Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere| ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಸಜೆ
ತಾಜಾ ಸುದ್ದಿ

Davanagere| ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಸಜೆ

Dinamaana Kannada News
Last updated: January 7, 2025 4:42 pm
Dinamaana Kannada News
Share
davangere
Additional District and Sessions Court FTSC-1 Davanagere
SHARE

ದಾವಣಗೆರೆ (Davanagere) : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.

ಘಟನೆ ವಿವರ :  ದಿನಾಂಕ-27.05.2020 ರಂದು ಪಿರ‍್ಯಾದಿ ಠಾಣೆಗೆ ಹಾಜರಾಗಿ  03 ವರ್ಷಗಳ 2016-ಮಾರ್ಚ್ ತಿಂಗಳಲ್ಲಿ ಕೊಂಡಜ್ಜಿ ಆಂಜನೇಯ ದೇವರ ಜಾತ್ರೆಗೆ ಹೋಗಿದ್ದಾಗ ಹಳಗಂಜಿಗೆರೆ ಗ್ರಾಮದ ಪರಶುರಾಮ  ಜೊತೆ ಆಕಸ್ಮಿಕವಾಗಿ ಪರಿಚಯವಾಗಿ, ಪರಸ್ಪರ ಪ್ರೀತಿಸಲು ಪ್ರಾರಂಭಿಸಿದೆವು. ಬಲವಂತವಾಗಿ ಅತ್ಯಾಚಾರವೆಸಗಿದ್ದಾನೆ. ಮದುವೆಯಾಗುತ್ತೇನೆಂದು ಹೇಳಿ ಹೋಗಿದ್ದು, ಮತ್ತೆ 03 ತಿಂಗಳ ನಂತರ ಹಳೇ ಕುಂದುವಾಡ ಗ್ರಾಮದ ಬಳಿ ಶಿಬಾರ ಹತ್ತಿರ ಬಟ್ಟೆ ತೊಳೆಯಲು ಹೋದಾಗ ಅಲ್ಲಿಯು ಸಹ ಬಲವಂತವಾಗಿ ಅತ್ಯಾಚಾರವೆಸಗಿ ನಂತರ ಪೋನ್‌ನ್ನು ಸ್ವೀಚ್ ಆಫ್ ಮಾಡಿಕೊಂಡು ಹೋಗಿದ್ದಾನೆ. ನಾನು ನನ್ನ ಚಿಕ್ಕಪ್ಪನೊಂದಿಗೆ ಅವರ ಊರಿಗೆ ಹೋಗಿ ಅವನ ತಂದೆ-ತಾಯಿ ಮತ್ತು ಸಂಬಂಧಿಕರಿಗೆ ವಿಷಯ ತಿಳಿಸಿ ಮದುವೆಯಾಗಲು ಕೇಳಿದಾಗ ಕೆಟ್ಟ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ  ಪೊಲೀಸ್‌ ನಿರೀಕ್ಷಕರಾದ  ನಾಗಮ್ಮ  ಎ1-ಆರೋಪಿ ಪರಶುರಾಮ  ಈತನು ಅಪ್ರಾಪ್ತ ವಯಸ್ಸಿನ ಪಿರ್ಯಾದಿಯವರನ್ನು ಪ್ರೀತಿಸಿ ಮದುವೆಯಾಗುತ್ತೇನೆಂತ ನಂಬಿಸಿ ಪಿರ್ಯಾದಿಯು ಅಪ್ರಾಪ್ತ ವಯಸ್ಕಳು ಅಂತ ಗೊತ್ತಿದ್ದರು ಸಹ ಹಲವು ಬಾರಿ ಬಲವಂತವಾಗಿ ಅತ್ಯಾಚಾರವೆಸಗಿದ್ದು, ಅಲ್ಲದೇ ಜೀವಬೆದರಿಕೆ ಹಾಕಿರುವುದು ತನಿಖೆಯಿಂದ ದೃಢಪಟ್ಟ ಹಿನ್ನಲೆಯಲ್ಲಿ  ಎ1-ಪರಶುರಾಮ, ಎ2-ದಂಡೇಪ್ಪ, ಎ3-ಮೈಲಮ್ಮ, ಎ4-ಹನುಮಂತಪ್ಪ, ಎ5-ಹಾಲೋಳ್ ಹನುಮಂತಪ್ಪ, ಎ6-ಬಸಮ್ಮ, ಎ7-ಅಂಜಿನಿ ಎ8-ಬಸವರಾಜ ಈ ಎಲ್ಲಾ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ   ಶ್ರೀರಾಮ ನಾರಾಯಣ ಹೆಗಡೆ ಅವರು ಆರೋಪಿತನ ಮೇಲೆ ಆರೋಪ ಸಾಬೀತಾಗಿದ್ದರಿಂದ ಜ.07 ರಂದು ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 35,000/-ರೂ ದಂಡ ವಿಧಿಸಿದ್ದಾರೆ.

