Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಲಿಂಗ ತಾರತಮ್ಯವಿಲ್ಲದೇ ಜೀವಿಸುವ, ಶಿಕ್ಷಣ ಪಡೆಯುವ ಹಕ್ಕು ಸಮಾನವಾಗಿದೆ : ಮಹಾವೀರ್ ಎಂ.ಕರೆಣ್ಣನವರ್
ತಾಜಾ ಸುದ್ದಿ

ಲಿಂಗ ತಾರತಮ್ಯವಿಲ್ಲದೇ ಜೀವಿಸುವ, ಶಿಕ್ಷಣ ಪಡೆಯುವ ಹಕ್ಕು ಸಮಾನವಾಗಿದೆ : ಮಹಾವೀರ್ ಎಂ.ಕರೆಣ್ಣನವರ್

Dinamaana Kannada News
Last updated: October 16, 2024 12:38 pm
Dinamaana Kannada News
Share
davanagere
davanagere
SHARE

ದಾವಣಗೆರೆ ಅ.16 (Davanagere) : ಲಿಂಗ ಅಸಮಾನತೆ ಇಲ್ಲದೆ ಹೆಣ್ಣಿರಲಿ, ಗಂಡಿರಲಿ ಸಂವಿಧಾನಾತ್ಮಕವಾಗಿ ಜೀವಿಸುವ ಹಾಗೂ ಶಿಕ್ಷಣ ಪಡೆಯುವ ಹಕ್ಕು ಸಮಾನವಾಗಿರುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ  ಮಹಾವೀರ್ ಎಂ. ಕರೆಣ್ಣನವರ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಲಲಿತಾ ಇಂಟರ್ ನ್ಯಾಷನಲ್ ಶಾಲೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ಮಿಷನ್ ಶಕ್ತಿ ಯೋಜನೆಯ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಅಂತರಾಷ್ತ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಹೆಣ್ಣು ಮಗುವಿನ ಪ್ರಾಮುಖ್ಯತೆ ಕುರಿತು ಹಮ್ಮಿಕೊಳ್ಳಲಾಗಿದ್ದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದರು.

ಹೆಣ್ಣು ಭ್ರೂಣ ಹತ್ಯೆ, ಗಂಡು ಮಗು ಬೇಕು ಎಂಬ ಕುಟುಂಬದವರ ಹಂಬಲ, ಇದು ಪರಿಸರಕ್ಕೆ ವಿರುದ್ಧವಾದ ಚಟುವಟಿಕೆಯಾಗಿದೆ. ಅಪ್ರಾಪ್ತ ವಯಸ್ಸಿನ ಗಂಡು ಮತ್ತು ಹೆಣ್ಣು ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆಯನ್ನು ಮಾಡುವುದರ ಕುರಿತು ಪೋಕ್ಸೋ ಕಾಯ್ದೆಯಲ್ಲಿನ ಕಾನೂನುಗಳ ಕುರಿತು ಮಕ್ಕಳಿಗೆ ತಿಳುವಳಿಕೆ ನೀಡುತ್ತಾ, ಈ ರೀತಿಯ ಯಾವುದಾದರೂ ಪ್ರಕರಣಗಳು ಕಂಡು ಬಂದಲ್ಲಿ 1098 ಮಕ್ಕಳ ಸಹಾಯವಾಣಿಗೆ, 112 ಏಕ ತುರ್ತು ಸಹಾಯವಾಣಿಗೆ ಕರೆ ಮಾಡುವುದರ ಮುಖಾಂತರ ಅಪಾಯದಲ್ಲಿರುವ ಮಕ್ಕಳನ್ನು ರಕ್ಷಣೆ ಮಾಡಬಹುದು ಎಂದು ತಿಳಿಸಿದರು.

ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾನೂನುಗಳು ಇರುವುದರ ಕುರಿತಾಗಿ ಮಾಹಿತಿ ನೀಡಿದರು. ನಮ್ಮ ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳಿಗೆ ಉತ್ತಮ ಸ್ಥಾನಮಾನ ನೀಡಿರುತ್ತಾರೆ. ಆದರೆ  ಸುತ್ತ ಮುತ್ತಲಿನ ದೇಶಗಳಲ್ಲಿ ಹೆಣ್ಣು ಮಕ್ಕಳಿಗೆ ಪ್ರಾಮುಖ್ಯತೆ ನೀಡಿರುವುದಿಲ್ಲ, ಆದ್ದರಿಂದ ಆ ದೇಶಗಳಲ್ಲಿ ಅಭಿವೃದ್ದಿ ಹೊಂದಿರುವುದಿಲ್ಲ, ಬೇರೆ ದೇಶಗಳು ಹಿಂದುಳಿಯುವುದಕ್ಕೆ ಇದು ಒಂದು ಪ್ರಮುಖ ಕಾರಣವಾಗಿರುತ್ತದೆ. ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಲೆಯ ವಿದ್ಯಾರ್ಥಿನಿಯರಿಗೆ ಕಾರ್ಯಕ್ರಮದ ಕುರಿತಾಗಿ 2 ಪುಟಗಳ ಸಾರಾಂಶವನ್ನು ಬರೆದು ತಮಗೆ ಕಳುಹಿಸಿಕೊಡುವಂತೆ ತಿಳಿಸಿದರು.

Read also : Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಡಿಸಿಗೆ ಮನವಿ

ಜಿಲ್ಲಾ ವಕೀಲರ ಸಂಘದ ಮಹಿಳಾ ಪ್ರತಿನಿಧಿ ಸದಸ್ಯರಾದ ಭಾಗ್ಯಲಕ್ಷ್ಮಿ  ಮಹಿಳೆಯರ ಮತ್ತು ಮಕ್ಕಳ ಸಂವಿಧಾನಾತ್ಮಕ ಹಕ್ಕುಗಳ ಕುರಿತು ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿ, ಬಾಣಂತಿಯರಿಗೆ ಪೂರಕ ಪೌಷ್ಠಿಕ ಆಹಾರವನ್ನು ಒದಗಿಸುತ್ತಿದ್ದಾರೆ. ಮಕ್ಕಳಿಗೆ ಸರಿಯಾದ ಸಮಯದಲ್ಲಿ ಸ್ತನ್ಯಪಾನವನ್ನು ಮಾಡಿಸುವುದರ ಮೂಲಕ ಮಕ್ಕಳ ಶಾರೀರಿಕ, ಬೌದ್ಧಿಕ ಬೆಳವಣಿಗೆಗೆ ಪೂರಕ ವಾತಾವರಣವನ್ನು ನಿರ್ಮಾಣಮಾಡಬೇಕು, ಭೂಮಿತಾಯಿ ಸಕಲ ಜೀವಿಗಳಿಗೆ ಬದುಕಲು ನೆಲ, ಜಲ, ಗಾಳಿ ನೀಡುತ್ತದೆ, ಇದೇ ಸ್ಥಾನ ಹೆಣ್ಣು ಮಕ್ಕಳಿಗಿದ್ದು, ಹೆಣ್ಣು ಮಕ್ಕಳ ಶಿಕ್ಷಣ, ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಗು ತಾಯಿಯ ಗರ್ಭದಲ್ಲಿರುವಾಗ ಮತ್ತು ನಂತರ ಬೆಳವಣಿಗೆಯಾಗಲು ತಾಯಿಯ ಆರೈಕೆ ಅತ್ಯಗತ್ಯವಾಗಿದೆ. ಈ ಹಂತದಲ್ಲಿ ತಾಯಿಗೆ ಪೌಷ್ಠಿಕ ಆಹಾರ ಬಹಳ ಮುಖ್ಯವಾಗಿರುತ್ತದೆ. ಮಗು ಹುಟ್ಟುವ ಮುನ್ನ, ನಂತರದ ಬೆಳವಣಿಗೆ ಹಾಗೂ ತನ್ನ ವಿದ್ಯಾಭ್ಯಾಸ ಮಾಡಲು ತಾಯಿಯ ಶ್ರಮ ಸಾಕಷ್ಠಿರುತ್ತದೆ.

