Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದವರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿ: ಸೈಯದ್ ಖಾಲಿದ್ ಅಹ್ಮದ್ ಒತ್ತಾಯ
ತಾಜಾ ಸುದ್ದಿ

Davanagere | ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದವರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿ: ಸೈಯದ್ ಖಾಲಿದ್ ಅಹ್ಮದ್ ಒತ್ತಾಯ

Dinamaana Kannada News
Last updated: September 18, 2024 12:25 pm
Dinamaana Kannada News
Share
Davanagere
ಸೈಯದ್ ಖಾಲಿದ್ ಅಹ್ಮದ್
SHARE

ದಾವಣಗೆರೆ (Davanagere):   ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ‌ ಕೊಡುವುದಾಗಿ ಹೇಳಿರುವ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಮತ್ತು ರಾಹುಲ್ ಗಾಂಧಿ ಭಯೋತ್ಪಾದಕ ಎಂಬ ವಿವಾದಾತ್ಮಕ ಮಾತು ಆಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರನ್ನು ಬಂಧಿಸಿ ಜೈಲಿಗಟ್ಟಬೇಕು. ಕೂಡಲೇ ಇಬ್ಬರು ರಾಜೀನಾಮೆ ನೀಡಬೇಕು ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಹೋರಾಟ ಮುಂದುವರಿಸಿದ್ದಾರೆ. ಅಕ್ರಮಗಳನ್ನು ಬಯಲಿಗೆಳೆಯುತ್ತಿದ್ದಾರೆ. ಸರ್ವಾಧಿಕಾರಿ ಆಡಳಿತದ ವಿರುದ್ಧ ಧ್ವನಿ ಎತ್ತಿದ್ದಾರೆ. ಐಟಿ, ಇಡಿ, ಸಿಬಿಐನಂಥ ಸ್ವಾಯುತ್ತ ಸಂಸ್ಥೆಗಳ ದುರ್ಬಳಕೆ ವಿರುದ್ಧ ಜನರಿಗೆ ಮನದಟ್ಟು ಮಾಡುವ ಕೆಲಸ ಮಾಡುತ್ತಿದ್ದು, ಇಂಥ ನಾಯಕನ ನಾಲಗೆ ಕತ್ತರಿಸಿ, ಭಯೋತ್ಪಾದಕ ಎಂಬ ಹೇಳಿಕೆ ನೀಡಿದ್ದರೂ ಕೇಂದ್ರದ ಬಿಜೆಪಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನು ಗಮನಿಸಿದರೆ ಬಿಜೆಪಿ ನಾಯಕರ ಕೈವಾಡ ಇರುವುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದ್ದಾರೆ.

ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. ಉನ್ನತ ತ್ಯಾಗ, ಬಲಿದಾನದ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ನಡೆಸಿ ದೇಶಾದ್ಯಂತ ಜನರಿಗೆ ಹತ್ತಿರವಾದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಲೋಕಸಭಾ ಸ್ಥಾನ ಪಡೆಯಲು ಇದು ಕಾರಣವಾಯಿತು. ದಿನಕಳೆದಂತೆ ರಾಹುಲ್ ಗಾಂಧಿ ಅವರ ಜನಪ್ರಿಯತೆ ಕಂಡು ಹೆದರಿರುವ ಬಿಜೆಪಿ ನಾಯಕರು ಬೆದರಿಕೆ ಹಾಕುವಂಥ ಕೃತ್ಯಕ್ಕೆ ಹಾಕಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.

Read also : Harihara | ಆತ್ಮರಕ್ಷಣೆಗೆ ಟೇಕ್ವಾಂಡೋ ಕಲೆ ಸಹಕಾರಿ

ರಾಹುಲ್ ಗಾಂಧಿ ಅವರಿಗೆ ಅವರ ಅಜ್ಜಿ ಇಂದಿರಾ ಗಾಂಧಿಗೆ ಆದ ಗತಿಯೇ ಆಗುತ್ತದೆ ಎಂಬ ಬೆದರಿಕೆಯನ್ನು ಬಿಜೆಪಿ ನಾಯಕರು ಹಾಕುತ್ತಿದ್ದಾರೆ. ಈ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಸುತ್ತಿರುವುದು ಕಂಡು ಬರುತ್ತಿದೆ. ನಾಲಗೆ ಕತ್ತರಿಸುವ ಮಾತನಾಡಿರುವ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಕಳುಹಿಸಬೇಕು. ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕ್ರಮ ಕೈಗೊಂಡಿಲ್ಲ. ಕಾಟಾಚಾರಕ್ಕೆ ಪ್ರಕರಣ ದಾಖಲಿಸಲಾಗಿದೆ.

ಪ್ರತಿಭಟನೆ ನಡೆಸುವ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಬೆದರಿಕೆ ಹಾಕಿದ್ದು, ಈತನನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಸೈಯದ್ ಖಾಲಿದ್ ಅಹ್ಮದ್ ಆಗ್ರಹಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Harihara | ಆತ್ಮರಕ್ಷಣೆಗೆ ಟೇಕ್ವಾಂಡೋ ಕಲೆ ಸಹಕಾರಿ
Next Article Application for Youth Fund Scheme Davanagere | ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಸೆ.25 ಕೊನೆ ದಿನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶೋಷಿತರಿಗೆ “ಜಾತಿಗಣತಿ” ಜಾರಿಯಾಗಬೇಕು: ಜಿ. ಬಿ. ವಿನಯ್ ಕುಮಾರ್ ಅಭಿಮತ

ದಾವಣಗೆರೆ (Davanagere): ಕರ್ನಾಟಕದಲ್ಲಿ ಬಹುಮುಖ್ಯವಾಗಿ ಚರ್ಚಿತವಾಗುತ್ತಿರುವುದು ಜಾತಿಗಣತಿ ವಿಚಾರ. ಇದು ಜಾತಿಗಣತಿ ಅಲ್ಲ. ಎಲ್ಲಾ ಜಾತಿ, ಧರ್ಮದವರ ಆರ್ಥಿಕ, ಶೈಕ್ಷಣಿಕ,…

By Dinamaana Kannada News

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು : ಕಲ್ಲು ತೂರಾಟ, 7 ಪೊಲೀಸ್ ವಾಹನ ಜಖಂ

ಚನ್ನಗಿರಿ :   ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಮಟ್ಕಾ ಜೂಜಾಟ ಪ್ರಕರಣದ ಆರೋಪಿ ಆದೀಲ್ ಎಂಬಾತನನ್ನು ಪೊಲೀಸರು ವಿಚಾರಣೆಗೆ ಕರೆದುಕೊಂಡು ಬಂದ…

By Dinamaana Kannada News

ಅಮೃತ ವರ್ಷಿಣಿ ವಿದ್ಯಾಲಯ : ನಾಯಕರೊಳು ಅಸಾಮಾನ್ಯರೆನಿಸದ ಕೆಂಪೇಗೌಡರು

ಕುಮಾರಪಟ್ಟಣ : ಅಮೃತ ವರ್ಷಿಣಿ ವಿದ್ಯಾಲಯದಲ್ಲಿ ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ ಕರ್ನಾಟಕದ ನಾಡಪ್ರಭು ಎಂದೇ ಪ್ರಸಿದ್ಧಿ ಪಡೆದಂತಹ ಕೆಂಪೇಗೌಡರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?