Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಕ್ಷಣದ ಜತೆಗೆ ಶಿಸ್ತು, ಸಂಯಮ, ಸುಸಂಸ್ಕಾರ ಮೈಗೂಡಿಸಿಕೊಳ್ಳಿ : ಬಾಲನ್ಯಾಯ ಮಂಡಳಿ ಅಧ್ಯಕ್ಷ ಸಿ.ನಾಗೇಶ್
ತಾಜಾ ಸುದ್ದಿ

ಶಿಕ್ಷಣದ ಜತೆಗೆ ಶಿಸ್ತು, ಸಂಯಮ, ಸುಸಂಸ್ಕಾರ ಮೈಗೂಡಿಸಿಕೊಳ್ಳಿ : ಬಾಲನ್ಯಾಯ ಮಂಡಳಿ ಅಧ್ಯಕ್ಷ ಸಿ.ನಾಗೇಶ್

Dinamaana Kannada News
Last updated: November 26, 2025 12:12 pm
Dinamaana Kannada News
Share
Davanagere
SHARE

ದಾವಣಗೆರೆ ನ.26: ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬದುಕಬೇಕಾದರೆ ಶಿಕ್ಷಣದ ಜತೆಗೆ ಶಿಸ್ತು, ಸಂಯಮ ಹಾಗೂ ಉತ್ತಮ ಸಂಸ್ಕಾರದ ವ್ಯಕ್ತಿತ್ವ ಮೈಗೂಡಿಸಿಕೊಳ್ಳಬೇಕು ಎಂದು ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬಾಲನ್ಯಾಯ ಮಂಡಳಿ ಅಧ್ಯಕ್ಷ ಸಿ.ನಾಗೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಕುವೆಂಪು ನಗರದಲ್ಲಿನ ಬಾಲಕರ ಸರ್ಕಾರಿ ಬಾಲ ಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್  ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ “ಮಕ್ಕಳ ಹಬ್ಬ ಕಾರ್ಯಕ್ರಮ” ಉದ್ಘಾಟಿಸಿ ಅವರು ಮಾತನಾಡಿದರು.

ನೆಹರೂ ಅವರ ಜನ್ಮದಿನದ ಸವಿನೆನಪಿಗಾಗಿ ಪ್ರತಿ ವರ್ಷ ನವೆಂಬರ್ 14 ರಂದು ಮಕ್ಕಳ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಅದರಂತೆ ಇಂದು ಮಕ್ಕಳ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂವಿಧಾನದ ಆರ್ಟಿಕಲ್ 21 ರಡಿ 6 ರಿಂದ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ವ್ಯವಸ್ಥೆ ಕಲ್ಪಿಸಿದೆ. ಯಾವುದೇ ಒಂದು ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬುದು ಸಂವಿಧಾನದ ಆಶಯ. ಆದರೂ ಇತ್ತೀಚೆಗೆ ಮಕ್ಕಳ ಮೇಲೆ ಹಲ್ಲೆ, ವಿವಿಧ ರೀತಿಯ ದೌರ್ಜನ್ಯ ಪ್ರಕರಣ ನಡೆಯುತ್ತಲೇ ಇವೆ. ಅದರಲ್ಲೂ ಅಪ್ರಾಪ್ತ ಮಕ್ಕಳ ಮೇಲೆ ಪೋಕ್ಸೋ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಿಸುವ ಸಲುವಾಗಿ ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ಕಾಯ್ದೆ, ಬಾಲಕಾರ್ಮಿಕ ನಿಷೇಧ, ಪೋಕ್ಸೋ  ಹೀಗೆ ಹಲವು ವಿಶೇಷ ಕಾಯ್ದೆ ರೂಪಿಸಿರುವುದಲ್ಲದೇ ವಿಶೇಷ ನ್ಯಾಯಾಲಯಗಳನ್ನು ಸಹ ಸ್ಥಾಪಿಸಿದೆ. ಪೋಷಕರು, ಶಿಕ್ಷಕರು ಮಕ್ಕಳನ್ನು ಶೋಷಣೆಗೆ ಒಳಪಡಿಸದೇ, ಗುಣಮಟ್ಟದ ಶಿಕ್ಷಣ ನೀಡಬೇಕು. ಮಕ್ಕಳ ಸರಿ ತಪ್ಪುಗಳನ್ನು ತಿಳಿಸುವ ಮೂಲಕ ಸಮಾಜದಲ್ಲಿ ಉತ್ತಮ ನಾಗರಿಕ ವ್ಯಕ್ತಿಗಳಾಗಿ ಬಾಳುವಂತೆ ಅವರ ಬದುಕು ರೂಪಿಸಬೇಕು ಎಂದರು.

