Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere | 5 ಲಕ್ಷಕ್ಕೆ ಶಿಶು ಮಾರಾಟ : ವೈದ್ಯೆ ಸೇರಿ ಎಂಟು ಮಂದಿ ಬಂಧನ
ಅಪರಾಧ ಸುದ್ದಿ

Davanagere | 5 ಲಕ್ಷಕ್ಕೆ ಶಿಶು ಮಾರಾಟ : ವೈದ್ಯೆ ಸೇರಿ ಎಂಟು ಮಂದಿ ಬಂಧನ

Dinamaana Kannada News
Last updated: October 10, 2024 7:57 am
Dinamaana Kannada News
Share
Selling baby for Rs 5 lakh Eight arrested including doctor
Selling baby for Rs 5 lakh Eight arrested including doctor
SHARE

ದಾವಣಗೆರೆ  (Davanagere ):  ನಕಲಿ ದಾಖಲೆ ಸೃಷ್ಟಿಸಿ 5 ಲಕ್ಷ ರೂ.ಗೆ ಶಿಶು ಮಾರಾಟ ಮಾಡಿರುವ ಜಾಲ ಭೇದಿಸಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ಮಹಿಳಾ ಠಾಣೆಯ ಪೊಲೀಸರು ವೈದ್ಯ ಸೇರಿದಂತೆ ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ನಗರದ ಎಂ.ಕೆ.ಮೆಮೋರಿಯಲ್ ಆಸ್ಪತ್ರೆಯ ವೈದ್ಯೆ ಭಾರತಿ, ಶಿಶುವಿನ ತಾಯಿ ಕಾವ್ಯಾ, ಶಿಶು ಖರೀದಿಸಿದ್ದ ಜಯಾ ಮತ್ತು ಪ್ರಶಾಂತ್‌ಕುಮಾರ್ ದಂಪತಿ, ಮಧ್ಯವರ್ತಿಗಳಾದ ವಾದಿರಾಜ್, ಮಂಜಮ್ಮ, ಸುರೇಶ್ ಮತ್ತು ರಮೇಶ್ ಬಂಧಿತ ಆರೋಪಿಗಳು. ವಿಚಾರಣೆ ನಡೆಸಿದ ಪೊಲೀಸರು ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಾರಾಟವಾಗಿದ್ದ ಎರಡೂವರೆ ತಿಂಗಳ ಗಂಡು ಶಿಶುವಿಗೆ ಮಕ್ಕಳ ಆರೈಕೆ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ.

ವ್ಯಕ್ತಿಯೊಬ್ಬರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಈ ದಂಪತಿಯು ಶಿಶುವನ್ನು ಮಾರಾಟ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದರು. ಕರೆಯ ಜಾಡು ಹಿಡಿದು ಬೆನ್ನತ್ತಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಟಿ.ಎನ್.ಕವಿತಾ ನೇತೃತ್ವದ ತಂಡ ವಿನೋಬನಗರದ ಜಯಾ ಪ್ರಶಾಂತ್ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ದಂಪತಿ ಒದಗಿಸಿದ ಶಿಶು ಜನನ ಪ್ರಮಾಣ ಪತ್ರವನ್ನು ಆಧರಿಸಿ ಎಂ.ಕೆ.ಮೆಮೋರಿಯಲ್ ಆಸ್ಪತ್ರೆಗೆ ಭೇಟಿ ನೀಡಿದಾಗ ಶಿಶು ಮಾರಾಟದ ವಿಚಾರ ಬಹಿರಂಗಗೊಂಡಿದೆ.

‘ವಿಚ್ಛೇದಿತ ಮಹಿಳೆ ಕಾವ್ಯಾ ಎರಡೂವರೆ ತಿಂಗಳ ಹಿಂದೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಶಿಶುವಿಗೆ ಜನ್ಮ ನೀಡಿದ್ದರು. ದಾವಣಗೆರೆಗೆ ಮರಳಿದ ನಂತರ ಶಿಶು ಮಾರಾಟಕ್ಕೆ ನಿರ್ಧರಿಸಿದ್ದರು. ಎಂಟು ವರ್ಷಗಳಿಂದ ಮಕ್ಕಳಾಗದ ಕೊರಗಿನಲ್ಲಿದ್ದ ದಂಪತಿಯನ್ನು ಮಧ್ಯವರ್ತಿ ವಾದಿರಾಜ್ ಸಂಪರ್ಕಿಸಿದ್ದ. 5 ಲಕ್ಷಕ್ಕೆ ಶಿಶು ಖರೀದಿಸಲು ದಂಪತಿ ಒಪ್ಪಿದ್ದರು. ಎಂ.ಕೆ.ಮೆಮೋರಿಯಲ್ ಆಸ್ಪತ್ರೆಯ ವೈದ್ಯೆ ಭಾರತಿ ಹಾಗೂ ಸಿಬ್ಬಂದಿ ಮಂಜುಳಾ, ನಕಲಿ ಜನನ ಪ್ರಮಾಣ ಪತ್ರಕ್ಕೆ ಸಹಕಾರ ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

