Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಕ್ಷಣ ಸಂವಿಧಾನ ಆಶಯ : ಗೃಹ ಸಚಿವ ಡಾ.ಜಿ.ಪರಮೇಶ್ವರ
ತಾಜಾ ಸುದ್ದಿ

ಶಿಕ್ಷಣ ಸಂವಿಧಾನ ಆಶಯ : ಗೃಹ ಸಚಿವ ಡಾ.ಜಿ.ಪರಮೇಶ್ವರ

Dinamaana Kannada News
Last updated: July 28, 2024 5:37 pm
Dinamaana Kannada News
Share
Adi Karnataka Vidyabhivriddhi Sangh- Davanagere
ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘ ದಾವಣಗೆರೆ
SHARE
ದಾವಣಗೆರೆ, ಜು.28 : ದೇಶದಲ್ಲಿ 14 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡಬೇಕೆಂಬುದು ಸಂವಿಧಾನ ಬದ್ಧತೆಯ ಆಶಯವಾಗಿದ್ದು, ಅದನ್ನು ಕಾರ್ಯ ರೂಪಕ್ಕೆ ತರಬೇಕಾದುದು ಆಳುವವರ ಜವಾಬ್ಧಾರಿಯೆಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ನಗರದ ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂಸ್‌, ರಗ್ಗು, ಹೊದಿಗೆ ಇತರೆ ಸಾಮಗ್ರಿ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಇಂದು ಅಭೂತಪೂರ್ವ ಬದಲಾವಣೆ ತಂದಿದ್ದು, ಶಿಕ್ಷಣದಿಂದ ದೂರವಿದ್ದಂತಹ ಪರಿಶಿಷ್ಟ ಮಕ್ಕಳೂ ಈಗ ಶೈಕ್ಷಣಿಕ ಸಾಧನೆ ಮಾಡುತ್ತಿರುವುದು ಗಮನಾರ್ಹ ಎಂದರು.
ಮಕ್ಕಳಿಗೆ ಶಿಕ್ಷಣ ನೀಡಬೇಕಾದುದು ಯಾವುದೇ ರಾಜ್ಯ, ದೇಶದ ಜವಾಬ್ಧಾರಿಯಾಗಿದೆ. ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ಮೂಲಕ ಆತ್ಮೀಯರಾದ ಬಿ.ಎಚ್.ವೀರಭದ್ರಪ್ಪ, ಎಲ್.ಎಂ. ಹನುಮಂತಪ್ಪ ಸೇರಿದಂತೆ ಸಮಿತಿ, ಸಮಾಜದ ಮುಖಂಡರು ಮಕ್ಕಳಿಗೆ ಶಿಕ್ಷಣ ನೀಡಲು, ಮಕ್ಕಳಿಗೆ ಅಗತ್ಯ ಶೈಕ್ಷಣಿಕ ಇತರೆ ಪರಿಕರ ನೀಡುವ ಮೂಲಕ ಮಾದರಿ ಕೆಲಸ ಮಾಡುತ್ತಿದ್ದಾರೆ. ಇಂತಹ ಸರಳ, ಶೈಕ್ಷಣಿಕ, ಮಕ್ಕಳಿಗೆ ಪೂರಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ತಮಗೆ ಖುಷಿ ತಂದಿದೆ ಎಂದು ಅವರು ಹೇಳಿದರು.
