Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಇಂದಿನ ಒತ್ತಡದ ಬದುಕಿಗೆ ನಿತ್ಯ ಯೋಗಾಭ್ಯಾಸ ಸಹಕಾರಿ : ಪ್ರಸನ್ನಕುಮಾರ್ 
ತಾಜಾ ಸುದ್ದಿ

ಇಂದಿನ ಒತ್ತಡದ ಬದುಕಿಗೆ ನಿತ್ಯ ಯೋಗಾಭ್ಯಾಸ ಸಹಕಾರಿ : ಪ್ರಸನ್ನಕುಮಾರ್ 

Dinamaana Kannada News
Last updated: January 12, 2025 11:48 am
Dinamaana Kannada News
Share
Adarsh __Yoga Foundation (R) Davangere
Adarsh __Yoga Foundation (R) Davangere
SHARE

ದಾವಣಗೆರೆ, ಜ.12 (Davanagere):  ವೇಗವಾಗಿ ಬೆಳೆಯುತ್ತಿರುವ ನಗರ ಪ್ರದೇಶಗಳಲ್ಲಿ ಪ್ರತಿಯೊಬ್ಬರು ಧಾವಂತದ ಬದುಕನ್ನು ಅನುಸರಿಸುತ್ತಿದ್ದು, ಇಂದಿನ ಒತ್ತಡಮಯ ಬದುಕಿಗೆ ಪ್ರತಿಯೊಬ್ಬರು ನಿತ್ಯವೂ ಯೋಗಾಭ್ಯಾಸವನ್ನು ಮಾಡುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿಯಾಗಬಲ್ಲದು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಕೆ. ಪ್ರಸನ್ನಕುಮಾರ್  ಅಭಿಪ್ರಾಯಪಟ್ಟರು.

ಭಾನುವಾರ ಬೆಳಿಗ್ಗೆ ನಗರದ ಪಿ.ಜೆ. ಬಡಾವಣೆಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಉದ್ಯಾನವನದ ಮಹಾಮಂಟಪದಲ್ಲಿ ಮಕರ ಸಂಕ್ರಾಂತಿ ಮತ್ತು ರಾಷ್ಟ್ರೀಯ ಯುವ ದಿನಾಚರಣೆಯ ನಿಮಿತ್ತ ಆಯೋಜಿಸಲಾಗಿದ್ದ ಉಚಿತ ಯೋಗ ಶಿಬಿರವನ್ನು ಗಿಡಕ್ಕೆ ನೀರೆರೆಯುವುದರ ಮೂಲಕ ಚಾಲನೆ ನೀಡಿದರು.

ಮನುಷ್ಯ ಸದಾ ಚಟುವಟಿಕೆಯಿಂದ ಇರಬೇಕು. ಆಗ ನಕಾರಾತ್ಮಕ ಚಿಂತನೆ ಮತ್ತು ಭಾವನೆಗಳಿಂದ ದೂರವಿರಬಹುದು. ಸದಾ ನಮ್ಮ ಚಿಂತನೆ ಉತ್ತಮವಾದ ವಿಷಯದ ಕಡೆಗೆ ಹರಿದಾಗ ನಾವು ಆರೋಗ್ಯ ಮತ್ತು ನೆಮ್ಮದಿಯಿಂದ ಇರಲು ಸಾಧ್ಯ ಎಂದು ತಿಳಿಸುತ್ತಾ, ನಿತ್ಯವು ಸೂರ್ಯ ಉದಯಿಸುವುದಕ್ಕಿಂತ ಮೊದಲು ಏಳುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಕಿವಿಮಾತು ಹೇಳಿದರು.

ಪ್ರಾರಂಭದಲ್ಲಿ ಅಗ್ನಿಹೋತ್ರ ಹೋಮವನ್ನು ವಿಶ್ವಶಾಂತಿಗಾಗಿ ಮತ್ತು ಆರೋಗ್ಯ ಸಮೃದ್ಧಿಗಾಗಿ ಮಾಡಲಾಯಿತು. ವಿಶೇಷ ಅತಿಥಿಗಳಾಗಿ ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಎನ್.ಪಿ. ಪ್ರಸನ್ನ ಆಚಾರ್ ಅವರು ಆಗಮಿಸಿ ಶಿಬಿರಕ್ಕೆ ಶುಭ ಕೋರಿ, ಉಚಿತವಾಗಿ ನಡೆಯುವ ಈ ಯೋಗ ಶಿಬಿರದ ಲಾಭವನ್ನು ಹೆಚ್ಚೆಚ್ಚು ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ಆಶಿಸಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸಚಿನ್ ವರ್ಣೇಕರ್ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ  ಪ್ರಕಾಶ್ ಹೆಚ್.ಎನ್., ಯೋಗ ಶಿಕ್ಷಕ  ವಿ. ಲಲಿತ್‍ಕುಮಾರ್ ಜೈನ್ ಉಪಸ್ಥಿತರಿದ್ದರು.

