Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

Dinamaana Kannada News
Last updated: May 20, 2025 1:22 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಮುಂಗಾರು ಹಂಗಾಮಿನ ಪೂರ್ವದಲ್ಲಿಯೇ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ಪೂರೈಕೆ ಮಾಡಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸೋಮವಾರ 2025 -26 ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಮುಂಗಾರು ಆರಂಭದ ಪೂರ್ವದಲ್ಲಿಯೇ ಉತ್ತಮ ಮಳೆ ಬರುತ್ತಿದೆ. ರೈತರು ಕೂಡ ಬಿತ್ತನೆಗೆ ಭೂಮಿ ಹದ ಮಾಡಿಕೊಳ್ಳುತ್ತಿದ್ದಾರೆ. ರೈತರಿಗೆ ಯಾವುದೇ ರೀತಿಯಲ್ಲೂ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳ ಕೃತಕ ಅಭಾವ ಉಂಟಾಗಬಾರದು. ಈ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕೆಂದು ಸೂಚಿಸಿದರು.
ಕಳಪೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಸದಂತೆ ಎಚ್ಚರಿಕೆ ವಹಿಸಬೇಕು. ಪ್ರತಿವರ್ಷ ಈ ಬಗ್ಗೆ ರೈತರಿಂದ ಆರೋಪಗಳು ಕೇಳಿ ಬರುತ್ತಿವೆ. ಬಿತ್ತನೆ ಬೀಜ, ರಸಗೊಬ್ಬರ ರೈತರಿಗೆ ಪೂರೈಸುವ ಪೂರ್ವದಲ್ಲಿ ಪರೀಕ್ಷೆಗೆ ಒಳಪಡಿಸಿ, ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ಬೀಜ, ರಸಗೊಬ್ಬರ ಪೂರೈಕೆ ಮಾಡಬೇಕು. ಒಂದು ವೇಳೆ ಕಳಪೆ ಬೀಜ, ರಸಗೊಬ್ಬರ ಪೂರೈಕೆ ಮಾಡಿರುವ ಬಗ್ಗೆ ಆರೋಪಗಳು ಕೇಳಿ ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಮುಂಗಾರು ಪೂರ್ವದಲ್ಲಿಯೇ ರೈತ ಸಂಪರ್ಕ ಕೇಂದ್ರ, ಸೊಸೈಟಿಗಳ ಮೂಲಕ ರೈತರಿಗೆ ಬೇಕಾದ ಸಜ್ಜೆ, ಮೆಕ್ಕೆಜೋಳ, ಜೋಳ ಸೇರಿದಂತೆ ವಿವಿಧ ಬೆಳೆಯ ಬೀಜಗಳನ್ನು ದಾಸ್ತಾನು ಮಾಡಿ ಒದಗಿಸಬೇಕು. ಅಲ್ಲದೇ ಗುಣಮಟ್ಟದ ಬೀಜ ನೀಡುವಲ್ಲಿ ಇಲಾಖೆ ಹೆಚ್ಚು ಗಮನ ಹರಿಸಬೇಕು. ರೈತ ಸಂಪರ್ಕ ಕೇಂದ್ರದ ಎದುರು ರೈತರು ದಿನವಿಡಿ ಬೀಜ ಸೇರಿದಂತೆ ಕೃಷಿ ಉಪಕರಣಗಳಿಗಾಗಿ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣ ಆಗಬಾರದು. ಅಧಿಕಾರಿಗಳು ಇಂತಹ ಪರಿಸ್ಥಿತಿಯನ್ನು ದೂರ ಮಾಡಬೇಕೆಂದು ತಾಕೀತು ಮಾಡಿದರು.

