ದಾವಣಗೆರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರೈಸ್ಡ್ ಅಕೌಂಟಿಂಗ್(ಜಿಎಸ್ಟಿ ಟ್ಯಾಲಿ) ಕುರಿತ 38 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 23 ರಿಂದ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ, ವಸತಿ ನೀಡಲಾಗುವುದು. ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
Read also : ದಾವಣಗೆರೆ|ವೈಜ್ಞಾನಿಕವಾಗಿ ಯೋಗ ಪರಿಚಯಿಸಿದ ಅಯ್ಯಂಗಾರ್ : ಡಾ.ರಾಘವೇಂದ್ರ ಗುರೂಜಿ
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9481506564, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.