿವ ಎಚ್.ಆಂಜನೇಯ, ರಾಜ್ಯಸಭೆ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ ಮಾತನಾಡಿ, ಒಳಮೀಸಲು ಜಾರಿಗೆ ಇದ್ದ ಅಡೆತಡೆಗೆ ಸುಪ್ರೀಂ ಕೋರ್ಟ್ ತೀರ್ಪು ನಿವಾರಣೆ ಮಾಡಿದೆ. ಅದೆಲ್ಲದಿಕ್ಕಿಂತಲೂ ತಾವೂ ಸದಾ ಶೋಷಿತರ ಪರ ಹೋರಾಟ, ಯೋಜನೆ ರೂಪಿಸುತ್ತಿರುವ ಹರಿಕಾರರು. ತಮ್ಮ ಸಾಮಾಜಿಕ ನ್ಯಾಯ ಬದ್ಧತೆ ಪ್ರಶ್ನಾತೀತ. ಒಳಮೀಸಲು ಜಾರಿಗೊಳಿಸಲು ತಮ್ಮಲ್ಲಿನ ಇಚ್ಛಾಶಕ್ತಿಗೆ ಬಲ ತುಂಬಲು ನಿಯೋಗದ ಮೂಲಕ ಮನವಿ ಸಲ್ಲಿಸುತ್ತಿದ್ದೇವೆ ಎಂದು ಹೇಳಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

Read also : Davanagere news | ನೈಜ ಸಾಹಿತ್ಯದಿಂದ ಸಮಾಜ ಪರಿವರ್ತನೆ : ರುದ್ರಪ್ಪ ಹನಗವಾಡಿ

ಮನವಿ ಪತ್ರವನ್ನು ಓದಿದ ಮಾಜಿ ಸಚಿವ ಎಚ್.ಆಂಜನೇಯ, ಮಾದಿಗ ಸಮುದಾಯಕ್ಕೆ ನ್ಯಾಯವಾಗಿ ದೊರಕಬೇಕಾಗಿದ್ದ ಮೀಸಲಾತಿ ಪ್ರಮಾಣ ನಿರೀಕ್ಷೆಮಟ್ಟದಲ್ಲಿ ದೊರೆತಿಲ್ಲ. ಈ ಸತ್ಯವನ್ನು ಅರಿತು ಜೊತೆಗೆ ಬಹಳಷ್ಟು ವರದಿಗಳನ್ನು ಮುಂದಿಟ್ಟು ಕೊಂಡು  ಒಳಮೀಸಲು ಜಾರಿಗೆ ಮಾದಿಗ ಸಮುದಾಯ ಸತತ ಮೂವತ್ತು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದೆ ಎಂದರು.

ನಿರಂತರ ಹೋರಾಟದ ಫಲ ಒಳ ಮೀಸಲಾತಿ ವರ್ಗೀಕರಣಕ್ಕಾಗಿ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ಜೊತೆಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆಯೆಂದು ಐತಿಹಾಸಿಕ ತೀರ್ಪನ್ನು ನೀಡಿದೆ.
ಈಗಾಗಲೇ ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಒಳ ಮೀಸಲಾತಿ ವರ್ಗೀಕರಣಕ್ಕೆ ಮುಂದಾಗಿವೆ. ಅದೇ ರೀತಿ ತಾವು ಕೂಡ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಶೀಘ್ರ ಜಾರಿಗೊಳಿಸುವ ಮೂಲಕ ಸಮುದಾಯದ ಸಮಗ್ರ ಪ್ರಗತಿಗೆ ಮುಂದಾಗ ಬೇಕೆಂದು  ಕೋರಿದರು.