ಯೋಗ ಶಿಕ್ಷಕ ಚಂದ್ರ ಎಸ್. ಮತ್ತು ಮಾ|| ಧನುಷ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ದಾವಣಗೆರೆ ವಿಶ್ವವಿದ್ಯಾನಿಲಯದ ಎಂ.ಎಸ್.ಸಿ. ಇನ್ ಯೋಗ ವಿಭಾಗದ ಯೋಗ ವಿದ್ಯಾರ್ಥಿಗಳಾದ ರಾಹುಲ್ ವಿ.ಕೆ., ಸಂವೇದಿತಾ ಎಸ್., ಕಾವ್ಯ, ಚೇತನ್ ಇನ್ನಿತರರು ಭಾಗವಹಿಸಿದ್ದು, ಸೂರ್ಯನಮಸ್ಕಾರ ಯೋಗ ಪದ್ಧತಿಯನ್ನು ಪ್ರದರ್ಶಿಸಿದರು.

ಈ ಉಚಿತ ಯೋಗ ಶಿಬಿರವನ್ನು ಆದರ್ಶ ಯೋಗ ಪ್ರತಿಷ್ಠಾನ (ರಿ) ದಾವಣಗೆರೆಯ ಯೋಗ ತಜ್ಞ ಡಾ|| ರಾಘವೇಂದ್ರ ಗುರೂಜಿಯವರ ನೇರ ಶಿಷ್ಯರಾದ ಯೋಗ ಶಿಕ್ಷಕ ಮಹಂತೇಶ್  ನಡೆಸಿಕೊಡಲಿದ್ದಾರೆ.

ಶಿಬಿರವು ಪ್ರತಿದಿನ ಬೆಳಿಗ್ಗೆ 6-00 ರಿಂದ 7-00 ಗಂಟೆಯ ವರೆಗೆ ನಡೆಯಲಿದ್ದು, ಶಿಬಿರಕ್ಕೆ ಯಾವುದೇ ಶುಲ್ಕವಿಲ್ಲ. ಆಸಕ್ತರು ಮುಕ್ತವಾಗಿ ಭಾಗವಹಿಸಬಹುದು.

Read also : Davangere | ಜಮೀನುಗಳಲ್ಲಿ ಮೋಟಾರು ಕಳ್ಳತನ ಪ್ರಕರಣ : ಆರೋಪಿಗಳ ಬಂಧನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere Davangere | ಜಮೀನುಗಳಲ್ಲಿ ಮೋಟಾರು ಕಳ್ಳತನ ಪ್ರಕರಣ : ಆರೋಪಿಗಳ ಬಂಧನ
Next Article Davangere ಶಾಲೆಗಳ ಜೀರ್ಣೋದ್ಧಾರಕ್ಕೆ ದಾನಿಗಳು ಮುಂದೆ ಬನ್ನಿ : ಶಾಸಕ ಕೆ.ಎಸ್.ಬಸವಂತಪ್ಪ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಚೆಕ್ ಬೌನ್ಸ್ ಪ್ರಕರಣ: ಶಿಕ್ಷಕಿಗೆ ಕಾರಗೃಹ ಶಿಕ್ಷೆ

ಹರಿಹರ:  ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇಲ್ಲಿನ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವು ಆರೋಪಿತೆಗೆ ವಿಧಿಸಿದ್ದ 4 ತಿಂಗಳ…

By Dinamaana Kannada News

ಸಂಸತ್ ನಲ್ಲಿ ಅದಾನಿ ಕುರಿತು ಚರ್ಚಿಸಲು ಅವಕಾಶ ನಿರಾಕರಣೆ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ

ದಾವಣಗೆರೆ.ಡಿ.10 ( Davanagere); ನವದೆಹಲಿಯ ಸಂಸತ್ ಭವನದಲ್ಲಿ ಕಲಾಪ ನಡೆಯುವ ವೇಳೆ ಉದ್ಯಮಿ ಅದಾನಿ ಕುರಿತು ಚರ್ಚೆ ಮಾಡಲು ಹಾಗೂ…

By Dinamaana Kannada News

ಮುರಾರಿ ರಾವ್ ಯಶವಂತರಾವ್ ಘೋರ್ಪಡೆ !

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧಿಗೂ ಸೊಂಡೂರಿಗೂ ಅವಿನಾಭಾವ ಸಂಬಂಧವಿದೆ.ಘೋರ್ಪಡೆ ವಂಶಸ್ಥರಾದ ವೈ.ಹೆಚ್.ಘೋರ್ಪಡೆ 1932ರಲ್ಲಿ ಒಂದು ಪ್ರೊಕ್ಲಮೇಷನ್ ಹೊರಡಿಸಿದರು.  ಅದರ ಪ್ರಕಾರ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?