Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Channagiri | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

Channagiri | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Dinamaana Kannada News
Last updated: April 8, 2025 1:03 pm
Dinamaana Kannada News
Share
Applications invited
SHARE

ದಾವಣಗೆರೆ ಏ.8 (Davanagere) : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 19 ಅಂಗನವಾಡಿ ಕಾರ್ಯಕರ್ತೆ, 68 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ  ಅಭ್ಯರ್ಥಿಗಳು ಇಲಾಖೆಯ https://dwcd.karnataka.gov.in     ರಲ್ಲಿ ಆನ್‍ಲೈನ್ ಸೇವೆಗಳ ಟ್ಯಾಬ್‍ನಲ್ಲಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಯ ಸಬ್‍ಟ್ಯಾಬ್‍ನಲ್ಲಿ ಕ್ಲಿಕ್ ಮಾಡುವ ಮೂಲಕ ಆನ್‍ಲೈನ್ ವೆಬ್‍ಸೈಟ್ ವಿಳಾಸ https://karnemakaone.kar.nic.in/abcd/    ಮೂಲಕ ಅರ್ಜಿ ಸಲ್ಲಿಸಲು ಮೇ 9 ಕೊನೆಯ ದಿನವಾಗಿರುತ್ತದೆ.  ಚನ್ನಗಿರಿ (Channagiri) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 19 ಅಂಗನವಾಡಿ ಕಾರ್ಯಕರ್ತೆ ಮತ್ತು 68 ಅಂಗನವಾಡಿ ಸಹಾಯಕಿಯರನ್ನು ನೇಮಕಾತಿ ಮಾಡಲು ಈ ಹಿಂದೆ ಭೌತಿಕವಾಗಿ ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ಪರಿಗಣಿಸಲಾಗುವುದಿಲ್ಲ, ಈ ಅಭ್ಯರ್ಥಿಗಳು ಸಹ ಹೊಸದಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಆನ್‍ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ತುಂಬುವುದು,  ಭಾವಚಿತ್ರ, ಅಗತ್ಯ ದಾಖಲೆ, ಆಧಾರ್ ಸಂಖ್ಯೆ ನಮೂದಿಸಿ ಇ-ಹಸ್ತಾಕ್ಷರದೊಂದಿಗೆ ಅರ್ಜಿ ಪೂರ್ಣಗೊಳಿಸಬೇಕಾಗಿರುತ್ತದೆ . ನಾಲ್ಕು ವಿವಿಧ ಹಂತದಲ್ಲಿ ಅರ್ಜಿಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದು.

Read also  : ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ : ಸಂಭ್ರಮಾಚರಣೆ

ವೆಬ್‍ಸೈಟ್‍ನಲ್ಲಿ ತಿಳಿಸಿರುವ ಅಂಶಗಳ ಜೊತೆಗೆ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಇತರೆ ಅವಶ್ಯಕ ದಾಖಲಾತಿಗಳ ಜೊತೆಗೆ, ವಿಧವೆಯರು ಪತಿಯ ಮರಣ ಪ್ರಮಾಣ ಪತ್ರ ಅಥವಾ ವಿಧವಾ ಪ್ರಮಾಣ ಪತ್ರವನ್ನು ಆನ್‍ಲೈನ್‍ನಲ್ಲಿ ಅಪ್ ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ. ಮುಂದುವರೆದು ಅಭ್ಯರ್ಥಿಗಳ ಆಯ್ಕೆ ಪಟ್ಟಿ ತಯಾರಿಸುವಾಗ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿರುವ ವಿಧವೆಗೆ ಸಂಬಂಧಿಸಿದ ದಾಖಲಾತಿಗಳನ್ನು ಡೌನ್‍ಲೋಡ್ ಮಾಡಿಕೊಂಡು ಭೌತಿಕವಾಗಿ ಪರಿಶೀಲಿಸಿ ಆಯ್ಕೆ ಪಟ್ಟಿ ತಯಾರಿಸಲಾಗುವುದು. ಆಸಿಡ್ ದಾಳಿಗೆ ತುತ್ತಾದ ಮಹಿಳೆಯರಿಗೆ ಮೊದಲ ಆದ್ಯತೆ, ಇಲಾಖೆಯ ಸಂಸ್ಥೆಗಳ ನಿವಾಸಿಗಳಿಗೆ ಎರಡನೇ ಆದ್ಯತೆ, ವಿಧವೆಯರಿಗೆ ಮೂರನೇ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಹರಿಹರ ದೂ.ಸಂ:08192-295444 ನ್ನು ಸಂಪರ್ಕಿಸಲು ಚನ್ನಗಿರಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ : ಸಂಭ್ರಮಾಚರಣೆ
Next Article Davanagere ಸರ್ಕಾರಗಳೇ ಸರ್ಕಾರಿ ಶಾಲೆಗಳ ಸಾಯಿಸುತ್ತಿರುವುದು ದೊಡ್ಡ ಕ್ರೈಂ : ಜಿ. ಬಿ. ವಿನಯ್ ಕುಮಾರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಡೆಂಗ್ಯೂ ಜ್ವರ : ಕ್ರಮಕ್ಕೆ ಸಚಿವ ಎಸ್ಸೆಸ್ಸೆಂ ಸೂಚನೆ

ದಾವಣಗೆರೆ:  ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಳ ಆಗದಂತೆ ಸೂಕ್ತ ಕ್ರಮ ವಹಿಸುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು…

By Dinamaana Kannada News

ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ

ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ ಭಾರತ ದೇಶದ 75ನೇ ಗಣರಾಜ್ಯೋತ್ಸವದ ಅಂಗವಾಗಿ ಸಂವಿಧಾನ ಹೆಸರಿನಲ್ಲಿ ರಾಜ್ಯಾದ್ಯಂತ ಸಂವಿಧಾನ…

By Dinamaana Kannada News

Davanagere | ಅ. 20 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

ದಾವಣಗೆರೆ ಅ.14 (Davanagere) ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅ. 20 ರಂದು ಬೆಂಗಳೂರು ನಗರ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ

By Dinamaana Kannada News
Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?