Read also : ಮಾನವನಷ್ಟೇ ಪರಿಸರವೂ ಪ್ಲಾಸ್ಟಿಕ್‌ನಿಂದ ಉಸಿರುಗಟ್ಟಿದೆ:ಜಿ.ಎಂ.ಗಂಗಾಧರಸ್ವಾಮಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರ್ಣಿಮಾ ಮಾತನಾಡಿ, ಮಕ್ಕಳು ಶಿಸ್ತು ಬದ್ಧ ಜೀವನ ರೂಢಿಸಿಕೊಂಡಲ್ಲಿ ತಮ್ಮ ಜೀವನದುದ್ದಕ್ಕೂ ಯಶಸ್ವಿಯಾಗಿ ಬದುಕಬಹುದು. ಗುಣಮಟ್ಟದ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಉತ್ತಮ ನಾಗರಿಕ ವ್ಯಕ್ತಿಯಾಗಿ ಬಾಳುವುದರೊಂದಿಗೆ  ಇಲಾಖೆ, ಜಿಲ್ಲೆಗೆ ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ನ್ಯಾಯಾಧೀಶರಾದ ಸಿ.ನಾಗೇಶ್ ಅವರು ಸಂವಿಧಾನ ಪೀಠಿಕೆ ಭೋದಿಸಿದರು. ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಟಿ.ಎನ್.ಕವಿತಾ ಸ್ವಾಗತಿಸಿದರು.

ಈ ವೇಳೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಎಂ.ಮಂಜುಳ, ಸದಸ್ಯರಾದ ಡಿ.ಕರಿಯಮ್ಮ, ಎಂ.ನಾಗರಾಜ್ ನಾಯ್ಕ್, ಬಾಲ ನ್ಯಾಯ ಮಂಡಳಿ ಸದಸ್ಯೆ ವಿಜಯಮಾಲ ಮತ್ತಿತರರು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ಮಾನವನಷ್ಟೇ ಪರಿಸರವೂ ಪ್ಲಾಸ್ಟಿಕ್‌ನಿಂದ ಉಸಿರುಗಟ್ಟಿದೆ:ಜಿ.ಎಂ.ಗಂಗಾಧರಸ್ವಾಮಿ
Next Article job news ದಾವಣಗೆರೆ:ಪೂರ್ವ ಪ್ರಾಥಾಮಿಕ ಶಾಲಾ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನರೇಂದ್ರ ಮೋದಿ ಬೆಂಬಲಿಸದಂತೆ ಉಮ್ಮತ್ ಚಿಂತಕರ ವೇದಿಕೆ ಮನವಿ

ದಾವಣಗೆರೆ ;  ಟಿ.ಡಿ.ಪಿ ಮತ್ತು ಜೆ.ಡಿ.ಯು ಪಕ್ಷದ ಅಧ್ಯಕ್ಷರು ಪ್ರಧಾನಿಯಾಗಿ ನರೇಂದ್ರ ಮೋದಿಯವರನ್ನು ನೇಮಕ ಮಾಡಲು ಬೆಂಬಲ ನೀಡಬಾರದು ಎಂದು…

By Dinamaana Kannada News

Harihara | ವಕ್ಫ್ ತಿದ್ದುಪಡಿ ಮಸೂದೆ-2024 ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ

ಹರಿಹರ (Harihara): ವಕ್ಫ್ ತಿದ್ದುಪಡಿ ಮಸೂದೆ-2024 ನ್ನು ಹಿಂಪಡೆಯಬೇಕು, ಎಸ್‍ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಮ್. ಕೆ. ಫೈಝಿ ರವರ ಬಿಡುಗಡೆಗೆ…

By Dinamaana Kannada News

ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?