Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪ್ರೊ.ಪ್ರಸನ್ನಕುಮಾರ್‌ಗೆ ಸರ್ ಸಿ.ವಿ.ರಾಮನ್ ಯುವ ವಿಜ್ಞಾನಿ ಪುರಸ್ಕಾರ
ತಾಜಾ ಸುದ್ದಿ

Davanagere | ಪ್ರೊ.ಪ್ರಸನ್ನಕುಮಾರ್‌ಗೆ ಸರ್ ಸಿ.ವಿ.ರಾಮನ್ ಯುವ ವಿಜ್ಞಾನಿ ಪುರಸ್ಕಾರ

Dinamaana Kannada News
Last updated: September 20, 2024 1:15 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere): ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತಶಾಸ್ತ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಪ್ರೊ.ಬಿ.ಸಿ.ಪ್ರಸನ್ನಕುಮಾರ ಅವರು ರಾಜ್ಯಮಟ್ಟದ ಸರ್ ಸಿ.ವಿ.ರಾಮನ್ ಯುವ ವಿಜ್ಞಾನಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗಾಗಿ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಯನ್ನು ೨೦೨೩ನೇ ಸಾಲಿಗಾಗಿ ಪ್ರೊ.ಪ್ರಸನ್ನಕುಮಾರ ಅವರನ್ನು ಆಯ್ಕೆ ಮಾಡಲಾಗಿದೆ. ಗಣಿತಶಾಸ್ತç ಕ್ಷೇತ್ರಕ್ಕೆ ನೀಡಿರುವ ವಿಶಿಷ್ಟ ಸಂಶೋಧನೆ ಮತ್ತು ಕೊಡುಗೆಯನ್ನು ಪರಿಗಣಿಸಿ ಪ್ರಶ್ನೆಗೆ ಆಯ್ಕೆ ಮಾಡಲಾಗಿದೆ ಎಂದು ಇಲಾಖೆಯ ಕಾರ್ಯದರ್ಶಿ ಡಾ.ಏಕ್‌ರೂಪ್ ಕೌರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೊ.ಪ್ರಸನ್ನಕುಮಾರ ಅವರು ಕಳೆದ ನಾಲ್ಕು ವರ್ಷಗಳಿಂದ ಸ್ಟಾöನ್‌ಫೋರ್ಡ್ ವಿಶ್ವವಿದ್ಯಾಲಯ ಸಿದ್ಧಪಡಿಸಿರುವ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಪ್ರೊ.ಪ್ರಸನ್ನಕುಮಾರ ಅವರು ತಮ್ಮ ಜೊತೆಗೆ ಸಂಶೋಧನಾ ವಿದ್ಯಾರ್ಥಿಗಳಿಗೂ ಸಂಶೋಧನೆಯಲ್ಲಿ ಉತ್ತಮ ಮಾರ್ಗದರ್ಶನ ನೀಡಿ, ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವಂತೆ ಮಾಡಿದ್ದಾರೆ. ಗಣಿತಶಾಸ್ತçದಲ್ಲಿ ಅಧ್ಯಾಪನ, ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ವಿಶೇಷ ಕೊಡುಗೆ ನೀಡಿದ್ದನ್ನು ಗಮನಿಸಬಹುದು.

ಸೆಪ್ಟೆಂಬರ್ 26 ರಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಆವರಣದ ಜೆ.ಎನ್.ಟಾಟಾ ಸಭಾಭವನದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಪ್ರೊ.ಪ್ರಸನ್ನಕುಮಾರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಡಾ.ಕೌರ್ ಹೇಳಿದ್ದಾರೆ.

Read also : Davanagere | ಸ್ವಚ್ಛತಾ ಕಾರ್ಯಕ್ರಮ : ಪಿ.ಬಿ.ರಸ್ತೆಯಲ್ಲಿ ಕಸಗುಡಿಸಿದ ಡಿಸಿ, ಎಸ್ಪಿ, ಸಿಇಒ

ರಾಜ್ಯಮಟ್ಟದ ಸರ್ ಸಿ.ವಿ.ರಾಮನ್ ಯುವ ವಿಜ್ಞಾನಿ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಪ್ರೊ.ಪ್ರಸನ್ನಕುಮಾರ ಅವರಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ, ಕುಲಸಚಿವ ಪ್ರೊ.ಆರ್.ಶಶಿಧರ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ, ದಾವಣಗೆರೆ ವಿಶ್ವವಿದ್ಯಾನಿಲಯ ಅಧ್ಯಾಪಕರ ಸಂಘದ ಅಧ್ಯಕ್ಷ ಶಿವಕುಮಾರ ಕಣಸೋಗಿ ಅಭಿನಂದಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಸ್ವಚ್ಛತಾ ಕಾರ್ಯಕ್ರಮ : ಪಿ.ಬಿ.ರಸ್ತೆಯಲ್ಲಿ ಕಸಗುಡಿಸಿದ ಡಿಸಿ, ಎಸ್ಪಿ, ಸಿಇಒ
Next Article davanagere Davanagere | ಮದ್ಯ ಮಾರಾಟ ನಿಷೇಧ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಿ-ಖಾತಾಗೆ ಶುಲ್ಕ ನಿಗಧಿಗೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಗರಂ : ಹೆಚ್ಚುವರಿ ಶುಲ್ಕ ಆದೇಶ ರದ್ದು

ದಾವಣಗೆರೆ  (Davanagere): ಅನಧಿಕೃತ ಬಡಾವಣೆಯ ಸೈಟ್, ಮನೆ, ಕಟ್ಟಡಗಳಿಗೆ ಡೋರ್ ನಂಬರ್ ನೀಡಲು ನಿಗಧಿ ಮಾಡಿದ್ದ 10 ಸಾವಿರ  ಶುಲ್ಕವನ್ನು…

By Dinamaana Kannada News

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ  : ಪ್ರಸಕ್ತ ಸಾಲಿನ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ…

By Dinamaana Kannada News

ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

ದಾವಣಗೆರೆ (Davanagere) : ಮನೆ ಕಳ್ಳತನ ಮತ್ತು ಬೈಕ್ ಗಳನ್ನು ಕಳ್ಳತನ ಮಾಡಿದ್ದ ಆರೋಪಿ ಹಾಗೂ ಇಬ್ಬರು ಅಪ್ರಾಪ್ತ ಬಾಲಕರನ್ನು…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಮಾಂಗಲ್ಯ ಸರ ಕಿತ್ತು ಪರಾರಿ ಪ್ರಕರಣ : ಆರೋಪಿಗಳ ಸೆರೆ

By Dinamaana Kannada News
Davanagere
ತಾಜಾ ಸುದ್ದಿ

ಸಂವಿಧಾನ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ : ಐಜಿಪಿ ಡಾ.ರವಿಕಾಂತೇಗೌಡ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ: ಡಿ.30ರಂದು ಕಮ್ಮವಾರಿ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ವ್ರತ ಹಾಗೂ ಪ್ರತಿಭಾ ಪುರಸ್ಕಾರ

By Dinamaana Kannada News
Free legal aid for Scheduled Caste
ಅಭಿಪ್ರಾಯತಾಜಾ ಸುದ್ದಿ

ಪ.ಜಾತಿ,ಪ.ಪಂಗಡದ ಜನರ ರಕ್ಷಣೆಗೆ ಇರುವ ಕಠಿಣ ಕಾನೂನುಗಳ:ನ್ಯಾ.ಮಹಾವೀರ ಮ.ಕರೆಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?