Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere | ಬೆಂಗಳೂರಿನಲ್ಲಿ ಸೆ.14 ಕ್ಕೆ ಅಸ್ಮಿತೆ, ಸಂವಿಧಾನ ಉಳುವಿಗೆ ಸಂಚಲನಾ ಸಮಾವೇಶ
ತಾಜಾ ಸುದ್ದಿ

Davangere | ಬೆಂಗಳೂರಿನಲ್ಲಿ ಸೆ.14 ಕ್ಕೆ ಅಸ್ಮಿತೆ, ಸಂವಿಧಾನ ಉಳುವಿಗೆ ಸಂಚಲನಾ ಸಮಾವೇಶ

Dinamaana Kannada News
Last updated: September 11, 2024 3:24 am
Dinamaana Kannada News
Share
Davanagere
Prof. S. G. Siddaramaiah
SHARE

ದಾವಣಗೆರೆ (Davangere District) : ರಾಜ್ಯಗಳ ಅಸ್ಮಿತೆ, ಹಕ್ಕು, ಪಾಲಿನ ರಕ್ಷಣೆ, ಪ್ರಜಾಸತ್ತೆ, ಸಂವಿಧಾನ ಉಳಿವಿಗಾಗಿ ಸೆ.14 ರಂದು ಬೆಂಗಳೂರಿನ ಆರ್. ವೃತ್ತದಲ್ಲಿರುವ ಯುವಿಸಿಇ ಅಲುಮ್ನಿ ಹಾಲ್‍ನಲ್ಲಿ ಸಂಚಲನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟ ಉಳಿಸಿ ಆಂದೋಲನದ ಪ್ರೋ .ಎಸ್.ಜಿ. ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಗಳ ಅಸ್ಮಿತೆ, ಹಕ್ಕು, ಪಾಲಿನ ರಕ್ಷಣೆ, ಪ್ರಜಾಸತ್ತೆ, ಸಂವಿಧಾನ ಉಳಿವಿಗಾಗಿ ರಾಷ್ಟ್ರೀಯ ಅಭಿಯಾನ ನಡೆಸಲಾಗುವುದು. ಎಲ್ಲ ಜಿಲ್ಲೆಯಲ್ಲಿ ಸಮಾವೇಶ, ಅಭಿಯಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಸಂಚಲನಾ ಸಮಾವೇಶದಲ್ಲಿ ಸುಪ್ರೀಂ ಕೋರ್ಟ್‍ನ ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ. ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ್‍ದಾಸ್, ಖ್ಯಾತ ಚಿಂತಕ ಮತ್ತು ಸಾಹಿತಿ ದೇವನೂರು ಮಹದೇವ,  ಪ್ರೋ  ರವಿವರ್ಮಕುಮಾರ್, ಜಿ. ರಾಮಕೃಷ್ಣ ಇತರರು ಭಾಗವಹಿಸುವರು. ಬೆಂಗಳೂರಿನ ಸಮಾವೇಶದ ನಂತರ ದೆಹಲಿಯಲ್ಲಿ ಇದೇ ತಿಂಗಳ ಮೂರನೇ ವಾರದಲ್ಲಿ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

Read also  : Davanagere | ಡಾ.ಬಿ.ಆರ್. ಅಂಬೇಡ್ಕರ್ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕಳೆದ ಹತ್ತು ವರ್ಷದಿಂದ ಬಹುತ್ವ ಭಾರತದ ಅಸ್ಮಿತೆಗಳಾಗಿರುವ ಭಾಷೆ, ಸಂಸ್ಕøತಿ, ಧರ್ಮ ವಿನಾಶ ಮಾಡುವ ಕಾರ್ಯ ನಡೆಯುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಆತಂಕ ಒಡ್ಡುವ ಯತ್ನ ನಡೆದಿದ್ದರೂ ಸಂವಿಧಾನ, ಪ್ರಜಾ ತಂತ್ರ ವ್ಯವಸ್ಥೆ ಬಲವಾಗಿದೆ. ಇದೇ ಸ್ಥಿತಿ ಮುಂದುವರೆದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ, ಗಣತಂತ್ರ ವ್ಯವಸ್ಥೆಗೆ ಧಕ್ಕೆ ಉಂಟಾಗುವುದನ್ನ ತಪ್ಪಿಸುವ ಉದ್ದೇಶದಿಂದ ಪ್ರಜಾಸತ್ತೆ, ಸಂವಿಧಾನ ಉಳಿವಿಗಾಗಿ ರಾಷ್ಟ್ರೀಯ ಅಭಿಯಾನ ನಡೆಸ ಲಾಗುತ್ತಿದೆ ಎಂದು ತಿಳಿಸಿದರು.