Read also : Davanagere | ಶ್ರೀ ಬನ್ನಿ ಮಹಾಂಕಾಳಿ , ವರದಾಂಜನೇಯ ದೇವಸ್ಥಾನದಲ್ಲಿ 11ರಂದು ವಿಶೇಷ ಪೂಜೆ ,  ಅನ್ನ ಸಂತರ್ಪಣೆ

‘ಜಯಾ ಹಾಗೂ ಪ್ರಶಾಂತ್ ದಂಪತಿಗೆ ಆ.26ರಂದು ಶಿಶು ಜನನವಾಗಿದೆ ಎಂಬುದಾಗಿ ಡಾ.ಭಾರತಿ ದಾಖಲೆ ಸೃಷ್ಟಿಸಿದ್ದರು. ಆಸ್ಪತ್ರೆಯ ದಾಖಲೆಗಳನ್ನು ಆಧರಿಸಿ ಮಹಾನಗರ ಪಾಲಿಕೆಯಲ್ಲಿ ಶಿಶುವಿನ ಜನನ ಪ್ರಮಾಣ ಪತ್ರ ಪಡೆಯಲಾಗಿತ್ತು. ಆರೋಪಿಗಳ ವಿರುದ್ಧ ಬಾಲ ನ್ಯಾಯ ಕಾಯ್ದೆ 2015, ಮಕ್ಕಳ ರಕ್ಷಣಾ ಕಾಯ್ದೆ 2004 ಹಾಗೂ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಾಗಿದೆ’ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE Davanagere | ಶ್ರೀ ಬನ್ನಿ ಮಹಾಂಕಾಳಿ , ವರದಾಂಜನೇಯ ದೇವಸ್ಥಾನದಲ್ಲಿ 11ರಂದು ವಿಶೇಷ ಪೂಜೆ . ಅನ್ನ ಸಂತರ್ಪಣೆ
Next Article Rural Development and Panchayat Raj Department officials and employees strike Davanagere | ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ : ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಚನ್ನಪಟ್ಟಣದಲ್ಲಿ ಡಿಕೆಸು ವರ್ಸಸ್  ಅನಿತಕ್ಕ?

ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಬಿಜೆಪಿಯ ಐರನ್ ಮ್ಯಾನ್ ಅಮಿತ್ ಷಾ ಅವರನ್ನು ಭೇಟಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-24 …….. ಧ್ಯಾನ

ಧ್ಯಾನ……..ಇಂತಹದೊಂದು ವಿಷಮ ಸಾಮಾಜಿಕ ವ್ಯವಸ್ಥೆಗೆ ನಾವು ಬಾಧ್ಯಸ್ಥರಲ್ಲವೆಂದು ದೂರದ ಊರುಗಳಲ್ಲಿ, ನಾವು  ಏನೂ ಆಗಿಯೇ ಇಲ್ಲವೆಂದು ತಣ್ಣಗೆ ನಮ್ಮ ನಮ್ಮ…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ : ಒಂದೇ ಸಮುದಾಯಕ್ಕೆ ಆದ್ಯತೆ , ಡಿಎಸ್‌ಎಸ್‌ ಆಕ್ರೋಶ

ಹರಿಹರ (Harihara): ಛಲವಾದಿ ಜಾತಿಗೆ ಸೇರಿದವರನ್ನು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಆಯ್ಕೆಯಾಗುವಂತೆ ನೋಡಿಕೊಂಡಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪನವರು ತಕ್ಷಣ ರಾಜೀನಾಮೆ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ

By Dinamaana Kannada News
10 Permanent Driver Posts: Applications invited from ex-servicemen
ತಾಜಾ ಸುದ್ದಿ

ದಾವಣಗೆರೆ |10 ಖಾಯಂ ಚಾಲಕ ಹುದ್ದೆ : ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

By Dinamaana Kannada News
Vinaykumara G B
ತಾಜಾ ಸುದ್ದಿ

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

By Dinamaana Kannada News
MP Dr. Prabha Mallikarjun
ತಾಜಾ ಸುದ್ದಿ

ಇಎಸ್‌ಐ ಅರ್ಹತಾ ಮಿತಿಯನ್ನು ಪರಿಷ್ಕರಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?