ಮುಖ್ಯವಾಗಿ ಈಗಾಗಲೇ ಕೆ.ಪಿ.ಎಸ್.ಸಿ ಸೇರಿ ವಿವಿಧ ಇಲಾಖೆಗಳ ಮೂಲಕ ಘೋಷಿತವಾಗಿರುವ ಪರೀಕ್ಷೆಗಳನ್ನು ಒಳಮೀಸಲು ಜಾರಿಗೊಳ್ಳುವವರೆಗೂ ತಡೆ ಹಿಡಿಯಬೇಕು ಹಾಗೂ ೩೮೪ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಆಗಸ್ಟ್  27  ರಂದು ನಡೆದಿರುವ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದಂತಹ ಮುಂದೆ ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಒಳ ಮೀಸಲಾತಿ ಹಂಚಿಕೆ ಪ್ರಕಾರ ನಡೆಸುವ ಹುದ್ದೆಗಳು ಹಂಚಿಕೆಯಾಗುವAತೆ ಷರತ್ತು ವಿಧಿಸಿ ನೋಟಿಫಿಕೇಷನ್ ಮಾಡಬೇಕು ಎಂದು ಮನವಿ ಮಾಡಿದರು.

ಒಳ ಮೀಸಲಾತಿ ಜಾರಿಗೊಳ್ಳುವವರೆಗೆ ರಾಜ್ಯ ಸರ್ಕಾರದ ಯಾವುದೇ ಇಲಾಖೆಗಳ ಹುದ್ದೆಗಳನ್ನು ತುಂಬುವ ಪ್ರಕ್ರಿಯೆಗಳು ನಡೆಯಬಾರದು ಹಾಗೂ ಸರ್ಕಾರದ ಯೋಜನೆಗಳಲ್ಲಿ ಆರ್ಥಿಕ ಮೀಸಲಾತಿ (Scp/stp), ಕೆ.ಐ.ಎ.ಡಿ.ಬಿ ಮತ್ತು ನಗರಾಭಿವೃದ್ಧಿ ಪ್ರಾಧಿಕಾರಗಳ ನಿವೇಶನಗಳನ್ನು ಹಂಚಿಕೆ ಮಾಡುವ ಪ್ರಕ್ರಿಯೆಯೂ ಸ್ಥಗಿತಗೊಳಿಸಬೇಕು. ಸುಪ್ರೀಂ ಕೋರ್ಟ್ ತೀರ್ಪು ಬಂದ ತಕ್ಷಣ ತೆಲಂಗಾಣ, ಆಂಧ್ರ ಪ್ರದೇಶ, ಪಂಜಾಬ್, ಹರಿಯಾಣ ಮತ್ತಿತರ ರಾಜ್ಯಗಳ ಸರ್ಕಾರವೂ ಒಳ ಮೀಸಲಾತಿ ಜಾರಿಗೆ ಆಗುವವರೆಗೂ ಖಾಲಿಯಿರುವ ಹುದ್ದೆಗಳಿಗೆ ಕರೆದಿರುವ ಪ್ರಕ್ರಿಯೆಗಳಿಗೆ ತಕ್ಷಣ ತಡೆ ಹಿಡಿದಿದ್ದಾರೆ. ಅದೇ ಮಾರ್ಗವನ್ನು ರಾಜ್ಯದಲ್ಲೂ ಅನುಸರಿಸಬೇಕು ಎಂದು ಕೋರಿದರು.

ಸರ್ವರಿಗೂ ಸಮ ಪಾಲು-ಸಮ ಬಾಳು, ಸಾಮಾಜಿಕ ನ್ಯಾಯ, ಸಮಾನತೆಗಾಗಿ ಹೋರಾಟ ಮಾಡಿಕೊಂಡು ಬಂದಿರುವ ಅಹಿಂದ ವರ್ಗದ ನೇತಾರ ಆಗಿರುವ ತಾವು ನೊಂದ ಜನರ ಕುರಿತು ಅಂತಃಕರಣ ಹೃದಯ ಹೊಂದಿದ್ದಿರಾ. ಆದ್ದರಿಂದ ಶೋಷಿತರಲ್ಲೇ ಶೋಷಿತರು, ಅಸ್ಪೃಶ್ಯರಲ್ಲೇ ಅಸ್ಪೃಶ್ಯರು ಆದ ಮಾದಿಗ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಒಳ ಮೀಸಲು ಜಾರಿಗೆಗಾಗಿ ತಕ್ಷಣ ಆದೇಶ ಹೊರಡಿಸಬೇಕೆಂದು ವಿನಯಪೂರ್ವಕವಾಗಿ ವಿನಂತಿಸುತ್ತೇವೆ ಎಂದು ವಿನಂತಿಸಿದರು.