ಒಂದು ದೇಶ, ಒಂದು ಭಾಷೆ , ಒಂದು ಸಂಸ್ಕೃತಿ ಎಂಬ ಏಕಾತ್ಮಕತೆಯ ದೃಷ್ಟಿ ಹೊಂದಿರುವ ಕೇಂದ್ರ ಸರ್ಕಾರ ಬಹುತ್ವ ಭಾರತದ ನಾಶ ಮಾಡುವ, ಸಂವಿಧಾನದ ಆಶಯಗಳನ್ನೇ ಹಿಸುಕಿ ಹಾಕುವ ಯತ್ನದಲ್ಲಿದೆ. ರಾಜ್ಯಗಳಲ್ಲಿ ಬೇರೆ ಪಕ್ಷದ ಸರ್ಕಾರವಿದ್ದಲ್ಲಿ ರಾಜ್ಯಪಾಲರ ಮೇಲೆ ಒತ್ತಡ ಹೇರಿ, ಕಚೇರಿಯನ್ನೇ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಜನಬೆಂಬಲ ಹೊಂದಿರುವ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಸರ್ಕಾರವನ್ನೇ ಕಿತ್ತು ಹಾಕುವ ಕುತಂತ್ರ ನಡೆಸುತ್ತಿದೆ ಎಂಬುದಕ್ಕೆ ದೆಹಲಿ, ಈಗ ಕರ್ನಾಟಕದಲ್ಲಿನ ವಿದ್ಯಮಾನಗಳೇ ಸಾಕ್ಷಿ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಕಡ್ಡಿಯನ್ನೇ ಗುಡ್ಡ ಮಾಡಲಾಗುತ್ತಿದೆ. ಸುಳ್ಳನ್ನೇ ಪದೆ ಪದೇ ಹೇಳುವ ಮೂಲಕ ಸತ್ಯ ಎಂದು ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾಗಿರುವ ಸರ್ಕಾರವನ್ನೇ ಅತಂತ್ರಗೊಳಿಸುವ ಪ್ರಯತ್ನ, ಸಂವಿಧಾನದ ಆಶಯ, ಪ್ರಜಾತಂತ್ರ ನಾಶ, ದುರ್ಬಲಗೊಳಿಸುವ ಮಾಡುವ ಕೆಲಸ ಆತಂಕಕಾರಿ ಎಂದು ತಿಳಿಸಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಮೇಲೆ ಒತ್ತಡ ಹೇರಿ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡು ವಂತೆ ಮಾಡಲಾಗಿದೆ. ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ತಪ್ಪಲ್ಲ. ಆದರೆ, ತರಾತುರಿಯ ಬಗ್ಗೆ ಆಕ್ಷೇಪ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಆಂದೋಲನದ ಜಾಣಗೆರೆ ವೆಂಕಟರಾಮಯ್ಯ, ರುದ್ರಪ್ಪ ಹನಗವಾಡಿ, ಎಂ.ಟಿ. ಸುಭಾಶ್ಚಂದ್ರ, ಬಿ. ವೀರಣ್ಣ, ಪ್ರೋ. ಎ.ಬಿ. ರಾಮಚಂದ್ರಪ್ಪ, ನಿರಂಜನ್ ಇತರರು ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಡಾ.ಬಿ.ಆರ್. ಅಂಬೇಡ್ಕರ್ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Next Article DAVANAGERE Davanagere | ಪೋಕ್ಸೋ ತಡೆ, ಬಾಲ್ಯ ವಿವಾಹ ನಿಷೇಧ ಅನುಷ್ಠಾನದಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ : ನ್ಯಾ. ಮಹಾವೀರ ಮ.ಕರಣ್ಣವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

JOB NEWS : ಕಿರಿಯ ಆರೋಗ್ಯ ಸಹಾಯಕ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

 ದಾವಣಗೆರೆ ಜು.30   ರಾಷ್ಟ್ರೀಯ ಆರೋಗ್ಯ ಅಭಿಯಾನ  (National Health Campaign) ಕಾರ್ಯಕ್ರಮದಡಿ ಮಂಜೂರಾಗಿ ಖಾಲಿ ಇರುವ ಕಿರಿಯ ಆರೋಗ್ಯ ಸಹಾಯಕರ…

By Dinamaana Kannada News

ದಿನಮಾನ ಹೆಮ್ಮೆ : ಬೆಳಕ ಹೆಜ್ಜೆಯನ್ನರಸುವ ಕವಿ-ಊರಮುಂದಲ ಹರಿನಾಥ ಬಾಬು

Kannada News | Dinamaanada Hemme  | Dinamaana.com | 13-07-2024 ಧಾರ್ಮಿಕ ವಿವಿಧ ಪಂಥಗಳಲ್ಲಿ ಒಡೆದು ಹೋದ ದೇಶದ…

By Dinamaana Kannada News

ತಪೋವನದಲ್ಲಿ ಪರಿಸರ ದಿನಾಚರಣೆ

ದಾವಣಗೆರೆ :   ತಪೋವನ ಸಮೂಹ ಸಂಸ್ಥೆಯ ಹಾಗೂ ಶ್ರೀ ಶಕ್ತಿ ವೃದ್ಧಾಶ್ರಮದ ವತಿ ಯಿಂದ ಡಾ. ಶಶಿಕುಮಾರ್ ನೇತೃತ್ವದಲ್ಲಿ ವಿಶ್ವ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?