ಮಕ್ಕಳ ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶದ ಬಗ್ಗೆ, 18 ವರ್ಷದೊಳಗಿನ ಹೆಣ್ಣು ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಮತ್ತು ಚಂಚಲತೆಯಿಂದ ಕೂಡಿದ್ದು, ಈ ಸಮಯದಲ್ಲಿ ಮನಸ್ಸನ್ನು ನಾವೇ ಹತೋಟಿಯಲ್ಲಿಟ್ಟುಕೊಳ್ಳಬೇಕು, ಅತೀ ಹೆಚ್ಚು ಮೊಬೈಲ್ ಬಳಕೆ ಮಾಡಬಾರದು, ಹೆಣ್ಣು ಯಾವಾಗಲೂ ನಗುನಗುತ್ತಾ ಇರಬೇಕು, ಸ್ತ್ರೀಯರನ್ನು ಗೌರವಿಸಬೇಕು, ಭಾರತವು ಅಭಿವೃದ್ಧಿ ಹೊಂದುತ್ತಿರುವ ರಾಷ್ತ್ರವಾಗಿದ್ದು, ಈ ರಾಷ್ಟ್ರದಲ್ಲಿ ಹೆಣ್ಣು ಮಕ್ಕಳಿಗೆ ಶೈಕ್ಷಣಿಕವಾಗಿ ಪೂರಕವಾದ ವಾತಾವರಣವನ್ನು ಸೃಷ್ಠಿಸಿ ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ, ರಾಜಕೀಯ ಆರ್ಥಿಕ ಕ್ಷೇತ್ರದಲ್ಲಿ ನಿರ್ದಿಷ್ಟ ಮೀಸಲಾತಿಯನ್ನು ನೀಡಲಾಗಿದೆ, ಜಾತಿ ಅಸಮಾನತೆ ಉಂಟಾಗಬಾರದೆಂದು ಸಂವಿಧಾನದಲ್ಲಿ ಪ್ರಮುಖ ಮಿಸಲಾತಿಯನ್ನು ನೀಡಲಾಗಿದೆ. ಪ್ಲಾಸ್ಟಿಕ್ ಮುಕ್ತ ರಾಷ್ಟ್ರವನ್ನು ಮಾಡುವುದರಲ್ಲಿ ಎಲ್ಲಾ ವಿದ್ಯಾರ್ಥಿನಿಯರು ಕೈ ಜೋಡಿಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದು ತಿಳಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಭಿಕುಮಾರ್ ಜಿ.ಎಸ್. ಪ್ರಾಂಶುಪಾಲರಾದ ಮಣಿಕಂಠನ್ ಕೆ.ವಿ., ಲಲಿತಾ ಇಂಟರ್ ನ್ಯಾಷನಲ್ ಶಾಲೆ, ಆಡಳಿತಾಧಿಕಾರಿ ಸುರೇಶ್ ಜಿ.ಪಿ. ಲಲಿತಾ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿಯರು ಹಾಜರಿದ್ದರು

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಡಿಸಿಗೆ ಮನವಿ
Next Article davanagere 21 ದಿನಗಳೊಳಗಾಗಿ ಜನನ, ಮರಣ ಪ್ರಮಾಣ ಪತ್ರ ವಿತರಿಸಲು ಡಿಸಿ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ದೊಡ್ಡ ಗಾತ್ರದ ಹಣವಿದ್ದರೂ ಎಸ್ಸಿ-ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತ : ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (DAVANAGERE): ಸಮಾಜ ಕಲ್ಯಾಣ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳು ಹಾಸ್ಟೆಲ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಬಜೆಟ್‌ನಲ್ಲಿ…

By Dinamaana Kannada News

ನವೋದ್ಯಯ ಸ್ಥಾಪನೆಗೆ ಹತ್ತು ಹಲವು ಅವಕಾಶ : ಸಿ.ಎಂ.ಪಾಟೀಲ್

ದಾವಣಗೆರೆ:  ಸ್ಟಾರ್ಟಅಪ್ ಅಂದರೆ ನವೋದ್ಯಮ ಸ್ಥಾಪನೆಗೆ ಈಗ ಸುವರ್ಣಯುಗ ಇದಕ್ಕೆ ಹತ್ತು ಹಲವು ಅವಕಾಶಗಳು ಇವೆ ಆದುದರಿಂದ ಮೊದಲಿಗೆ ಯಾವ…

By Dinamaana Kannada News

Crime News | ಮನೆ ಕಳ್ಳತನ ಪ್ರಕರಣ : ಆರೋಪಿ ಸೆರೆ

ದಾವಣಗೆರೆ (Davanagere): ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದರು ವಿದ್ಯಾನಗರ ಪೊಲೀಸರು 33,24,300/- ರೂ ಮೌಲ್ಯದ ಸ್ವತ್ತು ವಶ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?