ಸಮುದಾಯವೂ ಇಂತಹ ಶೈಕ್ಷಣಿಕ ಕಾರ್ಯಕ್ಕೆ ಕೈಜೋಡಿಸಬೇಕು. ಹಿರಿಯರು, ದಾನಿಗಳು, ಸಮಾಜದ ಮುಖಂಡರ ನೆರವಿನಿಂದ ಇಂತಹ ಕಾರ್ಯ ಕೈಗೊಂಡಿದ್ದು, ಇತರರಿಗೂ ಪ್ರೇರಣೆಯಾಗಿದೆ. ಇಲ್ಲಿ ಓದುವಂತಹ ವಿದ್ಯಾರ್ಥಿಗಳು ಉನ್ನತ ಸಾಧನೆ ಮೆರೆಯಬೇಕು. ಇಂದು ಮಕ್ಕಳ ಭವಿಷ್ಯ ಬೇರೆ ಯಾರ ಕೈಯಲ್ಲೂ ಇಲ್ಲ. ಪ್ರತಿಯೊಬ್ಬ ವಿದ್ಯಾರ್ಥಿ-ವಿದ್ಯಾರ್ಥಿನಿಯರೂ ತಮ್ಮ ಭವಿಷ್ಯ ತಮ್ಮ ಕೈಯಲ್ಲೇ ಇದೆಯೆಂಬುದನ್ನು ಅರ್ಥ ಮಾಡಿಕೊಂಡು, ಉನ್ನತ ಸಾಧನೆ ಮಾಡಬೇಕು ಎಂದು ಅವರು ಕರೆ ನೀಡಿದರು.
ಸಂಘದ ಕಾರ್ಯದರ್ಶಿ, ಸಮಾಜದ ಹಿರಿಯ ಮುಖಂಡ ಬಿ.ಎಚ್.ವೀರಭದ್ರಪ್ಪ ಮಾತನಾಡಿ, ಹರಿಜನ ಸಮಾಜದ ಮಕ್ಕಳಿಗೆ ಶಿಕ್ಷಣ ನೀಡಬೇಕೆಂಬ ಸಂಕಲ್ಪದೊಂದಿಗೆ ಇಲ್ಲಿನ ಹಿರಿಯರಿಗೆ ಷರತ್ತು ವಿಧಿಸಿ, ಸ್ವಾತಂತ್ರ್ಯ ಪೂರ್ವದಲ್ಲಿ ಅಂದರೆ 1934ರಲ್ಲಿ ದಾವಣಗೆರೆಗೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಬಂದಿದ್ದರು. ಅಂದು ಗಾಂಧೀಜಿ ಚೌಕಾಕಾರದಲ್ಲಿ ಸಾಗಿದ ಜಾಗವೇ ಇಂದು ಸಂಸ್ಥೆಯ ಕಾಂಪೌಂಡ್ ಇರುವ ಜಾಗ. ಅಷ್ಟೂ ಜಾಗವನ್ನು ಹರಿಜನರ ಮಕ್ಕಳ ಶೈಕ್ಷಣಿಕ ಕಾರ್ಯಕ್ಕಾಗಿ ಕೊಡಿಸಿದ ಮಹಾತ್ಮ ಗಾಂಧೀಜಿ ಸಂಕಲ್ಪ ಸಾಕಾರಗೊಳ್ಳುತ್ತಿದೆ ಎಂದರು.
ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘದ ಡಾ.ಬಿ.ಎಂ.ತಿಪ್ಪೇಸ್ವಾಮಿ ಸಂಯುಕ್ತ ಪಿಯು ಕಾಲೇಜು ಸೇರಿದಂತೆ ಒಂದಿಷ್ಟು ಸಮಸ್ಯೆಗಳಿವೆ. ಅದು ಸರ್ಕಾರದ ಮಟ್ಟದಲ್ಲೇ ಪರಿಹಾರ ಸಿಗಬೇಕಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆ, ಸಮಾಜದ ಮುಖಂಡರ ನಿಯೋಗವು ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ನಿಯೋಗ ಬರಲಿದ್ದೇವೆ. ಆಗ ಗೃಹ ಸಚಿವರಾದ ಡಾ.ಜಿ.ಪರಮೇಶ್ವ ರ ಸಂಸ್ಥೆಗೆ ಕಾಲೇಜು ಮಂಜೂರು ಮಾಡಿಸಿಕೊಡಬೇಕು. ಕಾಲೇಜನ್ನೇ ಅವಲಂಭಿಸಿದ 14-15 ಬೋಧಕರ ಜೀವ, ಬದುಕಿನ ಪ್ರಶ್ನೆಯೂ ಆಗಿದೆ. ಯಾರೇ ಕೈಬಿಟ್ಟರೂ ಡಾ.ಪರಮೇಶ್ವರ,  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನರವರು ನಮ್ಮ ಕೈಬಿಡಬಾರದು ಎಂದು ಅವರು ಮನವಿ ಮಾಡಿದರು.
ಕೆಪಿಸಿಸಿ ಉಪಾಧ್ಯಕ್ಷ ಎಸ್.ವಿಜಯಕುಮಾರ, ಸಂಘದ ಅಧ್ಯಕ್ಷ ಎಲ್.ಎಂ.ಹನುಮಂತಪ್ಪ, ಉಪಾಧ್ಯಕ್ಷ ಬಿ.ಎಂ.ರಾಮಸ್ವಾಮಿ, ಜಂಟಿ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಪೇಪರ್ ಕೆ.