 

Read also : JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

 

ಸರ್ಕಾರ ನಿಗದಿಪಡಿಸಿದ ದರದಲ್ಲಿ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಾಡಿ ರಶೀದಿ ನೀಡಬೇಕು. ಪರಿಕರಗಳನ್ನು ಹೆಚ್ಚಿನ ಬೆಲೆಗೆ ಮತ್ತು ಅವಧಿ ಮೀರಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು. ಕೆಲವು ಸೊಸೈಟಿಗಳಲ್ಲಿ ರಶೀದಿ ಹರಿಯದೆ ಹೆಚ್ಚಿನ ಬೆಲೆಯಡಿ ರಸಗೊಬ್ಬರ ಮಾರಾಟ ಮಾಡಿದ ಬಳಿಕ ಕಡಿಮೆ ದರದಲ್ಲಿ ರಶೀದಿ ಹರಿಯುವುದು ಕಂಡು ಬರುತ್ತಿದ್ದು, ಇದನ್ನು ತಪ್ಪಿಸಬೇಕು. ರೈತರಿಗೆ ಹೆಚ್ಚಿನ ಹೊರೆ ಮಾಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದರು.

 

ಈ ಸಂದರ್ಭದಲ್ಲಿ ಕೃಷಿ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ, ಕೃಷಿ ಅಧಿಕಾರಿಗಳಾದ ಬೀರಪ್ಪ, ಚಂದ್ರಪ್ಪ, ಸಂಜೀವ್, ಶ್ರೀನಿವಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

 

 ನಕಲಿ ಬೀಜಗಳ ಮಾರಾಟ ತಡೆಯಬೇಕು
ಹೊರಗಡೆಯಿಂದ ಬಂದು ಬ್ರ್ಯಾಂಡ್ ಇಲ್ಲದ ಬೀಜಗಳನ್ನು ರೈತರಿಗೆ ಮಾರಾಟ ಮಾಡುತ್ತಾರೆ. ಅಮಾಯಕ ರೈತರು ಕಡಿಮೆ ದರದಲ್ಲಿ ಸಿಗುವುದರಿಂದ ಕಳಪೆ ಬೀಜ ಎಂಬ ಯಾವುದೇ ಅರಿವಿಲ್ಲದೆ ತೆಗೆದು ಕೊಂಡು ಬಿತ್ತನೆ ಮಾಡುತ್ತಾರೆ. ಕೊನೆಗೆ ಬೆಳೆ ಕೈಕೊಟ್ಟಾಗ ಪರಿತಪ್ಪಿಸುತ್ತಾರೆ. ಮೊದಲು ಹೊರಗಡೆಯಿಂದ ನಕಲಿ ಬೀಜಗಳನ್ನು ತಂದು ಮಾರಾಟ ಮಾಡುವುದನ್ನು ತಡೆಯಬೇಕು.
– ಕೆ.ಎಸ್.ಬಸವಂತಪ್ಪ, ಮಾಯಕೊಂಡ ಶಾಸಕ. 

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere JOB NEWS | ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
Next Article Davanagere ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದೊಡ್ಡಬಾತಿ ದರ್ಗಾದಲ್ಲಿ ಉರುಸ್ : ಪೊಲೀಸ್ ಭದ್ರತೆಗೆ ಮುಸ್ಲಿಂ ಒಕ್ಕೂಟ ಮನವಿ

ದಾವಣಗೆರೆ: ಡಿ. 16  (Davanagere):  ಪ್ರತಿವರ್ಷದಂತೆ ಈ ವರ್ಷವೂ ಸೂಫಿ ಸಂತರದ ಹಜರತ್ ಸೈಯದ್ ಚಮನ್ ಶಾವಲಿ (ರ. ಅ)…

By Dinamaana Kannada News

ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು

ದಾವಣಗೆರೆ (Davanagere): ನಗರದ  ಜಿಎಂ ವಿಶ್ವವಿದ್ಯಾಲಯ ಮತ್ತು ಜಿ ಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ…

By Dinamaana Kannada News

ಡಾ.ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ : ರಾಜೀನಾಮೆಗೆ ಆಮ್ ಆದ್ಮಿ ಪಕ್ಷ , ಡಿಎಸ್‌ಎಸ್‌ ಒತ್ತಾಯ

ಹರಿಹರ  (Harihara): ಡಾ.ಅಂಬೇಡ್ಕರ್ ಕುರಿತು ಸಂಸತ್ತಿನಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವಅಮಿತ್ ಶಾ ರಾಜಿನಾಮೆ ನೀಡಬೇಕೆಂದು ಆಮ್ ಆದ್ಮಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?