Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | 22 ಕೆರೆಗಳ ಏತನೀರಾವರಿ ಯೋಜನೆ ವ್ಯಾಪ್ತಿಗೆ ಆಲೂರು-ಮೆಳ್ಳೆಕಟ್ಟೆ ಕೆರೆ ಸೇರಿಸಲು ಒತ್ತಾಯ
ತಾಜಾ ಸುದ್ದಿ

Davanagere | 22 ಕೆರೆಗಳ ಏತನೀರಾವರಿ ಯೋಜನೆ ವ್ಯಾಪ್ತಿಗೆ ಆಲೂರು-ಮೆಳ್ಳೆಕಟ್ಟೆ ಕೆರೆ ಸೇರಿಸಲು ಒತ್ತಾಯ

Dinamaana Kannada News
Last updated: September 15, 2024 12:49 pm
Dinamaana Kannada News
Share
davanagere
davanagere
SHARE

ದಾವಣಗೆರೆ  (Davanagere) :  22 ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಮೆಳ್ಳೆಕಟ್ಟೆ ಮತ್ತು ಆಲೂರು ಕೆರೆಗಳನ್ನು ಸೇರಿಸಿ ಪೈಪ್‍ಲೈನ್ ಮೂಲಕ ಕೆ ತುಂಬಿಸಬೇಕೆಂದು ಎರಡು ಗ್ರಾಮಸ್ಥರು ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು.

ಬೇಸಿಗೆ ಕಾಲದಲ್ಲಿ ಅಂತರ್ಜಲ ಮಟ್ಟ ಕುಸಿತದಿಂದ ಜನಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಮತ್ತು ಅಡಿಕೆ ತೋಟಗಳಿಗೆ ನೀರುಣಿಸಲು ನೀರಿನ ಕೊರತೆ ಕಾಡುತ್ತಿದೆ. ಹೀಗಾಗಿ 22 ಕೆರೆಗಳ ಏತನೀರಾವರಿ ಯೋಜನೆಯ ವ್ಯಾಪ್ತಿಗೆ ಆಲೂರು ಮತ್ತು ಮೆಳ್ಳೆಕಟ್ಟೆ ಕೆರೆಗಳನ್ನು ಸೇರಿಸಿ ನೀರು ತುಂಬಿಸುವ ವ್ಯವಸ್ಥೆ ಮಾಡಬೇಕೆಂದು ಶಾಸಕರಲ್ಲಿ ಕೋರಿದರು.

Read also : Davanagere | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ ; ಡಾ : ಪ್ರಭಾ ಮಲ್ಲಿಕಾರ್ಜುನ್

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ.ಎಸ್.ಬಸವಂತಪ್ಪ, 22 ಕೆರೆಗಳ ಏತನೀರಾವರಿ ಯೋಜನೆಯ ಕಳಪೆ ಕಾಮಗಾರಿಯಿಂದ ಈಗಾಗಲೇ ಈ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಲು ಆಗುತ್ತಿಲ್ಲ. ಪೈಪ್‍ಲೈನ್ ಮಾರ್ಗದಲ್ಲಿ ಅಲ್ಲಲ್ಲಿ ಪೈಪ್ ಹೊಡೆಯುತ್ತಿರುವುದರಿಂದ ಕೆರೆಗಳಿಗೆ ನೀರು ತುಂಬಿಸಲು ಆಗುತ್ತಿಲ್ಲ. ಹೀಗಾಗಿ ಜಲಸಂಪನ್ಮೂಲ ಸಚಿವರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನಾನು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು 22 ಕೆರೆಗಳ ಏತನೀರಾವರಿ ಯೋಜನೆಯ ಹೊಸ ಪೈಪ್‍ಲೈನ್ ಕಾಮಗಾರಿ ಕೈಗೊಂಡು ಈ ಭಾಗದ ಕೆರೆಗಳಿಗೆ ಸಂಪೂರ್ಣ ನೀರು ತುಂಬಿಸಿ ರೈತರ ನೀರಿನ ಭವಣೆ ನೀಗಿಸಬೇಕೆಂದು ಒತ್ತಾಯಿಸಿದ್ದೇವೆ.

ಡಿ.ಕೆ.ಶಿವಕುಮಾರ್ ಅವರು ಕೂಡ ಸಾಕಾರಾತ್ಮಕವಾಗಿ ಸ್ಪಂದಿಸಿದ್ದು, ಹೊಸ ಪೈಪ್‍ಲೈನ್ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಆಲೂರು ಮತ್ತು ಮೆಳ್ಳೆಕಟ್ಟೆ ಕೆರೆಗಳಿಗೆ ಪೈಪ್‍ಲೈನ್ ಸಂಪರ್ಕ ಕಲ್ಪಿಸಿ ಕೆರೆಗಳನ್ನು ತುಂಬಿಸುವ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ.ಚಂದ್ರಣ್ಣ, ಮಯಕೊಂಡ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಆಲೂರು ಸಿದ್ದೇಶ್, ಹನುಮಂತಣ್ಣ, ಸೋಮಣ್ಣ, ರೈತರು, ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಇದ್ದರು.

ಮ್ಯಾಸರಹಳ್ಳಿ ಕೆರೆ ಪರಿಶೀಲನೆ
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಮ್ಯಾಸರಹಳ್ಳಿ ಗುಡ್ಡದ ಬಳಿಯಿರುವ ಕೆರೆಯನ್ನು ಮರು ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಭಾನುವಾರ ಜಿಟಿಜಿಟಿ ಸುರಿಯುತ್ತಿದ್ದ ಮಳೆಯ ನಡುವೆಯೂ sಭೇಟಿ ನೀಡಿ ಕೆರೆಯನ್ನು ಪರಿಶೀಲನೆ ನಡೆಸಿದರು.