ಆರೋಪಿತನಿಂದ ವಸೂಲುಮಾಡಿದ ದಂಡದ ಒಟ್ಟು ಮೊತ್ತ 35,000/-ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಹಾಗೂ ಸಂತ್ರಸ್ಥೆಗೆ ಸರ್ಕಾರದಿಂದ 4 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.  ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿದ್ದಾರೆ.

ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿ ನಾಗಮ್ಮ .ಕೆ, ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಶ್ಲಾಘೀಸಿದ್ದಾರೆ.

Read also : ಮೈಲಾರ ಜಾತ್ರೆ : ಫೆ. 14 ರಂದು ಕಾರ್ಣಿಕೋತ್ಸವ, ಭಕ್ತಿ, ಭಕ್ತರ ಭಾವನೆಗಳಿಗೆ ಪ್ರಾಮುಖ್ಯತೆ : ಡಿಸಿ  

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article mailara jatare ಮೈಲಾರ ಜಾತ್ರೆ : ಫೆ. 14 ರಂದು ಕಾರ್ಣಿಕೋತ್ಸವ, ಭಕ್ತಿ, ಭಕ್ತರ ಭಾವನೆಗಳಿಗೆ ಪ್ರಾಮುಖ್ಯತೆ : ಡಿಸಿ  
Next Article Davanagere ಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 14 ಲಕ್ಷ ಮತದಾರರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ರಾಮಾಯಣದಲ್ಲಿನ ತತ್ವಾದರ್ಶ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಅ. 17 (Davanagere) ; ರಾಮಾಯಣದಲ್ಲಿನ ತತ್ವಾದರ್ಶ ಹಾಗೂ ಅದರಲ್ಲಿನ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು  ಸಂಸದೆ ಡಾ.…

By Dinamaana Kannada News

ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ; ಗಂಗಾಧರಸ್ವಾಮಿ ಜಿ.ಎಂ ಅಧಿಕಾರ ಸ್ವೀಕಾರ

ದಾವಣಗೆರೆ ಜು.06  :  ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ;…

By Dinamaana Kannada News

ವಿಶ್ವ ಅಸ್ತಮಾ ದಿನಾಚರಣೆ : ಸತತ ಚಿಕಿತ್ಸೆಯಿಂದ ಅಸ್ತಮಾ ಕಾಯಿಲೆ ಹತೋಟಿಗೆ

ತೀವ್ರ ಅಸ್ತಮಾ ಎಂದರೇನು? ಅಸ್ತಮಾ ಕಾಯಿಲೆಯು ಸಾಕಷ್ಟು ಜನರನ್ನು ಭಾದಿಸಿದರೂ ಸರಿಯಾದ ಹಾಗೂ ಸತತವಾದ ಚಿಕಿತ್ಸೆಯಿಂದ ಹತೋಟಿಗೆ ಬರುತ್ತದೆ. ಆದರೆ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?