ಎಲ್ಲ ಮುಖಂಡರ ಮಾತು ಆಲಿಸಿ, ಮನವಿ ಪತ್ರ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ನೊಂದ, ಅಸ್ಪೃಷ್ಯ ಸಮಾಜದ ನೋವಿನ ಅರಿವು ನನಗಿದೆ. ಒಳಮೀಸಲು ವಿಷಯದಲ್ಲಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದಂತೆ ಅದನ್ನು ಸ್ವಾಗತಿಸಿದ್ದೇನೆ. ಅದರರ್ಥ ನಾನು ನೊಂದ ಜನರ ಪರ ಎಂದರ್ಥ ಎನ್ನುವ ಮೂಲಕ ಒಳಮೀಸಲು ಜಾರಿಗೊಳಿಸುವ ಅಭಯ ನೀಡಿದರು.

ನಮ್ಮದು ರಾಷ್ಟ್ರೀಯ ಪಕ್ಷ. ಜೊತೆಗೆ ಸಚಿವ ಸಂಪುಟದಲ್ಲಿ ಈ ವಿಷಯ ತೀರ್ಮಾನಗೊಳ್ಳಬೇಕು. ನಾನು ಹಾಗೂ ಪಕ್ಷ ಸದಾ ನೊಂದ ಜನರ ಪರವಾಗಿ ಇರುವುದು ಎಂದು ಹೇಳಿದರು. ಶಾಸಕರಾದ ಮಾಯಕೊಂಡದ ಕೆ.ಎಸ್.ಬಸವಂತಪ್ಪ, ನೆಲಮಂಗಲದ ಶ್ರೀನಿವಾಸ್, ಮಾಜಿ ಸಚಿವ ಎಂ.ಶಿವಣ್ಣ ,, ವಿಧಾನ ಪರಿಷತ್ತು ಸದಸ್ಯರಾದ ಡಾ.ಡಿ. ತಿಮ್ಮಯ್ಯ ನಿಯೋಗದಲ್ಲಿದ್ದರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere news | ನೈಜ ಸಾಹಿತ್ಯದಿಂದ ಸಮಾಜ ಪರಿವರ್ತನೆ : ರುದ್ರಪ್ಪ ಹನಗವಾಡಿ
Next Article Applications invited Davanagere Department of Posts | ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಕಳ್ಳತನ ಪ್ರಕರಣ : ಸ್ವತ್ತು ಹಸ್ತಾಂತರ 

ದಾವಣಗೆರೆ (Davanagere): ಕೆಟಿಜೆ ನಗರ ಪೊಲೀಸರು ಕಳ್ಳತನ ಪ್ರಕರಣದಲ್ಲಿ ಆರೋಪಿತರಿಂದ ವಶಪಡಿಸಿಕೊಂಡ ಆಭರಣಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಎಎಸ್ಪಿ ವಿಜಯಕುಮಾರ್‌…

By Dinamaana Kannada News

Davanagere | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರನ್ನು ಆಯ್ಕೆ ಮಾಡಲು ಅರ್ಜಿ…

By Dinamaana Kannada News

World Hemophilia Day | ವಿಶ್ವ ಹಿಮೋಫಿಲಿಯಾ ದಿನ : ರಾಜ್ಯದಾದ್ಯಂತ ಹತ್ತು ಹಲವು ಕಾರ್ಯಕ್ರಮ

ದಾವಣಗೆರೆ (Davanagere): ವಿಶ್ವ ಹಿಮೋಫಿಲಿಯಾ ದಿನ (World Hemophilia Day) ದಂಗವಾಗಿ ಏ.17ರಂದು ಕರ್ನಾಟಕ ಹಿಮೋಫಿಲಿಯಾ ಸೊಸೈಟಿಯಿಂದ ರಾಜ್ಯದಾದ್ಯಂತ ಹತ್ತು…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ

By Dinamaana Kannada News
Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?