ಈ ಕೆರೆಯು 30 ಎಕರೆ ಪ್ರದೇಶದ ವ್ಯಾಪ್ತಿ ಹೊಂದಿದ್ದು, ಕೆರೆಯ ಸುತ್ತ ಕೆರೆಯ ಏರಿ ನಿರ್ಮಾಣ ಮಾಡದ ಕಾರಣ ಮಳೆಗಾಲದಲ್ಲಿ ನೀರು ಕೆರೆಯಲ್ಲಿ ಸಂಗ್ರಹವಾಗುವುದಿಲ್ಲ. ಭದ್ರವಾದ ಕೆರೆಯ ಏರಿ ನಿರ್ಮಿಸಿದರೆ ಕೆರೆಯಲ್ಲಿ ನೀರು ಸಂಗ್ರಹವಾಗಿ ಈ ಭಾಗದ ಸಾವಿರಾರು ಎಕರೆ ಪ್ರದೇಶಕ್ಕೆ ಅಂತರ್ಜಲ ಮಟ್ಟ ಹೆಚ್ಚಳವಾಗುವುದಲ್ಲದೇ, ಜನಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸುವುದಿಲ್ಲ ಎಂದು ಮ್ಯಾಸರಹಳ್ಳಿ ಗ್ರಾಮಸ್ಥರು ಶಾಸಕರಿಗೆ ಮನವರಿಕೆ ಮಾಡಿದರು.

ಕೆರೆಯ ವ್ಯಾಪ್ತಿಯ ಸುತ್ತ ಏರಿ ಎತ್ತರಿಸುವ ಮೂಲಕ ಭದ್ರವಾದ ಏರಿ ನಿರ್ಮಾಣ ಮಾಡಿದರೆ ಮಳೆಗಾಲದಲ್ಲಿ ನೀರು ಸಂಗ್ರಹವಾಗುತ್ತದೆ. ಇದರಿಂದ ನೀರಿನ ಸಮಸ್ಯೆ ನೀಗಿಸಬಹುದು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕೆರೆಯ ಏರಿ ನಿರ್ಮಾಣಕ್ಕೆ ಸೂಚಿಸುವುದಾಗಿ ಭರವಸೆ ನೀಡಿದರು. ssಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಸದಸ್ಯರಾದ ಮಹೇಶಣ್ಣ, ಕರಿಬಸಪ್ಪ, ಪಾಲಪ್ಪ, ರುದ್ರೇಶ್, ತಾಪಂ ಮಾಜಿ ಸದಸ್ಯ ಶಂಬಣ್ಣ, ಕಲ್ಲೇಶಣ್ಣ ಹಾಗೂ ಗ್ರಾಮಸ್ಥರು ಇದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ ; ಡಾ : ಪ್ರಭಾ ಮಲ್ಲಿಕಾರ್ಜುನ್
Next Article DAVANAGERE Karnataka State BJP | ಬಿಜೆಪಿಯಲ್ಲಿ ಬಾಲಭವನ ವರ್ಸಸ್ ವೃದ್ಧಾಶ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪಾಂಡ್ಸ್ ಪೌಡರಿನ ಪರಿಮಳದ ಸಂಜೆಗಳ ನೆನಪು

ಏಳನೆಯ ಕ್ಲಾಸಿಗೆ ಬರುವಷ್ಟೊತ್ತಿಗೆ ನಾವು ಓದುತ್ತಿದ್ದ ಶಾಲೆಯ ಋಣ ತೀರಿತ್ತೆಂದು ಕಾಣುತ್ತೆ ,ಆ ಶಾಲೆಯನ್ನು ಬಿಟ್ಟು ಹೋಗಲೇಬೇಕಾದ ಪರಿಸ್ಥಿತಿ ಒದಗಿಬಂದಿತು.ನಾನು‌…

By Dinamaana Kannada News

ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಶಿಕ್ಷೆ

ದಾವಣಗೆರೆ  (Davanagere):  ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ…

By Dinamaana Kannada News

ನೀರು ಸರಬರಾಜು ಕೇಂದ್ರಕ್ಕೆ ಡಿಸಿ ಭೇಟಿ, ಪರಿಶೀಲನೆ

ದಾವಣಗೆರೆ :  ದಾವಣಗೆರೆ -ಹರಿಹರ ಜನರಿಗೆ ನೀರು ಸರಬರಾಜರಾಗುವ ಹರಿಹರ ಸಮೀಪದ ಜಾಕ್‌ವೆಲ್‌ಗೆ ಬುಧವಾರ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ…

By Dinamaana Kannada News

You Might Also Like

Chitradurga
ತಾಜಾ ಸುದ್ದಿ

Chitradurga | ಗರಗ ಗ್ರಾಮದ ತಿಪ್ಪೇಶ್ ಕಾಣೆ

By Dinamaana Kannada News
Dr. Prabha Mallikarjun
ತಾಜಾ ಸುದ್ದಿ

ಆಪರೇಷನ್ ಸಿಂಧೂರ್ ಯಶಸ್ಸು; ನಗರದೇವತೆಗೆ ಸಂಸದರಿಂದ ವಿಶೇಷ ಪೂಜೆ

By Dinamaana Kannada News
Davanagere
Blogತಾಜಾ ಸುದ್ದಿ

Davanagere | ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜಿ ಆರ್  ಕುಸುಮಗೆ ರಾಗಾಆವಿವಿವಿ ದಿಂದ ಡಾಕ್ಟರೇಟ್ ಪದವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?