ದಾವಣಗೆರೆ (Davanagere): ವಿನಾಕಾರಣ ಜಗಳ ತೆಗೆದು ಕಬ್ಬಿಣದ ಪೈಪ್ ನಿಂದ ಹೊಡೆದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಆರು ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಗರದ ಬಂಬೂಬಜಾರ್ ನಿವಾಸಿ ಭಾಷಾ ಶಿಕ್ಷೆಗೊಳಗಾದ ಆರೋಪಿ. ಚಂದ್ರು ಹಲ್ಲೆಗೊಳಗಾದವರು. 2019 ರ ನವೆಂಬರ್ 19 ರಂದು ಚಂದ್ರು ಬೈಕ್ ಹತ್ತುವ ವೇಳೆ ಹಿಂಬದಿಯಿಂದ ಭಾಷಾ , ನಿನ್ನನ್ನು ಬದುಕಲು ಬಿಡುವುದಿಲ್ಲ ಎಂದು ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಕಬ್ಬಿಣದ ರಾಡಿನಿಂಡ ತೆಲೆಯ ಹಿಂಭಾಗಕ್ಕೆ ಹೊಡೆದು ಹಲ್ಲೆ ಮಾಡಿದ್ದನು. ಇದರಿಂದ ಗಂಭೀರ ಗಾಯಗೊಂಡಿದ್ದ ಚಂದ್ರುನನ್ನು ಆಸ್ಪತ್ರೆಗೆ ದಾಖಲಾಗಿಸಿತ್ತು.
ಈ ಬಗ್ಗೆ ಅಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ತನಿಖಾಧಿಕಾರಿ ಅಂದಿನ ಡಿವೈಎಸ್ಪಿ ನಾಗೇಶ್ ಯು, ಐತಾಳ್, ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ Spl Case SC/ST:06/2020 ರಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಅರ್.ಎನ್.ಪ್ರವೀಣ್ ಕುಮಾರ್ , ಆರೋಪಿ ವಿರುದ್ಧ ಆರೋಪ ಸಾಬೀತಾಗಿದ್ದರಿಂದ 2025ರ ಜೂ.11ರಂದು ಆರೋಪಿಗೆ 6 ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿದ್ದು, ಆರೋಪಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದರಿಂದ ಬಂಧನದ ಅವಧಿಯನ್ನು ಪರಿಗಣಿಸಿ ಶಿಕ್ಷಾ ಅವಧಿಯನ್ನು ಸೆಟ್ ಆಫ್ ಮಾಡಿ ಆದೇಶಿಸಿದ್ದಾರೆ.
ಪಿರ್ಯಾದಿ ಪರವಾಗಿ ಸರ್ಕಾರಿ ವಕೀಲ ಜಯ್ಯಪ್ಪ ಕೆ.ಜಿ ನ್ಯಾಯ ಮಂಡನೆ ಮಾಡಿದ್ದರು.