ದಾವಣಗೆರೆ (Davanagere) : ಹಳೇಬೇರು, ಹೊಸಚಿಗರು ಎಂಬಂತೆ ಹಿರಿಯರನ್ನು ಗೌರವಿಸಿ ವಿಧೇಯರಾಗಿರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ಹೇಳಿದರು.
ಮಂಗಳವಾರ ನಗರದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಹಿರಿಯ ನಾಗರಿಕರ ಸಂಘ ಹಾಗೂ ಜಿಲ್ಲಾ ಸರಕಾರಿ ನಿವೃತ್ತ ನೌಕರರ ಸಂಘ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ”ವಿಶ್ವ ಹಿರಿಯ ನಾಗರಿಕರ ನಿಂದನೆ ಜಾಗೃತಿ ದಿನ” ಆಚರಿಸುವ ಪ್ರಯುಕ್ತ ಹಾಗೂ ಹಿರಿಯ ನಾಗರಿಕರ ಹಕ್ಕುಗಳ ಮತ್ತು ಸೌಲಭ್ಯಗಳ ಕುರಿತಾಗಿ ಹಾಗೂ ಅವರ ಮೇಲೆ ನಡೆಯುವ ದರ್ಜನ್ಯಗಳ ಜಾಗೃತಿ ಕುರಿತು ಅರಿವು ಮೂಡಿಸುವ ಕರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯರ ಅನುಭವವನ್ನು ಪರಿಗಣಿಸಿ ಜೀವನದಲ್ಲಿ ಅಳವಡಿಸಬೇಕು. ಹಿರಿಯ ನಾಗರಿಕರ ಅಪತ್ತಿನ ಪರಿಸ್ಥಿತಿಯಲ್ಲಿ ಹಿರಿಯ ನಾಗರಿಕರ ಇಲಾಖೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಕಾನೂನು ಸೇವಾ ಪ್ರಾಧಿಕಾರದ ಸಹಾಯದೊಂದಿಗೆ ನ್ಯಾಯವನ್ನು ಪಡೆಯಬಹುದು. ಹಿರಿಯ ನಾಗರಿಕರು ಈ ದೇಶದ ಸಂಪತ್ತು ಮತ್ತು ಅವರ ಮೌಲ್ಯಗಳನ್ನು ತಿಳಿಸಿದರು.
Read also : Davanagere | ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
ವಕೀಲರ ಸಂಘ ಅಧ್ಯಕ್ಷರಾದ ಎಲ್.ಹೆಚ್. ಅರುಣಕುಮಾರ್ ಮಾತನಾಡಿ, ಹಿರಿಯ ನಾಗರಿಕರಿಗೆ ನಿಂದನೆ ಹಲ್ಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು ಇವತ್ತಿನ ಮಕ್ಕಳಿಗೆ ತಾಯಿ ತಂದೆ, ತಾಯಿಗಳು ಆಸ್ತಿ ಅಂತಸ್ತುಗಳನ್ನು ಮಾಡಿಕೊಟ್ಟಿಲ್ಲವೆಂದು ನಿಂದನೆಗಳು, ದರ್ಜನ್ಯಗಳು ನಡೆಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿರುವುದರಿಂದ ಮಕ್ಕಳಿಗೆ ವಿವಾಹವಾಗದೇ ಇರುವುದರಿಂದ ಖಿನ್ನತೆಗೆ ಒಳಗಾಗಿ ಹಿರಿಯ ತಂದೆ ತಾಯಿಯಂದಿರಿಗೆ ನಿಂದನೆ ಮಾತುಗಳನ್ನಾಡುತ್ತಿದ್ದಾರೆ. ನಿಂದನೆಗೆ ಒಳಗಾಗುವ ಹಿರಿಯ ನಾಗರಿಕರು ಕಾನೂನಿನ ಸೇವೆ ಪಡೆಯಬೇಕು. ಹಿರಿಯ ನಾಗರಿಕರ ದರ್ಜನ್ಯಕ್ಕೆ ತುತ್ತಾಗಿ ಏನೂ ಗೊತ್ತಿಲ್ಲದಂತೆ ಇರುವುದು ತಪ್ಪು, ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿ ಕಾನೂನಿನ ಸಲಹೆ ಪಡೆಯಬೇಕು ಎಂದರು.
ದಾ.ಜಿ.ಹಿ.ನಾ.ಸಂಘದ ಅಧ್ಯಕ್ಷರಾದ ಎಸ್. ಗುರುಮೂರ್ತಿ ಮಾತನಾಡಿ, ಹಿರಿಯ ನಾಗರಿಕರ ಸಂರಕ್ಷಣೆ ಕೊಡುವುದು, ತಂದೆ-ಮಕ್ಕಳು ವಿವಿಧ ಕಾರಣಗಳಿಗೆ ವ್ಯಾಜ್ಯಗಳು ನಾವು ಮಾಡುವ ಪರಿಹಾರಗಳು ಕಾನೂನಾತ್ಮಕವಾಗಿರುವುದಿಲ್ಲ. ಮಕ್ಕಳಿಂದ ಹಿರಿಯರು ಮೇಲೆ ಅನೇಕ ರೀತಿಯ ದರ್ಜನ್ಯ ಎಸಗಿದ್ದರೂ ನಾವೇ ಸಹಿಸಿಕೊಳ್ಳುವುದು, ಮಕ್ಕಳು ಮಾಡುವ ತಪ್ಪನ್ನು ಸರಿಪಡಿಸಿಕೊಳ್ಳುವ ರೀತಿಯನ್ನು ಜಾಗೃತಿ ಮನವರಿಕೆ ಮಾಡಿಸಬೇಕು ಎಂದರು.
ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಡಾ.ವೀರಯ್ಯ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಕೆ.ಕೆ ಪ್ರಕಾಶ್, ಜಿಲ್ಲಾ ಸಂಯೋಜಕರಾದ ನಾಗರಾಜ.ಡಿ ಉಪಸ್ಥಿತರಿದ್ದರು.