ಚಂದ್ರಣ್ಣ, ಸದಸ್ಯರಾದ ಗಂಗಾಧರಪ್ಪ, ಬಿ.ಎಂ.ಈಶ್ವರಪ್ಪ ಗಾಂಧಿ ನಗರ, ಎಲ್.ಎಂ.ಎಚ್.ಸಾಗರ್‌, ಹಿರಿಯ ವಕೀಲ ಮಂಜಪ್ಪ ಹಲಗೇರಿ, ನಾಗರಾಜಪ್ಪ ಆದಾಪುರ, ಜಿ.ಎನ್.ಸಂತೋಷ, ಯುವ ಮುಖಂಡ ರಾಕೇಶ ಇತರರು ಇದ್ದರು. ಶಾಲೆಯ ಹಳೆಯ ವಿದ್ಯಾರ್ಥಿ, ವರದಿಗಾರರ ಕೂಟದ ನೂತನ ಅಧ್ಯಕ್ಷ,  ದಾವಣಗೆರೆ ವರದಿಗಾರರ ಕೂಟದ ಅಧ್ಯಕ್ಷ  ನಾಗರಾಜ ಎಸ್.ಬಡದಾಳ್, ಜಿಲ್ಲಾ ಪೊಲೀಸ್ ಅಧೀ ಕ್ಷಕಿ ಉಮಾ ಪ್ರಶಾಂತರನ್ನು ಸಂಸ್ಥೆ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಸನ್ಮಾನಿಸಿದರು.
ಇದೇ ವೇಳೆ 85 ಮಕ್ಕಳಿಗೆ ಸಮವಸ್ತ್ರ ಇತರೆ ಪರಿಕರ ವಿತರಿಸಲಾಯಿತು.
TAGGED:Davangeredinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere BSP ಎಸ್‌ಸಿಪಿ, ಟಿಎಸ್ಪಿ (SCP&TSP) ಅನುದಾನ ಬೇರೆ ಉದ್ದೇಶಗಳಿಗೆ ಬಳಸಬೇಡಿ : ಬಿಸ್ಪಿ ಒತ್ತಾಯ
Next Article davanagere political ದಿಲ್ಲಿ ದೊರೆಗಳೇಕೆ ಬೆಚ್ಚಿ ಬೀಳಲಿದ್ದಾರೆ?  (Political analysis)

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಜವಾಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ

ದಾವಣಗೆರೆ.ಫೆ.19 (Davanagere); ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು…

By Dinamaana Kannada News

ಕಳೆದುಹೋದದ್ದು: ಪುಲ್ವಾಮಾ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ನಡೆದ ಘಟನೆ ಸುತ್ತ

ನಾನು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿದ್ದಾಗ ನಡೆದ ಘಟನೆಯಿದು. ಆಗ ದೇಶದ ತುಂಬಾ ದೇಶಪ್ರೇಮ ಉಕ್ಕಿ ಹರಿಯುತ್ತಿದ್ದ ಕಾಲ. ಪುಲ್ವಾಮಾ ದಾಳಿಯಲ್ಲಿ…

By Dinamaana Kannada News

Davanagere | ರಂಗ ಸಂಗೀತ ತರಬೇತಿ ಮತ್ತು ರಂಗಗೀತೆಗಳ ಕಲಿಕಾ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಅ.09 (Davanagere):  ಕನ್ನಡ ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ದಾವಣಗೆರೆಯಲ್ಲಿ ರಂಗ ಸಂಗೀತ ತರಬೇತಿ ಮತ್ತು ರಂಗ ಗೀತೆಗಳ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?